Homeಮುಖಪುಟದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

- Advertisement -
- Advertisement -

ರಾಜಸ್ಥಾನದಲ್ಲಿ ಫೆಬ್ರವರಿ 2ರಂದು ಯೋಗೋದ್ಯಮಿ ಬಾಬಾ ರಾಮ್‌ದೇವ್, ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಭಾನುವಾರ ಅವರ ವಿರುದ್ಧ ದ್ವೇಷ ಮತ್ತು ಅತಿರೇಕದ ಧಾರ್ಮಿಕ ಭಾವನೆಗಳನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪಥಾಯಿ ಖಾನ್ ಎನ್ನುವವರು ನೀಡಿದ ದೂರಿನ ಮೇರೆಗೆ ಬಾರ್ಮರ್‌ನಲ್ಲಿ ರಾಮ್‌ದೇವ್‌ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ಫೆಬ್ರವರಿ 2 ರಂದು ರಾಮ್‌ದೇವ್ ಬಾರ್ಮರ್‌ನಲ್ಲಿ ದಾರ್ಶನಿಕರ ಸಭೆಗೆ ಹಾಜರಾಗಿದ್ದರು. ಈ ವೇಳೆ ಅವರು, ”ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದರಿಂದ ಎಲ್ಲಾ ಪಾಪಗಳಿಂದ ವಿಮೋಚನೆಯಾಗುತ್ತದೆ ಎಂದು ನಂಬುತ್ತಾರೆ ಮತ್ತು ಇದು ಭಯೋತ್ಪಾದನೆ ಹಾಗೂ ಅಪರಾಧ ಕೃತ್ಯ ನಡೆಸಲು ಕಾರಣವಾಗುತ್ತದೆ. ಕೇವಲ ಪ್ರಾರ್ಥನೆ ಮಾಡಿ, ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡಿ ಎಂದು ಅವರಿಗೆ ಕಲಿಸಲಾಗಿದೆ. ಹಾಗಾಗಿ ಅವರು ಭಯೋತ್ಪಾದಕರಾಗುತ್ತಿದ್ದಾರೆ, ಮತ್ತು ಅವರಲ್ಲಿ ಬಹಳಷ್ಟು ಜನರು ಅಪರಾಧಿಗಳಾಗುತ್ತಿದ್ದಾರೆ” ಎಂದು ಮುಸ್ಲಿಮರ ಬಗ್ಗೆ ರಾಮ್‌ದೇವ್ ದ್ವೇಷದ ಮಾತುಗಳನ್ನಾಡಿದ್ದಾರೆ.

”ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸಲ್ಮಾನರನ್ನು ಕೇಳಿ, ಅವರು ಐದು ಬಾರಿ [ದಿನಕ್ಕೆ] ನಮಾಜ್ ಮಾಡಿ, ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ ಎಂದು ಹೇಳುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸಲಿ, ನೀವು ಮಾಡಬೇಕಾದ ಪಾಪವನ್ನೆಲ್ಲಾ ಮಾಡಿ” ಎಂದು ರಾಮ್‌ದೇವ್ ಮುಸ್ಲಿಂ ಧರ್ಮದ ವಿರುದ್ಧ ಮಾತನಾಡಿದ್ದಾರೆ.

ಇದೇ ವೇಳೆ ಕ್ರಿಶ್ಚಿಯನ್ನರ ಬಗ್ಗೆಯೂ ಮಾತನಾಡಿದ ರಾಮದೇವ್, ”ಚರ್ಚ್‌ಗೆ ಹಾಜರಾಗುವ ಮೂಲಕ ಮತ್ತು ಮೇಣದಬತ್ತಿಗಳನ್ನು ಬೆಳಗಿಸುವ ಮೂಲಕ ಅವರು ತಮ್ಮ ಎಲ್ಲಾ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಇಸ್ಲಾಂ ಧರ್ಮದ ವಿರುದ್ಧ ದ್ವೇಷ ಮತ್ತು ದ್ವೇಷದ ಭಾವನೆ ಮೂಡಿಸಲು ಉದ್ದೇಶಪೂರ್ವಕವಾಗಿ ರಾಮ್‌ದೇವ್ ಈ ಹೇಳಿಕೆ ನೀಡಿದ್ದಾರೆ ಎಂದು ಖಾನ್ ತಮ್ಮ ದೂರಿನಲ್ಲಿ ಹೇಳಿದ್ದಾರೆ. ಈ ಹೇಳಿಕೆಗಳು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾನುವಾರ, ರಾಜಸ್ಥಾನ ಪೊಲೀಸರು ರಾಮ್‌ದೇವ್ ವಿರುದ್ಧ ಸೆಕ್ಷನ್ 153 (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ) ಮತ್ತು ಭಾರತೀಯ ದಂಡ ಸಂಹಿತೆಯ 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶಪೂರ್ವಕ ಉದ್ದೇಶದಿಂದ ಹೇಳುವುದು, ಪದಗಳು, ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆಯೂ ರಾಮ್‌ದೇವ್ ಇಂತಹ ವಿವಾದಗಳನ್ನು ಹುಟ್ಟುಹಾಕಿದ್ದರು. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ (ನವೆಂಬರ್‌) ರಾಮ್‌ದೇವ್ ಅವರು ಸೆಕ್ಸಿಸ್ಟ್ ಟೀಕೆಗಳನ್ನು ಮಾಡಿದ್ದರು.

”ಮಹಿಳೆಯರು ಯಾವುದೇ ಬಟ್ಟೆಯಲ್ಲಿಯೂ ಉತ್ತಮವಾಗಿ ಕಾಣುತ್ತಾರೆ ಮತ್ತು ಅವರು ಏನನ್ನೂ ಧರಿಸದಿದ್ದರೂ ಸಹ ಉತ್ತಮವಾಗಿ ಕಾಣುತ್ತಾರೆ” ಎಂದು ಬಹಳ ಕೀಳು ಮನಸ್ಥಿತಿಯಲ್ಲಿ ರಾಮ್‌ದೇವ್‌ ಮಾತನಾಡಿದ್ದರು.

ಅಲೋಪತಿ ಮತ್ತು ವೈದ್ಯಕೀಯ ಪದ್ಧತಿಯನ್ನು ಅಭ್ಯಾಸ ಮಾಡುವ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗಾಗಿ ಯೋಗ ಗುರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನೂ ಎದುರಿಸುತ್ತಿದ್ದಾರೆ.

ಅಲೋಪತಿ ಒಂದು ”ಅವಿವೇಕಿ ವಿಜ್ಞಾನ ಮತ್ತು ಔಷಧಿಗಳು ನಿಷ್ಪ್ರಯೋಜಕ, ಅಲೋಪತಿ ಔಷಧಿಗಳನ್ನು ತೆಗೆದುಕೊಂಡ ನಂತರ ಲಕ್ಷಾಂತರ ರೋಗಿಗಳು ಸಾವನ್ನಪ್ಪಿದ್ದಾರೆ” ಎಂದು ರಾಮ್‌ದೇವ್‌ ಕೊರೊನಾ ನಿರ್ವಹಣೆಗೆ ಸೆಣಸುತ್ತಿರುವ ವೈದ್ಯ ಸಮೂಹವನ್ನು ಮೇ 2021 ರಲ್ಲಿ ಅವಮಾನಿಸಿದ್ದರು.

ಮತ್ತೊಂದು ವೀಡಿಯೊದಲ್ಲಿ, ”ಎರಡು ಡೋಸ್ ಕರೋನಾವೈರಸ್ ಲಸಿಕೆ ಪಡೆದ ನಂತರವೂ 1,000 ವೈದ್ಯರು ಸಾವನ್ನಪ್ಪಿದ್ದಾರೆ” ಎಂದು ಸುಳ್ಳು ಹೇಳಿದ್ದರು. ನಂತರ, ಮಾಜಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡರು ಆಗ ರಾಮ್‌ದೇವ್‌ ಕ್ಷಮೆಯಾಚಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...