Homeಮುಖಪುಟಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

- Advertisement -
- Advertisement -

ಉತ್ತರ ಪ್ರದೇಶದ ಗಾಝಿಯಾಬಾದ್‌‌ನಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದ ಮುಸ್ಲಿಂ ವೃದ್ಧನ ಮೇಲೆ ಚಿತ್ರಹಿಂಸೆ ನೀಡಿರುವ ಘಟನೆಯ ಕುರಿತು ಟ್ವೀಟ್ ಮಾಡಿ ಕೋಮು ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಟ್ವಿಟರ್‌, ಹಲವಾರು ಪತ್ರಕರ್ತರು ಮತ್ತು ಕಾಂಗ್ರೆಸ್ ನಾಯಕರು ಸೇರಿದಂತೆ ಒಟ್ಟು 9 ಹೆಸರುಗಳ ಮೇಲೆ ಗಾಜಿಯಾಬಾದ್ ಪೊಲೀಸರು ಎಫ್‌ಐಆರ್‌‌ ದಾಖಲಿಸಿದ್ದಾರೆ.

ಸಂತ್ರಸ್ತ ವೃದ್ಧ ಅಬ್ದುಲ್ ಸಮದ್ ಎಂಬವರು ಪ್ರಾರ್ಥನೆ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಆಟೋದಲ್ಲಿ ಬಂದ ದುಷ್ಕರ್ಮಿಗಳು ಅವರನ್ನು ಕಾಡಿನೊಳಗೆ ಎಳೆದೊಯ್ದು ಚಿತ್ರ ಹಿಂಸೆ ನೀಡಿದ್ದರು ಎಂದು ಆರೋಪಿಸಲಾಗಿತ್ತು. ಚಾಕುವಿನಲ್ಲಿ ವೃದ್ದನ ಗಡ್ಡ ಕತ್ತರಿಸಿ, ಕೋಲಿನಿಂದ ಹಲ್ಲೆ ಮಾಡುತ್ತಿರುವುದನ್ನು ವಿಡಿಯೋ ವೈರಲ್ ಆಗಿತ್ತು.

ಘಟನೆಯ ಬಗ್ಗೆ ಸ್ವತಃ ವೃದ್ದನೆ ಅಳುತ್ತಾ ಮಾಹಿತಿ ನೀಡಿದ್ದರು. ಅದರಲ್ಲಿ, “ನನ್ನ ಹೆಸರು ಚೌದರಿ ಅಬ್ದುಲ್ ಸಮದ್ ಎಂದಾಗಿದ್ದು, ದೆಹಲಿ ಗಡಿಯ ಗಾಝಿಯಾಬಾದ್‌ನ ಲೋನಿಯಲ್ಲಿ ನನ್ನ ಮೇಲೆ ದಾಳಿ ನಡೆದಿದೆ. ಅಲ್ಲಿ ಇಬ್ಬರು ಆಟೋದವರು ನನ್ನ ಮುಖಕ್ಕೆ ರುಮಾಲನ್ನು ಮುಚ್ಚಿ ಕರೆದುಕೊಂಡು ಹೋದರು. ಬಳಿಕೆ ನನಗೆ ಹೊಡೆಯಲು ಪ್ರಾರಂಭಿಸಿದರು. ಅಲ್ಲಿಂದ ನನ್ನ ಕಾಡಿಗೆ ಕರೆದುಕೊಂಡುಹೋಗಿ ಒಂದು ಕೋಣೆಯಲ್ಲಿಟ್ಟರು. ಅವರು ಜೈಶ್ರೀರಾಮ್‌ ಘೋಷಣೆ ಕೂಗುವಂತೆ ಒತ್ತಾಯಿಸಿದ್ದರು, ನಾನು ಯಾ ಅಲ್ಲಾಹ್ ಎಂದು ಕೂಗಿದರೆ ಹೊಡೆಯುತ್ತಿದ್ದರು. ಪಿಸ್ತೂಲ್ ಹಣೆಗೆ ಇಟ್ಟಿದ್ದು, ನನ್ನ ಮೇಲೆ ಭೀಕರ ಹಲ್ಲೆ ನಡೆಸಿದ್ದು, ನಾವು ಮುಸ್ಲಿಮರಿಗೆ ಹಲ್ಲೆ ನಡೆಸಿದ್ದೇವೆ… ನನ್ನ ಗಡ್ಡವನ್ನು ಕಿತ್ತರು ಎಂದು” ಎಂದು ಹೇಳುವುದನ್ನು ಕಾಣಬಹುದಾಗಿದೆ.

ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ಲೋನಿ ಎಂಬಲ್ಲಿ ಜೂನ್ 05 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿತ್ತು. ಆದರೆ ಘಟನೆಯಲ್ಲಿ ಯಾವುದೇ “ಕೋಮು ಆಯಾಮ” ಇಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲೀಂ ವ್ಯಕ್ತಿಯ ಮೇಲಿನ ಹಲ್ಲೆ ಸಮಾಜಕ್ಕೆ ಒಂದು ಕಳಂಕ : ರಾಹುಲ್ ಗಾಂಧಿ

ಗಾಜಿಯಾಬಾದ್ ಪೊಲೀಸರು ಪತ್ರಕರ್ತರಾದ ಮೊಹಮ್ಮದ್‌ ಜುಬೈರ್‌, ರಾಣಾ ಆಯೂಬ್‌, ಸಬಾ ನಖ್ವಿ, ಡಿಜಿಟಲ್ ಮಾಧ್ಯಮ ಸಂಸ್ಥೆಯಾದ ದಿ ವೈರ್‌, ಕಾಂಗ್ರೆಸ್‌ ನಾಯಕರಾದ ಸಲ್ಮಾನ್‌ ನಿಜಾಮಿ, ಮಸ್ಕೂರ್‌ ಉಸ್ಮಾನಿ, ಶಮಾ ಮೊಹಮ್ಮದ್‌ ಮತ್ತು ಟ್ವಿಟರ್‌ ಇಂಕ್‌ ಮತ್ತು ಟ್ವಿಟರ್‌ ಇಂಡಿಯಾ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದಾರೆ.

ಈ ಘಟನೆಯ ಬಗೆಗಿನ ಸತ್ಯಾಸತ್ಯತೆಗಳನ್ನು ಪರಿಶೀಲಿಸದೆ, ಕೋಮು ಬಣ್ಣವನ್ನು ಹಚ್ಚಿ ಟ್ವೀಟ್‌ ಮಾಡಿದ್ದಾರೆ ಎಂಬ ಆರೋಪವನ್ನು ಅವರ ಮೇಲೆ ಹಾಕಲಾಗಿದೆ. “ಕೋಮು ಭಾವನೆಗಳನ್ನು ಪ್ರಚೋದಿಸುವ ಸ್ಪಷ್ಟ ಉದ್ದೇಶದಿಂದ ಟ್ವೀಟ್‌ಗಳನ್ನು ಹಂಚಿಕೊಳ್ಳಲಾಗಿದೆ” ಎಂದು ಎಫ್‌ಐಆರ್ ಹೇಳುತ್ತದೆ.

ಒಕ್ಕೂಟ ಸರ್ಕಾರದ ಹೊಸ ಐಟಿ ನಿಯಮಗಳು ಜಾರಿಗೆ ಬಂದ ನಂತರ ಸಾಮಾಜಿಕ ಜಾಲತಾಣವೊಂದರ ವಿರುದ್ದ ದಾಖಲಾದ ಮೊದಲ ಪ್ರಕರಣವಾಗಿದೆ ಇದು. ಟ್ವಿಟರ್‌‌ ಹೊಸ ಐಟಿ ನಿಯಮಗಳನ್ನು ಪಾಲಿಸದ ಕಾರಣ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ ಸರ್ಕಾರದ ಮೂಲಗಳು ಬುಧವಾರ ಹೇಳಿವೆ.

“ಇದರಿಂದಾಗಿ ಇತರ ಪ್ರಕಾಶನ ಸಂಸ್ಥೆಯಂತೆ ಟ್ವಿಟರ್ ಕೂಡಾ ಭಾರತೀಯ ಕಾನೂನಿನ ಪ್ರಕಾರ ಪ್ರಕರಣವನ್ನು ಎದುರಿಸಬೇಕಾಗಬಹುದು. ಯಾಕೆಂದರೆ ಅವರು ಪ್ರಕರಣದ ವೀಡಿಯೊವನ್ನು ‘ತಿರುಚಲ್ಪಟ್ಟ ವಿಡಿಯೊ’ ಎಂದು ಅದನ್ನು ಗುರುತಿಸದ ಮಾಡದ ಕಾರಣಕ್ಕೆ ದಂಡನೆಯನ್ನು ಎದುರಿಸಬಹುದು ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಕೇಂದ್ರ ಸರ್ಕಾರ ಸದ್ದಿಲ್ಲದೇ CAA ಜಾರಿಗೊಳಿಸುತ್ತಿದೆ: ಸುಪ್ರೀಂನಲ್ಲಿ IUML ಪ್ರಶ್ನೆ

ಆದರೆ ಮಂಗಳವಾರ ಸಂಜೆ, ಟ್ವಿಟರ್ ಒಕ್ಕೂಟ ಸರ್ಕಾರದ ಹೊಸ ಕಾನೂನುಗಳ ಪ್ರಕಾರ ಮಧ್ಯಂತರವಾಗಿ ಮುಖ್ಯ ಅನುಸರಣಾ ಅಧಿಕಾರಿಯನ್ನು ನೇಮಿಸಿದೆ ಎಂದು ಹೇಳಿದೆ.

ಈ ಬಗ್ಗೆ ಒಕ್ಕೂಟದ ಸಚಿವ ರವಿಶಂಕರ್ ಪ್ರಸಾದ್ ಅವರು ಇಂದು ಸರಣಿ ಟ್ವೀಟ್‌ಗಳನ್ನು ಮಾಡಿದ್ದಾರೆ. ಅವರು, “ಯುಪಿಯಲ್ಲಿ ನಡೆದಿದೆ ಎನ್ನಲಾಗಿರುವ ನಕಲಿ ಸುದ್ದಿಗಳ ವಿರುದ್ಧದ ಹೋರಾಟದಲ್ಲಿ ಟ್ವಿಟರ್‌ನ ಅನಿಯಂತ್ರಿತತೆಗೆ ಉದಾಹರಣೆಯಾಗಿದೆ. ಟ್ವಿಟರ್ ತನ್ನ ಫ್ಯಾಕ್ಟ್‌‌ ಚೆಕ್‌ ಕಾರ್ಯವಿಧಾನದಲ್ಲಿ ಉತ್ಸಾಹದಿಂದ ಕೂಡಿದ್ದರೂ, ಯುಪಿ ಘಟನೆಯಂತಹ ಅನೇಕ ಸಂದರ್ಭಗಳಲ್ಲಿ ಅದು ಕಾರ್ಯನಿರ್ವಹಿಸುವಲ್ಲಿ ವಿಫಲವಾಗಿದೆ ಹಾಗೂ ಗೊಂದಲಕ್ಕೊಳಗಾಗಿದೆ. ಇದು ಸುಳ್ಳು ಮಾಹಿತಿಯ ವಿರುದ್ಧ ಹೋರಾಡುವಲ್ಲಿ ಅದರ ಅಸಂಗತತೆಯನ್ನು ಸೂಚಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಈ ಪ್ರಕರಣದಲ್ಲಿ ಯಾವುದೇ ಕೋಮು ಆಯಾಮವನ್ನು ಪೊಲೀಸರು ತಳ್ಳಿಹಾಕಿದ್ದಾರೆ. ಸೂಫಿ ಅಬ್ದುಲ್ ಸಮದ್ ಮಾರಾಟ ಮಾಡಿದ ಕೆಲವು ತಾಯತಗಳು ಕೆಲಸ ಮಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿ ಹಿಂದೂ ಮತ್ತು ಮುಸ್ಲಿಮ್‌ ಧರ್ಮಿಯರಾದ ಆರು ಜನರು ಅವರ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಜೈಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ವೃದ್ಧನ ಮೇಲೆ ಹಲ್ಲೆ, ಗಡ್ಡ ಕಿತ್ತು ಚಿತ್ರಹಿಂಸೆ

“ಯುಪಿಯ ಬುಲಂದ್‌ಶಹರ್ ನಿವಾಸಿ ಅಬ್ದುಲ್ ಸಮದ್ ಎಂಬ ವೃದ್ಧನ ಮೇಲೆ ಕೆಲವರು ಹಲ್ಲೆ ನಡೆಸುತ್ತಿರುವ ವಿಡಿಯೋವೊಂದನ್ನು ನಾವು ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಈ ಘಟನೆಯ ಬಗ್ಗೆ ಮತ್ತಷ್ಟು ತನಿಖೆ ಮಾಡಿದಾಗ, ಸಂತ್ರಸ್ತ ವೃದ್ದನೂ ಜೂನ್ 5 ರಂದು ಲೋನಿ ಗಡಿ ಪ್ರದೇಶದಿಂದ ಬಂದಿದ್ದಾರೆ ಎಂದು ನಾವು ಕಂಡುಕೊಂಡಿದ್ದೇವೆ. ತಾಯತಗಳನ್ನು ತಯಾರಿಸುವ ಅಬ್ದುಲ್ ಸಮದ್ ಅವರು ಅಲ್ಲಿಂದ ಹಾಜಿಪುರ ಗ್ರಾಮಕ್ಕೆ ತೆರಳಿದ್ದಾರೆ. ಅವರಿಗೆ ಈಗಾಗಲೇ ಆರೋಪಿಗಳು ಯಾರೆಂದು ತಿಳಿದಿತ್ತು. ಅವರ ಮೇಲೆ ಅಸಮಾಧಾನಗೊಂಡಿದ್ದ ಆರೋಪಿಗಳೇ ಅವರನ್ನು ಕರೆದಿದ್ದರು. ಈಗಾಗಲೇ ಹಲವರ ಬಂಧನಗಳನ್ನು ನಡೆಸಲಾಗಿದೆ” ಎಂದು ಗಾಜಿಯಾಬಾದ್ ಪೊಲೀಸ್ ಅಧಿಕಾರಿ ಇರಾಜ್ ರಾಜಾ ವಿಡಿಯೊವೊಂದರಲ್ಲಿ ಹೇಳಿದ್ದಾರೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಮೂವರನ್ನು ಬಂಧಿಸಲಾಗಿದೆ.

ಟ್ವಿಟರ್ ಮತ್ತು ಇತರ ಎಂಟು ಜನರ ವಿರುದ್ಧ ಐಪಿಸಿ ಸೆಕ್ಷನ್ 153 (ಗಲಭೆಗೆ ಪ್ರಚೋದನೆ), 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 295 ಎ (ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶದಿಂದ), 505 (ಕಿಡಿಗೇಡಿತನ), 120 ಬಿ (ಕ್ರಿಮಿನಲ್ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶ) ಮುಂತಾದ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಂಚಾರಿ ವಿಜಯ್‌ ನಿಧನಕ್ಕೆ ಕನ್ನಡದಲ್ಲಿ ಸಂತಾಪ ಸೂಚಿಸಿದ ಅಮೆರಿಕಾ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...