Homeಕರ್ನಾಟಕಬಂದೂಕು ತರಬೇತಿ ಪ್ರಕರಣ : ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ಧ ಎಫ್‌ಐಆರ್‌

ಬಂದೂಕು ತರಬೇತಿ ಪ್ರಕರಣ : ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಬಂದೂಕು ಮತ್ತು ಯುದ್ಧಕಲೆ ತರಬೇತಿ ಶಿಬಿರ ಆಯೋಜಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದುತ್ವ ಸಂಘಟನೆ ಶ್ರೀರಾಮ ಸೇನೆಯ 27 ಸದಸ್ಯರ ವಿರುದ್ದ ಬಾಗಲಕೋಟೆ ಜಿಲ್ಲೆಯ ಸಾವಳಗಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.

ಬಂದೂಕು ತರಬೇತಿ ಶಿಬಿರವನ್ನು ಆಯೋಜಿಸಿ ಅತಿಕ್ರಮಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಿ ನಿಂಗಪ್ಪ ಶಿವಪ್ಪ ಹೂಗಾರ ಎಂಬವರು ಸಲ್ಲಿಸಿದ್ದ ದೂರಿನ ಆಧಾರದ ಮೇಲೆ ಜನವರಿ 7ರ ಮಂಗಳವಾರ ಪ್ರಕರಣ ದಾಖಲಾಗಿದೆ ಎಂದು ದಿ ನ್ಯೂಸ್‌ ಮಿನಿಟ್ ವರದಿ ಮಾಡಿದೆ.

2024ರ ಡಿಸೆಂಬರ್ 25 ರಿಂದ 29ರವರೆಗೆ ಬಾಗಲಕೋಟೆ ಜಿಲ್ಲೆಯ ತೊದಲಬಾಗಿ ಗ್ರಾಮದಲ್ಲಿರುವ ಕಾಶಿ ಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀರಾಮ ಸೇನೆಯು ಶಸ್ತ್ರಾಸ್ತ್ರ ತರಬೇತಿ ಶಿಬಿರವನ್ನು ನಡೆಸಿತ್ತು.

ತನ್ನ ಮತ್ತು ತನ್ನ ಸಹೋದರನ ಒಡೆತನದ ಜಮೀನಿಗೆ ಅತಿಕ್ರಮಣ ಪ್ರವೇಶ ಮಾಡಿದ್ದಲ್ಲದೆ, ಬಂದೂಕು ತರಬೇತಿ ನೀಡುವ ಮೂಲಕ ಕಾನೂನು ಉಲ್ಲಂಘಿಸಿರುವ ಶ್ರೀರಾಮ ಸೇನೆಯ 27 ಮಂದಿಯ ವಿರುದ್ದ ಕ್ರಮ ಕೈಗೊಳ್ಳುವಂತೆ ನಿಂಗಪ್ಪ ಅವರು ದೂರು ನೀಡಿದ್ದರು.

“ಅವರು (ಶ್ರೀರಾಮ ಸೇನೆ ಸದಸ್ಯರು) ಅನುಮತಿ ಪಡೆಯದೆ ಅಕ್ರಮವಾಗಿ ನಮ್ಮ ಜಮೀನಿಗೆ ಪ್ರವೇಶಿಸಿದ್ದಲ್ಲದೆ, ಶಸ್ತ್ರಾಸ್ತ್ರ ತರಬೇತಿ ಪಡೆದಿದ್ದಾರೆ. ಈ ಕಾರ್ಯಕ್ರಮದ ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಸಾರ್ವಜನಿಕರಲ್ಲಿ ಭಯ ಉಂಟಾಗಿದೆ” ಎಂದು ನಿಂಗಪ್ಪ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ ಎಂದು ನ್ಯೂಸ್‌ ಮಿನಿಟ್ ವರದಿ ವಿವರಿಸಿದೆ.

“ಜಮೀನು ಮಾಲೀಕರಿಂದ ದೂರು ಬಂದ ನಂತರ ಕ್ರಮ ಕೈಗೊಳ್ಳಲಾಗಿದೆ. ತನಿಖೆ ನಡೆಯುತ್ತಿದೆ. ಶಿಬಿರದಲ್ಲಿ ಬಳಸಿರುವುದು ಬಂದೂಕುಗಳೇ ಅಥವಾ ಏರ್‌ಗನ್‌ಗಳೇ? ಎಂಬುದನ್ನು ನಿರ್ಧರಿಸಲು ಜಮಖಂಡಿ ಪೊಲೀಸ್ ಉಪ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಲಾಗಿದೆ, ಇನ್ನೂ ವರದಿ ಸಲ್ಲಿಕೆಯಾಗಿಲ್ಲ” ಎಂದು ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೈ. ಅಮರನಾಥ ರೆಡ್ಡಿ ಹೇಳಿದ್ದಾಗಿ ವರದಿ ತಿಳಿಸಿದೆ.

ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಸೆಕ್ಷನ್ 329(3) (ಅತಿಕ್ರಮಣ) ಮತ್ತು ಶಸ್ತ್ರಾಸ್ತ್ರ ಪರವಾನಗಿ ಷರತ್ತುಗಳ ಉಲ್ಲಂಘನೆಗೆ ಸಂಬಂಧಿಸಿದಂತೆ 1959 ರ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 30ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಶ್ರೀರಾಮ ಸೇನೆಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಲ್ ಇಂಡಿಯಾ ಲಾಯರ್ಸ್ ಅಸೋಸಿಯೇಷನ್ ಫಾರ್ ಜಸ್ಟೀಸ್ (ಎಐಎಲ್‌ಎಜೆ) ಒತ್ತಾಯಿಸಿದ್ದು, ಪೊಲೀಸರ ಆರಂಭಿಕ ನಿಷ್ಕ್ರಿಯತೆಯನ್ನು ಟೀಕಿಸಿದೆ. ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವ ಎಐಎಲ್‌ಎಜೆ, ರಾಜ್ಯದಲ್ಲಿ ಉಗ್ರಗಾಮಿ ಗುಂಪುಗಳು ನಡೆಸುವ ಇದೇ ರೀತಿಯ ಚಟುವಟಿಕೆಗಳ ಮಾದರಿಯನ್ನು ಎತ್ತಿ ತೋರಿಸಿದೆ. ಇಂತಹ ಕೃತ್ಯಗಳು ಕೋಮು ಸಾಮರಸ್ಯವನ್ನು ಹಾಳುಮಾಡುತ್ತವೆ ಮತ್ತು ಅಲ್ಪಸಂಖ್ಯಾತರು, ದಲಿತರು ಮತ್ತು ಪ್ರಗತಿಪರ ಚಿಂತಕರ ವಿರುದ್ಧ ಹಿಂಸಾಚಾರವನ್ನು ಉತ್ತೇಜಿಸುತ್ತವೆ ಎಂದು ಹೇಳಿದೆ.

ಪತ್ರಕರ್ತೆ ಗೌರಿ ಲಂಕೇಶ್ ಮತ್ತು ವಿಚಾರವಾದಿ ಎಂ.ಎಂ. ಕಲ್ಬುರ್ಗಿ ಅವರ ಹತ್ಯೆಯಂತಹ ಘಟನೆಗಳನ್ನು ಉಲ್ಲೇಖಿಸಿ, ಈ ಶಿಬಿರಗಳಂತಹ ಅನಿಯಂತ್ರಿತ ಚಟುವಟಿಕೆಗಳು ಸಮಾಜಕ್ಕೆ ದೊಡ್ಡ ಮಟ್ಟದ ಅಪಾಯಗಳನ್ನು ಉಂಟು ಮಾಡುತ್ತವೆ ಎಂದು ಎಐಎಲ್‌ಎಜೆ ಕಳವಳ ವ್ಯಕ್ತಪಡಿಸಿದೆ.

ಬಂದೂಕು ತರಬೇತಿ ಶಿಬಿರ ಸಂಘಟಕರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25 (ಕೆಲವು ಅಪರಾಧಗಳಿಗೆ ಶಿಕ್ಷೆ) ಮತ್ತು 27 (ಶಸ್ತ್ರಾಸ್ತ್ರಗಳನ್ನು ಬಳಸಿದ್ದಕ್ಕಾಗಿ ಶಿಕ್ಷೆ) ಹಾಗೂ ಬಿಎನ್‌ಎಸ್‌ನ ಸೆಕ್ಷನ್ 61 (ಕ್ರಿಮಿನಲ್ ಪಿತೂರಿ) ಮತ್ತು 189 (ಕಾನೂನುಬಾಹಿರ ಸಭೆ) ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ಎಐಎಲ್‌ಎಜೆ ಅಧಿಕಾರಿಗಳನ್ನು ಒತ್ತಾಯಿಸಿದೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ| ಪ್ರಜ್ವಲ್ ರೇವಣ್ಣ ವಿರುದ್ಧ ಆರೋಪ ನಿಗದಿಗೆ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...