Homeಮುಖಪುಟಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪ್ರಕರಣ ದಾಖಲಾದ ಬಳಿಕ ಜುಬೇರ್‌ ಅವರನ್ನು ನಿಂದಿಸಿ ವಿಡಿಯೊ ಬಿಡುಗಡೆ ಮಾಡಿರುವ ನರಸಿಂಗಾನಂದ, “ನಾನು ತಪ್ಪು ಇತಿಹಾಸ ಓದಿಕೊಂಡಿದ್ದೇನೆ” ಎಂದೂ ಹೇಳಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರನ್ನು ರಜಪೂತ ರಾಜ ಪೃಥ್ವಿರಾಜ್ ಚೌಹಾಣ್‌ಗೆ ಹೋಲಿಸಿ, ಅವಹೇಳನಕಾರಿಯಾಗಿ ಮಾತನಾಡಿದ್ದ ಉತ್ತರ ಪ್ರದೇಶದ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿದೆ.

ಮಸೂರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಗಾಜಿಯಾಬಾದ್ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ವೈರಲ್‌ ಆಗಿದೆ. ಗಾಜಿಯಾಬಾದ್ ಪೊಲೀಸರ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಮೂಲಕ ಪ್ರತಿಕ್ರಿಯಿಸಿರುವ ಎಸ್‌ಪಿ ರಾಜಾ, “ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್‌ ಆಗುತ್ತಿದೆ. ಈ ವಿಡಿಯೊದಲ್ಲಿ ಯತಿ ನರಸಿಂಹಾನಂದ ಅವರು ಗೌರವಾನ್ವಿತ ಪ್ರಧಾನಿ ಮತ್ತು ಇತರ ಮಹಾನ್ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ದ್ವೇಷ ಭಾಷಣಗಳ ಮೂಲಕ ಕುಖ್ಯಾತರಾಗಿರುವ ಯತಿ ನರಸಿಂಗಾನಂದ ಅವರು ಇತ್ತೀಚೆಗೆ ಪೃಥ್ವಿರಾಜ್ ಚೌಹಾಣ್, ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾತ್ಮ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.

“ಪೃಥ್ವಿರಾಜ್ ಚೌಹಾಣ್ ಹಿಂದೂಗಳನ್ನು ಹೇಗೆ ನಡೆಸಿಕೊಂಡರು, ಮೋದಿಯವರೂ ಅದೇ ರೀತಿ ಮಾಡುತ್ತಿದ್ದಾರೆ. ಪೃಥ್ವಿರಾಜನು ಅನೇಕ ಹಿಂದೂಗಳನ್ನು ಕೊಂದನು ಮತ್ತು ಮಹಿಳೆಯರನ್ನು ಅಪಹರಿಸಿದನು. ವಾಸ್ತವವಾಗಿ, ಆತ ತಮ್ಮ ಸ್ವಂತ ಸಹೋದರನ ಮಗಳನ್ನು ಬಿಡಲಿಲ್ಲ” ಎಂದು ಯತಿ ನರಸಿಂಗಾನಂದ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಅನೇಕ ವೀರ ಹಿಂದೂ ರಾಜರ ಸಾವಿಗೆ ಪೃಥ್ವಿರಾಜ್ ಕಾರಣನಾಗಿದ್ದನು. ಆದರೆ ಮುಸ್ಲಿಂ ಆಡಳಿತಗಾರನನ್ನು ಎಂದಿಗೂ ಮುಟ್ಟಲಿಲ್ಲ. ಕೊನೆಯಲ್ಲಿ ಏನಾಯಿತು? ಆತನನ್ನು ಮುಸ್ಲಿಂ ದೊರೆ ಕೊಂದಿದ್ದಾನೆಯೇ ಹೊರತು ಹಿಂದೂ ಅಲ್ಲ” ಎಂದು ಆರೋಪಿಸಿದ್ದರು.

“ಪೃಥ್ವಿರಾಜ್ ಮಾಡಿರುವ ದುಷ್ಕೃತ್ಯಗಳು ಮಹಾತ್ಮ ಗಾಂಧಿ ಮತ್ತು ನರೇಂದ್ರ ಮೋದಿಯವರಿಗೆ ಹೋಲಿಕೆಯಾಗುತ್ತವೆ. ನಾವು ಮಾಡುವುದೆಂದರೆ ಅವರನ್ನು (ಮೋದಿ) ಹೊಗಳುವುದು. ಮೋದಿ ಮುಂದುವರಿದರೆ, ಅವರಿಗೆ ಶಾಂತಿಯಿಂದ ಅಳಲು ಸ್ಥಳವಿರುವುದಿಲ್ಲ” ಎಂದು ಟೀಕಿಸಿದ್ದರು.

ಪೃಥ್ವಿರಾಜ್ ಚೌಹಾಣ್ ಅವರ ಸೋದರಸಂಬಂಧಿ ಮತ್ತು ರಾಜಕುಮಾರಿ ಸಂಯೋಗಿತಾ ಅವರ ತಂದೆ ಜೈಚಂದ್ (ರಜಪೂತ ರಾಜ) ಬಗ್ಗೆ ಮಾತನಾಡಿದ್ದರು. ಜೈಚಂದ್‌ ಅವರನ್ನು ಮಹಾನ್ ನಾಯಕ ಎಂದು ಕರೆದ ನರಸಿಂಗಾನಂದ, “ಪೃಥ್ವಿರಾಜ್ ಚೌಹಾಣ್‌ಗಿಂತ ಅವರನ್ನು ತನ್ನ ಸ್ನೇಹಿತನನ್ನಾಗಿ ಆಯ್ಕೆ ಮಾಡಿಕೊಳ್ಳುತ್ತೇನೆ” ಎಂದಿದ್ದರು.

“ಘೋರಿ ರಾಜವಂಶದ ದೊರೆ ಮುಹಮ್ಮದ್ ಘೋರಿಗೆ ಜೈಚಂದ್ ಎಂದಿಗೂ ಸಹಾಯ ಮಾಡಲಿಲ್ಲ. ಅವರು ನಿಜವಾದ ರಜಪೂತರಾಗಿದ್ದರು” ಎಂದು ಶ್ಲಾಘಿಸಿದ್ದರು. ಹಿಂದೂಗಳು ದೀರ್ಘಕಾಲದಿಂದಲೂ ವಿವಿಧ ವಿದೇಶಿ ಆಡಳಿತಗಾರರಿಂದಾಗಿ ಗುಲಾಮರಾಗಿದ್ದಾರೆ ಎಂದು ಆರೋಪಿಸಿದ್ದರು.

“ಇದು ಗಾಂಧಿಯನ್ನು ಗೌರವಿಸುವ, ನಾಥೂರಾಂ ಗೋಡ್ಸೆ ಮತ್ತು ವೀರ್ ಸಾವರ್ಕರ್ ಅವರನ್ನು ನಿಂದಿಸುವ ದೇಶ. ದೇಶದ ಮನಸ್ಥಿತಿ ಬದಲಾಗುವವರೆಗೂ ಇದು ಮುಂದುವರಿಯುತ್ತದೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಕ್ಷತ್ರಿಯ ಪರಿಷತ್ ಖಂಡನೆ

ಯತಿ ನರಸಿಂಗಾನಂದ ಅವರ ಹೇಳಿಕೆಯನ್ನು ಕ್ಷತ್ರೀಯ ಪರಿಷತ್ ಖಂಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದೆ. “ಮಹಾನ್ ಕ್ಷತ್ರಿಯ ಚಕ್ರವರ್ತಿ ಪೃಥ್ವಿರಾಜ್ ಚೌಹಾಣ್ ಅವರ ವಿರುದ್ಧ ಹುಸಿ-ರಾಷ್ಟ್ರೀಯವಾದಿ ಯತಿ ನರಸಿಂಹಾನಂದ ಮಾಡಿರುವ ಭಯಾನಕ ಅಭಿಪ್ರಾಯಗಳು ಇತ್ತೀಚಿನ ದಿನಗಳಲ್ಲಿನ ವಿಭಜಿಸುವ ರಾಜಕೀಯದಲ್ಲೇ ಕೀಳುಮಟ್ಟದ್ದಾಗಿವೆ” ಎಂದು ಅಭಿಪ್ರಾಯಪಟ್ಟಿದೆ.

“ಯತಿ ನರಸಿಂಗಾನಂದ ಅವರ ದುರುದ್ದೇಶಪೂರಿತ ಅಭಿಪ್ರಾಯಗಳನ್ನು ಖಂಡಿಸುತ್ತೇವೆ. ಅಪರಾಧಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇವೆ” ಎಂದಿದೆ.

ಪ್ರಕರಣ ದಾಖಲಾದ ಬಳಿಕ ತೀವ್ರ ಹಿಂದುತ್ವವಾಗಿ ನರಸಿಂಗಾನಂದ ಯೂಟರ್ನ್ ಹೊಡೆದಿದ್ದಾರೆ. ಮೊಹಮ್ಮದ್ ಜುಬೇರ್‌ ಅವರನ್ನು ನಿಂದಿಸುವ ಮೂಲಕ ಕ್ಷಮಾಪಣಾ ವಿಡಿಯೊ ಬಿಡುಗಡೆ ಮಾಡಿರುವ ಯತಿ, “ನನ್ನ ವಿಡಿಯೊವನ್ನು ಜುಬೇರ್‌ ಎಡಿಟ್‌ ಮಾಡಿ ಹಂಚಿಕೊಂಡಿದ್ದಾರೆ. ಚೌಹಾಣ್ ಬಗ್ಗೆ ತಪ್ಪು ಇತಿಹಾಸವನ್ನು ಓದಿದ್ದೇನೆ ಎಂದು ಭಾವಿಸಿದ್ದೇನೆ. ರಜಪೂತ ಸಮುದಾಯದ ಕ್ಷಮೆಯಾಚಿಸುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಂದೆಡೆ ಜುಬೇರ್‌ ಅವರನ್ನು ನಿಂದಿಸುತ್ತಲೇ, ತಾನು ತಪ್ಪು ಓದಿಕೊಂಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಮೊದಲೇ ಊಹಿಸಿದ್ದ ಪತ್ರಕರ್ತ ಮೊಹಮ್ಮದ್ ಜುಬೇರ್‌, “ಎಫ್‌ಐಆರ್‌ ದಾಖಲಾಗಿರುವುದರಿಂದ, ಅವರ ವೀಡಿಯೊವನ್ನು ನಾನು ಎಡಿಟ್ ಮಾಡಿದ್ದೇನೆ ಎಂದು ಈಗ ಯತಿ ನರಸಿಂಗಾನಂದ ಹೇಳಿಕೊಳ್ಳಬಹುದು. ಸಂಪೂರ್ಣ ವೀಡಿಯೊ ಲಿಂಕ್‌ ಹಾಕಿದ್ದೇನೆ. 17:20 ನಿಮಿಷದಲ್ಲಿ ನೋಡಿರಿ” ಎಂದು ಟ್ವೀಟ್ ಮಾಡಿದ್ದರು.

ಯತಿ ನರಸಿಂಗಾನಂದ ಅವರು ನಾಲಿಗೆ ಹರಿಬಿಡುವುದು ಇದು ಮೊದಲೇನೂ ಅಲ್ಲ. ಮುಸ್ಲಿಮರ ನರಮೇಧ ನಡೆಸಬೇಕು ಎಂದು ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಭಾರತದ ಸಂವಿಧಾನ ಹಾಗೂ ಸುಪ್ರೀಂ ಕೋರ್ಟ್ ವಿರುದ್ಧ ಅತ್ಯಂತ ತುಚ್ಛವಾಗಿ ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....