Homeಮುಖಪುಟಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR

ಕಲ್ಲಿದ್ದಲು ಪೂರೈಕೆ ಗುತ್ತಿಗೆಗಾಗಿ ಟೆಂಡರ್ ತಿದ್ದಿದ ಆರೋಪ: ಗೌತಮ್ ಅದಾನಿ ಕಂಪನಿ ವಿರುದ್ಧ FIR

- Advertisement -
- Advertisement -

ಆಂದ್ರಪ್ರದೇಶ ರಾಜ್ಯ ನಡೆಸುತ್ತಿರುವ ವಿದ್ಯುತ್ ಕಂಪನಿಗೆ ಆಮದು ಕಲ್ಲಿದ್ದಲು ಪೂರೈಕೆ ಮಾಡುವ ಸಲುವಾಗಿ 2010ರಲ್ಲಿ ಟೆಂಡರ್ ಗುತ್ತಿಗೆ ಪಡೆಯಲು ಟೆಂಡರ್ ತಿದ್ದಿದ ಆರೋಪದ ಮೇರೆಗೆ ಗೌತಮ್ ಅದಾನಿ ಮಾಲಿಕತ್ವದ ಕಂಪನಿಯೊಂದರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ ಎಂದು ನ್ಯಾಷನಲ್ ಹೆರಾಲ್ಡ್.ಕಾಮ್ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜಲಂತರ್ಗಾಮಿ ನಿರ್ಮಾಣ ಯೋಜನೆಯಲ್ಲಿ ಉದ್ಯಮಿ ಗೌತಮ್ ಅದಾನಿ ಮಾಲಿಕತ್ವದ ಅದಾನಿ ಎಂಟರ್ ಪ್ರೈಸಸ್ ಭಾಗಿಯಾಗಲು ಅವಕಾಶ ನೀಡಿದೆ ಎಂದು ಕಾಂಗ್ರೆಸ್ ಆರೋಪಿಸದ ಬೆನ್ನಲ್ಲೇ 2010ರಲ್ಲಿ ಟೆಂಡರ್ ತಿದ್ದಿದ ಆರೋಪದ ಮೇಲೆ ಕಂಪನಿ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಪ್ರಧಾನಿ ನರೇಂದ್ರ ಮೋದಿ ಆಪ್ತ ಉದ್ಯಮಿ ಗೌತಮ್ ಅದಾನಿ ಮಾಲಿಕತ್ವದ ಅದಾನಿ ಎಂಟರ್ ಪ್ರೈಸಸ್ ಸಬ್ ಮೆರಿನ್ ಗಳನ್ನು ನಿರ್ಮಾಣ ಮಾಡುವುದರಲ್ಲಿ ಯಾವುದೇ ಅನುಭವವನ್ನು ಹೊಂದಿಲ್ಲ. ಸಬ್ ಮರಿನ್ ನಿರ್ಮಾಣದಲ್ಲಿ ಕಂಪನಿಯು ಶೂನ್ಯ ಸಾಧನೆ ಹೊಂದಿದೆ ಎಂದು ಜನವರಿ 16ರಂದು ಆರೋಪ ಮಾಡಿತ್ತು. ಇದಾದ ಒಂದು ದಿನದಲ್ಲೇ ಕಂಪನಿಯ ವಿರುದ್ದ ಎಫ್ಐಆರ್ ದಾಖಲಿಸಿರುವುದು ಹುಬ್ಬೇರುವಂತೆ ಮಾಡಿದೆ.

ಸಿಬಿಐ ದಾಖಲಿಸಿರುವ ಎಫ್ಐಆರ್ ನಲ್ಲಿ ಆಂದ್ರಪ್ರದೇಶ ಸರ್ಕಾರಿ ಒಡೆತನದ ಕಂಪನಿಗೆ ಆಮದು ಕಲ್ಲಿದ್ದಲನ್ನು ಸರಬರಾಜು ಮಾಡಲು ಅದಾನಿ ಎಂಟರ್ ಪ್ರೈಸಸ್ ಟೆಂಡರ್ ಸಲ್ಲಿಸಿತ್ತು. ಟೆಂಡರ್ ತೆರೆದಾಗ ಅದಾನಿ ಕಂಪನಿ ಅರ್ಹತೆಯನ್ನು ಪಡೆದಿರಲಿಲ್ಲ.. ಆಗ ರಾಷ್ಟ್ರೀಯ ಸಹಕಾರ ಗ್ರಾಹಕರ ಫೆಡರೇಷನ್ ಟೆಂಡರ್ ತಿದ್ದಿ ಅದಾನಿ ಕಂಪನಿಗೆ ಆಮದು ಕಲ್ಲಿದ್ದಲು ಪೂರೈಸಲು ಅವಕಾಶ ಮಾಡಿಕೊಟ್ಟಿತ್ತು ಎಂದು ಆರೋಪಿಸಲಾಗಿದೆ.

ಅಧಿಕಾರಿಗಳು ಯಾವುದೇ ಅಡೆತಡೆಯಿಲ್ಲದೆ ಅದಾನಿ ಕಂಪನಿಗೆ ಗುತ್ತಿಗೆ ನೀಡಿದರು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸಹಕಾರ ಗ್ರಾಹಕರ ಫೆಡರೇಷನ್ ಅಧ್ಯಕ್ಷ ವೀರೇಂದ್ರ ಸಿಂಗ್, ವ್ಯವಸ್ಥಾಪಕ ನಿರ್ದೇಶಕ ಜಿ.ಪಿ. ಗುಪ್ತ ಹಾಗೂ ಅದಾನಿ ಎಂಟರ್ ಪ್ರೈಸಸ್ ಹಿರಿಯ ಸಲಹೆಗಾರ ಎಸ್.ಸಿ. ಸಿಂಘಾಲ್ ವಿರುದ್ದ ಎಫ್ಐಆರ್ ದಾಖಲಿಸಲಾಗಿದೆ.

ಸಿಬಿಐ ಎಫ್ಐಆರ್ ನಲ್ಲಿ ಆಂದ್ರಪ್ರದೇಶ ವಿದ್ಯುತ್ ಉತ್ಪಾದನಾ ಕಾರ್ಪೋರೇಷನ್ ಟೆಂಡರ್ ಸಂಬಂಧ 2010ರಲ್ಲಿ ವಿಜಯವಾಡದ ಡಾ.ನಾರ್ಲಾ ಟಾಟಾ ರವ್ ಥರ್ಮಲ್ ಪವರ್ ಪ್ಲಾಂಟ್ ಮತ್ತು ಕಡಪದ ರಾಯಲಸೀಮಾ ಥರ್ಮಲ್ ಪವರ್ ಪ್ಲಾಂಟ್ ಗೆ ಕಾಳಿನಾಡ, ವಿಶಾಖ, ಚನ್ನೈ ಮತ್ತು ಕ್ರಿಷ್ಣಪಟ್ಟಣಂ ಬಂದರು ಮೂಲಕ 6 ಲಕ್ಷ ಮೆಟ್ರಿಕ್ ಟನ್ ಆಮದು ಕಲ್ಲಿದ್ದನ್ನು ಪೂರೈಕೆ ಮಾಡಿರುವುದನ್ನು ಉಲ್ಲೇಖಿಸಲಾಗಿದೆ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...