ಪ್ರಧಾನಿ ನರೇಂದ್ರ ಮೋದಿಯವರನ್ನು ರಜಪೂತ ರಾಜ ಪೃಥ್ವಿರಾಜ್ ಚೌಹಾಣ್ಗೆ ಹೋಲಿಸಿ, ಅವಹೇಳನಕಾರಿಯಾಗಿ ಮಾತನಾಡಿದ್ದ ಉತ್ತರ ಪ್ರದೇಶದ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿದೆ.
ಮಸೂರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ಗಾಜಿಯಾಬಾದ್ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಆಲ್ಟ್ನ್ಯೂಸ್ ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್ ಅವರು ಟ್ವಿಟರ್ನಲ್ಲಿ ಹಂಚಿಕೊಂಡಿರುವ ವಿಡಿಯೊ ವೈರಲ್ ಆಗಿದೆ. ಗಾಜಿಯಾಬಾದ್ ಪೊಲೀಸರ ಅಧಿಕೃತ ಟ್ವಿಟರ್ ಹ್ಯಾಂಡಲ್ ಮೂಲಕ ಪ್ರತಿಕ್ರಿಯಿಸಿರುವ ಎಸ್ಪಿ ರಾಜಾ, “ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್ ಆಗುತ್ತಿದೆ. ಈ ವಿಡಿಯೊದಲ್ಲಿ ಯತಿ ನರಸಿಂಹಾನಂದ ಅವರು ಗೌರವಾನ್ವಿತ ಪ್ರಧಾನಿ ಮತ್ತು ಇತರ ಮಹಾನ್ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.
ಐಪಿಸಿ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
सोशल मीडिया के माध्यम से एक वायरल वीडियो संज्ञान में आया था जिसमे महंत यति नरसिंहानन्द सरस्वती मानीनय प्रधानमंत्री व अन्य महापुरुषों के लिए अभद्र टिप्पणी कर रहे थे। जिसका संज्ञान लेते हुए थाना मसूरी पर अभियोग पंजीकृत किया गया है।
वीडियो बाइट- पुलिस अधीक्षक ग्रामीण@Uppolice pic.twitter.com/Urpkl3UAFa— GHAZIABAD POLICE (@ghaziabadpolice) November 8, 2022
ದ್ವೇಷ ಭಾಷಣಗಳ ಮೂಲಕ ಕುಖ್ಯಾತರಾಗಿರುವ ಯತಿ ನರಸಿಂಗಾನಂದ ಅವರು ಇತ್ತೀಚೆಗೆ ಪೃಥ್ವಿರಾಜ್ ಚೌಹಾಣ್, ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾತ್ಮ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.
“ಪೃಥ್ವಿರಾಜ್ ಚೌಹಾಣ್ ಹಿಂದೂಗಳನ್ನು ಹೇಗೆ ನಡೆಸಿಕೊಂಡರು, ಮೋದಿಯವರೂ ಅದೇ ರೀತಿ ಮಾಡುತ್ತಿದ್ದಾರೆ. ಪೃಥ್ವಿರಾಜನು ಅನೇಕ ಹಿಂದೂಗಳನ್ನು ಕೊಂದನು ಮತ್ತು ಮಹಿಳೆಯರನ್ನು ಅಪಹರಿಸಿದನು. ವಾಸ್ತವವಾಗಿ, ಆತ ತಮ್ಮ ಸ್ವಂತ ಸಹೋದರನ ಮಗಳನ್ನು ಬಿಡಲಿಲ್ಲ” ಎಂದು ಯತಿ ನರಸಿಂಗಾನಂದ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.
Here's what Yati Narasinghanand Sarasvati had to say about Prithvi Raj Chauhan. pic.twitter.com/G5cZCS9VU2
— Mohammed Zubair (@zoo_bear) November 6, 2022
“ಅನೇಕ ವೀರ ಹಿಂದೂ ರಾಜರ ಸಾವಿಗೆ ಪೃಥ್ವಿರಾಜ್ ಕಾರಣನಾಗಿದ್ದನು. ಆದರೆ ಮುಸ್ಲಿಂ ಆಡಳಿತಗಾರನನ್ನು ಎಂದಿಗೂ ಮುಟ್ಟಲಿಲ್ಲ. ಕೊನೆಯಲ್ಲಿ ಏನಾಯಿತು? ಆತನನ್ನು ಮುಸ್ಲಿಂ ದೊರೆ ಕೊಂದಿದ್ದಾನೆಯೇ ಹೊರತು ಹಿಂದೂ ಅಲ್ಲ” ಎಂದು ಆರೋಪಿಸಿದ್ದರು.
“ಪೃಥ್ವಿರಾಜ್ ಮಾಡಿರುವ ದುಷ್ಕೃತ್ಯಗಳು ಮಹಾತ್ಮ ಗಾಂಧಿ ಮತ್ತು ನರೇಂದ್ರ ಮೋದಿಯವರಿಗೆ ಹೋಲಿಕೆಯಾಗುತ್ತವೆ. ನಾವು ಮಾಡುವುದೆಂದರೆ ಅವರನ್ನು (ಮೋದಿ) ಹೊಗಳುವುದು. ಮೋದಿ ಮುಂದುವರಿದರೆ, ಅವರಿಗೆ ಶಾಂತಿಯಿಂದ ಅಳಲು ಸ್ಥಳವಿರುವುದಿಲ್ಲ” ಎಂದು ಟೀಕಿಸಿದ್ದರು.
ಪೃಥ್ವಿರಾಜ್ ಚೌಹಾಣ್ ಅವರ ಸೋದರಸಂಬಂಧಿ ಮತ್ತು ರಾಜಕುಮಾರಿ ಸಂಯೋಗಿತಾ ಅವರ ತಂದೆ ಜೈಚಂದ್ (ರಜಪೂತ ರಾಜ) ಬಗ್ಗೆ ಮಾತನಾಡಿದ್ದರು. ಜೈಚಂದ್ ಅವರನ್ನು ಮಹಾನ್ ನಾಯಕ ಎಂದು ಕರೆದ ನರಸಿಂಗಾನಂದ, “ಪೃಥ್ವಿರಾಜ್ ಚೌಹಾಣ್ಗಿಂತ ಅವರನ್ನು ತನ್ನ ಸ್ನೇಹಿತನನ್ನಾಗಿ ಆಯ್ಕೆ ಮಾಡಿಕೊಳ್ಳುತ್ತೇನೆ” ಎಂದಿದ್ದರು.
“ಘೋರಿ ರಾಜವಂಶದ ದೊರೆ ಮುಹಮ್ಮದ್ ಘೋರಿಗೆ ಜೈಚಂದ್ ಎಂದಿಗೂ ಸಹಾಯ ಮಾಡಲಿಲ್ಲ. ಅವರು ನಿಜವಾದ ರಜಪೂತರಾಗಿದ್ದರು” ಎಂದು ಶ್ಲಾಘಿಸಿದ್ದರು. ಹಿಂದೂಗಳು ದೀರ್ಘಕಾಲದಿಂದಲೂ ವಿವಿಧ ವಿದೇಶಿ ಆಡಳಿತಗಾರರಿಂದಾಗಿ ಗುಲಾಮರಾಗಿದ್ದಾರೆ ಎಂದು ಆರೋಪಿಸಿದ್ದರು.
“ಇದು ಗಾಂಧಿಯನ್ನು ಗೌರವಿಸುವ, ನಾಥೂರಾಂ ಗೋಡ್ಸೆ ಮತ್ತು ವೀರ್ ಸಾವರ್ಕರ್ ಅವರನ್ನು ನಿಂದಿಸುವ ದೇಶ. ದೇಶದ ಮನಸ್ಥಿತಿ ಬದಲಾಗುವವರೆಗೂ ಇದು ಮುಂದುವರಿಯುತ್ತದೆ” ಎಂದು ಹೇಳಿಕೆ ನೀಡಿದ್ದರು.
ಇದನ್ನೂ ಓದಿರಿ: ಹರ್ ಘರ್ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ
ಕ್ಷತ್ರಿಯ ಪರಿಷತ್ ಖಂಡನೆ
ಯತಿ ನರಸಿಂಗಾನಂದ ಅವರ ಹೇಳಿಕೆಯನ್ನು ಕ್ಷತ್ರೀಯ ಪರಿಷತ್ ಖಂಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದೆ. “ಮಹಾನ್ ಕ್ಷತ್ರಿಯ ಚಕ್ರವರ್ತಿ ಪೃಥ್ವಿರಾಜ್ ಚೌಹಾಣ್ ಅವರ ವಿರುದ್ಧ ಹುಸಿ-ರಾಷ್ಟ್ರೀಯವಾದಿ ಯತಿ ನರಸಿಂಹಾನಂದ ಮಾಡಿರುವ ಭಯಾನಕ ಅಭಿಪ್ರಾಯಗಳು ಇತ್ತೀಚಿನ ದಿನಗಳಲ್ಲಿನ ವಿಭಜಿಸುವ ರಾಜಕೀಯದಲ್ಲೇ ಕೀಳುಮಟ್ಟದ್ದಾಗಿವೆ” ಎಂದು ಅಭಿಪ್ರಾಯಪಟ್ಟಿದೆ.
“ಯತಿ ನರಸಿಂಗಾನಂದ ಅವರ ದುರುದ್ದೇಶಪೂರಿತ ಅಭಿಪ್ರಾಯಗಳನ್ನು ಖಂಡಿಸುತ್ತೇವೆ. ಅಪರಾಧಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇವೆ” ಎಂದಿದೆ.
The appalling comments by pseudo-nationalist opinion maker Yati Narsimhanand against the great Kshatriya Emperor Prithviraj Chauhan are a new low in the divisive politics of recent times.
We condemn his malevolent comments and demand a strong legal action against the offender. pic.twitter.com/9uBYURtpAe
— Kshatriya Parishad (@kshatriya_org) November 10, 2022
ಪ್ರಕರಣ ದಾಖಲಾದ ಬಳಿಕ ತೀವ್ರ ಹಿಂದುತ್ವವಾಗಿ ನರಸಿಂಗಾನಂದ ಯೂಟರ್ನ್ ಹೊಡೆದಿದ್ದಾರೆ. ಮೊಹಮ್ಮದ್ ಜುಬೇರ್ ಅವರನ್ನು ನಿಂದಿಸುವ ಮೂಲಕ ಕ್ಷಮಾಪಣಾ ವಿಡಿಯೊ ಬಿಡುಗಡೆ ಮಾಡಿರುವ ಯತಿ, “ನನ್ನ ವಿಡಿಯೊವನ್ನು ಜುಬೇರ್ ಎಡಿಟ್ ಮಾಡಿ ಹಂಚಿಕೊಂಡಿದ್ದಾರೆ. ಚೌಹಾಣ್ ಬಗ್ಗೆ ತಪ್ಪು ಇತಿಹಾಸವನ್ನು ಓದಿದ್ದೇನೆ ಎಂದು ಭಾವಿಸಿದ್ದೇನೆ. ರಜಪೂತ ಸಮುದಾಯದ ಕ್ಷಮೆಯಾಚಿಸುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಂದೆಡೆ ಜುಬೇರ್ ಅವರನ್ನು ನಿಂದಿಸುತ್ತಲೇ, ತಾನು ತಪ್ಪು ಓದಿಕೊಂಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇದನ್ನು ಮೊದಲೇ ಊಹಿಸಿದ್ದ ಪತ್ರಕರ್ತ ಮೊಹಮ್ಮದ್ ಜುಬೇರ್, “ಎಫ್ಐಆರ್ ದಾಖಲಾಗಿರುವುದರಿಂದ, ಅವರ ವೀಡಿಯೊವನ್ನು ನಾನು ಎಡಿಟ್ ಮಾಡಿದ್ದೇನೆ ಎಂದು ಈಗ ಯತಿ ನರಸಿಂಗಾನಂದ ಹೇಳಿಕೊಳ್ಳಬಹುದು. ಸಂಪೂರ್ಣ ವೀಡಿಯೊ ಲಿಂಕ್ ಹಾಕಿದ್ದೇನೆ. 17:20 ನಿಮಿಷದಲ್ಲಿ ನೋಡಿರಿ” ಎಂದು ಟ್ವೀಟ್ ಮಾಡಿದ್ದರು.
Now that there is an FIR against him, He may now claim that I've edited his video.
Sharing link to his full video. Watch from 17:20 https://t.co/OQQLEn9zhB— Mohammed Zubair (@zoo_bear) November 8, 2022
ಯತಿ ನರಸಿಂಗಾನಂದ ಅವರು ನಾಲಿಗೆ ಹರಿಬಿಡುವುದು ಇದು ಮೊದಲೇನೂ ಅಲ್ಲ. ಮುಸ್ಲಿಮರ ನರಮೇಧ ನಡೆಸಬೇಕು ಎಂದು ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಭಾರತದ ಸಂವಿಧಾನ ಹಾಗೂ ಸುಪ್ರೀಂ ಕೋರ್ಟ್ ವಿರುದ್ಧ ಅತ್ಯಂತ ತುಚ್ಛವಾಗಿ ಮಾತನಾಡಿದ್ದರು.