Homeಮುಖಪುಟವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದು; ದೇಶದ್ರೋಹ ಕಾನೂನಿನ ಮೂಲಭೂತ ನಿಯಮಗಳನ್ನು ನೆನಪಿಸಿದ ಕೋರ್ಟ್

ವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದು; ದೇಶದ್ರೋಹ ಕಾನೂನಿನ ಮೂಲಭೂತ ನಿಯಮಗಳನ್ನು ನೆನಪಿಸಿದ ಕೋರ್ಟ್

- Advertisement -
- Advertisement -

ಪತ್ರಕರ್ತ ವಿನೋದ್ ದುವಾ ವಿರುದ್ಧ ದಾಖಲಿಸಲಾಗಿದ್ದ ದೇಶದ್ರೋಹ ಪ್ರಕರಣದ ಎಫ್‌ಐಆರ್‌ಅನ್ನು ಸುಪ್ರೀಂ ಕೋರ್ಟ್ ನ್ಯಾಯಬದ್ಧವಾಗಿ ರದ್ದುಪಡಿಸಿದೆ. ಎಫ್‌ಐಆರ್ ಹಲವಾರು ಸುಳ್ಳು ಆರೋಪಗಳನ್ನು ಮಾಡಿದೆ ಎಂದು ನ್ಯಾಯಾಧೀಶರು ಕಂಡುಕೊಂಡಿದ್ದಾರೆ ಎಂದು ತೀರ್ಪು ಸೂಚಿಸುತ್ತದೆ. ಭಯೋತ್ಪಾದನಾ ಕೃತ್ಯಗಳ ಮೂಲಕ ಪ್ರಧಾನಮಂತ್ರಿ ಮತಗಳನ್ನು ಗಳಿಸಿದ್ದಾರೆ ಎಂದು ಹೇಳುವ ಮೂಲಕ ವಿನೋದ್ ದುವಾ ಸುಳ್ಳು ಮತ್ತು ದುರುದ್ದೇಶಪೂರಿತ ಸುದ್ದಿಗಳನ್ನು ಹರಡಿದ್ದಾರೆ, ಇದು ನೇರವಾಗಿ ಹಿಂಸೆಯನ್ನು ಪ್ರಚೋದಿಸುತ್ತದೆ ಎಂಬ ಪ್ರಮುಖ ಆರೋಪವನ್ನು ಪರಿಶೀಲಿಸಿದ ನ್ಯಾಯಾಲಯ, ತನ್ನ ಮುಂದೆ ಇರುವ ಸಾಕ್ಷ್ಯಗಳ ಪ್ರಕಾರ, ಅರ್ಜಿದಾರರ ಹೇಳಿಕೆ ಅಂತಹ ಯಾವುದೇ ಪ್ರಚೋದನೆಯನ್ನು ಮಾಡಿಲ್ಲ ಎಂದು ತೀರ್ಮಾನಿಸಿತು.

ವಿನೋದ್ ದುವಾ ವಿರುದ್ಧದ ಇನ್ನೊಂದು ಆರೋಪವೆಂದರೆ, “ನಮ್ಮ ದೊಡ್ಡ ವೈಫಲ್ಯವೆಂದರೆ (ಕೊರೊನಾ) ಟೆಸ್ಟಿಂಗ್ ನಡೆಸಲು ನಮಗೆ ಸಾಕಷ್ಟು ಸೌಲಭ್ಯಗಳಿಲ್ಲ ಮತ್ತು ಸರಬರಾಜು ಸರಪಳಿಗಳನ್ನು ಮುಚ್ಚಿದಾಗ ಹಾಗೂ ಅಂಗಡಿಗಳನ್ನು ಮುಚ್ಚಿದಾಗ, ಕೆಲವು ಜನರು (ನಮ್ಮ ದೇಶದಲ್ಲಿ ಈವರೆಗೂ ಸಂಭವಿಸದ) ಆಹಾರ ಗಲಭೆಗಳು ಸಂಭವಿಸಬಹುದು ಎಂದು ಗಾಬರಿಗೊಂಡಿದ್ದರು” ಎಂದು ದುವಾ ಹೇಳಿದ್ದರೆಂಬುದು.

ಕೇದಾರನಾಥ್ v/s ಯೂನಿಯನ್ ಆಫ್ ಇಂಡಿಯಾ ಪ್ರಕರಣದ ಐದು ನ್ಯಾಯಾಧೀಶರ ನ್ಯಾಯಪೀಠದ ತೀರ್ಪಿನ ಪ್ರಕಾರ ಇಂತಹ ಹೇಳಿಕೆಗಳು ದೇಶದ್ರೋಹ ಪ್ರಕರಣಕ್ಕೆ ಅರ್ಹವಾದವಲ್ಲ ಎಂದು ಸುಪ್ರೀಂ ಕೋರ್ಟ್ ಸರಿಯಾಗಿ ತೀರ್ಮಾನಿಸಿದೆ. ಆದರೆ ಅದು (ದುವಾ ಅಭಿಪ್ರಾಯ) ಸಾಂವಿಧಾನಿಕ ರಕ್ಷಣೆಯನ್ನು ಹೊಂದಿದ ಟೀಕೆ/ವಿಮರ್ಶೆಯಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ನ್ಯಾಯಾಲಯದ ಸಾರಾಂಶದಲ್ಲಿ, ಕೇದಾರನಾಥ ಪ್ರಕರಣದ ಮೂರು ಪ್ರಮುಖ ಅಂಶಗಳನ್ನು ಮುಂದಿಟ್ಟಿತ್ತು:

ಮೊದಲನೆಯದಾಗಿ, ಸೆಕ್ಷನ್ 124-ಎನಲ್ಲಿ ವ್ಯಾಖ್ಯಾನಿಸಿರುವಂತೆ, ಸರ್ಕಾರ ಮತ್ತು ‘ಕಾನೂನಿನಿಂದ ಸ್ಥಾಪಿತವಾದ ಸರ್ಕಾರ’ – ಇವೆರಡರ ನಡುವೆ ವ್ಯತ್ಯಾಸವಿದೆ. ಆಡಳಿತವನ್ನು ನಿರ್ವಹಿಸುವಲ್ಲಿ ನಿರತರಾಗಿರುವ ವ್ಯಕ್ತಿಗಳ ವಿರುದ್ಧ ಅಸಮಾಧಾನವನ್ನು ಉತ್ತೇಜಿಸಿದರೆ ಅದು ದೇಶದ್ರೋಹದ ಆರೋಪದಡಿ ಬರುವುದಿಲ್ಲ. ಅದು ಕಾನೂನಿನಿಂದ ಸ್ಥಾಪಿತವಾದ ಸರ್ಕಾರವಾದ ಪ್ರಭುತ್ವದ ಗೋಚರ ಸಂಕೇತಗಳನ್ನು ಅಲ್ಲಗೆಳೆದು ಅವಮಾನಿಸಿದ್ದರೆ ಮಾತ್ರ…, ಸರಳ ಪದಗಳಲ್ಲಿ ಹೇಳುವುದಾದರೆ, ಮೋದಿಯವರ ವಿರುದ್ಧದ ಟೀಕೆ ‘ಕಾನೂನಿನಿಂದ ಸ್ಥಾಪಿತವಾದ ಸರ್ಕಾರ’ದ ವಿರುದ್ಧದ ಟೀಕೆಯಲ್ಲ. ಆದ್ದರಿಂದ ಸೆಕ್ಷನ್ 124-ಎ ಇಲ್ಲಿ ಅನ್ವಯವಾಗುವುದಿಲ್ಲ.

ಎರಡನೆಯದಾಗಿ, ಸರ್ಕಾರದ ವಿರುದ್ಧದ ಅಸಮಾಧಾನ ಅಥವಾ ಸರ್ಕಾರವನ್ನು ನಿಂದಿಸಿವುದು ಅಥವಾ ದ್ವೇಷಿಸುವುದು ಅಂದರೆ, ‘ನಿಜವಾದ ಹಿಂಸಾಚಾರ ಅಥವಾ ಹಿಂಸಾಚಾರಕ್ಕೆ ನೀಡುವ ಪ್ರಚೋದನೆಯಿಂದ ಸಾರ್ವಜನಿಕ ಅರಾಜಕತೆಗೆ ಕಾರಣವಾಗುವ ಪ್ರವೃತ್ತಿಯನ್ನು ಆ ಹೇಳಿಕೆ ಹೊಂದಿರಬೇಕು.’ ನ್ಯಾಯಾಲಯವು ಸಂಕ್ಷಿಪ್ತವಾಗಿ ಗಮನಿಸಿದಂತೆ, ಹಿಂಸೆಗೆ ಪ್ರಚೋದನೆ ನೀಡುವ ಅಂಶವನ್ನು ಬಿಡಿ, ವಿನೋದ್ ದುವಾ ಅವರ ಕಾಮೆಂಟ್‌ಗಳು ಸಾರ್ವಜನಿಕರ ಮೇಲೆ ಪರಿಣಾಮ ಬೀರಿವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ. ವಿನೋದ್ ದುವಾ ಅವರ ಪ್ರತಿಕ್ರಿಯೆಗಳನ್ನು ಆಧರಿಸಿ ವಲಸೆ ಕಾರ್ಮಿಕರು ಚಲಿಸಲು ಪ್ರಾರಂಭಿಸಿದರು ಎಂಬ ಆರೋಪ ಕೂಡ ವಾಸ್ತವದಲ್ಲಿ ತಪ್ಪಾಗಿದೆ.

ಮೂರನೆಯದಾಗಿ, ಹಿಂಸಾಚಾರದಿಂದ ಸಾರ್ವಜನಿಕ ಅರಾಜಕತೆಯನ್ನು ಉಂಟುಮಾಡುವ ಭಾವನೆಗಳನ್ನು ಉತ್ತೇಜಿಸದೆ, ಸರ್ಕಾರದ ಕ್ರಮಗಳ ಬಗ್ಗೆ ಬಲವಾದ ಅಸಮ್ಮತಿಯನ್ನು ವ್ಯಕ್ತಪಡಿಸುವ ಕಾಮೆಂಟ್‌ಗಳು ದಂಡ ಪ್ರಕ್ರಿಯೆ ವ್ಯಾಪ್ತಿಗೆ ಬರುವುದಿಲ್ಲ. ನ್ಯಾಯಾಲಯ ತೀರ್ಮಾನಿಸಿದಂತೆ, ದುವಾ ಅವರ ಟೀಕೆಗಳು ಸರ್ಕಾರ ಮತ್ತು ಅದರ ಇತರ ಅಂಗ ಸಂಸ್ಥೆಗಳ ಕ್ರಮಗಳ ಅಸಮ್ಮತಿಯ ಅಭಿವ್ಯಕ್ತಿ. ಅವರ ಹೇಳಿಕೆಗಳು ಇದಕ್ಕಿಂತ ಹೆಚ್ಚೇನೂ ಅಲ್ಲ. ಅಂತಹ ಅಭಿವ್ಯಕ್ತಿಗಳ ಏಕೈಕ ಉದ್ದೇಶವೆಂದರೆ, ಯಾತನೆ ಮತ್ತು ನೋವಿನಿಂದ ಕೂಡಿದ ‘ಪ್ರಸಕ್ತ ಪರಿಸ್ಥಿತಿಯನ್ನು’ ತ್ವರಿತವಾಗಿ ಮತ್ತು ಪರಿಣಾಮಕಾರಿಯಾಗಿ ನಿರ್ವಹಿಸಬಹುದು ಎಂಬುದಾಗಿತ್ತು.

ಕೇದಾರನಾಥ ಪ್ರಕರಣದ ತೀರ್ಪಿನ ಚೌಕಟ್ಟಿನೊಳಗೆ ವಿನೋದ್ ದುವಾ ಅವರ ಹೇಳಿಕೆಗಳನ್ನು ವಿಶ್ಲೇಷಿಸಿದ ನಂತರ ನ್ಯಾಯಾಲಯವು, ಈ ವಿಷಯದಲ್ಲಿ, ಯಾವುದೇ ಕಾನೂನು ಕ್ರಮ ಜರುಗಿಸುವುದು, ಸಂವಿಧಾನದ 19 (1) (ಎ) ಕಲಂ ಅಡಿಯಲ್ಲಿ ಖಾತರಿಪಡಿಸಿದ ಅರ್ಜಿದಾರರ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಎಂದು ತೀರ್ಮಾನಿಸಿತು.

ದೇಶದ್ರೋಹ ಕಾನೂನಿನ ಮಿತಿಗಳನ್ನು ಎತ್ತಿ ತೋರಿಸುವವ ಸ್ವಾಗತಾರ್ಹ ಜ್ಞಾಪನೆಯಾಗಿ ಈ ತೀರ್ಪು ಕಾಣಿಸುತ್ತದೆ. ವಿಶೇಷವಾಗಿ ಸರ್ಕಾರವನ್ನು ಮುಕ್ತವಾಗಿ ಟೀಕಿಸುವ ಪತ್ರಕರ್ತರ ಹಕ್ಕಿಗೆ ಬಂದಾಗ, ನ್ಯಾಯಾಲಯವು ಹೀಗೆ ಹೇಳಿದೆ: ’ಕೇದಾರನಾಥ್ ಪ್ರಕರಣದ ತೀರ್ಪಿನಲ್ಲಿ ಉಲ್ಲೇಖಿಸಿದಂತೆ, ಪ್ರತಿಯೊಬ್ಬ ಪತ್ರಕರ್ತನು ರಕ್ಷಣೆಗೆ ಅರ್ಹನಾಗಿರುತ್ತಾನೆ ಎಂಬುದು ಸ್ಪಷ್ಟವಾಗಿರಬೇಕು. ಕೇದಾರ್ ನಾಥ್ ಸಿಂಗ್ ಪ್ರಕರಣದ ತೀರ್ಪಿನ ಪ್ರಕಾರ, ಐಪಿಸಿ 3ರ ಸೆಕ್ಷನ್ 124 ಎ ಮತ್ತು 505ರ ಅಡಿಯಲ್ಲಿ ನಡೆಯುವ ಪ್ರತಿಯೊಂದು ಕಾನೂನು ಕ್ರಮಗಳು, ಆ ಸೆಕ್ಷನ್‌ಗಳಲ್ಲಿ ವಿವರಿಸಿದ ವಿಭಾಗಗಳ ವ್ಯಾಪ್ತಿ ಮತ್ತು ಮಹತ್ವಾಕಾಂಕ್ಷೆಗೆ ಕಟ್ಟುನಿಟ್ಟಾಗಿರಬೇಕು ಮತ್ತು ಕೇದಾರ್ ನಾಥ್ ಸಿಂಗ್ ಪ್ರಕರಣದ ಕಾನೂನಿನೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗಬೇಕು’ ಎಂದು ನ್ಯಾಯಾಲಯ ತನ್ನ ಅಭಿಮತ ವ್ಯಕ್ತಪಡಿಸಿದೆ.

ವಿನೋದ್ ದುವಾ ವಿರುದ್ಧ ಎಫ್‌ಐಆರ್ ರದ್ದುಪಡಿಸಿದ ತೀರ್ಪು, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಮಹತ್ವವನ್ನು ಹಾಗೂ ಹಿಂಸಾಚಾರದ ಪ್ರಚೋದನೆ ಇಲ್ಲದಿರುವವರೆಗೂ ಪ್ರಭುತ್ವವನ್ನು ಮುಕ್ತವಾಗಿ ಟೀಕಿಸುವ ಪತ್ರಕರ್ತರ ಸ್ವಾತಂತ್ರ್ಯವನ್ನು ದೃಢವಾಗಿ ಅನುಮೋದಿಸುತ್ತದೆ. ಆದರೂ, ಕಾನೂನಿನ ಪ್ರಕ್ರಿಯೆಯನ್ನು ದುರುಪಯೋಗ ಮಾಡಿಕೊಳ್ಳುವ ಮೂಲಕ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕನ್ನು ಉಲ್ಲಂಘಿಸುವವರಿಗೆ ಯಾವುದೇ ಎಚ್ಚರಿಕೆ ಸಂದೇಶವನ್ನು ಕಳುಹಿಸಲು ನ್ಯಾಯಾಲಯ ವಿಫಲವಾಗಿದೆ.

ಸುಪ್ರೀಂಕೋರ್ಟ್ ಗಮನಿಸಿದಂತೆ, ಹಿಮಾಚಲ ಪ್ರದೇಶದ ಸ್ಥಳೀಯ ಬಿಜೆಪಿ ಮುಖಂಡರು ಯಾವುದೇ ಆಧಾರವಿಲ್ಲದೆ ಎಫ್‌ಐಆರ್ ದಾಖಲಿಸಿದ್ದಾರೆ. ಈ ದುರುದ್ದೇಶಪೂರಿತ ತಪ್ಪು ಪ್ರತೀಕಾರದ ಕ್ರಮದ ಹೊರತಾಗಿಯೂ, ದೂರುದಾರರ ವಿರುದ್ಧ ಯಾವುದೇ ಕಟ್ಟುನಿಟ್ಟಿನ ಎಚ್ಚರಿಕೆಯನ್ನು ನೀಡಲಾಗಿಲ್ಲ. ಎಫ್‌ಐಆರ್ ದಾಖಲಿಸಿದ ಬಿಜೆಪಿ ನಾಯಕನ ಕ್ರಮಗಳು, ಸರ್ಕಾರವನ್ನು ಟೀಕಿಸಲು ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುವ ಪತ್ರಕರ್ತರಿಗೆ ಕಿರುಕುಳ ನೀಡುವ ಏಕೈಕ ಉದ್ದೇಶವನ್ನು ಹೊಂದಿದ್ದು, ಆ ಕಾರಣಕ್ಕೆ ಆ ಬಿಜೆಪಿ ನಾಯಕನ ವಿರುದ್ಧವೇ ‘ದುರುದ್ದೇಶಪೂರಿತ ಕಾನೂನು ಕ್ರಮ’ ಪ್ರಕರಣವನ್ನು ದಾಖಲಿಸಲು ಅರ್ಹವಾಗಿರುತ್ತದೆ.

ವಿನೋದ್ ದುವಾ ಅವರ ಎರಡನೆಯ ಅರ್ಜಿ ಏನಾಗಿತ್ತೆಂದರೆ, ರಾಜ್ಯ ಸರ್ಕಾರವು ರಚಿಸಿದ ಸಮಿತಿಯಿಂದ ಒಪ್ಪಿಗೆ ಪಡೆಯದ ಹೊರತು, ಕನಿಷ್ಠ ಹತ್ತು ವರ್ಷಗಳ ಕಾಲ ಮಾಧ್ಯಮದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ನೋಂದಾಯಿಸಬಾರದು ಎಂಬುದು. ಇದನ್ನು ಮಾಡುವುದರಿಂದ, ಶಾಸಕಾಂಗಕ್ಕೆ ಮೀಸಲಾಗಿರುವ ಕ್ಷೇತ್ರವನ್ನು ಅತಿಕ್ರಮಿಸುದಂತಾಗುತ್ತದೆ ಎಂಬ ಕಾರಣ ನೀಡಿ ಈ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿತು. ಹತ್ತು ವರ್ಷಗಳ ಸೇವೆಯ ಪತ್ರಕರ್ತರಿಗೆ ಮಾತ್ರ ರಕ್ಷಣೆ ಎಂಬುದು ಅಸ್ಪಷ್ಟತೆಯಿಂದ ಮತ್ತು ಅತಾರ್ಕಿಕತೆಯಿಂದ ಕೂಡಿದೆ. ಆದರೆ, ನಮ್ಮ ಸಾಂವಿಧಾನಿಕ ಪ್ರಜಾಪ್ರಭುತ್ವವನ್ನು ರಕ್ಷಿಸಬೇಕಾದರೆ ಐಪಿಸಿಯ ಸೆಕ್ಷನ್ 124-ಎ ಬಳಕೆಯಲ್ಲಿ ಪ್ರಭುತ್ವದ ಉತ್ಸಾಹವನ್ನು ತಡೆಯುವುದು ಅತ್ಯಗತ್ಯ.

ಐಪಿಸಿಯ ಸೆಕ್ಷನ್ 124-ಎ ವಿರುದ್ಧದ ಅರ್ಜಿಯನ್ನು ಆಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದ್ದೇ ಸ್ವಾಗತಾರ್ಹ ಬೆಳವಣಿಗೆ. ಪ್ರಭುತ್ವ ಈ ಕಾನೂನನ್ನು ಬೇಕಾಬಿಟ್ಟಿ ದುರ್ಬಳಿಕೆ ಮಾಡಿಕೊಳ್ಳುತ್ತಿರುವ ಸಂಗತಿ ತಿಳಿಸುವುದೇನೆಂದರೆ ಸಾಂವಿಧಾನಿಕ ಪ್ರಜಾಪ್ರಭುತ್ವದಲ್ಲಿ ಈ ಕಾನೂನಿಗೆ ಜಾಗವಿರಬಾರದು ಮತ್ತು ಸಾಂವಿಧಾನಿಕ ಕಾನೂನು ಪುಸ್ತಕಗಳಿಂದ ಈ ಕಾನೂನನ್ನು ಹೊಡೆದುಹಾಕಬೇಕು.

– ಕನ್ನಡಕ್ಕೆ: ಪಿ ಮಲ್ಲನಗೌಡರ್

ಅರವಿಂದ್ ನಾರಾಯಣ್

ಅರವಿಂದ್ ನಾರಾಯಣ್

ಸಂವಿಧಾನ ತಜ್ಞರು, ಆಲ್ಟರ್‌ನೇಟಿವ್‌ ಲಾ ಫೋರಂನ ಸ್ಥಾಪಕ ಸದಸ್ಯರು. ಮಾನವ ಹಕ್ಕುಗಳಿಗೆ ಸಂಬಂಧಿಸಿದಂತೆ ಕಾನೂನು ಹೋರಾಟಗಳ ಹಿಂದಿರುವ ವ್ಯಕ್ತಿ. ಲೈಂಗಿಕ ಅಲ್ಪಸಂಖ್ಯಾತರು ಹಾಗೂ ಕೋಮು ಸಂಘರ್ಷಗಳ ವಿಷಯಗಳಿಗೆ ಸಂಬಂಧಿಸಿದಂತೆ ಕಾನೂನು ನೆರವು ಒದಗಿಸುತ್ತಾ ಬಂದಿದ್ದಾರೆ.

ಈ ವಿಷಯವಾಗಿ ಇಂದು ಸಂಜೆ ನಡೆಯಲಿರುವ ಜೂಮ್ ಚರ್ಚೆಯಲ್ಲಿ ಭಾಗಿಯಾಗಿ. ಹೆಚ್ಚಿನ ವಿವರಗಳು ಕೆಳಗಿವೆ.


ಇದನ್ನೂ ಓದಿ: ಹೈಕಮಾಂಡ್ ಭಿನ್ನಮತದ ಇತಿಹಾಸ ಮತ್ತು ವರ್ತಮಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...