Homeಮುಖಪುಟದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು...

ದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು ನ್ಯಾಯಶಾಸ್ತ್ರಜ್ಞರು, ಕಲಾವಿದರಿಂದ ಛೀಮಾರಿ

- Advertisement -
- Advertisement -

ಖ್ಯಾತ ವೆಬ್ ಪೋರ್ಟಲ್ ದಿ ವೈರ್‌ನ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಕ್ಕಾಗಿ ಸುಮಾರು 3,500 ನ್ಯಾಯಶಾಸ್ತ್ರಜ್ಞರು, ಶಿಕ್ಷಣ ತಜ್ಞರು, ನಟರು, ಕಲಾವಿದರು, ಬರಹಗಾರರು ಮತ್ತು ಇತರ ವರ್ಗದ ಜನರು ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿದ್ಧಾರ್ಥ್ ವರದರಾಜನ್‌ ವಿರುದ್ಧದ ಎಲ್ಲಾ ಕ್ರಿಮಿನಲ್ ಮೊಕದ್ದಮೆಗಳನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದಾರೆ.

ಮಂಗಳವಾರ ಬಿಡುಗಡೆ ಮಾಡಿರುವ ಜಂಟಿ ಹೇಳಿಕೆಯಲ್ಲಿ ಅವರು ವರದರಾಜನ್ ವಿರುದ್ಧ ಎಫ್‌ಐಆರ್ ನೋಂದಣಿಯು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂದು ಕರೆದಿದ್ದಾರೆ. ಅಲ್ಲದೇ COVID-19 ಸಾಂಕ್ರಾಮಿಕವನ್ನು ಮಾಧ್ಯಮಗಳ ಸ್ವಾತಂತ್ರ್ಯವನ್ನು ಹಾಳುಮಾಡಲು ಒಂದು ಅಸ್ತ್ರವಾಗಿ ಬಳಸಬೇಡಿ ಎಂದು ಅವರು ಕೇಂದ್ರ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ವೈದ್ಯಕೀಯ ತುರ್ತುಸ್ಥಿತಿಯನ್ನು ಬಳಸಿಕೊಂಡು ವಾಸ್ತವಿಕ ರಾಜಕೀಯ ತುರ್ತುಸ್ಥಿತಿಯನ್ನು ಹೇರುವ ನೆಪವಾಗಿ ಕಾರ್ಯನಿರ್ವಹಿಸಬಾರದು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇದಕ್ಕೆ ಸಹಿ ಹಾಕಿದವರಲ್ಲಿ ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಮದನ್ ಬಿ ಲೋಕೂರ್, ಮದ್ರಾಸ್ ಹೈಕೋರ್ಟ್ ಮಾಜಿ ನ್ಯಾಯಾಧೀಶ ಕೆ ಚಂದ್ರು ಮತ್ತು ಪಾಟ್ನಾ ಹೈಕೋರ್ಟ್ ಮಾಜಿ ನ್ಯಾಯಾಧೀಶ ಅಂಜನಾ ಪ್ರಕಾಶ್ ಸೇರಿದ್ದಾರೆ.

ಮಾಜಿ ಮಾಜಿ ಹಣಕಾಸು ಸಚಿವ ಯಶ್ವಂತ್ ಸಿನ್ಹಾ ಅವರೊಂದಿಗೆ ಇಬ್ಬರು ಮಾಜಿ ನೌಕಾಪಡೆಯ ಮುಖ್ಯಸ್ಥರಾದ ಅಡ್ಮಿರಲ್ ರಾಮದಾಸ್ ಮತ್ತು ಅಡ್ಮಿರಲ್ ವಿಷ್ಣು ಭಾಗವತ್ ಸಹ ಸಹಿ ಹಾಕಿದ್ದಾರೆ.

“ಮಾಧ್ಯಮ ಸ್ವಾತಂತ್ರ್ಯದ ಮೇಲಿನ ಈ ದಾಳಿ, ವಿಶೇಷವಾಗಿ COVID-19 ಬಿಕ್ಕಟ್ಟಿನ ಸಂದರ್ಭದಲ್ಲಿ, ಕೇವಲ ವಾಕ್ ಸ್ವಾತಂತ್ರ್ಯಕ್ಕೆ ಮಾತ್ರವಲ್ಲ, ಸಾರ್ವಜನಿಕರ ಮಾಹಿತಿಯ ಹಕ್ಕಿಗೆ ಅಪಾಯವನ್ನುಂಟುಮಾಡುತ್ತದೆ” ಎಂದು ಹೇಳಿಕೆ ತಿಳಿಸಿದೆ. ಸಾಂಕ್ರಾಮಿಕ ರೋಗವನ್ನು ಕೋಮುವಾದೀಕರಿಸಬೇಡಿ ಎಂದು ಅವರು ಮಾಧ್ಯಮಗಳಿಗೆ ಕರೆ ನೀಡಿದರು.

ದೆಹಲಿಯಲ್ಲಿ ತಬ್ಲೀಘಿ ಜಮಾಅತ್ ಕಾರ್ಯಕ್ರಮ ನಡೆದ ದಿನ, ಯೋಗಿ ಆದಿತ್ಯನಾಥ್ ಅವರು ಎಂದಿನಂತೆ ರಾಮ್ ನವಮಿ ಜಾತ್ರೆ ನಡೆಯಲಿದೆ ಎಂದು ತಿಳಿಸಿರುವುದಾಗಿ ಉತ್ತರ ಪ್ರದೇಶ ಪೊಲೀಸರು ಟ್ವಿಟ್ಟರ್ ನಲ್ಲಿ ಮಾಡಿದ ಕಾಮೆಂಟ್‌ಗಳ ಕುರಿತು ವರದರಾಜನ್ ರವರ ದಿ ವೈರ್‌ ವರದಿ ಮಾಡಿತ್ತು.

ಕೊರೋನವೈರಸ್ ಹರಡುವುದನ್ನು ತಡೆಗಟ್ಟಲು ರಾಷ್ಟ್ರವ್ಯಾಪಿ ಲಾಕ್ ಡೌನ್ ಸಮಯದಲ್ಲಿ ಅಯೋಧ್ಯೆಯ ರಾಮ್‌ಜನ್ಮಭೂಮಿ ಸ್ಥಳದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಿದ್ದನ್ನು ಪ್ರಶ್ನಿಸಿದ್ದಕ್ಕಾಗಿ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ವರದರಾಜನ್ ವಿರುದ್ಧದ ಎಫ್ಐಆರ್‌ನಲ್ಲಿ ಅವರು ಮಾಡಿದ ಟ್ವೀಟ್ ಅನ್ನು ಉಲ್ಲೇಖಿಸಿದ್ದಾರೆ, “ತಬ್ಲೀಘಿ ಜಮಾಅತ್ ಕಾರ್ಯಕ್ರಮ ನಡೆದ ದಿನ, ಆದಿತ್ಯನಾಥ್ ಮಾರ್ಚ್ 25 ರಿಂದ ಏಪ್ರಿಲ್ 2 ರವರೆಗೆ ಅಯೋಧ್ಯೆಗಾಗಿ ಯೋಜಿಸಲಾದ ದೊಡ್ಡ ರಾಮ್ ನವಮಿ ಜಾತ್ರೆ ಎಂದಿನಂತೆ ಮುಂದುವರಿಯುತ್ತದೆ ಮತ್ತು ಭಗವಾನ್ ರಾಮ್ ಭಕ್ತರನ್ನು ಕೊರೋನವೈರಸ್‌ನಿಂದ ರಕ್ಷಿಸುತ್ತಾನೆ” ಎಂಬುದು ಆ ಟ್ವೀಟ್‌ನ ಸಾರವಾಗಿದೆ.

ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಶಿವಶಂಕರ್ ಮೆನನ್, ಮಾಜಿ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್, ಪಂಜಾಬ್ ರಾಜ್ಯಪಾಲರ ಮಾಜಿ ಸಲಹೆಗಾರ ಮತ್ತು ರೊಮೇನಿಯಾದ ಮಾಜಿ ರಾಯಭಾರಿ ಜೂಲಿಯೊ ರಿಬೈರೊ ಮತ್ತು ಮಾಜಿ ಸಿಇಸಿ ಎಂಎಸ್ ಗಿಲ್ ಸೇರಿದಂತೆ ಹಲವಾರು ಮಾಜಿ ಅಧಿಕಾರಿಗಳು ಈ ಹೇಳಿಕೆಗೆ ಸಹಿ ಹಾಕಿದ್ದಾರೆ.

ಲೇಖಕರಾದ ವಿಕ್ರಮ್ ಸೇಠ್, ನಯನತಾರಾ ಸಹಗಲ್, ಅರುಂಧತಿ ರಾಯ್, ಅನಿತಾ ದೇಸಾಯಿ, ಕೆ ಸಚ್ಚಿದಾನಂದನ್ ಮತ್ತು ಕಿರಣ್ ದೇಸಾಯಿ ಇತರ ಸಹಿ ಹಾಕಿದ್ದಾರೆ.

ನಟರು ಮತ್ತು ಕಲಾವಿದರಾದ ಅಮೋಲ್ ಪಾಲೇಕರ್, ನಸೀರುದ್ದೀನ್ ಷಾ, ನಂದಿತಾ ದಾಸ್, ಫರ್ಹಾನ್ ಅಖ್ತರ್ ಮತ್ತು ಮಲ್ಲಿಕಾ ಸಾರಾಭಾಯ್ ಅವರು ಈ ಹೇಳಿಕೆಯನ್ನು ಅನುಮೋದಿಸಿದ್ದಾರೆ. ಚಿತ್ರ ನಿರ್ಮಾಪಕರಲ್ಲಿ ಜೋಯಾ ಅಖ್ತರ್, ಕಿರಣ್ ರಾವ್ ಮತ್ತು ಆನಂದ್ ಪಟ್ವರ್ಧನ್, ಮತ್ತು ದಯಾನಿತಾ ಸಿಂಗ್‌ ಕೂಡ ಇದ್ದಾರೆ.

ಹಿರಿಯ ಪತ್ರಕರ್ತರು ಮತ್ತು ಜಗತ್ತಿನಾದ್ಯಂತದ ವಿಶ್ವವಿದ್ಯಾಲಯಗಳ ಸಾವಿರಕ್ಕೂ ಹೆಚ್ಚು ಪ್ರಾಧ್ಯಾಪಕರು ಸಹ ಸಹಿ ಹಾಕಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...