Homeಕರ್ನಾಟಕ'ಸುಲಿಗೆ' | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ FIR

‘ಸುಲಿಗೆ’ | ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನಲ್ಲಿ FIR

- Advertisement -
- Advertisement -

ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ಮಾಡಿದ ಆರೋಪದ ಮೇಲೆ ಬಿಜೆಪಿ ನಾಯಕಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಬೆಂಗಳೂರಿನ ತಿಲಕ್‌ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆ ನಡೆಸಲಾಗಿದೆ ಎಂದು ಆರೋಪಿಸಿ ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಜನಾಧಿಕಾರ ಸಂಘರ್ಷ ಸಂಘಟನೆಯ ಆದರ್ಶ ಅಯ್ಯರ್ ಎಂಬುವವರು ದೂರು ದಾಖಲಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಸುಲಿಗೆ ಹಿನ್ನಲೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ಆದೇಶಿಸಿದೆ. ನಿರ್ಮಲಾ ಸೀತಾರಾಮನ್ ಮತ್ತು ಇತರರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಫೆಬ್ರವರಿಯಲ್ಲಿ, ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಯೋಜನೆಯನ್ನು ರದ್ದುಗೊಳಿಸಿತ್ತು. ಈ ವೇಳೆ ನ್ಯಾಯಾಲಯವು ಯೋಜನೆಯನ್ನು “ಅಸಂವಿಧಾನಿಕ” ಮತ್ತು ಇದು ನಾಗರಿಕರ ಮಾಹಿತಿಯ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಹೇಳಿತ್ತು. ಕೇಂದ್ರ ಸರ್ಕಾರವು 2018 ರಲ್ಲಿ ಯೋಜನೆಯನ್ನು ಪರಿಚಯಿಸಿ, ರಾಜಕೀಯ ಪಕ್ಷಗಳಿಗೆ ನಗದು ದೇಣಿಗೆಗಳನ್ನು ನೀಡುವ ನೀತಿಗೆ ಬದಲಾವಣೆ ತಂದಿತ್ತು.

ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಮಲಾ ಸೀತಾರಾಮನ್ ಅವರ ರಾಜೀನಾಮೆಗೆ ಒತ್ತಾಯಿಸಿದರು ಮತ್ತು ಈ ವಿಷಯದ ಬಗ್ಗೆ ಮೂರು ತಿಂಗಳೊಳಗೆ ವರದಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ಇದನ್ನೂಓದಿ: ಅಕ್ರಮ ಡಿನೋಟಿಫಿಕೇಷನ್ ಪ್ರಕರಣ : ಕುಮಾರಸ್ವಾಮಿ ವಿಚಾರಣೆ ನಡೆಸಿದ ಲೋಕಾಯುಕ್ತ

”ನಿರ್ಮಲಾ ಸೀತಾರಾಮನ್‌ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಅವರು ಯಾರು? ಆಕೆ ಕೇಂದ್ರ ಸಚಿವೆ, ಅವರ ವಿರುದ್ಧವೂ ಎಫ್‌ಐಆರ್‌ ಇದೆ. ಚುನಾವಣಾ ಬಾಂಡ್‌ಗಳ ಮೂಲಕ ಸುಲಿಗೆಯಲ್ಲಿ ತೊಡಗಿದ್ದು, ಎಫ್‌ಐಆರ್‌ ದಾಖಲಾಗಿದೆ. ಎಫ್‌ಐಆರ್ ದಾಖಲಾದ ನಂತರ ಅವರು ರಾಜೀನಾಮೆ ನೀಡಬೇಕು ಎಂದು ಅವರು (ಬಿಜೆಪಿ) ಕೇಳುತ್ತಾರೆಯೇ?” ಅವರು ಹೇಳಿದ್ದಾರೆ.

“ಈಗ, ಸೆಕ್ಷನ್ 17 ಎ (ಭ್ರಷ್ಟಾಚಾರ ತಡೆ ಕಾಯ್ದೆ) ಪ್ರಕಾರ, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಬೇಕು ಮತ್ತು ವರದಿಯನ್ನು ಸಲ್ಲಿಸಬೇಕು. ಅದರ ಆಧಾರದ ಮೇಲೆ, ಅವರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ” ಎಂದು ಅವರು ಹೇಳಿದ್ದಾರೆ.

ಸೆಕ್ಷನ್ 17A ಸಾರ್ವಜನಿಕ ಸೇವಕರಿಗೆ ಕ್ಷುಲ್ಲಕ ಆಧಾರದ ಮೇಲೆ ತನಿಖೆಯಾಗದಂತೆ ಹೆಚ್ಚುವರಿ ರಕ್ಷಣೆ ನೀಡುತ್ತದೆ. ಭ್ರಷ್ಟಾಚಾರ ತಡೆ ಕಾಯಿದೆಯಡಿಯಲ್ಲಿ ಸಾರ್ವಜನಿಕ ಸೇವಕರು ಎಸಗಿದ್ದಾರೆಂದು ಆರೋಪಿಸಲಾದ ಯಾವುದೇ ಅಪರಾಧದ ಕುರಿತು ಯಾವುದೇ ವಿಚಾರಣೆ ಅಥವಾ ತನಿಖೆಯನ್ನು ನಡೆಸಲು ಪೊಲೀಸ್ ಅಧಿಕಾರಿಯು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವುದನ್ನು ಈ ನಿಬಂಧನೆಯು ಕಡ್ಡಾಯಗೊಳಿಸುತ್ತದೆ.

ಇದನ್ನೂ ಓದಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನನ್ನ ಪ್ರಕರಣದಲ್ಲಿ ಕೆಳಹಂತದ ನ್ಯಾಯಾಲಯ ಆದೇಶ ಹೊರಡಿಸಿದ್ದು, ರಾಜ್ಯಪಾಲರು ಸೆಕ್ಷನ್ 17ಎ ಅಡಿಯಲ್ಲಿ ತನಿಖೆ ನಡೆಸುವಂತೆ ಕೋರಿದ್ದು, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ನ್ಯಾಯಾಲಯ ಸೂಚಿಸಿದೆ ಎಂದು ಸಿದ್ದರಾಮಯ್ಯ ಹೇಳಿದದ್ದಾರೆ. ಮುಡಾ ಪ್ರಕರಣದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 17ಎ ಅಡಿಯಲ್ಲಿ ಸಿದ್ದರಾಮಯ್ಯ ಅವರನ್ನೂ ತನಿಖೆಗೆ ಒಳಪಡಿಸಲಾಗುವುದು.

ಇದೇ ವೇಳೆ ಜೆಡಿಎಸ್ ನಾಯಕ ಹಾಗೂ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಸಿದ್ದರಾಮಯ್ಯ ಅವರು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ.

“ಮೊದಲು, ಕುಮಾರಸ್ವಾಮಿ ರಾಜೀನಾಮೆ ನೀಡಲಿ. ಅವರೂ ರಾಜೀನಾಮೆ ನೀಡಬೇಕಲ್ಲವೇ? ಅವರು ಮೊದಲು ರಾಜೀನಾಮೆ ನೀಡಲಿ. ಪ್ರಧಾನಿ (ನರೇಂದ್ರ) ಮೋದಿ ಅವರಾದರೂ ರಾಜೀನಾಮೆ ನೀಡಬೇಕು. ಚುನಾವಣಾ ಬಾಂಡ್ ಸುಲಿಗೆ ಪ್ರಕರಣದಲ್ಲಿ ಪ್ರಧಾನಿ ಮೋದಿ ಅವರೂ ರಾಜೀನಾಮೆ ನೀಡಬೇಕು. ನಿರ್ಮಲಾ ಸೀತಾರಾಮನ್ ರಾಜೀನಾಮೆ ನೀಡಬೇಕು. ಕುಮಾರಸ್ವಾಮಿ ಜಾಮೀನಿನ ಮೇಲೆ ಹೊರಗಿದ್ದು, ಅವರು ರಾಜೀನಾಮೆ ನೀಡಬೇಕು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ವಿಡಿಯೊ ನೋಡಿ: ಅಟ್ರಾಸಿಟಿ’ ಕಾದಂಬರಿ; ಮನುಷ್ಯ ಲೋಕದ ರೂಪಾಂತರವನ್ನ ಕಟ್ಟುತಿದೆಯಾ? ಡಾ. ಗೀತಾ ವಸಂತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...