Homeಮುಖಪುಟಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪ್ರಕರಣ ದಾಖಲಾದ ಬಳಿಕ ಜುಬೇರ್‌ ಅವರನ್ನು ನಿಂದಿಸಿ ವಿಡಿಯೊ ಬಿಡುಗಡೆ ಮಾಡಿರುವ ನರಸಿಂಗಾನಂದ, “ನಾನು ತಪ್ಪು ಇತಿಹಾಸ ಓದಿಕೊಂಡಿದ್ದೇನೆ” ಎಂದೂ ಹೇಳಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರನ್ನು ರಜಪೂತ ರಾಜ ಪೃಥ್ವಿರಾಜ್ ಚೌಹಾಣ್‌ಗೆ ಹೋಲಿಸಿ, ಅವಹೇಳನಕಾರಿಯಾಗಿ ಮಾತನಾಡಿದ್ದ ಉತ್ತರ ಪ್ರದೇಶದ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿದೆ.

ಮಸೂರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಗಾಜಿಯಾಬಾದ್ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ವೈರಲ್‌ ಆಗಿದೆ. ಗಾಜಿಯಾಬಾದ್ ಪೊಲೀಸರ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಮೂಲಕ ಪ್ರತಿಕ್ರಿಯಿಸಿರುವ ಎಸ್‌ಪಿ ರಾಜಾ, “ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್‌ ಆಗುತ್ತಿದೆ. ಈ ವಿಡಿಯೊದಲ್ಲಿ ಯತಿ ನರಸಿಂಹಾನಂದ ಅವರು ಗೌರವಾನ್ವಿತ ಪ್ರಧಾನಿ ಮತ್ತು ಇತರ ಮಹಾನ್ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ದ್ವೇಷ ಭಾಷಣಗಳ ಮೂಲಕ ಕುಖ್ಯಾತರಾಗಿರುವ ಯತಿ ನರಸಿಂಗಾನಂದ ಅವರು ಇತ್ತೀಚೆಗೆ ಪೃಥ್ವಿರಾಜ್ ಚೌಹಾಣ್, ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾತ್ಮ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.

“ಪೃಥ್ವಿರಾಜ್ ಚೌಹಾಣ್ ಹಿಂದೂಗಳನ್ನು ಹೇಗೆ ನಡೆಸಿಕೊಂಡರು, ಮೋದಿಯವರೂ ಅದೇ ರೀತಿ ಮಾಡುತ್ತಿದ್ದಾರೆ. ಪೃಥ್ವಿರಾಜನು ಅನೇಕ ಹಿಂದೂಗಳನ್ನು ಕೊಂದನು ಮತ್ತು ಮಹಿಳೆಯರನ್ನು ಅಪಹರಿಸಿದನು. ವಾಸ್ತವವಾಗಿ, ಆತ ತಮ್ಮ ಸ್ವಂತ ಸಹೋದರನ ಮಗಳನ್ನು ಬಿಡಲಿಲ್ಲ” ಎಂದು ಯತಿ ನರಸಿಂಗಾನಂದ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಅನೇಕ ವೀರ ಹಿಂದೂ ರಾಜರ ಸಾವಿಗೆ ಪೃಥ್ವಿರಾಜ್ ಕಾರಣನಾಗಿದ್ದನು. ಆದರೆ ಮುಸ್ಲಿಂ ಆಡಳಿತಗಾರನನ್ನು ಎಂದಿಗೂ ಮುಟ್ಟಲಿಲ್ಲ. ಕೊನೆಯಲ್ಲಿ ಏನಾಯಿತು? ಆತನನ್ನು ಮುಸ್ಲಿಂ ದೊರೆ ಕೊಂದಿದ್ದಾನೆಯೇ ಹೊರತು ಹಿಂದೂ ಅಲ್ಲ” ಎಂದು ಆರೋಪಿಸಿದ್ದರು.

“ಪೃಥ್ವಿರಾಜ್ ಮಾಡಿರುವ ದುಷ್ಕೃತ್ಯಗಳು ಮಹಾತ್ಮ ಗಾಂಧಿ ಮತ್ತು ನರೇಂದ್ರ ಮೋದಿಯವರಿಗೆ ಹೋಲಿಕೆಯಾಗುತ್ತವೆ. ನಾವು ಮಾಡುವುದೆಂದರೆ ಅವರನ್ನು (ಮೋದಿ) ಹೊಗಳುವುದು. ಮೋದಿ ಮುಂದುವರಿದರೆ, ಅವರಿಗೆ ಶಾಂತಿಯಿಂದ ಅಳಲು ಸ್ಥಳವಿರುವುದಿಲ್ಲ” ಎಂದು ಟೀಕಿಸಿದ್ದರು.

ಪೃಥ್ವಿರಾಜ್ ಚೌಹಾಣ್ ಅವರ ಸೋದರಸಂಬಂಧಿ ಮತ್ತು ರಾಜಕುಮಾರಿ ಸಂಯೋಗಿತಾ ಅವರ ತಂದೆ ಜೈಚಂದ್ (ರಜಪೂತ ರಾಜ) ಬಗ್ಗೆ ಮಾತನಾಡಿದ್ದರು. ಜೈಚಂದ್‌ ಅವರನ್ನು ಮಹಾನ್ ನಾಯಕ ಎಂದು ಕರೆದ ನರಸಿಂಗಾನಂದ, “ಪೃಥ್ವಿರಾಜ್ ಚೌಹಾಣ್‌ಗಿಂತ ಅವರನ್ನು ತನ್ನ ಸ್ನೇಹಿತನನ್ನಾಗಿ ಆಯ್ಕೆ ಮಾಡಿಕೊಳ್ಳುತ್ತೇನೆ” ಎಂದಿದ್ದರು.

“ಘೋರಿ ರಾಜವಂಶದ ದೊರೆ ಮುಹಮ್ಮದ್ ಘೋರಿಗೆ ಜೈಚಂದ್ ಎಂದಿಗೂ ಸಹಾಯ ಮಾಡಲಿಲ್ಲ. ಅವರು ನಿಜವಾದ ರಜಪೂತರಾಗಿದ್ದರು” ಎಂದು ಶ್ಲಾಘಿಸಿದ್ದರು. ಹಿಂದೂಗಳು ದೀರ್ಘಕಾಲದಿಂದಲೂ ವಿವಿಧ ವಿದೇಶಿ ಆಡಳಿತಗಾರರಿಂದಾಗಿ ಗುಲಾಮರಾಗಿದ್ದಾರೆ ಎಂದು ಆರೋಪಿಸಿದ್ದರು.

“ಇದು ಗಾಂಧಿಯನ್ನು ಗೌರವಿಸುವ, ನಾಥೂರಾಂ ಗೋಡ್ಸೆ ಮತ್ತು ವೀರ್ ಸಾವರ್ಕರ್ ಅವರನ್ನು ನಿಂದಿಸುವ ದೇಶ. ದೇಶದ ಮನಸ್ಥಿತಿ ಬದಲಾಗುವವರೆಗೂ ಇದು ಮುಂದುವರಿಯುತ್ತದೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಕ್ಷತ್ರಿಯ ಪರಿಷತ್ ಖಂಡನೆ

ಯತಿ ನರಸಿಂಗಾನಂದ ಅವರ ಹೇಳಿಕೆಯನ್ನು ಕ್ಷತ್ರೀಯ ಪರಿಷತ್ ಖಂಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದೆ. “ಮಹಾನ್ ಕ್ಷತ್ರಿಯ ಚಕ್ರವರ್ತಿ ಪೃಥ್ವಿರಾಜ್ ಚೌಹಾಣ್ ಅವರ ವಿರುದ್ಧ ಹುಸಿ-ರಾಷ್ಟ್ರೀಯವಾದಿ ಯತಿ ನರಸಿಂಹಾನಂದ ಮಾಡಿರುವ ಭಯಾನಕ ಅಭಿಪ್ರಾಯಗಳು ಇತ್ತೀಚಿನ ದಿನಗಳಲ್ಲಿನ ವಿಭಜಿಸುವ ರಾಜಕೀಯದಲ್ಲೇ ಕೀಳುಮಟ್ಟದ್ದಾಗಿವೆ” ಎಂದು ಅಭಿಪ್ರಾಯಪಟ್ಟಿದೆ.

“ಯತಿ ನರಸಿಂಗಾನಂದ ಅವರ ದುರುದ್ದೇಶಪೂರಿತ ಅಭಿಪ್ರಾಯಗಳನ್ನು ಖಂಡಿಸುತ್ತೇವೆ. ಅಪರಾಧಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇವೆ” ಎಂದಿದೆ.

ಪ್ರಕರಣ ದಾಖಲಾದ ಬಳಿಕ ತೀವ್ರ ಹಿಂದುತ್ವವಾಗಿ ನರಸಿಂಗಾನಂದ ಯೂಟರ್ನ್ ಹೊಡೆದಿದ್ದಾರೆ. ಮೊಹಮ್ಮದ್ ಜುಬೇರ್‌ ಅವರನ್ನು ನಿಂದಿಸುವ ಮೂಲಕ ಕ್ಷಮಾಪಣಾ ವಿಡಿಯೊ ಬಿಡುಗಡೆ ಮಾಡಿರುವ ಯತಿ, “ನನ್ನ ವಿಡಿಯೊವನ್ನು ಜುಬೇರ್‌ ಎಡಿಟ್‌ ಮಾಡಿ ಹಂಚಿಕೊಂಡಿದ್ದಾರೆ. ಚೌಹಾಣ್ ಬಗ್ಗೆ ತಪ್ಪು ಇತಿಹಾಸವನ್ನು ಓದಿದ್ದೇನೆ ಎಂದು ಭಾವಿಸಿದ್ದೇನೆ. ರಜಪೂತ ಸಮುದಾಯದ ಕ್ಷಮೆಯಾಚಿಸುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಂದೆಡೆ ಜುಬೇರ್‌ ಅವರನ್ನು ನಿಂದಿಸುತ್ತಲೇ, ತಾನು ತಪ್ಪು ಓದಿಕೊಂಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಮೊದಲೇ ಊಹಿಸಿದ್ದ ಪತ್ರಕರ್ತ ಮೊಹಮ್ಮದ್ ಜುಬೇರ್‌, “ಎಫ್‌ಐಆರ್‌ ದಾಖಲಾಗಿರುವುದರಿಂದ, ಅವರ ವೀಡಿಯೊವನ್ನು ನಾನು ಎಡಿಟ್ ಮಾಡಿದ್ದೇನೆ ಎಂದು ಈಗ ಯತಿ ನರಸಿಂಗಾನಂದ ಹೇಳಿಕೊಳ್ಳಬಹುದು. ಸಂಪೂರ್ಣ ವೀಡಿಯೊ ಲಿಂಕ್‌ ಹಾಕಿದ್ದೇನೆ. 17:20 ನಿಮಿಷದಲ್ಲಿ ನೋಡಿರಿ” ಎಂದು ಟ್ವೀಟ್ ಮಾಡಿದ್ದರು.

ಯತಿ ನರಸಿಂಗಾನಂದ ಅವರು ನಾಲಿಗೆ ಹರಿಬಿಡುವುದು ಇದು ಮೊದಲೇನೂ ಅಲ್ಲ. ಮುಸ್ಲಿಮರ ನರಮೇಧ ನಡೆಸಬೇಕು ಎಂದು ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಭಾರತದ ಸಂವಿಧಾನ ಹಾಗೂ ಸುಪ್ರೀಂ ಕೋರ್ಟ್ ವಿರುದ್ಧ ಅತ್ಯಂತ ತುಚ್ಛವಾಗಿ ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...