Homeಕರ್ನಾಟಕಬಂದೂಕು ತರಬೇತಿ ಪ್ರಕರಣ : ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ಧ ಎಫ್‌ಐಆರ್‌

ಬಂದೂಕು ತರಬೇತಿ ಪ್ರಕರಣ : ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬಂದೂಕು ಮತ್ತು ಯುದ್ಧಕಲೆ ತರಬೇತಿ ಶಿಬಿರ ಆಯೋಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವ ಸಂಘಟನೆ ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ದ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸಿ ಅತಿಕ್ರಮಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ನಿಂಗಪ್ಪ ಶಿವಪ್ಪ ಹೂಗಾರ ಎಂಬವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಜನವರಿ 7ರ ಮಂಗಳವಾರ ಪ್ರಕರಣ ದಾಖಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

2024ರ ಡಿಸೆಂಬರ್ 25 ರಿಂದ 29ರವರೆಗೆ ಬಾಗಲಕೋಟೆ ಜಿಲ್ಲೆಯ ತೊದಲಬಾಗಿ ಗ್ರಾಮದಲ್ಲಿರುವ ಕಾಶಿ ಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯು ಶಸ್ತ್ರಾಸ್ತ್ರ ತರಬೇತಿ ಶಿಬಿರವನ್ನು ನಡೆಸಿತ್ತು.

ತನ್ನ ಮತ್ತು ತನ್ನ ಸಹೋದರನ ಒಡೆತನದ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿದ್ದಲ್ಲದೆ, ಬಂದೂಕು ತರಬೇತಿ ನೀಡುವ ಮೂಲಕ ಕಾನೂನು ಉಲ್ಲಂಘಿಸಿರುವ ಶ್ರೀರಾಮ ಸೇನೆಯ 27 ಮಂದಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ನಿಂಗಪ್ಪ ಅವರು ದೂರು ನೀಡಿದ್ದರು.

“ಅವರು (ಶ್ರೀರಾಮ ಸೇನೆ ಸದಸ್ಯರು) ಅನುಮತಿ ಪಡೆಯದೆ ಅಕ್ರಮವಾಗಿ ನಮ್ಮ ಜಮೀನಿಗೆ ಪ್ರವೇಶಿಸಿದ್ದಲ್ಲದೆ, ಶಸ್ತ್ರಾಸ್ತ್ರ ತರಬೇತಿ ಪಡೆದಿದ್ದಾರೆ. ಈ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಸಾರ್ವಜನಿಕರಲ್ಲಿ ಭಯ ಉಂಟಾಗಿದೆ” ಎಂದು ನಿಂಗಪ್ಪ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

“ಜಮೀನು ಮಾಲೀಕರಿಂದ ದೂರು ಬಂದ ನಂತರ ಕ್ರಮ ಕೈಗೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ. ಶಿಬಿರದಲ್ಲಿ ಬಳಸಿರುವುದು ಬಂದೂಕುಗಳೇ ಅಥವಾ ಏರ್‌ಗನ್‌ಗಳೇ? ಎಂಬುದನ್ನು ನಿರ್ಧರಿಸಲು ಜಮಖಂಡಿ ಪೊಲೀಸ್ ಉಪ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಲಾಗಿದೆ, ಇನ್ನೂ ವರದಿ ಸಲ್ಲಿಕೆಯಾಗಿಲ್ಲ” ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈ. ಅಮರನಾಥ ರೆಡ್ಡಿ ಹೇಳಿದ್ದಾಗಿ ವರದಿ ತಿಳಿಸಿದೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಸೆಕ್ಷನ್ 329(3) (ಅತಿಕ್ರಮಣ) ಮತ್ತು ಶಸ್ತ್ರಾಸ್ತ್ರ ಪರವಾನಗಿ ಷರತ್ತುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ 1959 ರ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 30ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶ್ರೀರಾಮ ಸೇನೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ (ಎಐಎಲ್‌ಎಜೆ) ಒತ್ತಾಯಿಸಿದ್ದು, ಪೊಲೀಸರ ಆರಂಭಿಕ ನಿಷ್ಕ್ರಿಯತೆಯನ್ನು ಟೀಕಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ಎಐಎಲ್‌ಎಜೆ, ರಾಜ್ಯದಲ್ಲಿ ಉಗ್ರಗಾಮಿ ಗುಂಪುಗಳು ನಡೆಸುವ ಇದೇ ರೀತಿಯ ಚಟುವಟಿಕೆಗಳ ಮಾದರಿಯನ್ನು ಎತ್ತಿ ತೋರಿಸಿದೆ. ಇಂತಹ ಕೃತ್ಯಗಳು ಕೋಮು ಸಾಮರಸ್ಯವನ್ನು ಹಾಳುಮಾಡುತ್ತವೆ ಮತ್ತು ಅಲ್ಪಸಂಖ್ಯಾತರು, ದಲಿತರು ಮತ್ತು ಪ್ರಗತಿಪರ ಚಿಂತಕರ ವಿರುದ್ಧ ಹಿಂಸಾಚಾರವನ್ನು ಉತ್ತೇಜಿಸುತ್ತವೆ ಎಂದು ಹೇಳಿದೆ.

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ. ಕಲ್ಬುರ್ಗಿ ಅವರ ಹತ್ಯೆಯಂತಹ ಘಟನೆಗಳನ್ನು ಉಲ್ಲೇಖಿಸಿ, ಈ ಶಿಬಿರಗಳಂತಹ ಅನಿಯಂತ್ರಿತ ಚಟುವಟಿಕೆಗಳು ಸಮಾಜಕ್ಕೆ ದೊಡ್ಡ ಮಟ್ಟದ ಅಪಾಯಗಳನ್ನು ಉಂಟು ಮಾಡುತ್ತವೆ ಎಂದು ಎಐಎಲ್‌ಎಜೆ ಕಳವಳ ವ್ಯಕ್ತಪಡಿಸಿದೆ.

ಬಂದೂಕು ತರಬೇತಿ ಶಿಬಿರ ಸಂಘಟಕರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 (ಕೆಲವು ಅಪರಾಧಗಳಿಗೆ ಶಿಕ್ಷೆ) ಮತ್ತು 27 (ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಶಿಕ್ಷೆ) ಹಾಗೂ ಬಿಎನ್‌ಎಸ್‌ನ ಸೆಕ್ಷನ್ 61 (ಕ್ರಿಮಿನಲ್ ಪಿತೂರಿ) ಮತ್ತು 189 (ಕಾನೂನುಬಾಹಿರ ಸಭೆ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಎಐಎಲ್‌ಎಜೆ ಅಧಿಕಾರಿಗಳನ್ನು ಒತ್ತಾಯಿಸಿದೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ| ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿಗೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...