Homeಕರೋನಾ ತಲ್ಲಣಕೊರೊನಾ ಕುರಿತು ಸುಳ್ಳು ಹರಡಿದ್ದಕ್ಕಾಗಿ ಬಾಬಾ ರಾಮದೇವ್ ವಿರುದ್ದ ಕೇಸು ದಾಖಲು

ಕೊರೊನಾ ಕುರಿತು ಸುಳ್ಳು ಹರಡಿದ್ದಕ್ಕಾಗಿ ಬಾಬಾ ರಾಮದೇವ್ ವಿರುದ್ದ ಕೇಸು ದಾಖಲು

- Advertisement -
- Advertisement -

ಕೊರೊನಾ ವೈರಸ್ ಬಗ್ಗೆ ಸುಳ್ಳು ಸುದ್ದಿ ಹರಡಿದ್ದಾರೆಂದು ಉದ್ಯಮಿ ಬಾಬಾ ರಾಮದೇವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಸೆಲ್ಲಿನ ರಾಷ್ಟ್ರೀಯ ಕನ್ವೀನರ್ ಹಿತೇಂದ್ರ ಪಿಥಾಡಿಯಾ ಅವರು ಬಾಬಾ ರಾಮದೇವ್ ವಿರುದ್ಧ ಕೇಸು ದಾಖಲಿಸಿದ್ದಾರೆ.

ಕೊರೊನಾ ವೈರಸಿನ ವಿರುದ್ದದ ಹೋರಾಟವನ್ನು ತಪ್ಪುದಾರಿಗೆಳೆಯುವ ಮತ್ತು ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಆಜ್ ತಕ್ ಸುದ್ದಿವಾಹಿನಿ ಮತ್ತು ರಾಮ‌ದೇವ್ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ರಾಮ‌ದೇವ್ ಅವರನ್ನು ಮಾಧ್ಯಮಗಳಿಂದ ದೂರವಿಡಬೇಕು ಎಂದು ಅರ್ಜಿದಾರರು ಒತ್ತಾಯಿಸಿದ್ದಾರೆ.

ಏಪ್ರಿಲ್ 25 ರಂದು ಆಜ್ ತಕ್ ಸುದ್ದಿ ಮಾಧ್ಯಮದ “#Covid19 ಗೆ ಏನು ಪರಿಹಾರ” ಎಂಬ ಕಾರ್ಯಕ್ರಮದಲ್ಲಿ ರಾಮ‌ದೇವ್ ಅವರು ಮೂಗಿನ ಮೂಲಕ ಸಾಸಿವೆ ಎಣ್ಣೆಯನ್ನು ಸುರಿದರೆ ಕೊರೊನಾ ವೈರಸ್ ಸಾಯುತ್ತದೆ ಎಂದು ಸಲಹೆ ನೀಡಿದ್ದರು.

ಅಲ್ಲದೆ ಉಸಿರಾಟವನ್ನು ಒಂದು ನಿಮಿಷ ಹಿಡಿದಿಟ್ಟುಕೊಳ್ಳುವುದರಿಂದ ಒಬ್ಬರಿಗೆ ಕೊರೊನಾ ವೈರಸ್ ಇದೆಯೋ ಇಲ್ಲವೋ ಎಂಬುದನ್ನು ಸಾಬೀತು ಪಡಿಸುತ್ತದೆ ಎಂದು ಅವರು ಹೇಳಿದ್ದರು. ಹೀಗೆ ಉಸಿರನ್ನು ಹಿಡಿದಿಡಲು ಸಾಧ್ಯವಾದರೆ ವೈರಸ್ ಇಲ್ಲ ಎಂದರ್ಥ, ಪ್ರಾಣಾಯಾಮ ಮಾಡುವುದರಿಂದ ವೈರಸ್ ವಿರುದ್ಧ ಹೋರಾಡಲು ಸಹಾಯವಾಗುತ್ತದೆ ಎಂದು ಸಲಹೆ ನೀಡಿದ್ದರು.

ಇದಕ್ಕೆ ವಿರುದ್ದ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಸೆಲ್ಲಿನ ರಾಷ್ಟ್ರೀಯ ಕನ್ವೀನರ್ ಹಿತೇಂದ್ರ ಪಿಥಾಡಿಯಾ ಅವರು ರಾಮದೇವ್ ಬಾಬಾ ವಿರುದ್ಧ ಅರ್ಜಿ ಸಲ್ಲಿಸಿ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 52 ಮತ್ತು 54 ರ ಅಡಿಯಲ್ಲಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 401 (1) (ಬಿ) ಮತ್ತು ಐಟಿ ಕಾಯ್ದೆಯ ಸೆಕ್ಷನ್ 66 ರ ಅಡಿಯಲ್ಲಿ ರಾಮ‌ದೇವ್ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ವಿನಂತಿಸಿದ್ದರು.

ಬಾಬಾ ರಾಮದೇವ್

ವೆಜಲ್‌ಪುರದ ನಿವಾಸಿಯಾದ ಹಿತೇಂದ್ರ ಪಿಥಾಡಿಯಾ ಅರ್ಜಿಯಲ್ಲಿ, ಪ್ರೆಸ್ ಇನ್ಫಾರ್ಮೇಷನ್ ಬ್ಯೂರೋದ ಫ್ಯಾಕ್ಟ್ ಚೆಕ್, ಸಾಸಿವೆ ಎಣ್ಣೆಯನ್ನು ಬಳಸುವ ಪ್ರಿಸ್ಕ್ರಿಪ್ಷನ್ ಅನ್ನು ಆಧಾರರಹಿತ ಎಂದು ವಿವರಿಸಲಾಗಿದೆ ಎಂದು ಹೇಳಿದ್ದಾರೆ. ಉಸಿರಾಟವನ್ನು ಹಿಡಿದಿಟ್ಟುಕೊಳ್ಳುವುದರಿಂದ ಕೊರೊನಾ ಲಕ್ಷಣಗಳು ಇದೆಯೇ ಎಂದು ಕಂಡುಹಿಡಿಯಲು ಆಗುವುದಿಲ್ಲ. ಈ ಫ್ಯಾಕ್ಟ್ ಚೆಕ್ ಏಪ್ರಿಲ್ 1 ರಂದು ಮಾಡಲಾಗಿದ್ದು, ರಾಮ‌ದೇವ್ ಇನ್ನೂ ಸಾರ್ವಜನಿಕರನ್ನು ಗೊಂದಲಕ್ಕೀಡುಮಾಡುವ ಮೂಲಕ ಸುಳ್ಳು ಮಾಹಿತಿಯನ್ನು ಹಂಚಿಕೊಳ್ಳುತ್ತಲೇ ಇದ್ದಾರೆ ಎಂದು ಹೇಳಲಾಗಿದೆ.

ವೈರಸ್‌ಗೆ ಪರಿಹಾರ ಕಂಡುಕೊಳ್ಳಲು ತಜ್ಞರು, ಸಂಶೋಧಕರು ಮತ್ತು ವೈರಾಲಜಿಸ್ಟ್‌ಗಳು ಕೆಲಸ ಮಾಡುತ್ತಿದ್ದಾರೆ ಎಂಬ ಅಂಶದ ಬಗ್ಗೆ ಅವರು ಗಮನ ಸೆಳೆದಿದ್ದಾರೆ. ಆಜ್ ತಕ್ ಮತ್ತು ರಾಮ‌ದೇವ್ ಈ ವಿಷಯದ ಬಗ್ಗೆ ಯಾವುದೇ ಸಂಶೋಧನೆ ನಡೆಸಿಲ್ಲ ಮತ್ತು ವೈರಸ್‌ಗೆ ಪರಿಹಾರವನ್ನು ಕಂಡುಹಿಡಿಯುವ ಕೆಲಸವನ್ನೂ ಮಾಡುತ್ತಿಲ್ಲ.

ಇದಕ್ಕಾಗಿ ಸುಳ್ಳು ಹಬ್ಬಿಸುತ್ತಿರುವ ಆಜ್ತಕ್ ಮತ್ತು ಬಾಬಾ ರಾಮದೇವ್ ಇಬ್ಬರ ವಿರುದ್ಧವೂ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಕೇಳಿದ್ದಾರೆ. ದಾರಿತಪ್ಪಿಸುವ ಮತ್ತು ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದಕ್ಕಾಗಿ ಆಜ್ ತಕ್ ಸಾರ್ವಜನಿಕ ಕ್ಷಮೆಯಾಚಿಸಬೇಕು ಹಾಗೂ ಬಾಬಾ ರಾಮದೇವ್ ಅವರನ್ನು ಸುಳ್ಳು ಪ್ರಚಾರ ಮಾಡದಂತೆ ಮಾಧ್ಯಮಗಳಿಂದ ದೂರವಿಡಬೇಕು ಎಂದು ಕೇಳಿಕೊಳ್ಳಲಾಗಿದೆ.


ಓದಿ: ಮೂಗಿನೊಳಕ್ಕೆ ಸಾಸಿವೆ ಎಣ್ಣೆ ಹಾಕಿದರೆ ಕೊರೊನಾ ವೈರಸ್‌ ಸಾಯುತ್ತದೆ: ರಾಮ್‌ ದೇವ್


ವಿಡಿಯೋ ನೋಡಿ: ಕರ್ನಾಟಕ ಸರ್ಕಾರ ತೆಗೆದುಕೊಂಡ ಮೂರು ಆಘಾತಕಾರಿ, ಕರ್ನಾಟಕ ವಿರೋಧಿ ತೀರ್ಮಾನಗಳು.(Facebook Live)


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...