Homeಮುಖಪುಟಮೋದಿ ಕುರಿತ ಧ್ರುವ್‌ ರಾಥಿ ವಿಡಿಯೋ ಹಂಚಿಕೊಂಡ ವಕೀಲನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

ಮೋದಿ ಕುರಿತ ಧ್ರುವ್‌ ರಾಥಿ ವಿಡಿಯೋ ಹಂಚಿಕೊಂಡ ವಕೀಲನ ವಿರುದ್ಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಪೊಲೀಸರು

- Advertisement -
- Advertisement -

ಯೂಟ್ಯೂಬರ್ ಧ್ರುವ್‌ ರಾಥಿ ಪ್ರಧಾನಿ ಮೋದಿಯನ್ನು ಟೀಕಿಸಿದ್ದ ವಿಡಿಯೋವನ್ನು ಹಂಚಿಕೊಂಡ ವಕೀಲರೊಬ್ಬರ ವಿರುದ್ಧ ಮಹಾರಾಷ್ಟ್ರ ಪೊಲೀಸರು ಸ್ವಯಂಪ್ರೇರಿತವಾಗಿ ಎಫ್‌ಐಆರ್ ದಾಖಲಿಸಿದ್ದಾರೆ.

ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಲಿಬರೇಶನ್‌ನ ಮಹಾರಾಷ್ಟ್ರ ಕಾರ್ಯದರ್ಶಿಯೂ ಆಗಿರುವ ವಕೀಲ ಆದೇಶ್ ಬನ್ಸೋಡೆ ‘ಮೈಂಡ್ ಆಫ್ ಎ ಡಿಕ್ಟೇಟರ್’ ಎಂಬ ಶೀರ್ಷಿಕೆಯ ಧ್ರುವ್‌ ರಾಥಿ ಅವರ ವೀಡಿಯೊ ಲಿಂಕ್‌ನ್ನು ವಸಾಯಿಯ ಬಾರ್ ಅಸೋಸಿಯೇಷನ್ ವಾಟ್ಸಾಪ್‌ ಗ್ರೂಪ್‌ಗೆ ಹಂಚಿಕೊಂಡಿದ್ದಾರೆ.   ​​ಮತದಾನ ಮಾಡುವ ಮೊದಲು ವೀಡಿಯೊವನ್ನು ವೀಕ್ಷಿಸಿ ಎಂಬ ಸಂದೇಶದೊಂದಿಗೆ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಮೇ 20ರಂದು ಐದನೇ ಹಂತದ ಲೋಕಸಭೆ ಚುನಾವಣೆ ವೇಳೆ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು.

ಬನ್ಸೋಡೆ ಅವರು ಹಂಚಿಕೊಂಡಿರುವ ವೀಡಿಯೊದ ಬಗ್ಗೆ ಮತ್ತೋರ್ವ ವಕೀಲರು ಪೊಲೀಸರಿಗೆ ಪತ್ರ ಬರೆದ ನಂತರ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿದ್ದಾರೆ. ಎಂಬಿವಿವಿ ಪೊಲೀಸ್‌ನ ರಹಸ್ಯ ವಿಭಾಗದ ಹೆಡ್‌ಕಾನ್ಸ್‌ಟೇಬಲ್‌ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಾಗಿದೆ. ಎಫ್ಐಆರ್‌ನಲ್ಲಿ ಶೇರ್ ಮಾಡಿರುವ ವಿಡಿಯೋ ಮತ್ತು ಅದರ ಸಂದೇಶವು ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಬಗ್ಗೆ ಸುಳ್ಳು ಬಿಂಬನೆ ಮೂಲಕ ಮತದಾರರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ. ಎಂಬಿವಿವಿ ಪೊಲೀಸ್ ಕಮಿಷನರ್ ಮಧುಕರ್ ಪಾಂಡೆ ತಮ್ಮ ಕಮಿಷನರೇಟ್‌ಗೆ ಮೇ 18 ಮತ್ತು ಮೇ 20ರ ನಡುವೆ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆ ನಿಷೇಧಾಜ್ಞೆ ಹೊರಡಿಸಿದ್ದರು. ವಿಡಿಯೋ ಹಂಚಿಕೆಯು ಕಮಿಷನರ್‌ ಅವರ ಆದೇಶದ ಉಲ್ಲಂಘನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಎಫ್‌ಐಆರ್ ಬಗ್ಗೆ ಪ್ರತಿಕ್ರಿಯಿಸಿದ ಬನ್ಸೋಡೆ, ಎಫ್‌ಐಆರ್ ಕಾನೂನುಬಾಹಿರ, ಇದು ಜನರ ಧ್ವನಿಯನ್ನು ಹತ್ತಿಕ್ಕುವ ರಾಜ್ಯದ ನಡೆಯ ಭಾಗ ಎಂದು ಆರೋಪಿಸಿದ್ದಾರೆ. ಐಪಿಸಿ ಸೆಕ್ಷನ್‌ 188ರಡಿಯಲ್ಲಿ ಪ್ರಕರಣ ದಾಖಲಿಸುವ ಮುನ್ನ ಪೊಲೀಸರು ಸಂಬಂಧಿತ ಕೋರ್ಟಿನಿಂದ ಅನುಮತಿ ಪಡೆಯಬೇಕಿದೆ. ಈ ನಿರ್ದಿಷ್ಟ ವೀಡಿಯೋವನ್ನು ಕೋಟ್ಯಂತರ ಜನರು ವೀಕ್ಷಿಸಿದ್ದಾರೆ ಮತ್ತು ಹಂಚಿಕೊಂಡಿದ್ದಾರೆ, ಅವರೆಲ್ಲರ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದೇ? ಸಿಆರ್‌ಪಿಸಿ ಸೆಕ್ಷನ್ 195ರ ಪ್ರಕಾರ, ಐಪಿಸಿಯ ಸೆಕ್ಷನ್ 188ರಡಿಯಲ್ಲಿ ಎಫ್‌ಐಆರ್ ದಾಖಲಿಸುವ ಮೊದಲು ಪೊಲೀಸರು ಸಂಬಂಧಪಟ್ಟ ನ್ಯಾಯಾಲಯದಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಬನ್ಸೋಡೆ ಹೇಳಿದ್ದಾರೆ.

ಇದನ್ನು ಓದಿ: ಜಮ್ಮು-ಕಾಶ್ಮೀರ: ಠಾಣೆಗೆ ನುಗ್ಗಿ ಪೊಲೀಸರಿಗೆ ಥಳಿಸಿದ ಸೇನಾಧಿಕಾರಿಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...