Homeಮುಖಪುಟಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಖಾಸಗಿ ಶಾಲೆಯೊಂದರ ಮ್ಯಾನೇಜರ್ ವಿರುದ್ಧ ರಾಜ್ಯದ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಬೆಳಿಗ್ಗೆ ಪ್ರಾರ್ಥನೆಯ ಸಮಯದಲ್ಲಿ ಶಾಲೆಯಲ್ಲಿ ‘ಕಲಿಮಾ’ (ಇಸ್ಲಾಮಿಕ್ ಪ್ರಾರ್ಥನೆ) ಪಠಿಸುತ್ತಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕರು ದೂರಿದ್ದಾರೆ. ಪ್ರಕರಣ ದಾಖಲಾಗಿದ್ದು, ಇನ್ನು ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲಿಸರು ತಿಳಿಸಿದ್ದಾರೆ.

ಕಾನ್ಪುರದ ಫ್ಲೋರೆಟ್ಸ್ ಶಾಲೆಯು ತನ್ನ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಇಸ್ಲಾಮಿಕ್ ಪ್ರಾರ್ಥನೆಗಳನ್ನು ಮಾಡಿಸುತ್ತಿದೆ ಎಂಬ ಆರೋಪ ಬಂದ ಬಳಿಕ ವಿವಾದ ಉಂಟಾಗಿದೆ. ಪೋಷಕರ ಆಕ್ಷೇಪದ ನಂತರ, ಶಾಲೆಯು ನಾಲ್ಕು ಧರ್ಮಗಳ ಪ್ರಾರ್ಥನೆಗಳನ್ನು ಮಾಡುವ ಅಭ್ಯಾಸವನ್ನು ನಿಲ್ಲಿಸಿ, ಕೇವಲ ರಾಷ್ಟ್ರಗೀತೆಯನ್ನು ಮಾತ್ರ ಹಾಡಲು ನಿರ್ಧರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯಾರ್ಥಿಯ ಪೋಷಕರೊಬ್ಬರು ದೂರು ನೀಡಿದ್ದು, “ಮಕ್ಕಳಲ್ಲಿ ಮತಾಂತರದ ಬೀಜಗಳನ್ನು ಬಿತ್ತುವ ಕೆಲಸವನ್ನು ಶಾಲೆಯಲ್ಲಿ ಮಾಡಲಾಗುತ್ತಿದೆ. ಶಾಲೆಯ ಎಲ್ಲಾ ಶಾಖೆಗಳನ್ನು ಸೀಲ್ ಮಾಡಬೇಕು, ಶುಲ್ಕವನ್ನು ಹಿಂತಿರುಗಿಸಬೇಕು. ಇತರ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸೇರಿಸಲು ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ದೂರಿನ ನಂತರ ಕಾನ್ಪುರ ಪೊಲೀಸರು ಶಾಲೆಯ ಮ್ಯಾನೇಜರ್ ವಿರುದ್ಧ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆ 2021 ಮತ್ತು ಐಪಿಸಿ ಸೆಕ್ಷನ್ 295-A (ಧಾರ್ಮಿಕ ಭಾವನೆಯನ್ನು ಕೆರಳಿಸುವ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಬೆಳಿಗ್ಗೆ ಪ್ರಾರ್ಥನೆಯ ಸಮಯದಲ್ಲಿ ವಿದ್ಯಾರ್ಥಿಗಳು ಇಸ್ಲಾಮಿಕ್ ಪ್ರಾರ್ಥನೆಗಳನ್ನು ಪಠಿಸುವಂತೆ ಶಾಲೆ ಕ್ರಮ ವಹಿಸಿದೆ” ಎಂದು ಮೂರು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಜಿಲ್ಲಾಡಳಿತ ಮತ್ತು ಪೊಲೀಸರ ಜಂಟಿ ತಂಡ ಶಾಲೆಯ ಪ್ರಾಂಶುಪಾಲರು ಹಾಗೂ ವ್ಯವಸ್ಥಾಪಕರನ್ನು ಭೇಟಿ ಮಾಡಿತ್ತು. ‘‘ನಮ್ಮ ವಿದ್ಯಾರ್ಥಿಗಳು ಕಳೆದ ಹಲವು ವರ್ಷಗಳಿಂದ ನಾಲ್ಕು ಧರ್ಮದ ಪ್ರಾರ್ಥನೆಗಳನ್ನು ಪಠಿಸುತ್ತಿದ್ದು, ಯಾವುದೇ ಪಾಲಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿಲ್ಲ” ಎಂದು ಶಾಲಾ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿರಿ: ಸೇಲಂ ದೇವಾಲಯದ ವಿಗ್ರಹ ಬುದ್ಧನೇ ಹೊರತು ಹಿಂದೂ ದೇವರಲ್ಲ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

“ಶುಕ್ರವಾರ, ಕೆಲವು ಪೋಷಕರು ನಾಲ್ಕು ಪ್ರಾರ್ಥನೆಗಳನ್ನು ವಿರೋಧಿಸಿದರು. ಆದ್ದರಿಂದ ಶಾಲೆಯು ಪ್ರಾರ್ಥನೆಯನ್ನು ನಿಲ್ಲಿಸಿತು. ಈಗ ಬೆಳಗಿನ ಪ್ರಾರ್ಥನೆಯ ವೇಳೆ ರಾಷ್ಟ್ರಗೀತೆಯನ್ನು ಮಾತ್ರ ಹಾಡಲಾಗುತ್ತಿದೆ” ಎಂದು ಕಾನ್ಪುರದ ಸಹಾಯಕ ಪೊಲೀಸ್ ಆಯುಕ್ತ ನಿಶಾಂಕ್ ಶರ್ಮಾ ತಿಳಿಸಿದ್ದಾರೆ.

2003ರಿಂದ ಶಾಲೆ ಪ್ರಾರಂಭವಾದಾಗಿನಿಂದ ಶಾಲೆಯು ನಾಲ್ಕು ಪ್ರಾರ್ಥನೆಗಳನ್ನು ಪಠಿಸುತ್ತಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಅಂಕಿತ ಯಾದವ್ ಹೇಳಿಕೆ ನೀಡಿದ್ದರು.

“ಕೆಲವು ವಿದ್ಯಾರ್ಥಿಗಳ ಪೋಷಕರು ಈಗ ಆಕ್ಷೇಪಣೆಗಳನ್ನು ಎತ್ತಿದ್ದಾರೆ. ನಂತರ ನಾವು ತಕ್ಷಣ ಕ್ರಮ ಕೈಗೊಂಡಿದ್ದೇವೆ. ನಾಲ್ಕು ಧರ್ಮಗಳ ಪ್ರಾರ್ಥನೆಗಳನ್ನೂ ನಿಲ್ಲಿಸಿದ್ದೇವೆ. ನಾವು ಈಗ ರಾಷ್ಟ್ರಗೀತೆಯನ್ನು ಮಾತ್ರ ಹೇಳಿಸುತ್ತಿದ್ದೇವೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...