Homeಮುಖಪುಟಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಖಾಸಗಿ ಶಾಲೆಯೊಂದರ ಮ್ಯಾನೇಜರ್ ವಿರುದ್ಧ ರಾಜ್ಯದ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಬೆಳಿಗ್ಗೆ ಪ್ರಾರ್ಥನೆಯ ಸಮಯದಲ್ಲಿ ಶಾಲೆಯಲ್ಲಿ ‘ಕಲಿಮಾ’ (ಇಸ್ಲಾಮಿಕ್ ಪ್ರಾರ್ಥನೆ) ಪಠಿಸುತ್ತಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕರು ದೂರಿದ್ದಾರೆ. ಪ್ರಕರಣ ದಾಖಲಾಗಿದ್ದು, ಇನ್ನು ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲಿಸರು ತಿಳಿಸಿದ್ದಾರೆ.

ಕಾನ್ಪುರದ ಫ್ಲೋರೆಟ್ಸ್ ಶಾಲೆಯು ತನ್ನ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಇಸ್ಲಾಮಿಕ್ ಪ್ರಾರ್ಥನೆಗಳನ್ನು ಮಾಡಿಸುತ್ತಿದೆ ಎಂಬ ಆರೋಪ ಬಂದ ಬಳಿಕ ವಿವಾದ ಉಂಟಾಗಿದೆ. ಪೋಷಕರ ಆಕ್ಷೇಪದ ನಂತರ, ಶಾಲೆಯು ನಾಲ್ಕು ಧರ್ಮಗಳ ಪ್ರಾರ್ಥನೆಗಳನ್ನು ಮಾಡುವ ಅಭ್ಯಾಸವನ್ನು ನಿಲ್ಲಿಸಿ, ಕೇವಲ ರಾಷ್ಟ್ರಗೀತೆಯನ್ನು ಮಾತ್ರ ಹಾಡಲು ನಿರ್ಧರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯಾರ್ಥಿಯ ಪೋಷಕರೊಬ್ಬರು ದೂರು ನೀಡಿದ್ದು, “ಮಕ್ಕಳಲ್ಲಿ ಮತಾಂತರದ ಬೀಜಗಳನ್ನು ಬಿತ್ತುವ ಕೆಲಸವನ್ನು ಶಾಲೆಯಲ್ಲಿ ಮಾಡಲಾಗುತ್ತಿದೆ. ಶಾಲೆಯ ಎಲ್ಲಾ ಶಾಖೆಗಳನ್ನು ಸೀಲ್ ಮಾಡಬೇಕು, ಶುಲ್ಕವನ್ನು ಹಿಂತಿರುಗಿಸಬೇಕು. ಇತರ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸೇರಿಸಲು ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ದೂರಿನ ನಂತರ ಕಾನ್ಪುರ ಪೊಲೀಸರು ಶಾಲೆಯ ಮ್ಯಾನೇಜರ್ ವಿರುದ್ಧ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆ 2021 ಮತ್ತು ಐಪಿಸಿ ಸೆಕ್ಷನ್ 295-A (ಧಾರ್ಮಿಕ ಭಾವನೆಯನ್ನು ಕೆರಳಿಸುವ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಬೆಳಿಗ್ಗೆ ಪ್ರಾರ್ಥನೆಯ ಸಮಯದಲ್ಲಿ ವಿದ್ಯಾರ್ಥಿಗಳು ಇಸ್ಲಾಮಿಕ್ ಪ್ರಾರ್ಥನೆಗಳನ್ನು ಪಠಿಸುವಂತೆ ಶಾಲೆ ಕ್ರಮ ವಹಿಸಿದೆ” ಎಂದು ಮೂರು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಜಿಲ್ಲಾಡಳಿತ ಮತ್ತು ಪೊಲೀಸರ ಜಂಟಿ ತಂಡ ಶಾಲೆಯ ಪ್ರಾಂಶುಪಾಲರು ಹಾಗೂ ವ್ಯವಸ್ಥಾಪಕರನ್ನು ಭೇಟಿ ಮಾಡಿತ್ತು. ‘‘ನಮ್ಮ ವಿದ್ಯಾರ್ಥಿಗಳು ಕಳೆದ ಹಲವು ವರ್ಷಗಳಿಂದ ನಾಲ್ಕು ಧರ್ಮದ ಪ್ರಾರ್ಥನೆಗಳನ್ನು ಪಠಿಸುತ್ತಿದ್ದು, ಯಾವುದೇ ಪಾಲಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿಲ್ಲ” ಎಂದು ಶಾಲಾ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿರಿ: ಸೇಲಂ ದೇವಾಲಯದ ವಿಗ್ರಹ ಬುದ್ಧನೇ ಹೊರತು ಹಿಂದೂ ದೇವರಲ್ಲ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

“ಶುಕ್ರವಾರ, ಕೆಲವು ಪೋಷಕರು ನಾಲ್ಕು ಪ್ರಾರ್ಥನೆಗಳನ್ನು ವಿರೋಧಿಸಿದರು. ಆದ್ದರಿಂದ ಶಾಲೆಯು ಪ್ರಾರ್ಥನೆಯನ್ನು ನಿಲ್ಲಿಸಿತು. ಈಗ ಬೆಳಗಿನ ಪ್ರಾರ್ಥನೆಯ ವೇಳೆ ರಾಷ್ಟ್ರಗೀತೆಯನ್ನು ಮಾತ್ರ ಹಾಡಲಾಗುತ್ತಿದೆ” ಎಂದು ಕಾನ್ಪುರದ ಸಹಾಯಕ ಪೊಲೀಸ್ ಆಯುಕ್ತ ನಿಶಾಂಕ್ ಶರ್ಮಾ ತಿಳಿಸಿದ್ದಾರೆ.

2003ರಿಂದ ಶಾಲೆ ಪ್ರಾರಂಭವಾದಾಗಿನಿಂದ ಶಾಲೆಯು ನಾಲ್ಕು ಪ್ರಾರ್ಥನೆಗಳನ್ನು ಪಠಿಸುತ್ತಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಅಂಕಿತ ಯಾದವ್ ಹೇಳಿಕೆ ನೀಡಿದ್ದರು.

“ಕೆಲವು ವಿದ್ಯಾರ್ಥಿಗಳ ಪೋಷಕರು ಈಗ ಆಕ್ಷೇಪಣೆಗಳನ್ನು ಎತ್ತಿದ್ದಾರೆ. ನಂತರ ನಾವು ತಕ್ಷಣ ಕ್ರಮ ಕೈಗೊಂಡಿದ್ದೇವೆ. ನಾಲ್ಕು ಧರ್ಮಗಳ ಪ್ರಾರ್ಥನೆಗಳನ್ನೂ ನಿಲ್ಲಿಸಿದ್ದೇವೆ. ನಾವು ಈಗ ರಾಷ್ಟ್ರಗೀತೆಯನ್ನು ಮಾತ್ರ ಹೇಳಿಸುತ್ತಿದ್ದೇವೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...