Homeಕರ್ನಾಟಕಬಂದೂಕು ತರಬೇತಿ ಪ್ರಕರಣ : ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ಧ ಎಫ್‌ಐಆರ್‌

ಬಂದೂಕು ತರಬೇತಿ ಪ್ರಕರಣ : ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬಂದೂಕು ಮತ್ತು ಯುದ್ಧಕಲೆ ತರಬೇತಿ ಶಿಬಿರ ಆಯೋಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವ ಸಂಘಟನೆ ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ದ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸಿ ಅತಿಕ್ರಮಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ನಿಂಗಪ್ಪ ಶಿವಪ್ಪ ಹೂಗಾರ ಎಂಬವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಜನವರಿ 7ರ ಮಂಗಳವಾರ ಪ್ರಕರಣ ದಾಖಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

2024ರ ಡಿಸೆಂಬರ್ 25 ರಿಂದ 29ರವರೆಗೆ ಬಾಗಲಕೋಟೆ ಜಿಲ್ಲೆಯ ತೊದಲಬಾಗಿ ಗ್ರಾಮದಲ್ಲಿರುವ ಕಾಶಿ ಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯು ಶಸ್ತ್ರಾಸ್ತ್ರ ತರಬೇತಿ ಶಿಬಿರವನ್ನು ನಡೆಸಿತ್ತು.

ತನ್ನ ಮತ್ತು ತನ್ನ ಸಹೋದರನ ಒಡೆತನದ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿದ್ದಲ್ಲದೆ, ಬಂದೂಕು ತರಬೇತಿ ನೀಡುವ ಮೂಲಕ ಕಾನೂನು ಉಲ್ಲಂಘಿಸಿರುವ ಶ್ರೀರಾಮ ಸೇನೆಯ 27 ಮಂದಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ನಿಂಗಪ್ಪ ಅವರು ದೂರು ನೀಡಿದ್ದರು.

“ಅವರು (ಶ್ರೀರಾಮ ಸೇನೆ ಸದಸ್ಯರು) ಅನುಮತಿ ಪಡೆಯದೆ ಅಕ್ರಮವಾಗಿ ನಮ್ಮ ಜಮೀನಿಗೆ ಪ್ರವೇಶಿಸಿದ್ದಲ್ಲದೆ, ಶಸ್ತ್ರಾಸ್ತ್ರ ತರಬೇತಿ ಪಡೆದಿದ್ದಾರೆ. ಈ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಸಾರ್ವಜನಿಕರಲ್ಲಿ ಭಯ ಉಂಟಾಗಿದೆ” ಎಂದು ನಿಂಗಪ್ಪ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

“ಜಮೀನು ಮಾಲೀಕರಿಂದ ದೂರು ಬಂದ ನಂತರ ಕ್ರಮ ಕೈಗೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ. ಶಿಬಿರದಲ್ಲಿ ಬಳಸಿರುವುದು ಬಂದೂಕುಗಳೇ ಅಥವಾ ಏರ್‌ಗನ್‌ಗಳೇ? ಎಂಬುದನ್ನು ನಿರ್ಧರಿಸಲು ಜಮಖಂಡಿ ಪೊಲೀಸ್ ಉಪ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಲಾಗಿದೆ, ಇನ್ನೂ ವರದಿ ಸಲ್ಲಿಕೆಯಾಗಿಲ್ಲ” ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈ. ಅಮರನಾಥ ರೆಡ್ಡಿ ಹೇಳಿದ್ದಾಗಿ ವರದಿ ತಿಳಿಸಿದೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಸೆಕ್ಷನ್ 329(3) (ಅತಿಕ್ರಮಣ) ಮತ್ತು ಶಸ್ತ್ರಾಸ್ತ್ರ ಪರವಾನಗಿ ಷರತ್ತುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ 1959 ರ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 30ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶ್ರೀರಾಮ ಸೇನೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ (ಎಐಎಲ್‌ಎಜೆ) ಒತ್ತಾಯಿಸಿದ್ದು, ಪೊಲೀಸರ ಆರಂಭಿಕ ನಿಷ್ಕ್ರಿಯತೆಯನ್ನು ಟೀಕಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ಎಐಎಲ್‌ಎಜೆ, ರಾಜ್ಯದಲ್ಲಿ ಉಗ್ರಗಾಮಿ ಗುಂಪುಗಳು ನಡೆಸುವ ಇದೇ ರೀತಿಯ ಚಟುವಟಿಕೆಗಳ ಮಾದರಿಯನ್ನು ಎತ್ತಿ ತೋರಿಸಿದೆ. ಇಂತಹ ಕೃತ್ಯಗಳು ಕೋಮು ಸಾಮರಸ್ಯವನ್ನು ಹಾಳುಮಾಡುತ್ತವೆ ಮತ್ತು ಅಲ್ಪಸಂಖ್ಯಾತರು, ದಲಿತರು ಮತ್ತು ಪ್ರಗತಿಪರ ಚಿಂತಕರ ವಿರುದ್ಧ ಹಿಂಸಾಚಾರವನ್ನು ಉತ್ತೇಜಿಸುತ್ತವೆ ಎಂದು ಹೇಳಿದೆ.

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ. ಕಲ್ಬುರ್ಗಿ ಅವರ ಹತ್ಯೆಯಂತಹ ಘಟನೆಗಳನ್ನು ಉಲ್ಲೇಖಿಸಿ, ಈ ಶಿಬಿರಗಳಂತಹ ಅನಿಯಂತ್ರಿತ ಚಟುವಟಿಕೆಗಳು ಸಮಾಜಕ್ಕೆ ದೊಡ್ಡ ಮಟ್ಟದ ಅಪಾಯಗಳನ್ನು ಉಂಟು ಮಾಡುತ್ತವೆ ಎಂದು ಎಐಎಲ್‌ಎಜೆ ಕಳವಳ ವ್ಯಕ್ತಪಡಿಸಿದೆ.

ಬಂದೂಕು ತರಬೇತಿ ಶಿಬಿರ ಸಂಘಟಕರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 (ಕೆಲವು ಅಪರಾಧಗಳಿಗೆ ಶಿಕ್ಷೆ) ಮತ್ತು 27 (ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಶಿಕ್ಷೆ) ಹಾಗೂ ಬಿಎನ್‌ಎಸ್‌ನ ಸೆಕ್ಷನ್ 61 (ಕ್ರಿಮಿನಲ್ ಪಿತೂರಿ) ಮತ್ತು 189 (ಕಾನೂನುಬಾಹಿರ ಸಭೆ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಎಐಎಲ್‌ಎಜೆ ಅಧಿಕಾರಿಗಳನ್ನು ಒತ್ತಾಯಿಸಿದೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ| ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿಗೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...