Homeಮುಖಪುಟಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪೃಥ್ವಿರಾಜ್ ಚೌಹಾಣ್‌, ಮೋದಿ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಯತಿ ನರಸಿಂಗಾನಂದ ವಿರುದ್ಧ ಎಫ್‌ಐಆರ್‌

ಪ್ರಕರಣ ದಾಖಲಾದ ಬಳಿಕ ಜುಬೇರ್‌ ಅವರನ್ನು ನಿಂದಿಸಿ ವಿಡಿಯೊ ಬಿಡುಗಡೆ ಮಾಡಿರುವ ನರಸಿಂಗಾನಂದ, “ನಾನು ತಪ್ಪು ಇತಿಹಾಸ ಓದಿಕೊಂಡಿದ್ದೇನೆ” ಎಂದೂ ಹೇಳಿದ್ದಾರೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರನ್ನು ರಜಪೂತ ರಾಜ ಪೃಥ್ವಿರಾಜ್ ಚೌಹಾಣ್‌ಗೆ ಹೋಲಿಸಿ, ಅವಹೇಳನಕಾರಿಯಾಗಿ ಮಾತನಾಡಿದ್ದ ಉತ್ತರ ಪ್ರದೇಶದ ದಾಸ್ನಾ ದೇವಿ ದೇವಸ್ಥಾನದ ಪ್ರಧಾನ ಅರ್ಚಕ ಯತಿ ನರಸಿಂಗಾನಂದ ವಿರುದ್ಧ ಪ್ರಕರಣ ದಾಖಲಾಗಿದೆ.

ಮಸೂರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ ಎಂದು ಗಾಜಿಯಾಬಾದ್ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಈರಾಜ್ ರಾಜಾ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆಲ್ಟ್‌ನ್ಯೂಸ್‌ ಸಹಸಂಸ್ಥಾಪಕ, ಪತ್ರಕರ್ತ ಮೊಹಮ್ಮದ್ ಜುಬೇರ್‌ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ವೈರಲ್‌ ಆಗಿದೆ. ಗಾಜಿಯಾಬಾದ್ ಪೊಲೀಸರ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ ಮೂಲಕ ಪ್ರತಿಕ್ರಿಯಿಸಿರುವ ಎಸ್‌ಪಿ ರಾಜಾ, “ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೊ ವೈರಲ್‌ ಆಗುತ್ತಿದೆ. ಈ ವಿಡಿಯೊದಲ್ಲಿ ಯತಿ ನರಸಿಂಹಾನಂದ ಅವರು ಗೌರವಾನ್ವಿತ ಪ್ರಧಾನಿ ಮತ್ತು ಇತರ ಮಹಾನ್ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

ಐಪಿಸಿ ಸೆಕ್ಷನ್ 153 ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶಪೂರ್ವಕ ಕೃತ್ಯ) ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ದ್ವೇಷ ಭಾಷಣಗಳ ಮೂಲಕ ಕುಖ್ಯಾತರಾಗಿರುವ ಯತಿ ನರಸಿಂಗಾನಂದ ಅವರು ಇತ್ತೀಚೆಗೆ ಪೃಥ್ವಿರಾಜ್ ಚೌಹಾಣ್, ಪ್ರಧಾನಿ ನರೇಂದ್ರಮೋದಿ ಹಾಗೂ ಮಹಾತ್ಮ ಗಾಂಧಿಯವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು.

“ಪೃಥ್ವಿರಾಜ್ ಚೌಹಾಣ್ ಹಿಂದೂಗಳನ್ನು ಹೇಗೆ ನಡೆಸಿಕೊಂಡರು, ಮೋದಿಯವರೂ ಅದೇ ರೀತಿ ಮಾಡುತ್ತಿದ್ದಾರೆ. ಪೃಥ್ವಿರಾಜನು ಅನೇಕ ಹಿಂದೂಗಳನ್ನು ಕೊಂದನು ಮತ್ತು ಮಹಿಳೆಯರನ್ನು ಅಪಹರಿಸಿದನು. ವಾಸ್ತವವಾಗಿ, ಆತ ತಮ್ಮ ಸ್ವಂತ ಸಹೋದರನ ಮಗಳನ್ನು ಬಿಡಲಿಲ್ಲ” ಎಂದು ಯತಿ ನರಸಿಂಗಾನಂದ ಹೇಳಿರುವುದು ವಿಡಿಯೊದಲ್ಲಿ ದಾಖಲಾಗಿದೆ.

“ಅನೇಕ ವೀರ ಹಿಂದೂ ರಾಜರ ಸಾವಿಗೆ ಪೃಥ್ವಿರಾಜ್ ಕಾರಣನಾಗಿದ್ದನು. ಆದರೆ ಮುಸ್ಲಿಂ ಆಡಳಿತಗಾರನನ್ನು ಎಂದಿಗೂ ಮುಟ್ಟಲಿಲ್ಲ. ಕೊನೆಯಲ್ಲಿ ಏನಾಯಿತು? ಆತನನ್ನು ಮುಸ್ಲಿಂ ದೊರೆ ಕೊಂದಿದ್ದಾನೆಯೇ ಹೊರತು ಹಿಂದೂ ಅಲ್ಲ” ಎಂದು ಆರೋಪಿಸಿದ್ದರು.

“ಪೃಥ್ವಿರಾಜ್ ಮಾಡಿರುವ ದುಷ್ಕೃತ್ಯಗಳು ಮಹಾತ್ಮ ಗಾಂಧಿ ಮತ್ತು ನರೇಂದ್ರ ಮೋದಿಯವರಿಗೆ ಹೋಲಿಕೆಯಾಗುತ್ತವೆ. ನಾವು ಮಾಡುವುದೆಂದರೆ ಅವರನ್ನು (ಮೋದಿ) ಹೊಗಳುವುದು. ಮೋದಿ ಮುಂದುವರಿದರೆ, ಅವರಿಗೆ ಶಾಂತಿಯಿಂದ ಅಳಲು ಸ್ಥಳವಿರುವುದಿಲ್ಲ” ಎಂದು ಟೀಕಿಸಿದ್ದರು.

ಪೃಥ್ವಿರಾಜ್ ಚೌಹಾಣ್ ಅವರ ಸೋದರಸಂಬಂಧಿ ಮತ್ತು ರಾಜಕುಮಾರಿ ಸಂಯೋಗಿತಾ ಅವರ ತಂದೆ ಜೈಚಂದ್ (ರಜಪೂತ ರಾಜ) ಬಗ್ಗೆ ಮಾತನಾಡಿದ್ದರು. ಜೈಚಂದ್‌ ಅವರನ್ನು ಮಹಾನ್ ನಾಯಕ ಎಂದು ಕರೆದ ನರಸಿಂಗಾನಂದ, “ಪೃಥ್ವಿರಾಜ್ ಚೌಹಾಣ್‌ಗಿಂತ ಅವರನ್ನು ತನ್ನ ಸ್ನೇಹಿತನನ್ನಾಗಿ ಆಯ್ಕೆ ಮಾಡಿಕೊಳ್ಳುತ್ತೇನೆ” ಎಂದಿದ್ದರು.

“ಘೋರಿ ರಾಜವಂಶದ ದೊರೆ ಮುಹಮ್ಮದ್ ಘೋರಿಗೆ ಜೈಚಂದ್ ಎಂದಿಗೂ ಸಹಾಯ ಮಾಡಲಿಲ್ಲ. ಅವರು ನಿಜವಾದ ರಜಪೂತರಾಗಿದ್ದರು” ಎಂದು ಶ್ಲಾಘಿಸಿದ್ದರು. ಹಿಂದೂಗಳು ದೀರ್ಘಕಾಲದಿಂದಲೂ ವಿವಿಧ ವಿದೇಶಿ ಆಡಳಿತಗಾರರಿಂದಾಗಿ ಗುಲಾಮರಾಗಿದ್ದಾರೆ ಎಂದು ಆರೋಪಿಸಿದ್ದರು.

“ಇದು ಗಾಂಧಿಯನ್ನು ಗೌರವಿಸುವ, ನಾಥೂರಾಂ ಗೋಡ್ಸೆ ಮತ್ತು ವೀರ್ ಸಾವರ್ಕರ್ ಅವರನ್ನು ನಿಂದಿಸುವ ದೇಶ. ದೇಶದ ಮನಸ್ಥಿತಿ ಬದಲಾಗುವವರೆಗೂ ಇದು ಮುಂದುವರಿಯುತ್ತದೆ” ಎಂದು ಹೇಳಿಕೆ ನೀಡಿದ್ದರು.

ಇದನ್ನೂ ಓದಿರಿ: ಹರ್‌‌ ಘರ್‌ ತಿರಂಗ ಬಹಿಷ್ಕರಿಸಿ, ಕೇಸರಿ ಧ್ವಜ ಹಾರಿಸಿ: ಯತಿ ನರಸಿಂಗಾನಂದ

ಕ್ಷತ್ರಿಯ ಪರಿಷತ್ ಖಂಡನೆ

ಯತಿ ನರಸಿಂಗಾನಂದ ಅವರ ಹೇಳಿಕೆಯನ್ನು ಕ್ಷತ್ರೀಯ ಪರಿಷತ್ ಖಂಡಿಸಿದ್ದು, ಕ್ರಮಕ್ಕೆ ಆಗ್ರಹಿಸಿದೆ. “ಮಹಾನ್ ಕ್ಷತ್ರಿಯ ಚಕ್ರವರ್ತಿ ಪೃಥ್ವಿರಾಜ್ ಚೌಹಾಣ್ ಅವರ ವಿರುದ್ಧ ಹುಸಿ-ರಾಷ್ಟ್ರೀಯವಾದಿ ಯತಿ ನರಸಿಂಹಾನಂದ ಮಾಡಿರುವ ಭಯಾನಕ ಅಭಿಪ್ರಾಯಗಳು ಇತ್ತೀಚಿನ ದಿನಗಳಲ್ಲಿನ ವಿಭಜಿಸುವ ರಾಜಕೀಯದಲ್ಲೇ ಕೀಳುಮಟ್ಟದ್ದಾಗಿವೆ” ಎಂದು ಅಭಿಪ್ರಾಯಪಟ್ಟಿದೆ.

“ಯತಿ ನರಸಿಂಗಾನಂದ ಅವರ ದುರುದ್ದೇಶಪೂರಿತ ಅಭಿಪ್ರಾಯಗಳನ್ನು ಖಂಡಿಸುತ್ತೇವೆ. ಅಪರಾಧಿಯ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಒತ್ತಾಯಿಸುತ್ತೇವೆ” ಎಂದಿದೆ.

ಪ್ರಕರಣ ದಾಖಲಾದ ಬಳಿಕ ತೀವ್ರ ಹಿಂದುತ್ವವಾಗಿ ನರಸಿಂಗಾನಂದ ಯೂಟರ್ನ್ ಹೊಡೆದಿದ್ದಾರೆ. ಮೊಹಮ್ಮದ್ ಜುಬೇರ್‌ ಅವರನ್ನು ನಿಂದಿಸುವ ಮೂಲಕ ಕ್ಷಮಾಪಣಾ ವಿಡಿಯೊ ಬಿಡುಗಡೆ ಮಾಡಿರುವ ಯತಿ, “ನನ್ನ ವಿಡಿಯೊವನ್ನು ಜುಬೇರ್‌ ಎಡಿಟ್‌ ಮಾಡಿ ಹಂಚಿಕೊಂಡಿದ್ದಾರೆ. ಚೌಹಾಣ್ ಬಗ್ಗೆ ತಪ್ಪು ಇತಿಹಾಸವನ್ನು ಓದಿದ್ದೇನೆ ಎಂದು ಭಾವಿಸಿದ್ದೇನೆ. ರಜಪೂತ ಸಮುದಾಯದ ಕ್ಷಮೆಯಾಚಿಸುತ್ತೇನೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಒಂದೆಡೆ ಜುಬೇರ್‌ ಅವರನ್ನು ನಿಂದಿಸುತ್ತಲೇ, ತಾನು ತಪ್ಪು ಓದಿಕೊಂಡಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನು ಮೊದಲೇ ಊಹಿಸಿದ್ದ ಪತ್ರಕರ್ತ ಮೊಹಮ್ಮದ್ ಜುಬೇರ್‌, “ಎಫ್‌ಐಆರ್‌ ದಾಖಲಾಗಿರುವುದರಿಂದ, ಅವರ ವೀಡಿಯೊವನ್ನು ನಾನು ಎಡಿಟ್ ಮಾಡಿದ್ದೇನೆ ಎಂದು ಈಗ ಯತಿ ನರಸಿಂಗಾನಂದ ಹೇಳಿಕೊಳ್ಳಬಹುದು. ಸಂಪೂರ್ಣ ವೀಡಿಯೊ ಲಿಂಕ್‌ ಹಾಕಿದ್ದೇನೆ. 17:20 ನಿಮಿಷದಲ್ಲಿ ನೋಡಿರಿ” ಎಂದು ಟ್ವೀಟ್ ಮಾಡಿದ್ದರು.

ಯತಿ ನರಸಿಂಗಾನಂದ ಅವರು ನಾಲಿಗೆ ಹರಿಬಿಡುವುದು ಇದು ಮೊದಲೇನೂ ಅಲ್ಲ. ಮುಸ್ಲಿಮರ ನರಮೇಧ ನಡೆಸಬೇಕು ಎಂದು ಹೇಳಿಕೆ ನೀಡಿ ಬಂಧನಕ್ಕೆ ಒಳಗಾಗಿದ್ದರು. ಭಾರತದ ಸಂವಿಧಾನ ಹಾಗೂ ಸುಪ್ರೀಂ ಕೋರ್ಟ್ ವಿರುದ್ಧ ಅತ್ಯಂತ ತುಚ್ಛವಾಗಿ ಮಾತನಾಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...