Homeಮುಖಪುಟದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು...

ದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು ನ್ಯಾಯಶಾಸ್ತ್ರಜ್ಞರು, ಕಲಾವಿದರಿಂದ ಛೀಮಾರಿ

- Advertisement -
- Advertisement -

ಖ್ಯಾತ ವೆಬ್ ಪೋರ್ಟಲ್ ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಕ್ಕಾಗಿ ಸುಮಾರು 3,500 ನ್ಯಾಯಶಾಸ್ತ್ರಜ್ಞರು, ಶಿಕ್ಷಣ ತಜ್ಞರು, ನಟರು, ಕಲಾವಿದರು, ಬರಹಗಾರರು ಮತ್ತು ಇತರ ವರ್ಗದ ಜನರು ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ಧಾರ್ಥ್ ವರದರಾಜನ್‌ ವಿರುದ್ಧದ ಎಲ್ಲಾ ಕ್ರಿಮಿನಲ್ ಮೊಕದ್ದಮೆಗಳನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

ಮಂಗಳವಾರ ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ಅವರು ವರದರಾಜನ್ ವಿರುದ್ಧ ಎಫ್‌ಐಆರ್ ನೋಂದಣಿಯು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ. ಅಲ್ಲದೇ COVID-19 ಸಾಂಕ್ರಾಮಿಕವನ್ನು ಮಾಧ್ಯಮಗಳ ಸ್ವಾತಂತ್ರ್ಯವನ್ನು ಹಾಳುಮಾಡಲು ಒಂದು ಅಸ್ತ್ರವಾಗಿ ಬಳಸಬೇಡಿ ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ವೈದ್ಯಕೀಯ ತುರ್ತುಸ್ಥಿತಿಯನ್ನು ಬಳಸಿಕೊಂಡು ವಾಸ್ತವಿಕ ರಾಜಕೀಯ ತುರ್ತುಸ್ಥಿತಿಯನ್ನು ಹೇರುವ ನೆಪವಾಗಿ ಕಾರ್ಯನಿರ್ವಹಿಸಬಾರದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದಕ್ಕೆ ಸಹಿ ಹಾಕಿದವರಲ್ಲಿ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮದನ್ ಬಿ ಲೋಕೂರ್, ಮದ್ರಾಸ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಕೆ ಚಂದ್ರು ಮತ್ತು ಪಾಟ್ನಾ ಹೈಕೋರ್ಟ್ ಮಾಜಿ ನ್ಯಾಯಾಧೀಶ ಅಂಜನಾ ಪ್ರಕಾಶ್ ಸೇರಿದ್ದಾರೆ.

ಮಾಜಿ ಮಾಜಿ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಅವರೊಂದಿಗೆ ಇಬ್ಬರು ಮಾಜಿ ನೌಕಾಪಡೆಯ ಮುಖ್ಯಸ್ಥರಾದ ಅಡ್ಮಿರಲ್ ರಾಮದಾಸ್ ಮತ್ತು ಅಡ್ಮಿರಲ್ ವಿಷ್ಣು ಭಾಗವತ್ ಸಹ ಸಹಿ ಹಾಕಿದ್ದಾರೆ.

“ಮಾಧ್ಯಮ ಸ್ವಾತಂತ್ರ್ಯದ ಮೇಲಿನ ಈ ದಾಳಿ, ವಿಶೇಷವಾಗಿ COVID-19 ಬಿಕ್ಕಟ್ಟಿನ ಸಂದರ್ಭದಲ್ಲಿ, ಕೇವಲ ವಾಕ್ ಸ್ವಾತಂತ್ರ್ಯಕ್ಕೆ ಮಾತ್ರವಲ್ಲ, ಸಾರ್ವಜನಿಕರ ಮಾಹಿತಿಯ ಹಕ್ಕಿಗೆ ಅಪಾಯವನ್ನುಂಟುಮಾಡುತ್ತದೆ” ಎಂದು ಹೇಳಿಕೆ ತಿಳಿಸಿದೆ. ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಬೇಡಿ ಎಂದು ಅವರು ಮಾಧ್ಯಮಗಳಿಗೆ ಕರೆ ನೀಡಿದರು.

ದೆಹಲಿಯಲ್ಲಿ ತಬ್ಲೀಘಿ ಜಮಾಅತ್ ಕಾರ್ಯಕ್ರಮ ನಡೆದ ದಿನ, ಯೋಗಿ ಆದಿತ್ಯನಾಥ್ ಅವರು ಎಂದಿನಂತೆ ರಾಮ್ ನವಮಿ ಜಾತ್ರೆ ನಡೆಯಲಿದೆ ಎಂದು ತಿಳಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಟ್ವಿಟ್ಟರ್ ನಲ್ಲಿ ಮಾಡಿದ ಕಾಮೆಂಟ್‌ಗಳ ಕುರಿತು ವರದರಾಜನ್ ರವರ ದಿ ವೈರ್‌ ವರದಿ ಮಾಡಿತ್ತು.

ಕೊರೋನವೈರಸ್ ಹರಡುವುದನ್ನು ತಡೆಗಟ್ಟಲು ರಾಷ್ಟ್ರವ್ಯಾಪಿ ಲಾಕ್ ಡೌನ್ ಸಮಯದಲ್ಲಿ ಅಯೋಧ್ಯೆಯ ರಾಮ್‌ಜನ್ಮಭೂಮಿ ಸ್ಥಳದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ವರದರಾಜನ್ ವಿರುದ್ಧದ ಎಫ್ಐಆರ್‌ನಲ್ಲಿ ಅವರು ಮಾಡಿದ ಟ್ವೀಟ್ ಅನ್ನು ಉಲ್ಲೇಖಿಸಿದ್ದಾರೆ, “ತಬ್ಲೀಘಿ ಜಮಾಅತ್ ಕಾರ್ಯಕ್ರಮ ನಡೆದ ದಿನ, ಆದಿತ್ಯನಾಥ್ ಮಾರ್ಚ್ 25 ರಿಂದ ಏಪ್ರಿಲ್ 2 ರವರೆಗೆ ಅಯೋಧ್ಯೆಗಾಗಿ ಯೋಜಿಸಲಾದ ದೊಡ್ಡ ರಾಮ್ ನವಮಿ ಜಾತ್ರೆ ಎಂದಿನಂತೆ ಮುಂದುವರಿಯುತ್ತದೆ ಮತ್ತು ಭಗವಾನ್ ರಾಮ್ ಭಕ್ತರನ್ನು ಕೊರೋನವೈರಸ್‌ನಿಂದ ರಕ್ಷಿಸುತ್ತಾನೆ” ಎಂಬುದು ಆ ಟ್ವೀಟ್‌ನ ಸಾರವಾಗಿದೆ.

ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಪಂಜಾಬ್ ರಾಜ್ಯಪಾಲರ ಮಾಜಿ ಸಲಹೆಗಾರ ಮತ್ತು ರೊಮೇನಿಯಾದ ಮಾಜಿ ರಾಯಭಾರಿ ಜೂಲಿಯೊ ರಿಬೈರೊ ಮತ್ತು ಮಾಜಿ ಸಿಇಸಿ ಎಂಎಸ್ ಗಿಲ್ ಸೇರಿದಂತೆ ಹಲವಾರು ಮಾಜಿ ಅಧಿಕಾರಿಗಳು ಈ ಹೇಳಿಕೆಗೆ ಸಹಿ ಹಾಕಿದ್ದಾರೆ.

ಲೇಖಕರಾದ ವಿಕ್ರಮ್ ಸೇಠ್, ನಯನತಾರಾ ಸಹಗಲ್, ಅರುಂಧತಿ ರಾಯ್, ಅನಿತಾ ದೇಸಾಯಿ, ಕೆ ಸಚ್ಚಿದಾನಂದನ್ ಮತ್ತು ಕಿರಣ್ ದೇಸಾಯಿ ಇತರ ಸಹಿ ಹಾಕಿದ್ದಾರೆ.

ನಟರು ಮತ್ತು ಕಲಾವಿದರಾದ ಅಮೋಲ್ ಪಾಲೇಕರ್, ನಸೀರುದ್ದೀನ್ ಷಾ, ನಂದಿತಾ ದಾಸ್, ಫರ್ಹಾನ್ ಅಖ್ತರ್ ಮತ್ತು ಮಲ್ಲಿಕಾ ಸಾರಾಭಾಯ್ ಅವರು ಈ ಹೇಳಿಕೆಯನ್ನು ಅನುಮೋದಿಸಿದ್ದಾರೆ. ಚಿತ್ರ ನಿರ್ಮಾಪಕರಲ್ಲಿ ಜೋಯಾ ಅಖ್ತರ್, ಕಿರಣ್ ರಾವ್ ಮತ್ತು ಆನಂದ್ ಪಟ್ವರ್ಧನ್, ಮತ್ತು ದಯಾನಿತಾ ಸಿಂಗ್‌ ಕೂಡ ಇದ್ದಾರೆ.

ಹಿರಿಯ ಪತ್ರಕರ್ತರು ಮತ್ತು ಜಗತ್ತಿನಾದ್ಯಂತದ ವಿಶ್ವವಿದ್ಯಾಲಯಗಳ ಸಾವಿರಕ್ಕೂ ಹೆಚ್ಚು ಪ್ರಾಧ್ಯಾಪಕರು ಸಹ ಸಹಿ ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...