Homeಮುಖಪುಟಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ಯುಪಿ: ನಾಲ್ಕು ಧರ್ಮಗಳ ಪ್ರಾರ್ಥನೆ ಮಾಡಿಸುತ್ತಿದ್ದ ಶಾಲೆಯ ಮ್ಯಾನೇಜರ್‌ ಮೇಲೆ ಎಫ್‌ಐಆರ್‌; ಮತಾಂತರ ಆರೋಪ

ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

- Advertisement -
- Advertisement -

ಉತ್ತರ ಪ್ರದೇಶದ ಕಾನ್ಪುರದ ಖಾಸಗಿ ಶಾಲೆಯೊಂದರ ಮ್ಯಾನೇಜರ್ ವಿರುದ್ಧ ರಾಜ್ಯದ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಬೆಳಿಗ್ಗೆ ಪ್ರಾರ್ಥನೆಯ ಸಮಯದಲ್ಲಿ ಶಾಲೆಯಲ್ಲಿ ‘ಕಲಿಮಾ’ (ಇಸ್ಲಾಮಿಕ್ ಪ್ರಾರ್ಥನೆ) ಪಠಿಸುತ್ತಿದ್ದಾರೆ ಎಂದು ವಿದ್ಯಾರ್ಥಿಯ ಪೋಷಕರು ದೂರಿದ್ದಾರೆ. ಪ್ರಕರಣ ದಾಖಲಾಗಿದ್ದು, ಇನ್ನು ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲಿಸರು ತಿಳಿಸಿದ್ದಾರೆ.

ಕಾನ್ಪುರದ ಫ್ಲೋರೆಟ್ಸ್ ಶಾಲೆಯು ತನ್ನ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಇಸ್ಲಾಮಿಕ್ ಪ್ರಾರ್ಥನೆಗಳನ್ನು ಮಾಡಿಸುತ್ತಿದೆ ಎಂಬ ಆರೋಪ ಬಂದ ಬಳಿಕ ವಿವಾದ ಉಂಟಾಗಿದೆ. ಪೋಷಕರ ಆಕ್ಷೇಪದ ನಂತರ, ಶಾಲೆಯು ನಾಲ್ಕು ಧರ್ಮಗಳ ಪ್ರಾರ್ಥನೆಗಳನ್ನು ಮಾಡುವ ಅಭ್ಯಾಸವನ್ನು ನಿಲ್ಲಿಸಿ, ಕೇವಲ ರಾಷ್ಟ್ರಗೀತೆಯನ್ನು ಮಾತ್ರ ಹಾಡಲು ನಿರ್ಧರಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ವಿದ್ಯಾರ್ಥಿಯ ಪೋಷಕರೊಬ್ಬರು ದೂರು ನೀಡಿದ್ದು, “ಮಕ್ಕಳಲ್ಲಿ ಮತಾಂತರದ ಬೀಜಗಳನ್ನು ಬಿತ್ತುವ ಕೆಲಸವನ್ನು ಶಾಲೆಯಲ್ಲಿ ಮಾಡಲಾಗುತ್ತಿದೆ. ಶಾಲೆಯ ಎಲ್ಲಾ ಶಾಖೆಗಳನ್ನು ಸೀಲ್ ಮಾಡಬೇಕು, ಶುಲ್ಕವನ್ನು ಹಿಂತಿರುಗಿಸಬೇಕು. ಇತರ ಶಾಲೆಗಳಿಗೆ ವಿದ್ಯಾರ್ಥಿಗಳನ್ನು ಸೇರಿಸಲು ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ದೂರಿನ ನಂತರ ಕಾನ್ಪುರ ಪೊಲೀಸರು ಶಾಲೆಯ ಮ್ಯಾನೇಜರ್ ವಿರುದ್ಧ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆ 2021 ಮತ್ತು ಐಪಿಸಿ ಸೆಕ್ಷನ್ 295-A (ಧಾರ್ಮಿಕ ಭಾವನೆಯನ್ನು ಕೆರಳಿಸುವ ಉದ್ದೇಶ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

“ಬೆಳಿಗ್ಗೆ ಪ್ರಾರ್ಥನೆಯ ಸಮಯದಲ್ಲಿ ವಿದ್ಯಾರ್ಥಿಗಳು ಇಸ್ಲಾಮಿಕ್ ಪ್ರಾರ್ಥನೆಗಳನ್ನು ಪಠಿಸುವಂತೆ ಶಾಲೆ ಕ್ರಮ ವಹಿಸಿದೆ” ಎಂದು ಮೂರು ದಿನಗಳ ಹಿಂದೆ ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಜಿಲ್ಲಾಡಳಿತ ಮತ್ತು ಪೊಲೀಸರ ಜಂಟಿ ತಂಡ ಶಾಲೆಯ ಪ್ರಾಂಶುಪಾಲರು ಹಾಗೂ ವ್ಯವಸ್ಥಾಪಕರನ್ನು ಭೇಟಿ ಮಾಡಿತ್ತು. ‘‘ನಮ್ಮ ವಿದ್ಯಾರ್ಥಿಗಳು ಕಳೆದ ಹಲವು ವರ್ಷಗಳಿಂದ ನಾಲ್ಕು ಧರ್ಮದ ಪ್ರಾರ್ಥನೆಗಳನ್ನು ಪಠಿಸುತ್ತಿದ್ದು, ಯಾವುದೇ ಪಾಲಕರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿಲ್ಲ” ಎಂದು ಶಾಲಾ ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದರು.

ಇದನ್ನೂ ಓದಿರಿ: ಸೇಲಂ ದೇವಾಲಯದ ವಿಗ್ರಹ ಬುದ್ಧನೇ ಹೊರತು ಹಿಂದೂ ದೇವರಲ್ಲ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

“ಶುಕ್ರವಾರ, ಕೆಲವು ಪೋಷಕರು ನಾಲ್ಕು ಪ್ರಾರ್ಥನೆಗಳನ್ನು ವಿರೋಧಿಸಿದರು. ಆದ್ದರಿಂದ ಶಾಲೆಯು ಪ್ರಾರ್ಥನೆಯನ್ನು ನಿಲ್ಲಿಸಿತು. ಈಗ ಬೆಳಗಿನ ಪ್ರಾರ್ಥನೆಯ ವೇಳೆ ರಾಷ್ಟ್ರಗೀತೆಯನ್ನು ಮಾತ್ರ ಹಾಡಲಾಗುತ್ತಿದೆ” ಎಂದು ಕಾನ್ಪುರದ ಸಹಾಯಕ ಪೊಲೀಸ್ ಆಯುಕ್ತ ನಿಶಾಂಕ್ ಶರ್ಮಾ ತಿಳಿಸಿದ್ದಾರೆ.

2003ರಿಂದ ಶಾಲೆ ಪ್ರಾರಂಭವಾದಾಗಿನಿಂದ ಶಾಲೆಯು ನಾಲ್ಕು ಪ್ರಾರ್ಥನೆಗಳನ್ನು ಪಠಿಸುತ್ತಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಅಂಕಿತ ಯಾದವ್ ಹೇಳಿಕೆ ನೀಡಿದ್ದರು.

“ಕೆಲವು ವಿದ್ಯಾರ್ಥಿಗಳ ಪೋಷಕರು ಈಗ ಆಕ್ಷೇಪಣೆಗಳನ್ನು ಎತ್ತಿದ್ದಾರೆ. ನಂತರ ನಾವು ತಕ್ಷಣ ಕ್ರಮ ಕೈಗೊಂಡಿದ್ದೇವೆ. ನಾಲ್ಕು ಧರ್ಮಗಳ ಪ್ರಾರ್ಥನೆಗಳನ್ನೂ ನಿಲ್ಲಿಸಿದ್ದೇವೆ. ನಾವು ಈಗ ರಾಷ್ಟ್ರಗೀತೆಯನ್ನು ಮಾತ್ರ ಹೇಳಿಸುತ್ತಿದ್ದೇವೆ” ಎಂದಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...