Homeಮುಖಪುಟದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು...

ದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು ನ್ಯಾಯಶಾಸ್ತ್ರಜ್ಞರು, ಕಲಾವಿದರಿಂದ ಛೀಮಾರಿ

- Advertisement -
- Advertisement -

ಖ್ಯಾತ ವೆಬ್ ಪೋರ್ಟಲ್ ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಕ್ಕಾಗಿ ಸುಮಾರು 3,500 ನ್ಯಾಯಶಾಸ್ತ್ರಜ್ಞರು, ಶಿಕ್ಷಣ ತಜ್ಞರು, ನಟರು, ಕಲಾವಿದರು, ಬರಹಗಾರರು ಮತ್ತು ಇತರ ವರ್ಗದ ಜನರು ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ಧಾರ್ಥ್ ವರದರಾಜನ್‌ ವಿರುದ್ಧದ ಎಲ್ಲಾ ಕ್ರಿಮಿನಲ್ ಮೊಕದ್ದಮೆಗಳನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

ಮಂಗಳವಾರ ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ಅವರು ವರದರಾಜನ್ ವಿರುದ್ಧ ಎಫ್‌ಐಆರ್ ನೋಂದಣಿಯು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ. ಅಲ್ಲದೇ COVID-19 ಸಾಂಕ್ರಾಮಿಕವನ್ನು ಮಾಧ್ಯಮಗಳ ಸ್ವಾತಂತ್ರ್ಯವನ್ನು ಹಾಳುಮಾಡಲು ಒಂದು ಅಸ್ತ್ರವಾಗಿ ಬಳಸಬೇಡಿ ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ವೈದ್ಯಕೀಯ ತುರ್ತುಸ್ಥಿತಿಯನ್ನು ಬಳಸಿಕೊಂಡು ವಾಸ್ತವಿಕ ರಾಜಕೀಯ ತುರ್ತುಸ್ಥಿತಿಯನ್ನು ಹೇರುವ ನೆಪವಾಗಿ ಕಾರ್ಯನಿರ್ವಹಿಸಬಾರದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದಕ್ಕೆ ಸಹಿ ಹಾಕಿದವರಲ್ಲಿ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮದನ್ ಬಿ ಲೋಕೂರ್, ಮದ್ರಾಸ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಕೆ ಚಂದ್ರು ಮತ್ತು ಪಾಟ್ನಾ ಹೈಕೋರ್ಟ್ ಮಾಜಿ ನ್ಯಾಯಾಧೀಶ ಅಂಜನಾ ಪ್ರಕಾಶ್ ಸೇರಿದ್ದಾರೆ.

ಮಾಜಿ ಮಾಜಿ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಅವರೊಂದಿಗೆ ಇಬ್ಬರು ಮಾಜಿ ನೌಕಾಪಡೆಯ ಮುಖ್ಯಸ್ಥರಾದ ಅಡ್ಮಿರಲ್ ರಾಮದಾಸ್ ಮತ್ತು ಅಡ್ಮಿರಲ್ ವಿಷ್ಣು ಭಾಗವತ್ ಸಹ ಸಹಿ ಹಾಕಿದ್ದಾರೆ.

“ಮಾಧ್ಯಮ ಸ್ವಾತಂತ್ರ್ಯದ ಮೇಲಿನ ಈ ದಾಳಿ, ವಿಶೇಷವಾಗಿ COVID-19 ಬಿಕ್ಕಟ್ಟಿನ ಸಂದರ್ಭದಲ್ಲಿ, ಕೇವಲ ವಾಕ್ ಸ್ವಾತಂತ್ರ್ಯಕ್ಕೆ ಮಾತ್ರವಲ್ಲ, ಸಾರ್ವಜನಿಕರ ಮಾಹಿತಿಯ ಹಕ್ಕಿಗೆ ಅಪಾಯವನ್ನುಂಟುಮಾಡುತ್ತದೆ” ಎಂದು ಹೇಳಿಕೆ ತಿಳಿಸಿದೆ. ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಬೇಡಿ ಎಂದು ಅವರು ಮಾಧ್ಯಮಗಳಿಗೆ ಕರೆ ನೀಡಿದರು.

ದೆಹಲಿಯಲ್ಲಿ ತಬ್ಲೀಘಿ ಜಮಾಅತ್ ಕಾರ್ಯಕ್ರಮ ನಡೆದ ದಿನ, ಯೋಗಿ ಆದಿತ್ಯನಾಥ್ ಅವರು ಎಂದಿನಂತೆ ರಾಮ್ ನವಮಿ ಜಾತ್ರೆ ನಡೆಯಲಿದೆ ಎಂದು ತಿಳಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಟ್ವಿಟ್ಟರ್ ನಲ್ಲಿ ಮಾಡಿದ ಕಾಮೆಂಟ್‌ಗಳ ಕುರಿತು ವರದರಾಜನ್ ರವರ ದಿ ವೈರ್‌ ವರದಿ ಮಾಡಿತ್ತು.

ಕೊರೋನವೈರಸ್ ಹರಡುವುದನ್ನು ತಡೆಗಟ್ಟಲು ರಾಷ್ಟ್ರವ್ಯಾಪಿ ಲಾಕ್ ಡೌನ್ ಸಮಯದಲ್ಲಿ ಅಯೋಧ್ಯೆಯ ರಾಮ್‌ಜನ್ಮಭೂಮಿ ಸ್ಥಳದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ವರದರಾಜನ್ ವಿರುದ್ಧದ ಎಫ್ಐಆರ್‌ನಲ್ಲಿ ಅವರು ಮಾಡಿದ ಟ್ವೀಟ್ ಅನ್ನು ಉಲ್ಲೇಖಿಸಿದ್ದಾರೆ, “ತಬ್ಲೀಘಿ ಜಮಾಅತ್ ಕಾರ್ಯಕ್ರಮ ನಡೆದ ದಿನ, ಆದಿತ್ಯನಾಥ್ ಮಾರ್ಚ್ 25 ರಿಂದ ಏಪ್ರಿಲ್ 2 ರವರೆಗೆ ಅಯೋಧ್ಯೆಗಾಗಿ ಯೋಜಿಸಲಾದ ದೊಡ್ಡ ರಾಮ್ ನವಮಿ ಜಾತ್ರೆ ಎಂದಿನಂತೆ ಮುಂದುವರಿಯುತ್ತದೆ ಮತ್ತು ಭಗವಾನ್ ರಾಮ್ ಭಕ್ತರನ್ನು ಕೊರೋನವೈರಸ್‌ನಿಂದ ರಕ್ಷಿಸುತ್ತಾನೆ” ಎಂಬುದು ಆ ಟ್ವೀಟ್‌ನ ಸಾರವಾಗಿದೆ.

ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಪಂಜಾಬ್ ರಾಜ್ಯಪಾಲರ ಮಾಜಿ ಸಲಹೆಗಾರ ಮತ್ತು ರೊಮೇನಿಯಾದ ಮಾಜಿ ರಾಯಭಾರಿ ಜೂಲಿಯೊ ರಿಬೈರೊ ಮತ್ತು ಮಾಜಿ ಸಿಇಸಿ ಎಂಎಸ್ ಗಿಲ್ ಸೇರಿದಂತೆ ಹಲವಾರು ಮಾಜಿ ಅಧಿಕಾರಿಗಳು ಈ ಹೇಳಿಕೆಗೆ ಸಹಿ ಹಾಕಿದ್ದಾರೆ.

ಲೇಖಕರಾದ ವಿಕ್ರಮ್ ಸೇಠ್, ನಯನತಾರಾ ಸಹಗಲ್, ಅರುಂಧತಿ ರಾಯ್, ಅನಿತಾ ದೇಸಾಯಿ, ಕೆ ಸಚ್ಚಿದಾನಂದನ್ ಮತ್ತು ಕಿರಣ್ ದೇಸಾಯಿ ಇತರ ಸಹಿ ಹಾಕಿದ್ದಾರೆ.

ನಟರು ಮತ್ತು ಕಲಾವಿದರಾದ ಅಮೋಲ್ ಪಾಲೇಕರ್, ನಸೀರುದ್ದೀನ್ ಷಾ, ನಂದಿತಾ ದಾಸ್, ಫರ್ಹಾನ್ ಅಖ್ತರ್ ಮತ್ತು ಮಲ್ಲಿಕಾ ಸಾರಾಭಾಯ್ ಅವರು ಈ ಹೇಳಿಕೆಯನ್ನು ಅನುಮೋದಿಸಿದ್ದಾರೆ. ಚಿತ್ರ ನಿರ್ಮಾಪಕರಲ್ಲಿ ಜೋಯಾ ಅಖ್ತರ್, ಕಿರಣ್ ರಾವ್ ಮತ್ತು ಆನಂದ್ ಪಟ್ವರ್ಧನ್, ಮತ್ತು ದಯಾನಿತಾ ಸಿಂಗ್‌ ಕೂಡ ಇದ್ದಾರೆ.

ಹಿರಿಯ ಪತ್ರಕರ್ತರು ಮತ್ತು ಜಗತ್ತಿನಾದ್ಯಂತದ ವಿಶ್ವವಿದ್ಯಾಲಯಗಳ ಸಾವಿರಕ್ಕೂ ಹೆಚ್ಚು ಪ್ರಾಧ್ಯಾಪಕರು ಸಹ ಸಹಿ ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...