Homeಮುಖಪುಟಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

ಆಂಬ್ಯುಲೆನ್ಸ್ ದುರ್ಬಳಕೆ ಆರೋಪ : ಕೇಂದ್ರ ಸಚಿವ ಸುರೇಶ್ ಗೋಪಿ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಡೆದ ತ್ರಿಶೂರ್ ಪೂರಂ ಉತ್ಸವಕ್ಕೆ ತೆರಳಲು ಆಂಬ್ಯುಲೆನ್ಸ್ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಪ್ರವಾಸೋದ್ಯಮ ಇಲಾಖೆಯ ರಾಜ್ಯ ಖಾತೆ ಸಚಿವ ಸುರೇಶ್ ಗೋಪಿ ವಿರುದ್ಧ ಕೇರಳ ಪೊಲೀಸರು ಭಾನುವಾರ (ನ.3) ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಗೋಪಿ ಜೊತೆಗೆ ಆಂಬ್ಯುಲೆನ್ಸ್‌ನಲ್ಲಿದ್ದ ಅಭಿಜಿತ್ ನಾಯರ್ ಎಂಬವರು ಮತ್ತು ಆಂಬ್ಯುಲೆನ್ಸ್ ಚಾಲಕನ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಲೋಕಸಭಾ ಚುನಾವಣಾ ಪ್ರಚಾರ ಕಾರ್ಯತಂತ್ರದ ಭಾಗವಾಗಿ ಗೋಪಿ ಮತ್ತು ಇತರರು ಆಂಬ್ಯುಲೆನ್ಸ್  ದುರುಪಯೋಗಪಡಿಸಿಕೊಂಡಿದ್ದಾರೆ. ಪೂರಂ ಉತ್ಸವದ ದಿನ ರಾತ್ರಿ ತ್ರಿಶೂರ್‌ನ ಜನನಿಬಿಡ ರಸ್ತೆಯಲ್ಲಿ ಸುಖಾಸುಮ್ಮನೆ ಆಂಬ್ಯುಲೆನ್ಸ್ ಓಡಿಸಿದ್ದಾರೆ ಎಂದು ಆರೋಪಿಸಿ ವಕೀಲ ಸುಮೇಶ್ ಭವದಾಸನ್ ಎಂಬವರು ನೀಡಿರುವ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ಮೂವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳಾದ 279 ಸಾರ್ವಜನಿಕ ರಸ್ತೆಯಲ್ಲಿ ಅತಿ ವೇಗದ ಮತ್ತು ನಿರ್ಲಕ್ಷ್ಯದ ಚಾಲನೆ, 34 ಕ್ರಿಮಿನಲ್ ಕೃತ್ಯ ಮತ್ತು ಮೋಟಾರು ವಾಹನ ಕಾಯ್ದೆಯಡಿ ಅರೋಪ ಹೊರಿಸಲಾಗಿದೆ.

ಪ್ರಕರಣದ ಹಿನ್ನೆಲೆ : ಏಪ್ರಿಲ್ 19, 2024 ರಂದು ಜನಸಂದಣಿ ನಿರ್ವಹಣೆಗಾಗಿ ಪೊಲೀಸರು ವಿಧಿಸಿದ ನಿರ್ಬಂಧಗಳಿಂದಾಗಿ ಪೂರಂ ಉತ್ಸವದ ಕೆಲವು ಕಾರ್ಯಕ್ರಮಗಳನ್ನು ಮಧ್ಯದಲ್ಲಿಯೇ ಕೈಬಿಟ್ಟಿದ್ದರಿಂದ ರಾಜಕೀಯ ಗದ್ದಲ ಭುಗಿಲೆದ್ದಿತ್ತು. ಕಾರ್ಯಕ್ರಮಗಳನ್ನು ಅರ್ಧಕ್ಕೆ ನಿಲ್ಲಿಸಿದ್ದನ್ನು ವಿರೋಧಿಸಿದ್ದ ಸುರೇಶ್ ಗೋಪಿ, ಏಪ್ರಿಲ್ 20ರಂದು ಮುಂಜಾನೆ ದೇವಸ್ಥಾನದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ನಂತರ, ಹಬ್ಬದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಸಿಡಿಮದ್ದು ಪ್ರದರ್ಶನ ಹಗಲು ಹೊತ್ತಿನಲ್ಲಿ ನಡೆದಿತ್ತು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲಾಭ ಮಾಡಿಕೊಡುವ ಉದ್ದೇಶದಿಂದ ಉತ್ಸವವನ್ನು ಅರ್ಧಕ್ಕೆ ನಿಲ್ಲಿಸಿ ಮರುದಿನ ಹಗಲೊತ್ತು ಸಿಡಿಮದ್ದು ಪ್ರದರ್ಶನ ನಡೆಸಲಾಗಿದೆ. ಇದರ ಹಿಂದೆ ಸುರೇಶ್ ಗೋಪಿ ಕೈವಾಡ ಇದೆ. ಅಧಿಕಾರಿಗಳು ಕೂಡ ಈ ತಂತ್ರಕ್ಕೆ ಕೈ ಜೋಡಿಸಿದ್ದಾರೆ ಎಂದು ಕೇರಳದ ಪ್ರತಿಪಕ್ಷ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್‌) ಸೇರಿದಂತೆ ಹಲವರು ಆರೋಪಿಸಿದ್ದರು.

ಅಕ್ಟೋಬರ್ 3ರಂದು, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ವಿಷಯದ ಬಗ್ಗೆ ಮೂರು ಹಂತಗಳ ತನಿಖೆಯನ್ನು ಘೋಷಿಸಿದ್ದರು. ಲೋಕಸಭೆ ಚುನಾವಣೆಗೆ ಲಾಭ ಪಡೆಯಲು ಸಿಡಿಮದ್ದು ಪ್ರದರ್ಶನವನ್ನು ವಿಳಂಬ ಮಾಡುವ ತಂತ್ರ ಹೂಡಲಾಗಿತ್ತೇ? ಎಂದು ವರದಿ ನೀಡಲು ಆದೇಶಿಸಿದ್ದರು.

ಬಳಿಕ, “ರಾಜ್ಯದ ಸಾಮಾಜಿಕ ವ್ಯವಸ್ಥೆಯನ್ನು ಹಾಳುಗಡೆವುವ ಪ್ರಯತ್ನ ನಡೆದಿದೆ” ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಾಧ್ಯಮಗಳ ಮುಂದೆ ಹೇಳಿಕೆ ಕೊಟ್ಟಿದ್ದರು.

ಈ ವಿಚಾರವಾಗಿ ಕಳೆದ ಅಕ್ಟೋಬರ್ 28ರಂದು, ಕೇರಳದ ಆಡಳಿತರೂಢ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್‌) ಸರ್ಕಾರಕ್ಕೆ ಸವಾಲೆಸೆದಿದ್ದ ಸುರೇಶ್ ಗೋಪಿ, ತ್ರಿಶೂರ್ ಪೂರಂ ಗೊಂದಲದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸಿ ಎಂದಿದ್ದರು. ಉತ್ಸವದ ಸ್ಥಳಕ್ಕೆ ತೆರಳಲು ಆಂಬ್ಯುಲೆನ್ಸ್ ಬಳಸಲಾಗಿದೆ ಎಂಬ ತನ್ನ ಮೇಲಿನ ಆರೋಪವನ್ನು ನಿರಾಕರಿಸಿದ್ದರು.

ಚೇಲಕ್ಕರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ್ದ ಗೋಪಿ, “ನಾನು ಬಿಜೆಪಿ ಜಿಲ್ಲಾಧ್ಯಕ್ಷರ ಕಾರಿನಲ್ಲಿ ಪೂರಂ ಸ್ಥಳಕ್ಕೆ ತೆರಳಿದ್ದೆ. ಪಿಣರಾಯಿ ಪೊಲೀಸರಿಗೆ ಸತ್ಯ ಕಂಡು ಹಿಡಿಯಲು ಸಾಧ್ಯವಾಗುತ್ತಿಲ್ಲ” ಎಂದು ವಾಗ್ದಾಳಿ ನಡೆಸಿದ್ದರು.

ಬಳಿಕ, ಮಾತು ಬದಲಿಸಿದ್ದ ಗೋಪಿ, ಆಂಬ್ಯುಲೆನ್ಸ್ ದುರ್ಬಳಕೆ ಮಾಡಿರುವುದನ್ನು ಒಪ್ಪಿಕೊಂಡಿದ್ದರು. “ನನಗೆ ಕಾಲು ನೋವಿದ್ದ ಕಾರಣ ಜನಸಂದಣಿಯಲ್ಲಿ ನಡೆಯಲು ಕಷ್ಟವಾಗಿತ್ತು. ಹಾಗಾಗಿ, ಕೆಲ ಯುವಕರು ಯಾವುದೇ ರಾಜಕೀಯ ಅಜೆಂಡಾ ಇಲ್ಲದೆ ನನಗೆ ಆಂಬ್ಯುಲೆನ್ಸ್‌ಗೆ ಸಹಾಯ ಮಾಡಿದ್ದರು” ಎಂದಿದ್ದರು. ಈ ಹೇಳಿಕೆಯನ್ನು ಅಕ್ಟೋಬರ್ 31 ರಂದು ‘ದಿ ಹಿಂದೂ‘ ತನ್ನ ವರದಿಯಲ್ಲಿ ಉಲ್ಲೇಖಿಸಿತ್ತು.

ಆರೋಪ ಪ್ರತ್ಯಾರೋಪಗಳ ನಡುವೆ ಇದೀಗ ಸುರೇಶ್ ಗೋಪಿ ಸೇರಿದಂತೆ ಮೂವರ ವಿರುದ್ದ ಆಂಬ್ಯುಲೆನ್ಸ್ ದುರ್ಬಳಕೆ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ. ಈ ಮೂಲಕ ಪ್ರಕರಣ ಮತ್ತೊಂದು ಮಜಲಿಗೆ ಕಾಲಿಟ್ಟಿದೆ.

ಇದನ್ನೂ ಓದಿ : ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಜೀವ ಬೆದರಿಕೆ; 24 ವರ್ಷದ ಯುವತಿಯನ್ನು ಬಂಧಿಸಿದ ಮುಂಬೈ ಪೊಲೀಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...