Homeಮುಖಪುಟಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಖಾಸಗಿ ಶಾಲೆಯೊಂದರ ಮ್ಯಾನೇಜರ್ ವಿರುದ್ಧ ರಾಜ್ಯದ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಬೆಳಿಗ್ಗೆ ಪ್ರಾರ್ಥನೆಯ ಸಮಯದಲ್ಲಿ ಶಾಲೆಯಲ್ಲಿ ‘ಕಲಿಮಾ’ (ಇಸ್ಲಾಮಿಕ್ ಪ್ರಾರ್ಥನೆ) ಪಠಿಸುತ್ತಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕರು ದೂರಿದ್ದಾರೆ. ಪ್ರಕರಣ ದಾಖಲಾಗಿದ್ದು, ಇನ್ನು ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲಿಸರು ತಿಳಿಸಿದ್ದಾರೆ.

ಕಾನ್ಪುರದ ಫ್ಲೋರೆಟ್ಸ್ ಶಾಲೆಯು ತನ್ನ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಇಸ್ಲಾಮಿಕ್ ಪ್ರಾರ್ಥನೆಗಳನ್ನು ಮಾಡಿಸುತ್ತಿದೆ ಎಂಬ ಆರೋಪ ಬಂದ ಬಳಿಕ ವಿವಾದ ಉಂಟಾಗಿದೆ. ಪೋಷಕರ ಆಕ್ಷೇಪದ ನಂತರ, ಶಾಲೆಯು ನಾಲ್ಕು ಧರ್ಮಗಳ ಪ್ರಾರ್ಥನೆಗಳನ್ನು ಮಾಡುವ ಅಭ್ಯಾಸವನ್ನು ನಿಲ್ಲಿಸಿ, ಕೇವಲ ರಾಷ್ಟ್ರಗೀತೆಯನ್ನು ಮಾತ್ರ ಹಾಡಲು ನಿರ್ಧರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯಾರ್ಥಿಯ ಪೋಷಕರೊಬ್ಬರು ದೂರು ನೀಡಿದ್ದು, “ಮಕ್ಕಳಲ್ಲಿ ಮತಾಂತರದ ಬೀಜಗಳನ್ನು ಬಿತ್ತುವ ಕೆಲಸವನ್ನು ಶಾಲೆಯಲ್ಲಿ ಮಾಡಲಾಗುತ್ತಿದೆ. ಶಾಲೆಯ ಎಲ್ಲಾ ಶಾಖೆಗಳನ್ನು ಸೀಲ್ ಮಾಡಬೇಕು, ಶುಲ್ಕವನ್ನು ಹಿಂತಿರುಗಿಸಬೇಕು. ಇತರ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸೇರಿಸಲು ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ದೂರಿನ ನಂತರ ಕಾನ್ಪುರ ಪೊಲೀಸರು ಶಾಲೆಯ ಮ್ಯಾನೇಜರ್ ವಿರುದ್ಧ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆ 2021 ಮತ್ತು ಐಪಿಸಿ ಸೆಕ್ಷನ್ 295-A (ಧಾರ್ಮಿಕ ಭಾವನೆಯನ್ನು ಕೆರಳಿಸುವ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಬೆಳಿಗ್ಗೆ ಪ್ರಾರ್ಥನೆಯ ಸಮಯದಲ್ಲಿ ವಿದ್ಯಾರ್ಥಿಗಳು ಇಸ್ಲಾಮಿಕ್ ಪ್ರಾರ್ಥನೆಗಳನ್ನು ಪಠಿಸುವಂತೆ ಶಾಲೆ ಕ್ರಮ ವಹಿಸಿದೆ” ಎಂದು ಮೂರು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಜಿಲ್ಲಾಡಳಿತ ಮತ್ತು ಪೊಲೀಸರ ಜಂಟಿ ತಂಡ ಶಾಲೆಯ ಪ್ರಾಂಶುಪಾಲರು ಹಾಗೂ ವ್ಯವಸ್ಥಾಪಕರನ್ನು ಭೇಟಿ ಮಾಡಿತ್ತು. ‘‘ನಮ್ಮ ವಿದ್ಯಾರ್ಥಿಗಳು ಕಳೆದ ಹಲವು ವರ್ಷಗಳಿಂದ ನಾಲ್ಕು ಧರ್ಮದ ಪ್ರಾರ್ಥನೆಗಳನ್ನು ಪಠಿಸುತ್ತಿದ್ದು, ಯಾವುದೇ ಪಾಲಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿಲ್ಲ” ಎಂದು ಶಾಲಾ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿರಿ: ಸೇಲಂ ದೇವಾಲಯದ ವಿಗ್ರಹ ಬುದ್ಧನೇ ಹೊರತು ಹಿಂದೂ ದೇವರಲ್ಲ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

“ಶುಕ್ರವಾರ, ಕೆಲವು ಪೋಷಕರು ನಾಲ್ಕು ಪ್ರಾರ್ಥನೆಗಳನ್ನು ವಿರೋಧಿಸಿದರು. ಆದ್ದರಿಂದ ಶಾಲೆಯು ಪ್ರಾರ್ಥನೆಯನ್ನು ನಿಲ್ಲಿಸಿತು. ಈಗ ಬೆಳಗಿನ ಪ್ರಾರ್ಥನೆಯ ವೇಳೆ ರಾಷ್ಟ್ರಗೀತೆಯನ್ನು ಮಾತ್ರ ಹಾಡಲಾಗುತ್ತಿದೆ” ಎಂದು ಕಾನ್ಪುರದ ಸಹಾಯಕ ಪೊಲೀಸ್ ಆಯುಕ್ತ ನಿಶಾಂಕ್ ಶರ್ಮಾ ತಿಳಿಸಿದ್ದಾರೆ.

2003ರಿಂದ ಶಾಲೆ ಪ್ರಾರಂಭವಾದಾಗಿನಿಂದ ಶಾಲೆಯು ನಾಲ್ಕು ಪ್ರಾರ್ಥನೆಗಳನ್ನು ಪಠಿಸುತ್ತಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಅಂಕಿತ ಯಾದವ್ ಹೇಳಿಕೆ ನೀಡಿದ್ದರು.

“ಕೆಲವು ವಿದ್ಯಾರ್ಥಿಗಳ ಪೋಷಕರು ಈಗ ಆಕ್ಷೇಪಣೆಗಳನ್ನು ಎತ್ತಿದ್ದಾರೆ. ನಂತರ ನಾವು ತಕ್ಷಣ ಕ್ರಮ ಕೈಗೊಂಡಿದ್ದೇವೆ. ನಾಲ್ಕು ಧರ್ಮಗಳ ಪ್ರಾರ್ಥನೆಗಳನ್ನೂ ನಿಲ್ಲಿಸಿದ್ದೇವೆ. ನಾವು ಈಗ ರಾಷ್ಟ್ರಗೀತೆಯನ್ನು ಮಾತ್ರ ಹೇಳಿಸುತ್ತಿದ್ದೇವೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...