Homeಕರೋನಾ ತಲ್ಲಣಕೊರೊನಾ ಕುರಿತು ಸುಳ್ಳು ಹರಡಿದ್ದಕ್ಕಾಗಿ ಬಾಬಾ ರಾಮದೇವ್ ವಿರುದ್ದ ಕೇಸು ದಾಖಲು

ಕೊರೊನಾ ಕುರಿತು ಸುಳ್ಳು ಹರಡಿದ್ದಕ್ಕಾಗಿ ಬಾಬಾ ರಾಮದೇವ್ ವಿರುದ್ದ ಕೇಸು ದಾಖಲು

- Advertisement -
- Advertisement -

ಕೊರೊನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆಂದು ಉದ್ಯಮಿ ಬಾಬಾ ರಾಮದೇವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಸೆಲ್ಲಿನ ರಾಷ್ಟ್ರೀಯ ಕನ್ವೀನರ್ ಹಿತೇಂದ್ರ ಪಿಥಾಡಿಯಾ ಅವರು ಬಾಬಾ ರಾಮದೇವ್ ವಿರುದ್ಧ ಕೇಸು ದಾಖಲಿಸಿದ್ದಾರೆ.

ಕೊರೊನಾ ವೈರಸಿನ ವಿರುದ್ದದ ಹೋರಾಟವನ್ನು ತಪ್ಪುದಾರಿಗೆಳೆಯುವ ಮತ್ತು ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಆಜ್ ತಕ್ ಸುದ್ದಿವಾಹಿನಿ ಮತ್ತು ರಾಮ‌ದೇವ್ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ರಾಮ‌ದೇವ್ ಅವರನ್ನು ಮಾಧ್ಯಮಗಳಿಂದ ದೂರವಿಡಬೇಕು ಎಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಏಪ್ರಿಲ್ 25 ರಂದು ಆಜ್ ತಕ್ ಸುದ್ದಿ ಮಾಧ್ಯಮದ “#Covid19 ಗೆ ಏನು ಪರಿಹಾರ” ಎಂಬ ಕಾರ್ಯಕ್ರಮದಲ್ಲಿ ರಾಮ‌ದೇವ್ ಅವರು ಮೂಗಿನ ಮೂಲಕ ಸಾಸಿವೆ ಎಣ್ಣೆಯನ್ನು ಸುರಿದರೆ ಕೊರೊನಾ ವೈರಸ್ ಸಾಯುತ್ತದೆ ಎಂದು ಸಲಹೆ ನೀಡಿದ್ದರು.

ಅಲ್ಲದೆ ಉಸಿರಾಟವನ್ನು ಒಂದು ನಿಮಿಷ ಹಿಡಿದಿಟ್ಟುಕೊಳ್ಳುವುದರಿಂದ ಒಬ್ಬರಿಗೆ ಕೊರೊನಾ ವೈರಸ್ ಇದೆಯೋ ಇಲ್ಲವೋ ಎಂಬುದನ್ನು ಸಾಬೀತು ಪಡಿಸುತ್ತದೆ ಎಂದು ಅವರು ಹೇಳಿದ್ದರು. ಹೀಗೆ ಉಸಿರನ್ನು ಹಿಡಿದಿಡಲು ಸಾಧ್ಯವಾದರೆ ವೈರಸ್ ಇಲ್ಲ ಎಂದರ್ಥ, ಪ್ರಾಣಾಯಾಮ ಮಾಡುವುದರಿಂದ ವೈರಸ್ ವಿರುದ್ಧ ಹೋರಾಡಲು ಸಹಾಯವಾಗುತ್ತದೆ ಎಂದು ಸಲಹೆ ನೀಡಿದ್ದರು.

ಇದಕ್ಕೆ ವಿರುದ್ದ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಸೆಲ್ಲಿನ ರಾಷ್ಟ್ರೀಯ ಕನ್ವೀನರ್ ಹಿತೇಂದ್ರ ಪಿಥಾಡಿಯಾ ಅವರು ರಾಮದೇವ್ ಬಾಬಾ ವಿರುದ್ಧ ಅರ್ಜಿ ಸಲ್ಲಿಸಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 52 ಮತ್ತು 54 ರ ಅಡಿಯಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 401 (1) (ಬಿ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 ರ ಅಡಿಯಲ್ಲಿ ರಾಮ‌ದೇವ್ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ವಿನಂತಿಸಿದ್ದರು.

ಬಾಬಾ ರಾಮದೇವ್

ವೆಜಲ್‌ಪುರದ ನಿವಾಸಿಯಾದ ಹಿತೇಂದ್ರ ಪಿಥಾಡಿಯಾ ಅರ್ಜಿಯಲ್ಲಿ, ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋದ ಫ್ಯಾಕ್ಟ್ ಚೆಕ್, ಸಾಸಿವೆ ಎಣ್ಣೆಯನ್ನು ಬಳಸುವ ಪ್ರಿಸ್ಕ್ರಿಪ್ಷನ್ ಅನ್ನು ಆಧಾರರಹಿತ ಎಂದು ವಿವರಿಸಲಾಗಿದೆ ಎಂದು ಹೇಳಿದ್ದಾರೆ. ಉಸಿರಾಟವನ್ನು ಹಿಡಿದಿಟ್ಟುಕೊಳ್ಳುವುದರಿಂದ ಕೊರೊನಾ ಲಕ್ಷಣಗಳು ಇದೆಯೇ ಎಂದು ಕಂಡುಹಿಡಿಯಲು ಆಗುವುದಿಲ್ಲ. ಈ ಫ್ಯಾಕ್ಟ್ ಚೆಕ್ ಏಪ್ರಿಲ್ 1 ರಂದು ಮಾಡಲಾಗಿದ್ದು, ರಾಮ‌ದೇವ್ ಇನ್ನೂ ಸಾರ್ವಜನಿಕರನ್ನು ಗೊಂದಲಕ್ಕೀಡುಮಾಡುವ ಮೂಲಕ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳುತ್ತಲೇ ಇದ್ದಾರೆ ಎಂದು ಹೇಳಲಾಗಿದೆ.

ವೈರಸ್‌ಗೆ ಪರಿಹಾರ ಕಂಡುಕೊಳ್ಳಲು ತಜ್ಞರು, ಸಂಶೋಧಕರು ಮತ್ತು ವೈರಾಲಜಿಸ್ಟ್‌ಗಳು ಕೆಲಸ ಮಾಡುತ್ತಿದ್ದಾರೆ ಎಂಬ ಅಂಶದ ಬಗ್ಗೆ ಅವರು ಗಮನ ಸೆಳೆದಿದ್ದಾರೆ. ಆಜ್ ತಕ್ ಮತ್ತು ರಾಮ‌ದೇವ್ ಈ ವಿಷಯದ ಬಗ್ಗೆ ಯಾವುದೇ ಸಂಶೋಧನೆ ನಡೆಸಿಲ್ಲ ಮತ್ತು ವೈರಸ್‌ಗೆ ಪರಿಹಾರವನ್ನು ಕಂಡುಹಿಡಿಯುವ ಕೆಲಸವನ್ನೂ ಮಾಡುತ್ತಿಲ್ಲ.

ಇದಕ್ಕಾಗಿ ಸುಳ್ಳು ಹಬ್ಬಿಸುತ್ತಿರುವ ಆಜ್ತಕ್ ಮತ್ತು ಬಾಬಾ ರಾಮದೇವ್ ಇಬ್ಬರ ವಿರುದ್ಧವೂ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಕೇಳಿದ್ದಾರೆ. ದಾರಿತಪ್ಪಿಸುವ ಮತ್ತು ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಆಜ್ ತಕ್ ಸಾರ್ವಜನಿಕ ಕ್ಷಮೆಯಾಚಿಸಬೇಕು ಹಾಗೂ ಬಾಬಾ ರಾಮದೇವ್ ಅವರನ್ನು ಸುಳ್ಳು ಪ್ರಚಾರ ಮಾಡದಂತೆ ಮಾಧ್ಯಮಗಳಿಂದ ದೂರವಿಡಬೇಕು ಎಂದು ಕೇಳಿಕೊಳ್ಳಲಾಗಿದೆ.


ಓದಿ: ಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ: ರಾಮ್‌ ದೇವ್


ವಿಡಿಯೋ ನೋಡಿ: ಕರ್ನಾಟಕ ಸರ್ಕಾರ ತೆಗೆದುಕೊಂಡ ಮೂರು ಆಘಾತಕಾರಿ, ಕರ್ನಾಟಕ ವಿರೋಧಿ ತೀರ್ಮಾನಗಳು.(Facebook Live)


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...