Homeಮುಖಪುಟಮಣಿಪುರ ಬೆತ್ತಲೆ ಪ್ರಕರಣದಲ್ಲಿ FIR ವಿಳಂಬ: ‘14 ದಿನಗಳಿಂದ ಪೊಲೀಸರು ಏನು ಮಾಡುತ್ತಿದ್ದರು?’- ಸುಪ್ರೀಂ ಪ್ರಶ್ನೆ

ಮಣಿಪುರ ಬೆತ್ತಲೆ ಪ್ರಕರಣದಲ್ಲಿ FIR ವಿಳಂಬ: ‘14 ದಿನಗಳಿಂದ ಪೊಲೀಸರು ಏನು ಮಾಡುತ್ತಿದ್ದರು?’- ಸುಪ್ರೀಂ ಪ್ರಶ್ನೆ

- Advertisement -
- Advertisement -

ಮೇ 4 ರಂದು ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಕುಕಿ ಬುಡಕಟ್ಟು ಮಹಿಳೆಯರನ್ನು ಬೆತ್ತಲುಗೊಳಿಸಿ ಮೆರವಣಿಗೆ ಮಾಡಿದ ಪ್ರಕರಣದಲ್ಲಿ ಎಫ್‌ಐಆರ್ ನೋಂದಣಿ ಮಾಡಿಕೊಳ್ಳಲು ವಿಳಂಬ ಮಾಡಿರುವುದೇಕೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಪ್ರಶ್ನಿಸಿದೆ.

ಎಫ್‌ಐಆರ್ ದಾಖಲಿಸಲು ಪೊಲೀಸರು 14 ದಿನಗಳ ಕಾಲ ಏನು ಮಾಡುತ್ತಿದ್ದರು? ”ಶೂನ್ಯ ಎಫ್‌ಐಆರ್‌ಗೆ ಹದಿನಾಲ್ಕು ದಿನ ಬೇಕಾ?” ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಪ್ರಶ್ನಿಸಿದ್ದಾರೆ.

ಅಪರಾಧ ನಡೆದಿರುವ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಸಾಮಾನ್ಯವಾಗಿೆ ಎಫ್‌ಐಆರ್ ದಾಖಲಿಸಲಾಗುತ್ತದೆ. ಯಾವುದೇ ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸಬಹುದು ಮತ್ತು ಶೂನ್ಯ ಎಫ್‌ಐಆರ್‌ನ್ನು ದಾಖಲಿಸಲು ಆನಂತರ ಅದನ್ನು ಸಂಬಂಧಪಟ್ಟ ಠಾಣೆಗೆ ರವಾನಿಸಲು ಅನುಮತಿಸುತ್ತದೆ.

ಬೆತ್ತಲೆಯಾಗಿಸಿ ಮೆರವಣಿಗೆ ನಡೆಸಿದ್ದ ಪ್ರಕರಣದ ಇಬ್ಬರು ಸಂತ್ರಸ್ತ ಮಹಿಳೆಯರು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸುತ್ತಿದೆ. ಜುಲೈ 19ರಂದು ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು.

ಮೈತಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆಗಳು ಭುಗಿಲೆದ್ದ ಒಂದು ದಿನದ ನಂತರ, ಮೇ 4ರಂದು ಕಾಂಗ್‌ಪೊಕ್ಪಿಯ ಬಿ ಫೈನೋಮ್ ಗ್ರಾಮದಲ್ಲಿ ವೀಡಿಯೊದಲ್ಲಿ ಕಂಡುಬರುವ ಇಬ್ಬರು ಸೇರಿದಂತೆ ಮೂವರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ. ಪೊಲೀಸ್ ದೂರಿನ ಪ್ರಕಾರ ಮಹಿಳೆಯರಲ್ಲಿ ಒಬ್ಬರನ್ನು ”ಕ್ರೂರವಾಗಿ ಸಾಮೂಹಿಕ ಅತ್ಯಾಚಾರ” ಮಾಡಲಾಗಿದೆ.

ಪ್ರಕರಣದ ಶೂನ್ಯ ಎಫ್‌ಐಆರ್‌ನ್ನು ಮೇ 18 ರಂದು ದಾಖಲಿಸಲಾಗಿದೆ. ಆದರೆ, ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡ ನಂತರವೇ ಪ್ರಕರಣದ ಆರೋಪಿಗಳನ್ನು ಬಂಧಿಸಲಾಯಿತು.

ಜುಲೈ 20ರಂದು ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತವಾಗಿ ಈ ಹೇಯ ಕೃತ್ಯದ ಬಗ್ಗೆ ಮಾತನಾಡಿತ್ತು. ಈ ಘಟನೆಯು “ಸರಳವಾಗಿ ಸ್ವೀಕಾರಾರ್ಹವಲ್ಲ” ಮತ್ತು ಈ ವಿಷಯದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಇಲ್ಲದಿದ್ದರೆ, ನಾವೇ ಕ್ರಮಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದರು.

ಮಣಿಪುರ ಹಿಂಸಾಚಾರದ ವಿಚಾರದಲ್ಲಿ ಸುಮಾರು 80ದಿನಗಳ ಕಾಲ ಮೌನ ವಾಗಿದ್ದ ಪ್ರಧಾನಿ ಮೋದಿ ಅವರು ಈ ವಿಡಿಯೋ ವೈರಲ್ ಆದ ಬಳಿಕ ಒತ್ತಡ ಹೆಚ್ಚಾದ ಕಾರಣ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಬೇರೆ ರಾಜ್ಯಗಳಲ್ಲೂ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎನ್ನುವುದನ್ನು ಉಲ್ಲೇಖಿಸಿದ್ದರು.

ಇದನ್ನೂ ಓದಿ: ಬೇರೆಡೆಯೂ ನಡೆದಿವೆ ಎಂದು ಮಣಿಪುರದ ಘಟನೆಗಳನ್ನು ಸಮರ್ಥಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

”ಇತರ ರಾಜ್ಯಗಳಲ್ಲಿ ಇದೇ ರೀತಿಯ ಪ್ರಕರಣಗಳು ನಡೆಯುತ್ತಿವೆ ಎಂಬ ಕಾರಣಕ್ಕಾಗಿ ಮಣಿಪುರದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ನಿರ್ಲಕ್ಷಿಸಲಾಗುವುದಿಲ್ಲ” ಎಂದು ಸೋಮವಾರ ನ್ಯಾಯಾಲಯ ಹೇಳಿದೆ.

”ದೇಶಾದ್ಯಂತ ಮಹಿಳೆಯರ ವಿರುದ್ಧ ಅಪರಾಧಗಳು ನಡೆಯುತ್ತಿವೆ – ಅದು ವಾಸ್ತವದ ಸಂಗತಿ. ಆದರೆ ಇಲ್ಲಿ, ನಾವು ಭಯಂಕರ ಹೇಯ ಕೃತ್ಯದ ಕುರಿತು ಮಾತನಾಡುತ್ತಿದ್ದೇವೆ. ಬೇರೆ ಕಡೆಗಳಲ್ಲಿ ಅಪರಾಧಗಳು ಕೋಮು ಮತ್ತು ಪಂಥೀಯ ಕಲಹದ ಪರಿಸ್ಥಿತಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಅಪರಾಧಗಳು” ಎಂದು ಹೇಳಿದರು.

ನ್ಯಾಯವಾದಿ ಬಾನ್ಸುರಿ ಸ್ವರಾಜ್ ಅವರು ಪಶ್ಚಿಮ ಬಂಗಾಳ, ಛತ್ತೀಸ್‌ಗಢ ಮತ್ತು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯವನ್ನು ನ್ಯಾಯಾಲಯದ ಗಮನಕ್ಕೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ ನಂತರ ”ನಾವು ಮಣಿಪುರವನ್ನು ಹೇಗೆ ಎದುರಿಸುತ್ತೇವೆ ಎಂಬುದು ಪ್ರಶ್ನೆಯಾಗಿದೆ. ಭಾರತದ ಎಲ್ಲಾ ಹೆಣ್ಣುಮಕ್ಕಳನ್ನು ರಕ್ಷಿಸಿ ಎಂದು ನೀವು ಹೇಳುತ್ತೀರಾ ಅಥವಾ ಯಾರನ್ನೂ ರಕ್ಷಿಸಬೇಡಿ ಎಂದು ಹೇಳುತ್ತಿರಾ? ಎಂದು ಮುಖ್ಯ ನ್ಯಾಯಾಧೀಶರು ಈ ಹೇಳಿಕೆ ನೀಡಿದ್ದಾರೆ ಎಂದು ಬಾರ್ ಮತ್ತು ಬೆಂಚ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರು ಮೇ 4ರಂದು ನಡೆದ ಲೈಂಗಿಕ ದೌರ್ಜನ್ಯವನ್ನು ಪ್ರತ್ಯೇಕ ಅಪರಾಧವೆಂದು ಪರಿಗಣಿಸಲಾಗುವುದಿಲ್ಲ, ಆದರೆ ಇದು ವ್ಯವಸ್ಥಿತ ಹಿಂಸೆಯ ಭಾಗವಾಗಿದೆ ಎಂದು ಹೇಳಿದರು. ಅಂತಹ ಸಂದರ್ಭದಲ್ಲಿ, ನೀವು [ಮಣಿಪುರ ಸರ್ಕಾರ] ವಿಶೇಷ ತಂಡವನ್ನು ಹೊಂದಿರುವುದು ಮುಖ್ಯವಲ್ಲವೇ? ಮಣಿಪುರ ರಾಜ್ಯದಲ್ಲಿ ಹಿಂಸಾಚಾರ ಅವ್ಯಾಹತವಾಗಿ ಮುಂದುವರಿದಿದೆ ಅದನ್ನು ನಿಲ್ಲಿಸಬೇಕಿದೆ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದರು.

ರಾಜ್ಯಾದ್ಯಂತ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 6,000 ಕ್ಕೂ ಹೆಚ್ಚು ಎಫ್‌ಆರ್‌ಗಳನ್ನು ಸಲ್ಲಿಸಲಾಗಿದೆ ಎಂದು ಮಣಿಪುರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದರು.

ಇವುಗಳಲ್ಲಿ ಎಷ್ಟು ಪ್ರಕರಣಗಳು ಮಹಿಳೆಯರ ವಿರುದ್ಧದ ಅಪರಾಧಗಳನ್ನು ಒಳಗೊಂಡಿವೆ ಮತ್ತು ಎಷ್ಟು ಕೊಲೆ ಮತ್ತು ಅಗ್ನಿಸ್ಪರ್ಶದಂತಹ ಗಂಭೀರ ಅಪರಾಧಗಳಿಗೆ ಸಂಬಂಧಿಸಿದೆ ಎಂಬುದನ್ನು ತಿಳಿಸುವಂತೆ ನ್ಯಾಯಾಲಯವು ಮೆಹ್ತಾ ಅವರನ್ನು ಕೇಳಿದೆ. ಕೇಂದ್ರೀಯ ತನಿಖಾ ದಳವು ಎಲ್ಲಾ ಪ್ರಕರಣಗಳನ್ನು ಕೈಗೆತ್ತಿಕೊಳ್ಳುವ ಸ್ಥಿತಿಯಲ್ಲಿದೆಯೇ? ಎಂದು ಪೀಠವು ಕೇಳಿದೆ.

ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಅರ್ಜಿ ವಿಚಾರಣೆ ನಡೆಯಲಿದೆ.

ಮೇ 3ರಿಂದ ಮಣಿಪುರದಲ್ಲಿ ಕುಕಿ ಮತ್ತು ಬಹುಸಂಖ್ಯಾತ ಮೈತಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ಆರಂಭವಾಯಿತು. ಈವರೆಗೂ ಹಿಂಸಾಚಾರದಲ್ಲಿ 113 ಕುಕಿಗಳು ಮತ್ತು 62 ಮೈತಿ ಜನರು ಸೇರಿದಂತೆ ಕನಿಷ್ಠ 181 ಜನರು ಸಾವಿಗೀಡಾಗಿದ್ದಾರೆ ಮತ್ತು ಸುಮಾರು 60,000 ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...