Homeಮುಖಪುಟತಂದೆ-ಮಗನ ನಕಲಿ ಎನ್‌ಕೌಂಟರ್ ಆರೋಪ: 7 ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

ತಂದೆ-ಮಗನ ನಕಲಿ ಎನ್‌ಕೌಂಟರ್ ಆರೋಪ: 7 ಮಂದಿ ಪೊಲೀಸರ ವಿರುದ್ಧ ಎಫ್ಐಆರ್ ದಾಖಲು

- Advertisement -
- Advertisement -

ನಾಲ್ಕು ವರ್ಷಗಳ ಕಾನೂನು ಹೋರಾಟದ ನಂತರ, ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ನಕಲಿ ಎನ್‌ಕೌಂಟರ್‌ನಲ್ಲಿ ತಂದೆ-ಮಗನನ್ನು ಹತ್ಯೆಗೈದ ಆರೋಪದ ಮೇಲೆ ಏಳು ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ವೀರೇಂದ್ರಸಿಂಹ ಎನ್ ಜಡೇಜಾ ಮತ್ತು ಅವರ ಅಧೀನ ಅಧಿಕಾರಿಗಳಾದ ರಾಜೇಶ್ ಸಾವಿಜಿಭಾಯಿ, ಕಿರೀಟ್‌ಭಾಯಿ ಗಣೇಶ್‌ಭಾಯಿ, ದಿಗ್ವಿಜಯ್‌ ಸಿನ್ಹ್‌ ಹರ್ದೀಪ್‌ ಸಿನ್ಹ್‌, ಪ್ರಹ್ಲಾದಭಾಯಿ ಪ್ರಭುಭಾಯಿ ಮತ್ತು ಮನುಭಾಯಿ ಗೋವಿಂದ್‌ಭಾಯಿ ಸೇರಿದಂತೆ ಏಳು ಪೊಲೀಸರ ವಿರುದ್ಧ ಶುಕ್ರವಾರ (ಮೇ.30) ಪಟ್ಡಿ ತಾಲೂಕಿನ ಬಜಾನಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏಳು ಪೊಲೀಸರ ವಿರುದ್ಧ ಕೊಲೆ ಸೇರಿದಂತೆ ಇತರ ಆರೋಪಗಳಿಗಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಧೃಂಗಾಧ್ರದ ಉಪ ಪೊಲೀಸ್ ವರಿಷ್ಠಾಧಿಕಾರಿ ಜೆ.ಡಿ. ಪುರೋಹಿತ್ ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ. ಪ್ರಕರಣದ ತನಿಖಾಧಿಕಾರಿಯಾಗಿ ಪುರೋಹಿತ್ ಅವರನ್ನು ನೇಮಿಸಲಾಗಿದೆ.

ಪಟ್ಡಿ ತಾಲೂಕಿನಲ್ಲಿ 2021ರಲ್ಲಿ ಆಪಾದಿಯ ನಕಲಿ ಎನ್‌ಕೌಂಟರ್ ನಡೆದಿದೆ. ಪೊಲೀಸ್ ಕಾರ್ಯಾಚರಣೆಯ ಸಮಯದಲ್ಲಿ ಆರೋಪಿ ಪಿಎಸ್ಐ ಜಡೇಜಾ ನೇತೃತ್ವದ ತಂಡ ನಡೆಸಿದ ಗುಂಡಿನ ದಾಳಿಯಲ್ಲಿ ಹನೀಫ್ ಜಾಟ್ ಮಲಿಕ್ (44) ಮತ್ತು ಅವರ ಮಗ ಮದೀನ್ (14) ಸಾವನ್ನಪ್ಪಿದ್ದರು.

ಪೊಲೀಸರು ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದ್ದೇವೆ ಎಂದು ಹೇಳುವ ಮೂಲಕ ತಮ್ಮನ್ನು ತಾವು ಸಮರ್ಥಿಸಿಕೊಂಡಿದ್ದರು. ಆದರೆ, ಮೃತರ ಕುಟುಂಬ ಸದಸ್ಯರು ಗುಜರಾತ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿ, ತಂದೆ-ಮಗನನ್ನು ನಿರ್ದಯವಾಗಿ ಕೊಲ್ಲಲಾಗಿದೆ ಎಂದು ಆರೋಪಿಸಿದ್ದರು. ಹತ್ಯೆಗಳ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದರು.

ನವೆಂಬರ್ 6, 2021ರಂದು ಬಜಾನಾ ಪೊಲೀಸ್ ಠಾಣೆ ವ್ಯಾಪ್ತಿಯ ಗೆಡಿಯಾ ಗ್ರಾಮದಲ್ಲಿ ತನ್ನ ತಂದೆ ಮತ್ತು ಸಹೋದರನನ್ನು ಕ್ರೂರವಾಗಿ ಕೊಲ್ಲಲಾಯಿತು ಎಂದು ಆರೋಪಿಸಿ ಸೋಹಾನಾ ಮಲೇಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಗುಜರಾತ್ ಭಯೋತ್ಪಾದನೆ ಮತ್ತು ಸಂಘಟಿತ ಅಪರಾಧ ನಿಯಂತ್ರಣ (GUJCTOC) ಕಾಯ್ದೆಯಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಹನೀಫ್ ಬೇಕಾಗಿದ್ದ ಎಂದು ಪೊಲೀಸರು ಹೇಳಿಕೊಂಡಿದ್ದರು. ಹಲವಾರು ಲೂಟಿ ಮತ್ತು ಕಳ್ಳತನ ಪ್ರಕರಣಗಳಲ್ಲಿ ಹನೀಫ್ ಭಾಗಿಯಾಗಿದ್ದ ಎಂದು ಹೇಳಿಕೊಂಡಿದ್ದರು. ಹನೀಫ್ ಕುಖ್ಯಾತ “ಗೆಡಿಯಾ ಗ್ಯಾಂಗ್” ನ ಭಾಗವಾಗಿದ್ದ. 86 ಎಫ್‌ಐಆರ್‌ಗಳಲ್ಲಿ ಹೆಸರಿಸಲ್ಪಟ್ಟಿದ್ದ ಮತ್ತು 59 ಪ್ರಕರಣಗಳಲ್ಲಿ ಬೇಕಾಗಿದ್ದ ಎಂದಿದ್ದರು.

ನಿರ್ದಿಷ್ಟ ಮಾಹಿತಿ ಪಡೆದ ನಂತರ ಜಡೇಜಾ ನೇತೃತ್ವದ ಏಳು ಸದಸ್ಯರ ಪೊಲೀಸ್ ತಂಡ ಹನೀಫ್ ಅವರನ್ನು ಬಂಧಿಸಲು ಗ್ರಾಮಕ್ಕೆ ಹೋಗಿತ್ತು. ಈ ವೇಳೆ ಹನೀಫ್ ಮತ್ತು ಅವರ ಮಗ ತಪ್ಪಿಸಿಕೊಂಡು ಪರಾರಿಯಾಗಲು ಪ್ರಯತ್ನಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಅಲ್ಲದೆ, ಹನೀಫ್ ತನ್ನ ಮಗ ಮತ್ತು ಇತರರ ಸಹಾಯದಿಂದ ಪೊಲೀಸರ ಮೇಲೆ ಗುಂಡು ಹಾರಿಸಿದ್ದರು. ಈ ವೇಳೆ ಪೊಲೀಸರು ಪ್ರತಿ ಗುಂಡು ಹಾರಿಸಬೇಕಾಯಿತು. ಒಂದು ಗುಂಡು ಹನೀಫ್ ಎದೆಗೆ ತಗುಲಿದರೆ, ಇನ್ನೊಂದು ಗುಂಡು ಮಗ ಮದೀನ್ ಗೆ ತಗುಲಿತ್ತು ಎಂದು ತಿಳಿಸಿದ್ದಾರೆ.

2024ರಲ್ಲಿ ಗುಜರಾತ್ ಹೈಕೋರ್ಟ್ ಅರ್ಜಿಯನ್ನು ವಿಲೇವಾರಿ ಮಾಡಿ ಅರ್ಜಿದಾರರಿಗೆ ಸ್ಥಳೀಯ ನ್ಯಾಯಾಲಯವನ್ನು ಸಂಪರ್ಕಿಸಲು ಸ್ವಾತಂತ್ರ್ಯ ನೀಡಿತ್ತು. ನಂತರ, ಅರ್ಜಿದಾರರು ಮ್ಯಾಜಿಸ್ಟೀರಿಯಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಮ್ಯಾಜಿಸ್ಟೀರಿಯಲ್ ನ್ಯಾಯಾಲಯ ತಪ್ಪಿತಸ್ಥ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ಆದೇಶಿಸಿದೆ ಎಂದು ವರದಿಯಾಗಿದೆ.

ಗೋಮಾಂಸ ಮಾರಾಟ ಆರೋಪ; ದೆಹಲಿ ವಿಶ್ವವಿದ್ಯಾಲಯ ಬಳಿಯ ಅಂಗಡಿ ಮಾಲೀಕನಿಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...