Homeಮುಖಪುಟಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪ್ರಕರಣ ದಾಖಲಾದ ಬಳಿಕ ಜುಬೇರ್‌ ಅವರನ್ನು ನಿಂದಿಸಿ ವಿಡಿಯೊ ಬಿಡುಗಡೆ ಮಾಡಿರುವ ನರಸಿಂಗಾನಂದ, “ನಾನು ತಪ್ಪು ಇತಿಹಾಸ ಓದಿಕೊಂಡಿದ್ದೇನೆ” ಎಂದೂ ಹೇಳಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರನ್ನು ರಜಪೂತ ರಾಜ ಪೃಥ್ವಿರಾಜ್ ಚೌಹಾಣ್‌ಗೆ ಹೋಲಿಸಿ, ಅವಹೇಳನಕಾರಿಯಾಗಿ ಮಾತನಾಡಿದ್ದ ಉತ್ತರ ಪ್ರದೇಶದ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿದೆ.

ಮಸೂರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಗಾಜಿಯಾಬಾದ್ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ವೈರಲ್‌ ಆಗಿದೆ. ಗಾಜಿಯಾಬಾದ್ ಪೊಲೀಸರ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಮೂಲಕ ಪ್ರತಿಕ್ರಿಯಿಸಿರುವ ಎಸ್‌ಪಿ ರಾಜಾ, “ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್‌ ಆಗುತ್ತಿದೆ. ಈ ವಿಡಿಯೊದಲ್ಲಿ ಯತಿ ನರಸಿಂಹಾನಂದ ಅವರು ಗೌರವಾನ್ವಿತ ಪ್ರಧಾನಿ ಮತ್ತು ಇತರ ಮಹಾನ್ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ದ್ವೇಷ ಭಾಷಣಗಳ ಮೂಲಕ ಕುಖ್ಯಾತರಾಗಿರುವ ಯತಿ ನರಸಿಂಗಾನಂದ ಅವರು ಇತ್ತೀಚೆಗೆ ಪೃಥ್ವಿರಾಜ್ ಚೌಹಾಣ್, ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾತ್ಮ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.

“ಪೃಥ್ವಿರಾಜ್ ಚೌಹಾಣ್ ಹಿಂದೂಗಳನ್ನು ಹೇಗೆ ನಡೆಸಿಕೊಂಡರು, ಮೋದಿಯವರೂ ಅದೇ ರೀತಿ ಮಾಡುತ್ತಿದ್ದಾರೆ. ಪೃಥ್ವಿರಾಜನು ಅನೇಕ ಹಿಂದೂಗಳನ್ನು ಕೊಂದನು ಮತ್ತು ಮಹಿಳೆಯರನ್ನು ಅಪಹರಿಸಿದನು. ವಾಸ್ತವವಾಗಿ, ಆತ ತಮ್ಮ ಸ್ವಂತ ಸಹೋದರನ ಮಗಳನ್ನು ಬಿಡಲಿಲ್ಲ” ಎಂದು ಯತಿ ನರಸಿಂಗಾನಂದ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಅನೇಕ ವೀರ ಹಿಂದೂ ರಾಜರ ಸಾವಿಗೆ ಪೃಥ್ವಿರಾಜ್ ಕಾರಣನಾಗಿದ್ದನು. ಆದರೆ ಮುಸ್ಲಿಂ ಆಡಳಿತಗಾರನನ್ನು ಎಂದಿಗೂ ಮುಟ್ಟಲಿಲ್ಲ. ಕೊನೆಯಲ್ಲಿ ಏನಾಯಿತು? ಆತನನ್ನು ಮುಸ್ಲಿಂ ದೊರೆ ಕೊಂದಿದ್ದಾನೆಯೇ ಹೊರತು ಹಿಂದೂ ಅಲ್ಲ” ಎಂದು ಆರೋಪಿಸಿದ್ದರು.

“ಪೃಥ್ವಿರಾಜ್ ಮಾಡಿರುವ ದುಷ್ಕೃತ್ಯಗಳು ಮಹಾತ್ಮ ಗಾಂಧಿ ಮತ್ತು ನರೇಂದ್ರ ಮೋದಿಯವರಿಗೆ ಹೋಲಿಕೆಯಾಗುತ್ತವೆ. ನಾವು ಮಾಡುವುದೆಂದರೆ ಅವರನ್ನು (ಮೋದಿ) ಹೊಗಳುವುದು. ಮೋದಿ ಮುಂದುವರಿದರೆ, ಅವರಿಗೆ ಶಾಂತಿಯಿಂದ ಅಳಲು ಸ್ಥಳವಿರುವುದಿಲ್ಲ” ಎಂದು ಟೀಕಿಸಿದ್ದರು.

ಪೃಥ್ವಿರಾಜ್ ಚೌಹಾಣ್ ಅವರ ಸೋದರಸಂಬಂಧಿ ಮತ್ತು ರಾಜಕುಮಾರಿ ಸಂಯೋಗಿತಾ ಅವರ ತಂದೆ ಜೈಚಂದ್ (ರಜಪೂತ ರಾಜ) ಬಗ್ಗೆ ಮಾತನಾಡಿದ್ದರು. ಜೈಚಂದ್‌ ಅವರನ್ನು ಮಹಾನ್ ನಾಯಕ ಎಂದು ಕರೆದ ನರಸಿಂಗಾನಂದ, “ಪೃಥ್ವಿರಾಜ್ ಚೌಹಾಣ್‌ಗಿಂತ ಅವರನ್ನು ತನ್ನ ಸ್ನೇಹಿತನನ್ನಾಗಿ ಆಯ್ಕೆ ಮಾಡಿಕೊಳ್ಳುತ್ತೇನೆ” ಎಂದಿದ್ದರು.

“ಘೋರಿ ರಾಜವಂಶದ ದೊರೆ ಮುಹಮ್ಮದ್ ಘೋರಿಗೆ ಜೈಚಂದ್ ಎಂದಿಗೂ ಸಹಾಯ ಮಾಡಲಿಲ್ಲ. ಅವರು ನಿಜವಾದ ರಜಪೂತರಾಗಿದ್ದರು” ಎಂದು ಶ್ಲಾಘಿಸಿದ್ದರು. ಹಿಂದೂಗಳು ದೀರ್ಘಕಾಲದಿಂದಲೂ ವಿವಿಧ ವಿದೇಶಿ ಆಡಳಿತಗಾರರಿಂದಾಗಿ ಗುಲಾಮರಾಗಿದ್ದಾರೆ ಎಂದು ಆರೋಪಿಸಿದ್ದರು.

“ಇದು ಗಾಂಧಿಯನ್ನು ಗೌರವಿಸುವ, ನಾಥೂರಾಂ ಗೋಡ್ಸೆ ಮತ್ತು ವೀರ್ ಸಾವರ್ಕರ್ ಅವರನ್ನು ನಿಂದಿಸುವ ದೇಶ. ದೇಶದ ಮನಸ್ಥಿತಿ ಬದಲಾಗುವವರೆಗೂ ಇದು ಮುಂದುವರಿಯುತ್ತದೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಕ್ಷತ್ರಿಯ ಪರಿಷತ್ ಖಂಡನೆ

ಯತಿ ನರಸಿಂಗಾನಂದ ಅವರ ಹೇಳಿಕೆಯನ್ನು ಕ್ಷತ್ರೀಯ ಪರಿಷತ್ ಖಂಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದೆ. “ಮಹಾನ್ ಕ್ಷತ್ರಿಯ ಚಕ್ರವರ್ತಿ ಪೃಥ್ವಿರಾಜ್ ಚೌಹಾಣ್ ಅವರ ವಿರುದ್ಧ ಹುಸಿ-ರಾಷ್ಟ್ರೀಯವಾದಿ ಯತಿ ನರಸಿಂಹಾನಂದ ಮಾಡಿರುವ ಭಯಾನಕ ಅಭಿಪ್ರಾಯಗಳು ಇತ್ತೀಚಿನ ದಿನಗಳಲ್ಲಿನ ವಿಭಜಿಸುವ ರಾಜಕೀಯದಲ್ಲೇ ಕೀಳುಮಟ್ಟದ್ದಾಗಿವೆ” ಎಂದು ಅಭಿಪ್ರಾಯಪಟ್ಟಿದೆ.

“ಯತಿ ನರಸಿಂಗಾನಂದ ಅವರ ದುರುದ್ದೇಶಪೂರಿತ ಅಭಿಪ್ರಾಯಗಳನ್ನು ಖಂಡಿಸುತ್ತೇವೆ. ಅಪರಾಧಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇವೆ” ಎಂದಿದೆ.

ಪ್ರಕರಣ ದಾಖಲಾದ ಬಳಿಕ ತೀವ್ರ ಹಿಂದುತ್ವವಾಗಿ ನರಸಿಂಗಾನಂದ ಯೂಟರ್ನ್ ಹೊಡೆದಿದ್ದಾರೆ. ಮೊಹಮ್ಮದ್ ಜುಬೇರ್‌ ಅವರನ್ನು ನಿಂದಿಸುವ ಮೂಲಕ ಕ್ಷಮಾಪಣಾ ವಿಡಿಯೊ ಬಿಡುಗಡೆ ಮಾಡಿರುವ ಯತಿ, “ನನ್ನ ವಿಡಿಯೊವನ್ನು ಜುಬೇರ್‌ ಎಡಿಟ್‌ ಮಾಡಿ ಹಂಚಿಕೊಂಡಿದ್ದಾರೆ. ಚೌಹಾಣ್ ಬಗ್ಗೆ ತಪ್ಪು ಇತಿಹಾಸವನ್ನು ಓದಿದ್ದೇನೆ ಎಂದು ಭಾವಿಸಿದ್ದೇನೆ. ರಜಪೂತ ಸಮುದಾಯದ ಕ್ಷಮೆಯಾಚಿಸುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಂದೆಡೆ ಜುಬೇರ್‌ ಅವರನ್ನು ನಿಂದಿಸುತ್ತಲೇ, ತಾನು ತಪ್ಪು ಓದಿಕೊಂಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಮೊದಲೇ ಊಹಿಸಿದ್ದ ಪತ್ರಕರ್ತ ಮೊಹಮ್ಮದ್ ಜುಬೇರ್‌, “ಎಫ್‌ಐಆರ್‌ ದಾಖಲಾಗಿರುವುದರಿಂದ, ಅವರ ವೀಡಿಯೊವನ್ನು ನಾನು ಎಡಿಟ್ ಮಾಡಿದ್ದೇನೆ ಎಂದು ಈಗ ಯತಿ ನರಸಿಂಗಾನಂದ ಹೇಳಿಕೊಳ್ಳಬಹುದು. ಸಂಪೂರ್ಣ ವೀಡಿಯೊ ಲಿಂಕ್‌ ಹಾಕಿದ್ದೇನೆ. 17:20 ನಿಮಿಷದಲ್ಲಿ ನೋಡಿರಿ” ಎಂದು ಟ್ವೀಟ್ ಮಾಡಿದ್ದರು.

ಯತಿ ನರಸಿಂಗಾನಂದ ಅವರು ನಾಲಿಗೆ ಹರಿಬಿಡುವುದು ಇದು ಮೊದಲೇನೂ ಅಲ್ಲ. ಮುಸ್ಲಿಮರ ನರಮೇಧ ನಡೆಸಬೇಕು ಎಂದು ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಭಾರತದ ಸಂವಿಧಾನ ಹಾಗೂ ಸುಪ್ರೀಂ ಕೋರ್ಟ್ ವಿರುದ್ಧ ಅತ್ಯಂತ ತುಚ್ಛವಾಗಿ ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...