Homeಮುಖಪುಟಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

- Advertisement -
- Advertisement -

ಉತ್ತರ ಪ್ರದೇಶದ ಗಾಝಿಯಾಬಾದ್‌‌ನಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದ ಮುಸ್ಲಿಂ ವೃದ್ಧನ ಮೇಲೆ ಚಿತ್ರಹಿಂಸೆ ನೀಡಿರುವ ಘಟನೆಯ ಕುರಿತು ಟ್ವೀಟ್ ಮಾಡಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಟ್ವಿಟರ್‌, ಹಲವಾರು ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರು ಸೇರಿದಂತೆ ಒಟ್ಟು 9 ಹೆಸರುಗಳ ಮೇಲೆ ಗಾಜಿಯಾಬಾದ್ ಪೊಲೀಸರು ಎಫ್‌ಐಆರ್‌‌ ದಾಖಲಿಸಿದ್ದಾರೆ.

ಸಂತ್ರಸ್ತ ವೃದ್ಧ ಅಬ್ದುಲ್ ಸಮದ್ ಎಂಬವರು ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಕಾಡಿನೊಳಗೆ ಎಳೆದೊಯ್ದು ಚಿತ್ರ ಹಿಂಸೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಚಾಕುವಿನಲ್ಲಿ ವೃದ್ದನ ಗಡ್ಡ ಕತ್ತರಿಸಿ, ಕೋಲಿನಿಂದ ಹಲ್ಲೆ ಮಾಡುತ್ತಿರುವುದನ್ನು ವಿಡಿಯೋ ವೈರಲ್ ಆಗಿತ್ತು.

ಘಟನೆಯ ಬಗ್ಗೆ ಸ್ವತಃ ವೃದ್ದನೆ ಅಳುತ್ತಾ ಮಾಹಿತಿ ನೀಡಿದ್ದರು. ಅದರಲ್ಲಿ, “ನನ್ನ ಹೆಸರು ಚೌದರಿ ಅಬ್ದುಲ್ ಸಮದ್ ಎಂದಾಗಿದ್ದು, ದೆಹಲಿ ಗಡಿಯ ಗಾಝಿಯಾಬಾದ್‌ನ ಲೋನಿಯಲ್ಲಿ ನನ್ನ ಮೇಲೆ ದಾಳಿ ನಡೆದಿದೆ. ಅಲ್ಲಿ ಇಬ್ಬರು ಆಟೋದವರು ನನ್ನ ಮುಖಕ್ಕೆ ರುಮಾಲನ್ನು ಮುಚ್ಚಿ ಕರೆದುಕೊಂಡು ಹೋದರು. ಬಳಿಕೆ ನನಗೆ ಹೊಡೆಯಲು ಪ್ರಾರಂಭಿಸಿದರು. ಅಲ್ಲಿಂದ ನನ್ನ ಕಾಡಿಗೆ ಕರೆದುಕೊಂಡುಹೋಗಿ ಒಂದು ಕೋಣೆಯಲ್ಲಿಟ್ಟರು. ಅವರು ಜೈಶ್ರೀರಾಮ್‌ ಘೋಷಣೆ ಕೂಗುವಂತೆ ಒತ್ತಾಯಿಸಿದ್ದರು, ನಾನು ಯಾ ಅಲ್ಲಾಹ್ ಎಂದು ಕೂಗಿದರೆ ಹೊಡೆಯುತ್ತಿದ್ದರು. ಪಿಸ್ತೂಲ್ ಹಣೆಗೆ ಇಟ್ಟಿದ್ದು, ನನ್ನ ಮೇಲೆ ಭೀಕರ ಹಲ್ಲೆ ನಡೆಸಿದ್ದು, ನಾವು ಮುಸ್ಲಿಮರಿಗೆ ಹಲ್ಲೆ ನಡೆಸಿದ್ದೇವೆ… ನನ್ನ ಗಡ್ಡವನ್ನು ಕಿತ್ತರು ಎಂದು” ಎಂದು ಹೇಳುವುದನ್ನು ಕಾಣಬಹುದಾಗಿದೆ.

ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಲೋನಿ ಎಂಬಲ್ಲಿ ಜೂನ್ 05 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿತ್ತು. ಆದರೆ ಘಟನೆಯಲ್ಲಿ ಯಾವುದೇ “ಕೋಮು ಆಯಾಮ” ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲೀಂ ವ್ಯಕ್ತಿಯ ಮೇಲಿನ ಹಲ್ಲೆ ಸಮಾಜಕ್ಕೆ ಒಂದು ಕಳಂಕ : ರಾಹುಲ್ ಗಾಂಧಿ

ಗಾಜಿಯಾಬಾದ್ ಪೊಲೀಸರು ಪತ್ರಕರ್ತರಾದ ಮೊಹಮ್ಮದ್‌ ಜುಬೈರ್‌, ರಾಣಾ ಆಯೂಬ್‌, ಸಬಾ ನಖ್ವಿ, ಡಿಜಿಟಲ್ ಮಾಧ್ಯಮ ಸಂಸ್ಥೆಯಾದ ದಿ ವೈರ್‌, ಕಾಂಗ್ರೆಸ್‌ ನಾಯಕರಾದ ಸಲ್ಮಾನ್‌ ನಿಜಾಮಿ, ಮಸ್ಕೂರ್‌ ಉಸ್ಮಾನಿ, ಶಮಾ ಮೊಹಮ್ಮದ್‌ ಮತ್ತು ಟ್ವಿಟರ್‌ ಇಂಕ್‌ ಮತ್ತು ಟ್ವಿಟರ್‌ ಇಂಡಿಯಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಈ ಘಟನೆಯ ಬಗೆಗಿನ ಸತ್ಯಾಸತ್ಯತೆಗಳನ್ನು ಪರಿಶೀಲಿಸದೆ, ಕೋಮು ಬಣ್ಣವನ್ನು ಹಚ್ಚಿ ಟ್ವೀಟ್‌ ಮಾಡಿದ್ದಾರೆ ಎಂಬ ಆರೋಪವನ್ನು ಅವರ ಮೇಲೆ ಹಾಕಲಾಗಿದೆ. “ಕೋಮು ಭಾವನೆಗಳನ್ನು ಪ್ರಚೋದಿಸುವ ಸ್ಪಷ್ಟ ಉದ್ದೇಶದಿಂದ ಟ್ವೀಟ್‌ಗಳನ್ನು ಹಂಚಿಕೊಳ್ಳಲಾಗಿದೆ” ಎಂದು ಎಫ್‌ಐಆರ್ ಹೇಳುತ್ತದೆ.

ಒಕ್ಕೂಟ ಸರ್ಕಾರದ ಹೊಸ ಐಟಿ ನಿಯಮಗಳು ಜಾರಿಗೆ ಬಂದ ನಂತರ ಸಾಮಾಜಿಕ ಜಾಲತಾಣವೊಂದರ ವಿರುದ್ದ ದಾಖಲಾದ ಮೊದಲ ಪ್ರಕರಣವಾಗಿದೆ ಇದು. ಟ್ವಿಟರ್‌‌ ಹೊಸ ಐಟಿ ನಿಯಮಗಳನ್ನು ಪಾಲಿಸದ ಕಾರಣ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ ಸರ್ಕಾರದ ಮೂಲಗಳು ಬುಧವಾರ ಹೇಳಿವೆ.

“ಇದರಿಂದಾಗಿ ಇತರ ಪ್ರಕಾಶನ ಸಂಸ್ಥೆಯಂತೆ ಟ್ವಿಟರ್ ಕೂಡಾ ಭಾರತೀಯ ಕಾನೂನಿನ ಪ್ರಕಾರ ಪ್ರಕರಣವನ್ನು ಎದುರಿಸಬೇಕಾಗಬಹುದು. ಯಾಕೆಂದರೆ ಅವರು ಪ್ರಕರಣದ ವೀಡಿಯೊವನ್ನು ‘ತಿರುಚಲ್ಪಟ್ಟ ವಿಡಿಯೊ’ ಎಂದು ಅದನ್ನು ಗುರುತಿಸದ ಮಾಡದ ಕಾರಣಕ್ಕೆ ದಂಡನೆಯನ್ನು ಎದುರಿಸಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಆದರೆ ಮಂಗಳವಾರ ಸಂಜೆ, ಟ್ವಿಟರ್ ಒಕ್ಕೂಟ ಸರ್ಕಾರದ ಹೊಸ ಕಾನೂನುಗಳ ಪ್ರಕಾರ ಮಧ್ಯಂತರವಾಗಿ ಮುಖ್ಯ ಅನುಸರಣಾ ಅಧಿಕಾರಿಯನ್ನು ನೇಮಿಸಿದೆ ಎಂದು ಹೇಳಿದೆ.

ಈ ಬಗ್ಗೆ ಒಕ್ಕೂಟದ ಸಚಿವ ರವಿಶಂಕರ್ ಪ್ರಸಾದ್ ಅವರು ಇಂದು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಅವರು, “ಯುಪಿಯಲ್ಲಿ ನಡೆದಿದೆ ಎನ್ನಲಾಗಿರುವ ನಕಲಿ ಸುದ್ದಿಗಳ ವಿರುದ್ಧದ ಹೋರಾಟದಲ್ಲಿ ಟ್ವಿಟರ್‌ನ ಅನಿಯಂತ್ರಿತತೆಗೆ ಉದಾಹರಣೆಯಾಗಿದೆ. ಟ್ವಿಟರ್ ತನ್ನ ಫ್ಯಾಕ್ಟ್‌‌ ಚೆಕ್‌ ಕಾರ್ಯವಿಧಾನದಲ್ಲಿ ಉತ್ಸಾಹದಿಂದ ಕೂಡಿದ್ದರೂ, ಯುಪಿ ಘಟನೆಯಂತಹ ಅನೇಕ ಸಂದರ್ಭಗಳಲ್ಲಿ ಅದು ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ ಹಾಗೂ ಗೊಂದಲಕ್ಕೊಳಗಾಗಿದೆ. ಇದು ಸುಳ್ಳು ಮಾಹಿತಿಯ ವಿರುದ್ಧ ಹೋರಾಡುವಲ್ಲಿ ಅದರ ಅಸಂಗತತೆಯನ್ನು ಸೂಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮವನ್ನು ಪೊಲೀಸರು ತಳ್ಳಿಹಾಕಿದ್ದಾರೆ. ಸೂಫಿ ಅಬ್ದುಲ್ ಸಮದ್ ಮಾರಾಟ ಮಾಡಿದ ಕೆಲವು ತಾಯತಗಳು ಕೆಲಸ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಹಿಂದೂ ಮತ್ತು ಮುಸ್ಲಿಮ್‌ ಧರ್ಮಿಯರಾದ ಆರು ಜನರು ಅವರ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

“ಯುಪಿಯ ಬುಲಂದ್‌ಶಹರ್ ನಿವಾಸಿ ಅಬ್ದುಲ್ ಸಮದ್ ಎಂಬ ವೃದ್ಧನ ಮೇಲೆ ಕೆಲವರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಈ ಘಟನೆಯ ಬಗ್ಗೆ ಮತ್ತಷ್ಟು ತನಿಖೆ ಮಾಡಿದಾಗ, ಸಂತ್ರಸ್ತ ವೃದ್ದನೂ ಜೂನ್ 5 ರಂದು ಲೋನಿ ಗಡಿ ಪ್ರದೇಶದಿಂದ ಬಂದಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ತಾಯತಗಳನ್ನು ತಯಾರಿಸುವ ಅಬ್ದುಲ್ ಸಮದ್ ಅವರು ಅಲ್ಲಿಂದ ಹಾಜಿಪುರ ಗ್ರಾಮಕ್ಕೆ ತೆರಳಿದ್ದಾರೆ. ಅವರಿಗೆ ಈಗಾಗಲೇ ಆರೋಪಿಗಳು ಯಾರೆಂದು ತಿಳಿದಿತ್ತು. ಅವರ ಮೇಲೆ ಅಸಮಾಧಾನಗೊಂಡಿದ್ದ ಆರೋಪಿಗಳೇ ಅವರನ್ನು ಕರೆದಿದ್ದರು. ಈಗಾಗಲೇ ಹಲವರ ಬಂಧನಗಳನ್ನು ನಡೆಸಲಾಗಿದೆ” ಎಂದು ಗಾಜಿಯಾಬಾದ್ ಪೊಲೀಸ್ ಅಧಿಕಾರಿ ಇರಾಜ್ ರಾಜಾ ವಿಡಿಯೊವೊಂದರಲ್ಲಿ ಹೇಳಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ.

ಟ್ವಿಟರ್ ಮತ್ತು ಇತರ ಎಂಟು ಜನರ ವಿರುದ್ಧ ಐಪಿಸಿ ಸೆಕ್ಷನ್ 153 (ಗಲಭೆಗೆ ಪ್ರಚೋದನೆ), 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ), 505 (ಕಿಡಿಗೇಡಿತನ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಮುಂತಾದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....