Homeಮುಖಪುಟಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪ್ರಕರಣ ದಾಖಲಾದ ಬಳಿಕ ಜುಬೇರ್‌ ಅವರನ್ನು ನಿಂದಿಸಿ ವಿಡಿಯೊ ಬಿಡುಗಡೆ ಮಾಡಿರುವ ನರಸಿಂಗಾನಂದ, “ನಾನು ತಪ್ಪು ಇತಿಹಾಸ ಓದಿಕೊಂಡಿದ್ದೇನೆ” ಎಂದೂ ಹೇಳಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರನ್ನು ರಜಪೂತ ರಾಜ ಪೃಥ್ವಿರಾಜ್ ಚೌಹಾಣ್‌ಗೆ ಹೋಲಿಸಿ, ಅವಹೇಳನಕಾರಿಯಾಗಿ ಮಾತನಾಡಿದ್ದ ಉತ್ತರ ಪ್ರದೇಶದ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿದೆ.

ಮಸೂರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಗಾಜಿಯಾಬಾದ್ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ವೈರಲ್‌ ಆಗಿದೆ. ಗಾಜಿಯಾಬಾದ್ ಪೊಲೀಸರ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಮೂಲಕ ಪ್ರತಿಕ್ರಿಯಿಸಿರುವ ಎಸ್‌ಪಿ ರಾಜಾ, “ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್‌ ಆಗುತ್ತಿದೆ. ಈ ವಿಡಿಯೊದಲ್ಲಿ ಯತಿ ನರಸಿಂಹಾನಂದ ಅವರು ಗೌರವಾನ್ವಿತ ಪ್ರಧಾನಿ ಮತ್ತು ಇತರ ಮಹಾನ್ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ದ್ವೇಷ ಭಾಷಣಗಳ ಮೂಲಕ ಕುಖ್ಯಾತರಾಗಿರುವ ಯತಿ ನರಸಿಂಗಾನಂದ ಅವರು ಇತ್ತೀಚೆಗೆ ಪೃಥ್ವಿರಾಜ್ ಚೌಹಾಣ್, ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾತ್ಮ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.

“ಪೃಥ್ವಿರಾಜ್ ಚೌಹಾಣ್ ಹಿಂದೂಗಳನ್ನು ಹೇಗೆ ನಡೆಸಿಕೊಂಡರು, ಮೋದಿಯವರೂ ಅದೇ ರೀತಿ ಮಾಡುತ್ತಿದ್ದಾರೆ. ಪೃಥ್ವಿರಾಜನು ಅನೇಕ ಹಿಂದೂಗಳನ್ನು ಕೊಂದನು ಮತ್ತು ಮಹಿಳೆಯರನ್ನು ಅಪಹರಿಸಿದನು. ವಾಸ್ತವವಾಗಿ, ಆತ ತಮ್ಮ ಸ್ವಂತ ಸಹೋದರನ ಮಗಳನ್ನು ಬಿಡಲಿಲ್ಲ” ಎಂದು ಯತಿ ನರಸಿಂಗಾನಂದ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಅನೇಕ ವೀರ ಹಿಂದೂ ರಾಜರ ಸಾವಿಗೆ ಪೃಥ್ವಿರಾಜ್ ಕಾರಣನಾಗಿದ್ದನು. ಆದರೆ ಮುಸ್ಲಿಂ ಆಡಳಿತಗಾರನನ್ನು ಎಂದಿಗೂ ಮುಟ್ಟಲಿಲ್ಲ. ಕೊನೆಯಲ್ಲಿ ಏನಾಯಿತು? ಆತನನ್ನು ಮುಸ್ಲಿಂ ದೊರೆ ಕೊಂದಿದ್ದಾನೆಯೇ ಹೊರತು ಹಿಂದೂ ಅಲ್ಲ” ಎಂದು ಆರೋಪಿಸಿದ್ದರು.

“ಪೃಥ್ವಿರಾಜ್ ಮಾಡಿರುವ ದುಷ್ಕೃತ್ಯಗಳು ಮಹಾತ್ಮ ಗಾಂಧಿ ಮತ್ತು ನರೇಂದ್ರ ಮೋದಿಯವರಿಗೆ ಹೋಲಿಕೆಯಾಗುತ್ತವೆ. ನಾವು ಮಾಡುವುದೆಂದರೆ ಅವರನ್ನು (ಮೋದಿ) ಹೊಗಳುವುದು. ಮೋದಿ ಮುಂದುವರಿದರೆ, ಅವರಿಗೆ ಶಾಂತಿಯಿಂದ ಅಳಲು ಸ್ಥಳವಿರುವುದಿಲ್ಲ” ಎಂದು ಟೀಕಿಸಿದ್ದರು.

ಪೃಥ್ವಿರಾಜ್ ಚೌಹಾಣ್ ಅವರ ಸೋದರಸಂಬಂಧಿ ಮತ್ತು ರಾಜಕುಮಾರಿ ಸಂಯೋಗಿತಾ ಅವರ ತಂದೆ ಜೈಚಂದ್ (ರಜಪೂತ ರಾಜ) ಬಗ್ಗೆ ಮಾತನಾಡಿದ್ದರು. ಜೈಚಂದ್‌ ಅವರನ್ನು ಮಹಾನ್ ನಾಯಕ ಎಂದು ಕರೆದ ನರಸಿಂಗಾನಂದ, “ಪೃಥ್ವಿರಾಜ್ ಚೌಹಾಣ್‌ಗಿಂತ ಅವರನ್ನು ತನ್ನ ಸ್ನೇಹಿತನನ್ನಾಗಿ ಆಯ್ಕೆ ಮಾಡಿಕೊಳ್ಳುತ್ತೇನೆ” ಎಂದಿದ್ದರು.

“ಘೋರಿ ರಾಜವಂಶದ ದೊರೆ ಮುಹಮ್ಮದ್ ಘೋರಿಗೆ ಜೈಚಂದ್ ಎಂದಿಗೂ ಸಹಾಯ ಮಾಡಲಿಲ್ಲ. ಅವರು ನಿಜವಾದ ರಜಪೂತರಾಗಿದ್ದರು” ಎಂದು ಶ್ಲಾಘಿಸಿದ್ದರು. ಹಿಂದೂಗಳು ದೀರ್ಘಕಾಲದಿಂದಲೂ ವಿವಿಧ ವಿದೇಶಿ ಆಡಳಿತಗಾರರಿಂದಾಗಿ ಗುಲಾಮರಾಗಿದ್ದಾರೆ ಎಂದು ಆರೋಪಿಸಿದ್ದರು.

“ಇದು ಗಾಂಧಿಯನ್ನು ಗೌರವಿಸುವ, ನಾಥೂರಾಂ ಗೋಡ್ಸೆ ಮತ್ತು ವೀರ್ ಸಾವರ್ಕರ್ ಅವರನ್ನು ನಿಂದಿಸುವ ದೇಶ. ದೇಶದ ಮನಸ್ಥಿತಿ ಬದಲಾಗುವವರೆಗೂ ಇದು ಮುಂದುವರಿಯುತ್ತದೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಕ್ಷತ್ರಿಯ ಪರಿಷತ್ ಖಂಡನೆ

ಯತಿ ನರಸಿಂಗಾನಂದ ಅವರ ಹೇಳಿಕೆಯನ್ನು ಕ್ಷತ್ರೀಯ ಪರಿಷತ್ ಖಂಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದೆ. “ಮಹಾನ್ ಕ್ಷತ್ರಿಯ ಚಕ್ರವರ್ತಿ ಪೃಥ್ವಿರಾಜ್ ಚೌಹಾಣ್ ಅವರ ವಿರುದ್ಧ ಹುಸಿ-ರಾಷ್ಟ್ರೀಯವಾದಿ ಯತಿ ನರಸಿಂಹಾನಂದ ಮಾಡಿರುವ ಭಯಾನಕ ಅಭಿಪ್ರಾಯಗಳು ಇತ್ತೀಚಿನ ದಿನಗಳಲ್ಲಿನ ವಿಭಜಿಸುವ ರಾಜಕೀಯದಲ್ಲೇ ಕೀಳುಮಟ್ಟದ್ದಾಗಿವೆ” ಎಂದು ಅಭಿಪ್ರಾಯಪಟ್ಟಿದೆ.

“ಯತಿ ನರಸಿಂಗಾನಂದ ಅವರ ದುರುದ್ದೇಶಪೂರಿತ ಅಭಿಪ್ರಾಯಗಳನ್ನು ಖಂಡಿಸುತ್ತೇವೆ. ಅಪರಾಧಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇವೆ” ಎಂದಿದೆ.

ಪ್ರಕರಣ ದಾಖಲಾದ ಬಳಿಕ ತೀವ್ರ ಹಿಂದುತ್ವವಾಗಿ ನರಸಿಂಗಾನಂದ ಯೂಟರ್ನ್ ಹೊಡೆದಿದ್ದಾರೆ. ಮೊಹಮ್ಮದ್ ಜುಬೇರ್‌ ಅವರನ್ನು ನಿಂದಿಸುವ ಮೂಲಕ ಕ್ಷಮಾಪಣಾ ವಿಡಿಯೊ ಬಿಡುಗಡೆ ಮಾಡಿರುವ ಯತಿ, “ನನ್ನ ವಿಡಿಯೊವನ್ನು ಜುಬೇರ್‌ ಎಡಿಟ್‌ ಮಾಡಿ ಹಂಚಿಕೊಂಡಿದ್ದಾರೆ. ಚೌಹಾಣ್ ಬಗ್ಗೆ ತಪ್ಪು ಇತಿಹಾಸವನ್ನು ಓದಿದ್ದೇನೆ ಎಂದು ಭಾವಿಸಿದ್ದೇನೆ. ರಜಪೂತ ಸಮುದಾಯದ ಕ್ಷಮೆಯಾಚಿಸುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಂದೆಡೆ ಜುಬೇರ್‌ ಅವರನ್ನು ನಿಂದಿಸುತ್ತಲೇ, ತಾನು ತಪ್ಪು ಓದಿಕೊಂಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಮೊದಲೇ ಊಹಿಸಿದ್ದ ಪತ್ರಕರ್ತ ಮೊಹಮ್ಮದ್ ಜುಬೇರ್‌, “ಎಫ್‌ಐಆರ್‌ ದಾಖಲಾಗಿರುವುದರಿಂದ, ಅವರ ವೀಡಿಯೊವನ್ನು ನಾನು ಎಡಿಟ್ ಮಾಡಿದ್ದೇನೆ ಎಂದು ಈಗ ಯತಿ ನರಸಿಂಗಾನಂದ ಹೇಳಿಕೊಳ್ಳಬಹುದು. ಸಂಪೂರ್ಣ ವೀಡಿಯೊ ಲಿಂಕ್‌ ಹಾಕಿದ್ದೇನೆ. 17:20 ನಿಮಿಷದಲ್ಲಿ ನೋಡಿರಿ” ಎಂದು ಟ್ವೀಟ್ ಮಾಡಿದ್ದರು.

ಯತಿ ನರಸಿಂಗಾನಂದ ಅವರು ನಾಲಿಗೆ ಹರಿಬಿಡುವುದು ಇದು ಮೊದಲೇನೂ ಅಲ್ಲ. ಮುಸ್ಲಿಮರ ನರಮೇಧ ನಡೆಸಬೇಕು ಎಂದು ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಭಾರತದ ಸಂವಿಧಾನ ಹಾಗೂ ಸುಪ್ರೀಂ ಕೋರ್ಟ್ ವಿರುದ್ಧ ಅತ್ಯಂತ ತುಚ್ಛವಾಗಿ ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...