Homeಮುಖಪುಟದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು...

ದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು ನ್ಯಾಯಶಾಸ್ತ್ರಜ್ಞರು, ಕಲಾವಿದರಿಂದ ಛೀಮಾರಿ

- Advertisement -
- Advertisement -

ಖ್ಯಾತ ವೆಬ್ ಪೋರ್ಟಲ್ ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಕ್ಕಾಗಿ ಸುಮಾರು 3,500 ನ್ಯಾಯಶಾಸ್ತ್ರಜ್ಞರು, ಶಿಕ್ಷಣ ತಜ್ಞರು, ನಟರು, ಕಲಾವಿದರು, ಬರಹಗಾರರು ಮತ್ತು ಇತರ ವರ್ಗದ ಜನರು ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ಧಾರ್ಥ್ ವರದರಾಜನ್‌ ವಿರುದ್ಧದ ಎಲ್ಲಾ ಕ್ರಿಮಿನಲ್ ಮೊಕದ್ದಮೆಗಳನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

ಮಂಗಳವಾರ ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ಅವರು ವರದರಾಜನ್ ವಿರುದ್ಧ ಎಫ್‌ಐಆರ್ ನೋಂದಣಿಯು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ. ಅಲ್ಲದೇ COVID-19 ಸಾಂಕ್ರಾಮಿಕವನ್ನು ಮಾಧ್ಯಮಗಳ ಸ್ವಾತಂತ್ರ್ಯವನ್ನು ಹಾಳುಮಾಡಲು ಒಂದು ಅಸ್ತ್ರವಾಗಿ ಬಳಸಬೇಡಿ ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ವೈದ್ಯಕೀಯ ತುರ್ತುಸ್ಥಿತಿಯನ್ನು ಬಳಸಿಕೊಂಡು ವಾಸ್ತವಿಕ ರಾಜಕೀಯ ತುರ್ತುಸ್ಥಿತಿಯನ್ನು ಹೇರುವ ನೆಪವಾಗಿ ಕಾರ್ಯನಿರ್ವಹಿಸಬಾರದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದಕ್ಕೆ ಸಹಿ ಹಾಕಿದವರಲ್ಲಿ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮದನ್ ಬಿ ಲೋಕೂರ್, ಮದ್ರಾಸ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಕೆ ಚಂದ್ರು ಮತ್ತು ಪಾಟ್ನಾ ಹೈಕೋರ್ಟ್ ಮಾಜಿ ನ್ಯಾಯಾಧೀಶ ಅಂಜನಾ ಪ್ರಕಾಶ್ ಸೇರಿದ್ದಾರೆ.

ಮಾಜಿ ಮಾಜಿ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಅವರೊಂದಿಗೆ ಇಬ್ಬರು ಮಾಜಿ ನೌಕಾಪಡೆಯ ಮುಖ್ಯಸ್ಥರಾದ ಅಡ್ಮಿರಲ್ ರಾಮದಾಸ್ ಮತ್ತು ಅಡ್ಮಿರಲ್ ವಿಷ್ಣು ಭಾಗವತ್ ಸಹ ಸಹಿ ಹಾಕಿದ್ದಾರೆ.

“ಮಾಧ್ಯಮ ಸ್ವಾತಂತ್ರ್ಯದ ಮೇಲಿನ ಈ ದಾಳಿ, ವಿಶೇಷವಾಗಿ COVID-19 ಬಿಕ್ಕಟ್ಟಿನ ಸಂದರ್ಭದಲ್ಲಿ, ಕೇವಲ ವಾಕ್ ಸ್ವಾತಂತ್ರ್ಯಕ್ಕೆ ಮಾತ್ರವಲ್ಲ, ಸಾರ್ವಜನಿಕರ ಮಾಹಿತಿಯ ಹಕ್ಕಿಗೆ ಅಪಾಯವನ್ನುಂಟುಮಾಡುತ್ತದೆ” ಎಂದು ಹೇಳಿಕೆ ತಿಳಿಸಿದೆ. ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಬೇಡಿ ಎಂದು ಅವರು ಮಾಧ್ಯಮಗಳಿಗೆ ಕರೆ ನೀಡಿದರು.

ದೆಹಲಿಯಲ್ಲಿ ತಬ್ಲೀಘಿ ಜಮಾಅತ್ ಕಾರ್ಯಕ್ರಮ ನಡೆದ ದಿನ, ಯೋಗಿ ಆದಿತ್ಯನಾಥ್ ಅವರು ಎಂದಿನಂತೆ ರಾಮ್ ನವಮಿ ಜಾತ್ರೆ ನಡೆಯಲಿದೆ ಎಂದು ತಿಳಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಟ್ವಿಟ್ಟರ್ ನಲ್ಲಿ ಮಾಡಿದ ಕಾಮೆಂಟ್‌ಗಳ ಕುರಿತು ವರದರಾಜನ್ ರವರ ದಿ ವೈರ್‌ ವರದಿ ಮಾಡಿತ್ತು.

ಕೊರೋನವೈರಸ್ ಹರಡುವುದನ್ನು ತಡೆಗಟ್ಟಲು ರಾಷ್ಟ್ರವ್ಯಾಪಿ ಲಾಕ್ ಡೌನ್ ಸಮಯದಲ್ಲಿ ಅಯೋಧ್ಯೆಯ ರಾಮ್‌ಜನ್ಮಭೂಮಿ ಸ್ಥಳದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ವರದರಾಜನ್ ವಿರುದ್ಧದ ಎಫ್ಐಆರ್‌ನಲ್ಲಿ ಅವರು ಮಾಡಿದ ಟ್ವೀಟ್ ಅನ್ನು ಉಲ್ಲೇಖಿಸಿದ್ದಾರೆ, “ತಬ್ಲೀಘಿ ಜಮಾಅತ್ ಕಾರ್ಯಕ್ರಮ ನಡೆದ ದಿನ, ಆದಿತ್ಯನಾಥ್ ಮಾರ್ಚ್ 25 ರಿಂದ ಏಪ್ರಿಲ್ 2 ರವರೆಗೆ ಅಯೋಧ್ಯೆಗಾಗಿ ಯೋಜಿಸಲಾದ ದೊಡ್ಡ ರಾಮ್ ನವಮಿ ಜಾತ್ರೆ ಎಂದಿನಂತೆ ಮುಂದುವರಿಯುತ್ತದೆ ಮತ್ತು ಭಗವಾನ್ ರಾಮ್ ಭಕ್ತರನ್ನು ಕೊರೋನವೈರಸ್‌ನಿಂದ ರಕ್ಷಿಸುತ್ತಾನೆ” ಎಂಬುದು ಆ ಟ್ವೀಟ್‌ನ ಸಾರವಾಗಿದೆ.

ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಪಂಜಾಬ್ ರಾಜ್ಯಪಾಲರ ಮಾಜಿ ಸಲಹೆಗಾರ ಮತ್ತು ರೊಮೇನಿಯಾದ ಮಾಜಿ ರಾಯಭಾರಿ ಜೂಲಿಯೊ ರಿಬೈರೊ ಮತ್ತು ಮಾಜಿ ಸಿಇಸಿ ಎಂಎಸ್ ಗಿಲ್ ಸೇರಿದಂತೆ ಹಲವಾರು ಮಾಜಿ ಅಧಿಕಾರಿಗಳು ಈ ಹೇಳಿಕೆಗೆ ಸಹಿ ಹಾಕಿದ್ದಾರೆ.

ಲೇಖಕರಾದ ವಿಕ್ರಮ್ ಸೇಠ್, ನಯನತಾರಾ ಸಹಗಲ್, ಅರುಂಧತಿ ರಾಯ್, ಅನಿತಾ ದೇಸಾಯಿ, ಕೆ ಸಚ್ಚಿದಾನಂದನ್ ಮತ್ತು ಕಿರಣ್ ದೇಸಾಯಿ ಇತರ ಸಹಿ ಹಾಕಿದ್ದಾರೆ.

ನಟರು ಮತ್ತು ಕಲಾವಿದರಾದ ಅಮೋಲ್ ಪಾಲೇಕರ್, ನಸೀರುದ್ದೀನ್ ಷಾ, ನಂದಿತಾ ದಾಸ್, ಫರ್ಹಾನ್ ಅಖ್ತರ್ ಮತ್ತು ಮಲ್ಲಿಕಾ ಸಾರಾಭಾಯ್ ಅವರು ಈ ಹೇಳಿಕೆಯನ್ನು ಅನುಮೋದಿಸಿದ್ದಾರೆ. ಚಿತ್ರ ನಿರ್ಮಾಪಕರಲ್ಲಿ ಜೋಯಾ ಅಖ್ತರ್, ಕಿರಣ್ ರಾವ್ ಮತ್ತು ಆನಂದ್ ಪಟ್ವರ್ಧನ್, ಮತ್ತು ದಯಾನಿತಾ ಸಿಂಗ್‌ ಕೂಡ ಇದ್ದಾರೆ.

ಹಿರಿಯ ಪತ್ರಕರ್ತರು ಮತ್ತು ಜಗತ್ತಿನಾದ್ಯಂತದ ವಿಶ್ವವಿದ್ಯಾಲಯಗಳ ಸಾವಿರಕ್ಕೂ ಹೆಚ್ಚು ಪ್ರಾಧ್ಯಾಪಕರು ಸಹ ಸಹಿ ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...