Homeಮುಖಪುಟಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR

ಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR

- Advertisement -
- Advertisement -

ಆಂದ್ರಪ್ರದೇಶ ರಾಜ್ಯ ನಡೆಸುತ್ತಿರುವ ವಿದ್ಯುತ್ ಕಂಪನಿಗೆ ಆಮದು ಕಲ್ಲಿದ್ದಲು ಪೂರೈಕೆ ಮಾಡುವ ಸಲುವಾಗಿ 2010ರಲ್ಲಿ ಟೆಂಡರ್ ಗುತ್ತಿಗೆ ಪಡೆಯಲು ಟೆಂಡರ್ ತಿದ್ದಿದ ಆರೋಪದ ಮೇರೆಗೆ ಗೌತಮ್ ಅದಾನಿ ಮಾಲಿಕತ್ವದ ಕಂಪನಿಯೊಂದರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ ಎಂದು ನ್ಯಾಷನಲ್ ಹೆರಾಲ್ಡ್.ಕಾಮ್ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಲಂತರ್ಗಾಮಿ ನಿರ್ಮಾಣ ಯೋಜನೆಯಲ್ಲಿ ಉದ್ಯಮಿ ಗೌತಮ್ ಅದಾನಿ ಮಾಲಿಕತ್ವದ ಅದಾನಿ ಎಂಟರ್ ಪ್ರೈಸಸ್ ಭಾಗಿಯಾಗಲು ಅವಕಾಶ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸದ ಬೆನ್ನಲ್ಲೇ 2010ರಲ್ಲಿ ಟೆಂಡರ್ ತಿದ್ದಿದ ಆರೋಪದ ಮೇಲೆ ಕಂಪನಿ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಪ್ರಧಾನಿ ನರೇಂದ್ರ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ ಮಾಲಿಕತ್ವದ ಅದಾನಿ ಎಂಟರ್ ಪ್ರೈಸಸ್ ಸಬ್ ಮೆರಿನ್ ಗಳನ್ನು ನಿರ್ಮಾಣ ಮಾಡುವುದರಲ್ಲಿ ಯಾವುದೇ ಅನುಭವವನ್ನು ಹೊಂದಿಲ್ಲ. ಸಬ್ ಮರಿನ್ ನಿರ್ಮಾಣದಲ್ಲಿ ಕಂಪನಿಯು ಶೂನ್ಯ ಸಾಧನೆ ಹೊಂದಿದೆ ಎಂದು ಜನವರಿ 16ರಂದು ಆರೋಪ ಮಾಡಿತ್ತು. ಇದಾದ ಒಂದು ದಿನದಲ್ಲೇ ಕಂಪನಿಯ ವಿರುದ್ದ ಎಫ್ಐಆರ್ ದಾಖಲಿಸಿರುವುದು ಹುಬ್ಬೇರುವಂತೆ ಮಾಡಿದೆ.

ಸಿಬಿಐ ದಾಖಲಿಸಿರುವ ಎಫ್ಐಆರ್ ನಲ್ಲಿ ಆಂದ್ರಪ್ರದೇಶ ಸರ್ಕಾರಿ ಒಡೆತನದ ಕಂಪನಿಗೆ ಆಮದು ಕಲ್ಲಿದ್ದಲನ್ನು ಸರಬರಾಜು ಮಾಡಲು ಅದಾನಿ ಎಂಟರ್ ಪ್ರೈಸಸ್ ಟೆಂಡರ್ ಸಲ್ಲಿಸಿತ್ತು. ಟೆಂಡರ್ ತೆರೆದಾಗ ಅದಾನಿ ಕಂಪನಿ ಅರ್ಹತೆಯನ್ನು ಪಡೆದಿರಲಿಲ್ಲ.. ಆಗ ರಾಷ್ಟ್ರೀಯ ಸಹಕಾರ ಗ್ರಾಹಕರ ಫೆಡರೇಷನ್ ಟೆಂಡರ್ ತಿದ್ದಿ ಅದಾನಿ ಕಂಪನಿಗೆ ಆಮದು ಕಲ್ಲಿದ್ದಲು ಪೂರೈಸಲು ಅವಕಾಶ ಮಾಡಿಕೊಟ್ಟಿತ್ತು ಎಂದು ಆರೋಪಿಸಲಾಗಿದೆ.

ಅಧಿಕಾರಿಗಳು ಯಾವುದೇ ಅಡೆತಡೆಯಿಲ್ಲದೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದರು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸಹಕಾರ ಗ್ರಾಹಕರ ಫೆಡರೇಷನ್ ಅಧ್ಯಕ್ಷ ವೀರೇಂದ್ರ ಸಿಂಗ್, ವ್ಯವಸ್ಥಾಪಕ ನಿರ್ದೇಶಕ ಜಿ.ಪಿ. ಗುಪ್ತ ಹಾಗೂ ಅದಾನಿ ಎಂಟರ್ ಪ್ರೈಸಸ್ ಹಿರಿಯ ಸಲಹೆಗಾರ ಎಸ್.ಸಿ. ಸಿಂಘಾಲ್ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ.

ಸಿಬಿಐ ಎಫ್ಐಆರ್ ನಲ್ಲಿ ಆಂದ್ರಪ್ರದೇಶ ವಿದ್ಯುತ್ ಉತ್ಪಾದನಾ ಕಾರ್ಪೋರೇಷನ್ ಟೆಂಡರ್ ಸಂಬಂಧ 2010ರಲ್ಲಿ ವಿಜಯವಾಡದ ಡಾ.ನಾರ್ಲಾ ಟಾಟಾ ರವ್ ಥರ್ಮಲ್ ಪವರ್ ಪ್ಲಾಂಟ್ ಮತ್ತು ಕಡಪದ ರಾಯಲಸೀಮಾ ಥರ್ಮಲ್ ಪವರ್ ಪ್ಲಾಂಟ್ ಗೆ ಕಾಳಿನಾಡ, ವಿಶಾಖ, ಚನ್ನೈ ಮತ್ತು ಕ್ರಿಷ್ಣಪಟ್ಟಣಂ ಬಂದರು ಮೂಲಕ 6 ಲಕ್ಷ ಮೆಟ್ರಿಕ್ ಟನ್ ಆಮದು ಕಲ್ಲಿದ್ದನ್ನು ಪೂರೈಕೆ ಮಾಡಿರುವುದನ್ನು ಉಲ್ಲೇಖಿಸಲಾಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...