Homeಮುಖಪುಟವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದು; ದೇಶದ್ರೋಹ ಕಾನೂನಿನ ಮೂಲಭೂತ ನಿಯಮಗಳನ್ನು ನೆನಪಿಸಿದ ಕೋರ್ಟ್

ವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದು; ದೇಶದ್ರೋಹ ಕಾನೂನಿನ ಮೂಲಭೂತ ನಿಯಮಗಳನ್ನು ನೆನಪಿಸಿದ ಕೋರ್ಟ್

- Advertisement -
- Advertisement -

ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಪ್ರಕರಣದ ಎಫ್‌ಐಆರ್‌ಅನ್ನು ಸುಪ್ರೀಂ ಕೋರ್ಟ್ ನ್ಯಾಯಬದ್ಧವಾಗಿ ರದ್ದುಪಡಿಸಿದೆ. ಎಫ್‌ಐಆರ್ ಹಲವಾರು ಸುಳ್ಳು ಆರೋಪಗಳನ್ನು ಮಾಡಿದೆ ಎಂದು ನ್ಯಾಯಾಧೀಶರು ಕಂಡುಕೊಂಡಿದ್ದಾರೆ ಎಂದು ತೀರ್ಪು ಸೂಚಿಸುತ್ತದೆ. ಭಯೋತ್ಪಾದನಾ ಕೃತ್ಯಗಳ ಮೂಲಕ ಪ್ರಧಾನಮಂತ್ರಿ ಮತಗಳನ್ನು ಗಳಿಸಿದ್ದಾರೆ ಎಂದು ಹೇಳುವ ಮೂಲಕ ವಿನೋದ್ ದುವಾ ಸುಳ್ಳು ಮತ್ತು ದುರುದ್ದೇಶಪೂರಿತ ಸುದ್ದಿಗಳನ್ನು ಹರಡಿದ್ದಾರೆ, ಇದು ನೇರವಾಗಿ ಹಿಂಸೆಯನ್ನು ಪ್ರಚೋದಿಸುತ್ತದೆ ಎಂಬ ಪ್ರಮುಖ ಆರೋಪವನ್ನು ಪರಿಶೀಲಿಸಿದ ನ್ಯಾಯಾಲಯ, ತನ್ನ ಮುಂದೆ ಇರುವ ಸಾಕ್ಷ್ಯಗಳ ಪ್ರಕಾರ, ಅರ್ಜಿದಾರರ ಹೇಳಿಕೆ ಅಂತಹ ಯಾವುದೇ ಪ್ರಚೋದನೆಯನ್ನು ಮಾಡಿಲ್ಲ ಎಂದು ತೀರ್ಮಾನಿಸಿತು.

ವಿನೋದ್ ದುವಾ ವಿರುದ್ಧದ ಇನ್ನೊಂದು ಆರೋಪವೆಂದರೆ, “ನಮ್ಮ ದೊಡ್ಡ ವೈಫಲ್ಯವೆಂದರೆ (ಕೊರೊನಾ) ಟೆಸ್ಟಿಂಗ್ ನಡೆಸಲು ನಮಗೆ ಸಾಕಷ್ಟು ಸೌಲಭ್ಯಗಳಿಲ್ಲ ಮತ್ತು ಸರಬರಾಜು ಸರಪಳಿಗಳನ್ನು ಮುಚ್ಚಿದಾಗ ಹಾಗೂ ಅಂಗಡಿಗಳನ್ನು ಮುಚ್ಚಿದಾಗ, ಕೆಲವು ಜನರು (ನಮ್ಮ ದೇಶದಲ್ಲಿ ಈವರೆಗೂ ಸಂಭವಿಸದ) ಆಹಾರ ಗಲಭೆಗಳು ಸಂಭವಿಸಬಹುದು ಎಂದು ಗಾಬರಿಗೊಂಡಿದ್ದರು” ಎಂದು ದುವಾ ಹೇಳಿದ್ದರೆಂಬುದು.

ಕೇದಾರನಾಥ್ v/s ಯೂನಿಯನ್ ಆಫ್ ಇಂಡಿಯಾ ಪ್ರಕರಣದ ಐದು ನ್ಯಾಯಾಧೀಶರ ನ್ಯಾಯಪೀಠದ ತೀರ್ಪಿನ ಪ್ರಕಾರ ಇಂತಹ ಹೇಳಿಕೆಗಳು ದೇಶದ್ರೋಹ ಪ್ರಕರಣಕ್ಕೆ ಅರ್ಹವಾದವಲ್ಲ ಎಂದು ಸುಪ್ರೀಂ ಕೋರ್ಟ್ ಸರಿಯಾಗಿ ತೀರ್ಮಾನಿಸಿದೆ. ಆದರೆ ಅದು (ದುವಾ ಅಭಿಪ್ರಾಯ) ಸಾಂವಿಧಾನಿಕ ರಕ್ಷಣೆಯನ್ನು ಹೊಂದಿದ ಟೀಕೆ/ವಿಮರ್ಶೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನ್ಯಾಯಾಲಯದ ಸಾರಾಂಶದಲ್ಲಿ, ಕೇದಾರನಾಥ ಪ್ರಕರಣದ ಮೂರು ಪ್ರಮುಖ ಅಂಶಗಳನ್ನು ಮುಂದಿಟ್ಟಿತ್ತು:

ಮೊದಲನೆಯದಾಗಿ, ಸೆಕ್ಷನ್ 124-ಎನಲ್ಲಿ ವ್ಯಾಖ್ಯಾನಿಸಿರುವಂತೆ, ಸರ್ಕಾರ ಮತ್ತು ‘ಕಾನೂನಿನಿಂದ ಸ್ಥಾಪಿತವಾದ ಸರ್ಕಾರ’ – ಇವೆರಡರ ನಡುವೆ ವ್ಯತ್ಯಾಸವಿದೆ. ಆಡಳಿತವನ್ನು ನಿರ್ವಹಿಸುವಲ್ಲಿ ನಿರತರಾಗಿರುವ ವ್ಯಕ್ತಿಗಳ ವಿರುದ್ಧ ಅಸಮಾಧಾನವನ್ನು ಉತ್ತೇಜಿಸಿದರೆ ಅದು ದೇಶದ್ರೋಹದ ಆರೋಪದಡಿ ಬರುವುದಿಲ್ಲ. ಅದು ಕಾನೂನಿನಿಂದ ಸ್ಥಾಪಿತವಾದ ಸರ್ಕಾರವಾದ ಪ್ರಭುತ್ವದ ಗೋಚರ ಸಂಕೇತಗಳನ್ನು ಅಲ್ಲಗೆಳೆದು ಅವಮಾನಿಸಿದ್ದರೆ ಮಾತ್ರ…, ಸರಳ ಪದಗಳಲ್ಲಿ ಹೇಳುವುದಾದರೆ, ಮೋದಿಯವರ ವಿರುದ್ಧದ ಟೀಕೆ ‘ಕಾನೂನಿನಿಂದ ಸ್ಥಾಪಿತವಾದ ಸರ್ಕಾರ’ದ ವಿರುದ್ಧದ ಟೀಕೆಯಲ್ಲ. ಆದ್ದರಿಂದ ಸೆಕ್ಷನ್ 124-ಎ ಇಲ್ಲಿ ಅನ್ವಯವಾಗುವುದಿಲ್ಲ.

ಎರಡನೆಯದಾಗಿ, ಸರ್ಕಾರದ ವಿರುದ್ಧದ ಅಸಮಾಧಾನ ಅಥವಾ ಸರ್ಕಾರವನ್ನು ನಿಂದಿಸಿವುದು ಅಥವಾ ದ್ವೇಷಿಸುವುದು ಅಂದರೆ, ‘ನಿಜವಾದ ಹಿಂಸಾಚಾರ ಅಥವಾ ಹಿಂಸಾಚಾರಕ್ಕೆ ನೀಡುವ ಪ್ರಚೋದನೆಯಿಂದ ಸಾರ್ವಜನಿಕ ಅರಾಜಕತೆಗೆ ಕಾರಣವಾಗುವ ಪ್ರವೃತ್ತಿಯನ್ನು ಆ ಹೇಳಿಕೆ ಹೊಂದಿರಬೇಕು.’ ನ್ಯಾಯಾಲಯವು ಸಂಕ್ಷಿಪ್ತವಾಗಿ ಗಮನಿಸಿದಂತೆ, ಹಿಂಸೆಗೆ ಪ್ರಚೋದನೆ ನೀಡುವ ಅಂಶವನ್ನು ಬಿಡಿ, ವಿನೋದ್ ದುವಾ ಅವರ ಕಾಮೆಂಟ್‌ಗಳು ಸಾರ್ವಜನಿಕರ ಮೇಲೆ ಪರಿಣಾಮ ಬೀರಿವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ. ವಿನೋದ್ ದುವಾ ಅವರ ಪ್ರತಿಕ್ರಿಯೆಗಳನ್ನು ಆಧರಿಸಿ ವಲಸೆ ಕಾರ್ಮಿಕರು ಚಲಿಸಲು ಪ್ರಾರಂಭಿಸಿದರು ಎಂಬ ಆರೋಪ ಕೂಡ ವಾಸ್ತವದಲ್ಲಿ ತಪ್ಪಾಗಿದೆ.

ಮೂರನೆಯದಾಗಿ, ಹಿಂಸಾಚಾರದಿಂದ ಸಾರ್ವಜನಿಕ ಅರಾಜಕತೆಯನ್ನು ಉಂಟುಮಾಡುವ ಭಾವನೆಗಳನ್ನು ಉತ್ತೇಜಿಸದೆ, ಸರ್ಕಾರದ ಕ್ರಮಗಳ ಬಗ್ಗೆ ಬಲವಾದ ಅಸಮ್ಮತಿಯನ್ನು ವ್ಯಕ್ತಪಡಿಸುವ ಕಾಮೆಂಟ್‌ಗಳು ದಂಡ ಪ್ರಕ್ರಿಯೆ ವ್ಯಾಪ್ತಿಗೆ ಬರುವುದಿಲ್ಲ. ನ್ಯಾಯಾಲಯ ತೀರ್ಮಾನಿಸಿದಂತೆ, ದುವಾ ಅವರ ಟೀಕೆಗಳು ಸರ್ಕಾರ ಮತ್ತು ಅದರ ಇತರ ಅಂಗ ಸಂಸ್ಥೆಗಳ ಕ್ರಮಗಳ ಅಸಮ್ಮತಿಯ ಅಭಿವ್ಯಕ್ತಿ. ಅವರ ಹೇಳಿಕೆಗಳು ಇದಕ್ಕಿಂತ ಹೆಚ್ಚೇನೂ ಅಲ್ಲ. ಅಂತಹ ಅಭಿವ್ಯಕ್ತಿಗಳ ಏಕೈಕ ಉದ್ದೇಶವೆಂದರೆ, ಯಾತನೆ ಮತ್ತು ನೋವಿನಿಂದ ಕೂಡಿದ ‘ಪ್ರಸಕ್ತ ಪರಿಸ್ಥಿತಿಯನ್ನು’ ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸಬಹುದು ಎಂಬುದಾಗಿತ್ತು.

ಕೇದಾರನಾಥ ಪ್ರಕರಣದ ತೀರ್ಪಿನ ಚೌಕಟ್ಟಿನೊಳಗೆ ವಿನೋದ್ ದುವಾ ಅವರ ಹೇಳಿಕೆಗಳನ್ನು ವಿಶ್ಲೇಷಿಸಿದ ನಂತರ ನ್ಯಾಯಾಲಯವು, ಈ ವಿಷಯದಲ್ಲಿ, ಯಾವುದೇ ಕಾನೂನು ಕ್ರಮ ಜರುಗಿಸುವುದು, ಸಂವಿಧಾನದ 19 (1) (ಎ) ಕಲಂ ಅಡಿಯಲ್ಲಿ ಖಾತರಿಪಡಿಸಿದ ಅರ್ಜಿದಾರರ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ತೀರ್ಮಾನಿಸಿತು.

ದೇಶದ್ರೋಹ ಕಾನೂನಿನ ಮಿತಿಗಳನ್ನು ಎತ್ತಿ ತೋರಿಸುವವ ಸ್ವಾಗತಾರ್ಹ ಜ್ಞಾಪನೆಯಾಗಿ ಈ ತೀರ್ಪು ಕಾಣಿಸುತ್ತದೆ. ವಿಶೇಷವಾಗಿ ಸರ್ಕಾರವನ್ನು ಮುಕ್ತವಾಗಿ ಟೀಕಿಸುವ ಪತ್ರಕರ್ತರ ಹಕ್ಕಿಗೆ ಬಂದಾಗ, ನ್ಯಾಯಾಲಯವು ಹೀಗೆ ಹೇಳಿದೆ: ’ಕೇದಾರನಾಥ್ ಪ್ರಕರಣದ ತೀರ್ಪಿನಲ್ಲಿ ಉಲ್ಲೇಖಿಸಿದಂತೆ, ಪ್ರತಿಯೊಬ್ಬ ಪತ್ರಕರ್ತನು ರಕ್ಷಣೆಗೆ ಅರ್ಹನಾಗಿರುತ್ತಾನೆ ಎಂಬುದು ಸ್ಪಷ್ಟವಾಗಿರಬೇಕು. ಕೇದಾರ್ ನಾಥ್ ಸಿಂಗ್ ಪ್ರಕರಣದ ತೀರ್ಪಿನ ಪ್ರಕಾರ, ಐಪಿಸಿ 3ರ ಸೆಕ್ಷನ್ 124 ಎ ಮತ್ತು 505ರ ಅಡಿಯಲ್ಲಿ ನಡೆಯುವ ಪ್ರತಿಯೊಂದು ಕಾನೂನು ಕ್ರಮಗಳು, ಆ ಸೆಕ್ಷನ್‌ಗಳಲ್ಲಿ ವಿವರಿಸಿದ ವಿಭಾಗಗಳ ವ್ಯಾಪ್ತಿ ಮತ್ತು ಮಹತ್ವಾಕಾಂಕ್ಷೆಗೆ ಕಟ್ಟುನಿಟ್ಟಾಗಿರಬೇಕು ಮತ್ತು ಕೇದಾರ್ ನಾಥ್ ಸಿಂಗ್ ಪ್ರಕರಣದ ಕಾನೂನಿನೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗಬೇಕು’ ಎಂದು ನ್ಯಾಯಾಲಯ ತನ್ನ ಅಭಿಮತ ವ್ಯಕ್ತಪಡಿಸಿದೆ.

ವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದುಪಡಿಸಿದ ತೀರ್ಪು, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ಹಾಗೂ ಹಿಂಸಾಚಾರದ ಪ್ರಚೋದನೆ ಇಲ್ಲದಿರುವವರೆಗೂ ಪ್ರಭುತ್ವವನ್ನು ಮುಕ್ತವಾಗಿ ಟೀಕಿಸುವ ಪತ್ರಕರ್ತರ ಸ್ವಾತಂತ್ರ್ಯವನ್ನು ದೃಢವಾಗಿ ಅನುಮೋದಿಸುತ್ತದೆ. ಆದರೂ, ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗ ಮಾಡಿಕೊಳ್ಳುವ ಮೂಲಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುವವರಿಗೆ ಯಾವುದೇ ಎಚ್ಚರಿಕೆ ಸಂದೇಶವನ್ನು ಕಳುಹಿಸಲು ನ್ಯಾಯಾಲಯ ವಿಫಲವಾಗಿದೆ.

ಸುಪ್ರೀಂಕೋರ್ಟ್ ಗಮನಿಸಿದಂತೆ, ಹಿಮಾಚಲ ಪ್ರದೇಶದ ಸ್ಥಳೀಯ ಬಿಜೆಪಿ ಮುಖಂಡರು ಯಾವುದೇ ಆಧಾರವಿಲ್ಲದೆ ಎಫ್‌ಐಆರ್ ದಾಖಲಿಸಿದ್ದಾರೆ. ಈ ದುರುದ್ದೇಶಪೂರಿತ ತಪ್ಪು ಪ್ರತೀಕಾರದ ಕ್ರಮದ ಹೊರತಾಗಿಯೂ, ದೂರುದಾರರ ವಿರುದ್ಧ ಯಾವುದೇ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಲಾಗಿಲ್ಲ. ಎಫ್‌ಐಆರ್ ದಾಖಲಿಸಿದ ಬಿಜೆಪಿ ನಾಯಕನ ಕ್ರಮಗಳು, ಸರ್ಕಾರವನ್ನು ಟೀಕಿಸಲು ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುವ ಪತ್ರಕರ್ತರಿಗೆ ಕಿರುಕುಳ ನೀಡುವ ಏಕೈಕ ಉದ್ದೇಶವನ್ನು ಹೊಂದಿದ್ದು, ಆ ಕಾರಣಕ್ಕೆ ಆ ಬಿಜೆಪಿ ನಾಯಕನ ವಿರುದ್ಧವೇ ‘ದುರುದ್ದೇಶಪೂರಿತ ಕಾನೂನು ಕ್ರಮ’ ಪ್ರಕರಣವನ್ನು ದಾಖಲಿಸಲು ಅರ್ಹವಾಗಿರುತ್ತದೆ.

ವಿನೋದ್ ದುವಾ ಅವರ ಎರಡನೆಯ ಅರ್ಜಿ ಏನಾಗಿತ್ತೆಂದರೆ, ರಾಜ್ಯ ಸರ್ಕಾರವು ರಚಿಸಿದ ಸಮಿತಿಯಿಂದ ಒಪ್ಪಿಗೆ ಪಡೆಯದ ಹೊರತು, ಕನಿಷ್ಠ ಹತ್ತು ವರ್ಷಗಳ ಕಾಲ ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ನೋಂದಾಯಿಸಬಾರದು ಎಂಬುದು. ಇದನ್ನು ಮಾಡುವುದರಿಂದ, ಶಾಸಕಾಂಗಕ್ಕೆ ಮೀಸಲಾಗಿರುವ ಕ್ಷೇತ್ರವನ್ನು ಅತಿಕ್ರಮಿಸುದಂತಾಗುತ್ತದೆ ಎಂಬ ಕಾರಣ ನೀಡಿ ಈ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಹತ್ತು ವರ್ಷಗಳ ಸೇವೆಯ ಪತ್ರಕರ್ತರಿಗೆ ಮಾತ್ರ ರಕ್ಷಣೆ ಎಂಬುದು ಅಸ್ಪಷ್ಟತೆಯಿಂದ ಮತ್ತು ಅತಾರ್ಕಿಕತೆಯಿಂದ ಕೂಡಿದೆ. ಆದರೆ, ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾದರೆ ಐಪಿಸಿಯ ಸೆಕ್ಷನ್ 124-ಎ ಬಳಕೆಯಲ್ಲಿ ಪ್ರಭುತ್ವದ ಉತ್ಸಾಹವನ್ನು ತಡೆಯುವುದು ಅತ್ಯಗತ್ಯ.

ಐಪಿಸಿಯ ಸೆಕ್ಷನ್ 124-ಎ ವಿರುದ್ಧದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದ್ದೇ ಸ್ವಾಗತಾರ್ಹ ಬೆಳವಣಿಗೆ. ಪ್ರಭುತ್ವ ಈ ಕಾನೂನನ್ನು ಬೇಕಾಬಿಟ್ಟಿ ದುರ್ಬಳಿಕೆ ಮಾಡಿಕೊಳ್ಳುತ್ತಿರುವ ಸಂಗತಿ ತಿಳಿಸುವುದೇನೆಂದರೆ ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಈ ಕಾನೂನಿಗೆ ಜಾಗವಿರಬಾರದು ಮತ್ತು ಸಾಂವಿಧಾನಿಕ ಕಾನೂನು ಪುಸ್ತಕಗಳಿಂದ ಈ ಕಾನೂನನ್ನು ಹೊಡೆದುಹಾಕಬೇಕು.

– ಕನ್ನಡಕ್ಕೆ: ಪಿ ಮಲ್ಲನಗೌಡರ್

ಅರವಿಂದ್ ನಾರಾಯಣ್

ಅರವಿಂದ್ ನಾರಾಯಣ್

ಸಂವಿಧಾನ ತಜ್ಞರು, ಆಲ್ಟರ್‌ನೇಟಿವ್‌ ಲಾ ಫೋರಂನ ಸ್ಥಾಪಕ ಸದಸ್ಯರು. ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಕಾನೂನು ಹೋರಾಟಗಳ ಹಿಂದಿರುವ ವ್ಯಕ್ತಿ. ಲೈಂಗಿಕ ಅಲ್ಪಸಂಖ್ಯಾತರು ಹಾಗೂ ಕೋಮು ಸಂಘರ್ಷಗಳ ವಿಷಯಗಳಿಗೆ ಸಂಬಂಧಿಸಿದಂತೆ ಕಾನೂನು ನೆರವು ಒದಗಿಸುತ್ತಾ ಬಂದಿದ್ದಾರೆ.

ಈ ವಿಷಯವಾಗಿ ಇಂದು ಸಂಜೆ ನಡೆಯಲಿರುವ ಜೂಮ್ ಚರ್ಚೆಯಲ್ಲಿ ಭಾಗಿಯಾಗಿ. ಹೆಚ್ಚಿನ ವಿವರಗಳು ಕೆಳಗಿವೆ.


ಇದನ್ನೂ ಓದಿ: ಹೈಕಮಾಂಡ್ ಭಿನ್ನಮತದ ಇತಿಹಾಸ ಮತ್ತು ವರ್ತಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...