Homeಕರ್ನಾಟಕಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಸುವರ್ಣ ನ್ಯೂಸ್, ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ...

ಮುಸ್ಲಿಂ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ: ಸುವರ್ಣ ನ್ಯೂಸ್, ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ದೂರು

- Advertisement -
- Advertisement -

ಮುಸ್ಲಿಂ ಜನಸಂಖ್ಯೆಯನ್ನು ತೋರಿಸಲು ಪಾಕಿಸ್ತಾನ ಧ್ವಜವನ್ನು ಬಳಸಿದ್ದ ಏಷ್ಯಾನೆಟ್ ಸುವರ್ಣ ನ್ಯೂಸ್ ಮತ್ತು ಅದರ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ಧ ಕೋಮು ದ್ವೇಷವನ್ನು ಹರಡಿದ ಆರೋಪದಲ್ಲಿ ಅಸೋಸಿಯೇಷನ್‌ ಫಾರ್‌‌ ಪ್ರೊಟೆಕ್ಷನ್ ಸಿವಿಲ್‌ ರೈಟ್ಸ್ ಸಂಘಟನೆಯ ನಿಯೋಗವು (ಎಪಿಸಿಆರ್) ಬೆಂಗಳೂರು ಸಹಾಯಕ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.

ಈ ಬಗ್ಗೆ ಮಾತನಾಡಿದ ಎಪಿಸಿಆರ್ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ನಿಯಾಝ್, ಸುವರ್ಣ ನ್ಯೂಸ್ ಕನ್ನಡ ವಾಹಿನಿಯಲ್ಲಿ ಕಾರ್ಯಕ್ರಮವೊಂದರ ಪ್ರಸಾರದ ಸಮಯದಲ್ಲಿ ಅಜಿತ್ ಹನಮಕ್ಕನವರ್ ಹಿಂದೂ ಜನಸಂಖ್ಯೆಯನ್ನು ಪ್ರತಿನಿಧಿಸಲು ಭಾರತೀಯ ಧ್ವಜವನ್ನು ಮತ್ತು ಮುಸ್ಲಿಮರನ್ನು ಪ್ರತಿನಿಧಿಸಲು ಪಾಕಿಸ್ತಾನದ ಧ್ವಜವನ್ನು ಬಳಸಿ ಕೋಮು ದ್ವೇಷ ಹರಡಲು ಯತ್ನಿಸಿದ್ದಾರೆ. ರಾಷ್ಟ್ರೀಯ ಧ್ವಜಗಳನ್ನು ಧಾರ್ಮಿಕ ಸಮುದಾಯಗಳಿಗೆ ರೂಪಕಗಳಾಗಿ ಬಳಸುವುದು ತಪ್ಪುದಾರಿಗೆಳೆಯುವಂತಿದೆ, ಆದ್ದರಿಂದ ಸುವರ್ಣ ನ್ಯೂಸ್‌ ಮತ್ತು ನಿರೂಪಕ ಅಜಿತ್ ಹನಮಕ್ಕನವರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯಲ್ಲಿ ದೇಶದಲ್ಲಿ ಹಿಂದೂಗಳ ಜನ ಸಂಖ್ಯೆ ಇಳಿಕೆಯಾಗಿದೆ. ಮುಸ್ಲಿಮರ ಜನಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ತಿಳಿಸಿತ್ತು. ಚುನಾವಣೆಯ ಹೊತ್ತಲ್ಲೇ ಬಿಡುಗಡೆ ಮಾಡಿರುವ ವರದಿ ದೇಶದಾದ್ಯಂತ ವಿವಾದದ ಕಿಡಿ ಹೊತ್ತಿಸಿದೆ.

ಈ ವರದಿ ಆಧರಿಸಿ ಮೇ 9, 2024ರಂದು ರಾತ್ರಿ 8:30ಕ್ಕೆ ಸುವರ್ಣ ನ್ಯೂಸ್ ಸುದ್ದಿ ಪ್ರಕಟಿಸಿತ್ತು. ಅಜಿತ್ ಹನುಮಕ್ಕನವರ್ ಸುದ್ದಿ ವಿಶ್ಲೇಷಣೆ ಮಾಡಿದ್ದರು. ಸುದ್ದಿಯಲ್ಲಿ ಹಿಂದೂ ಮುಸ್ಲಿಮರ ಜನಸಂಖ್ಯೆ ತೋರಿಸುವಾಗ ಹಿಂದೂಗಳ ಜನಸಂಖ್ಯೆಗೆ ಭಾರತದ ಧ್ವಜ ಮತ್ತು ಮುಸ್ಲಿಮರ ಜನಸಂಖ್ಯೆಗೆ ಪಾಕಿಸ್ತಾನ ಧ್ವಜದ ಗ್ರಾಫಿಕ್ಸ್ ಬಳಸಲಾಗಿದೆ.

ಇದರ ವಿಡಿಯೋ ಹಾಗೂ ಸ್ಕ್ರೀನ್‌ಶಾಟ್‌ನ ವಿಡಿಯೋವನ್ನು ಆಲ್ಟ್‌ನ್ಯೂಸ್‌ನ ಸಹ ಸಂಸ್ಥಾಪಕ ಹಾಗೂ ಪತ್ರಕರ್ತ ಮುಹಮ್ಮದ್ ಝುಬೈರ್ ತನ್ನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದರು. ‘ಭಾರತೀಯ ಹಿಂದೂಗಳಿಗೆ ಭಾರತದ ಧ್ವಜ ಮತ್ತು ಭಾರತೀಯ ಮುಸ್ಲಿಮರಿಗೆ ಪಾಕಿಸ್ತಾನದ ಧ್ವಜ ಬಳಸಲಾಗಿದೆ. ಏಷ್ಯಾನೆಟ್ ಸುವರ್ಣ ನ್ಯೂಸ್ ಕನ್ನಡ ಮತ್ತು ಅದರ ಆ್ಯಂಕರ್ ಅಜಿತ್ ಹನುಮಕ್ಕನವರ್ ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯ ವರದಿಯನ್ನು ಚರ್ಚಿಸುವಾಗ 20 ಕೋಟಿ ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನದ ಧ್ವಜ ಬಳಸಿ ಚಿತ್ರಿಸಿದ್ದಾರೆ. ಕರ್ನಾಟಕದ ಸಂಘಟನೆಗಳು ಆ್ಯಂಕರ್ ಮತ್ತು ಚಾನೆಲ್ ವಿರುದ್ಧ ದೂರು ದಾಖಲಿಸುತ್ತವೆ ಎಂದುಕೊಂಡಿದ್ದೇನೆ” ಎಂದು ಝಬೈರ್ ತನ್ನ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದರು. ಇದರ ಬೆನ್ನಲ್ಲಿ ಸುವರ್ಣ ನ್ಯೂಸ್ ಮತ್ತು ಸುದ್ದಿ ನಿರೂಪಕ ಅಜಿತ್ ಹನುಮಕ್ಕನವರ್ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನು ಓದಿ: ಪ್ರತಿ ಹಂತದ ಮತದಾನದ ನಂತರ ಪತ್ರಿಕಾಗೋಷ್ಠಿ ನಡೆಸಿ: ಚುನಾವಣಾ ಆಯೋಗಕ್ಕೆ ಪತ್ರ ಬರೆದ ಪತ್ರಿಕಾ ಸಂಸ್ಥೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...