Homeಮುಖಪುಟದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

ದ್ವೇಷ ಭಾಷಣ ಹಿನ್ನೆಲೆ ರಾಮದೇವ್ ವಿರುದ್ಧ ಎಫ್ಐಆರ್

- Advertisement -
- Advertisement -

ರಾಜಸ್ಥಾನದಲ್ಲಿ ಫೆಬ್ರವರಿ 2ರಂದು ಯೋಗೋದ್ಯಮಿ ಬಾಬಾ ರಾಮ್‌ದೇವ್, ಮುಸ್ಲಿಮರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಹೇಳಲಾಗಿದೆ. ಭಾನುವಾರ ಅವರ ವಿರುದ್ಧ ದ್ವೇಷ ಮತ್ತು ಅತಿರೇಕದ ಧಾರ್ಮಿಕ ಭಾವನೆಗಳನ್ನು ಉತ್ತೇಜಿಸಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಪಥಾಯಿ ಖಾನ್ ಎನ್ನುವವರು ನೀಡಿದ ದೂರಿನ ಮೇರೆಗೆ ಬಾರ್ಮರ್‌ನಲ್ಲಿ ರಾಮ್‌ದೇವ್‌ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೋಲೀಸರು ಹೇಳಿದ್ದಾರೆ.

ಫೆಬ್ರವರಿ 2 ರಂದು ರಾಮ್‌ದೇವ್ ಬಾರ್ಮರ್‌ನಲ್ಲಿ ದಾರ್ಶನಿಕರ ಸಭೆಗೆ ಹಾಜರಾಗಿದ್ದರು. ಈ ವೇಳೆ ಅವರು, ”ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದರಿಂದ ಎಲ್ಲಾ ಪಾಪಗಳಿಂದ ವಿಮೋಚನೆಯಾಗುತ್ತದೆ ಎಂದು ನಂಬುತ್ತಾರೆ ಮತ್ತು ಇದು ಭಯೋತ್ಪಾದನೆ ಹಾಗೂ ಅಪರಾಧ ಕೃತ್ಯ ನಡೆಸಲು ಕಾರಣವಾಗುತ್ತದೆ. ಕೇವಲ ಪ್ರಾರ್ಥನೆ ಮಾಡಿ, ನೀವು ಏನು ಮಾಡಬೇಕೆಂದು ಬಯಸುತ್ತೀರೋ ಅದನ್ನು ಮಾಡಿ ಎಂದು ಅವರಿಗೆ ಕಲಿಸಲಾಗಿದೆ. ಹಾಗಾಗಿ ಅವರು ಭಯೋತ್ಪಾದಕರಾಗುತ್ತಿದ್ದಾರೆ, ಮತ್ತು ಅವರಲ್ಲಿ ಬಹಳಷ್ಟು ಜನರು ಅಪರಾಧಿಗಳಾಗುತ್ತಿದ್ದಾರೆ” ಎಂದು ಮುಸ್ಲಿಮರ ಬಗ್ಗೆ ರಾಮ್‌ದೇವ್ ದ್ವೇಷದ ಮಾತುಗಳನ್ನಾಡಿದ್ದಾರೆ.

”ನಿಮ್ಮ ಧರ್ಮ ಏನು ಹೇಳುತ್ತದೆ ಎಂದು ಮುಸಲ್ಮಾನರನ್ನು ಕೇಳಿ, ಅವರು ಐದು ಬಾರಿ [ದಿನಕ್ಕೆ] ನಮಾಜ್ ಮಾಡಿ, ನಂತರ ಮನಸ್ಸಿಗೆ ಬಂದದ್ದನ್ನು ಮಾಡಿ ಎಂದು ಹೇಳುತ್ತಾರೆ. ನೀವು ಹಿಂದೂ ಹುಡುಗಿಯರನ್ನು ಅಪಹರಿಸಲಿ, ನೀವು ಮಾಡಬೇಕಾದ ಪಾಪವನ್ನೆಲ್ಲಾ ಮಾಡಿ” ಎಂದು ರಾಮ್‌ದೇವ್ ಮುಸ್ಲಿಂ ಧರ್ಮದ ವಿರುದ್ಧ ಮಾತನಾಡಿದ್ದಾರೆ.

ಇದೇ ವೇಳೆ ಕ್ರಿಶ್ಚಿಯನ್ನರ ಬಗ್ಗೆಯೂ ಮಾತನಾಡಿದ ರಾಮದೇವ್, ”ಚರ್ಚ್‌ಗೆ ಹಾಜರಾಗುವ ಮೂಲಕ ಮತ್ತು ಮೇಣದಬತ್ತಿಗಳನ್ನು ಬೆಳಗಿಸುವ ಮೂಲಕ ಅವರು ತಮ್ಮ ಎಲ್ಲಾ ಪಾಪಗಳಿಗೆ ಕ್ಷಮೆಯನ್ನು ಪಡೆಯುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಮರು, ಕ್ರಿಶ್ಚಿಯನ್ನರಿಗೆ ಮತಾಂತರದ ಗೀಳಿದೆ: ಯೋಗೋದ್ಯಮಿ ರಾಮ್‌ದೇವ್ ಹೇಳಿಕೆ

ಇಸ್ಲಾಂ ಧರ್ಮದ ವಿರುದ್ಧ ದ್ವೇಷ ಮತ್ತು ದ್ವೇಷದ ಭಾವನೆ ಮೂಡಿಸಲು ಉದ್ದೇಶಪೂರ್ವಕವಾಗಿ ರಾಮ್‌ದೇವ್ ಈ ಹೇಳಿಕೆ ನೀಡಿದ್ದಾರೆ ಎಂದು ಖಾನ್ ತಮ್ಮ ದೂರಿನಲ್ಲಿ ಹೇಳಿದ್ದಾರೆ. ಈ ಹೇಳಿಕೆಗಳು ಮುಸ್ಲಿಮರ ಭಾವನೆಗಳಿಗೆ ಧಕ್ಕೆ ತಂದಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾನುವಾರ, ರಾಜಸ್ಥಾನ ಪೊಲೀಸರು ರಾಮ್‌ದೇವ್ ವಿರುದ್ಧ ಸೆಕ್ಷನ್ 153 (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ ಪ್ರಕರಣ ದಾಖಲಿಸಲಾಗಿದೆ. ) ಮತ್ತು ಭಾರತೀಯ ದಂಡ ಸಂಹಿತೆಯ 298 (ಯಾವುದೇ ವ್ಯಕ್ತಿಯ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವ ಉದ್ದೇಶಪೂರ್ವಕ ಉದ್ದೇಶದಿಂದ ಹೇಳುವುದು, ಪದಗಳು, ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಹಿಂದೆಯೂ ರಾಮ್‌ದೇವ್ ಇಂತಹ ವಿವಾದಗಳನ್ನು ಹುಟ್ಟುಹಾಕಿದ್ದರು. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ (ನವೆಂಬರ್‌) ರಾಮ್‌ದೇವ್ ಅವರು ಸೆಕ್ಸಿಸ್ಟ್ ಟೀಕೆಗಳನ್ನು ಮಾಡಿದ್ದರು.

”ಮಹಿಳೆಯರು ಯಾವುದೇ ಬಟ್ಟೆಯಲ್ಲಿಯೂ ಉತ್ತಮವಾಗಿ ಕಾಣುತ್ತಾರೆ ಮತ್ತು ಅವರು ಏನನ್ನೂ ಧರಿಸದಿದ್ದರೂ ಸಹ ಉತ್ತಮವಾಗಿ ಕಾಣುತ್ತಾರೆ” ಎಂದು ಬಹಳ ಕೀಳು ಮನಸ್ಥಿತಿಯಲ್ಲಿ ರಾಮ್‌ದೇವ್‌ ಮಾತನಾಡಿದ್ದರು.

ಅಲೋಪತಿ ಮತ್ತು ವೈದ್ಯಕೀಯ ಪದ್ಧತಿಯನ್ನು ಅಭ್ಯಾಸ ಮಾಡುವ ವೈದ್ಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳಿಗಾಗಿ ಯೋಗ ಗುರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣವನ್ನೂ ಎದುರಿಸುತ್ತಿದ್ದಾರೆ.

ಅಲೋಪತಿ ಒಂದು ”ಅವಿವೇಕಿ ವಿಜ್ಞಾನ ಮತ್ತು ಔಷಧಿಗಳು ನಿಷ್ಪ್ರಯೋಜಕ, ಅಲೋಪತಿ ಔಷಧಿಗಳನ್ನು ತೆಗೆದುಕೊಂಡ ನಂತರ ಲಕ್ಷಾಂತರ ರೋಗಿಗಳು ಸಾವನ್ನಪ್ಪಿದ್ದಾರೆ” ಎಂದು ರಾಮ್‌ದೇವ್‌ ಕೊರೊನಾ ನಿರ್ವಹಣೆಗೆ ಸೆಣಸುತ್ತಿರುವ ವೈದ್ಯ ಸಮೂಹವನ್ನು ಮೇ 2021 ರಲ್ಲಿ ಅವಮಾನಿಸಿದ್ದರು.

ಮತ್ತೊಂದು ವೀಡಿಯೊದಲ್ಲಿ, ”ಎರಡು ಡೋಸ್ ಕರೋನಾವೈರಸ್ ಲಸಿಕೆ ಪಡೆದ ನಂತರವೂ 1,000 ವೈದ್ಯರು ಸಾವನ್ನಪ್ಪಿದ್ದಾರೆ” ಎಂದು ಸುಳ್ಳು ಹೇಳಿದ್ದರು. ನಂತರ, ಮಾಜಿ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ತಮ್ಮ ಹೇಳಿಕೆಗಳನ್ನು ಹಿಂತೆಗೆದುಕೊಳ್ಳುವಂತೆ ಕೇಳಿಕೊಂಡರು ಆಗ ರಾಮ್‌ದೇವ್‌ ಕ್ಷಮೆಯಾಚಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...