Homeಮುಖಪುಟ'ಅನ್ನಪೂರಣಿ' ಸಿನಿಮಾ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಲ್ಲಿ ಪ್ರಕರಣ ದಾಖಲು

‘ಅನ್ನಪೂರಣಿ’ ಸಿನಿಮಾ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಲ್ಲಿ ಪ್ರಕರಣ ದಾಖಲು

- Advertisement -
- Advertisement -

ನಯನತಾರಾ ಮತ್ತು ಜೈ ಸಂಪತ್‌ ನಟನೆಯ ಚಲನಚಿತ್ರ ‘ಅನ್ನಪೂರಣಿ’ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ,  ‘ಲವ್ ಜಿಹಾದ್’ ಪರ ಪ್ರಚಾರ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆಯ ಮಾಜಿ ಕಾರ್ಯಕರ್ತ ರಮೇಶ್ ಸೋಲಂಕಿ ಮುಂಬೈನಲ್ಲಿ ‘ಅನ್ನಪೂರಣಿ’ ತಮಿಳು ಚಲನ ಚಿತ್ರದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಚಲನಚಿತ್ರವು ಲವ್ ಜಿಹಾದ್‌ನ್ನು ಉತ್ತೇಜಿಸುತ್ತದೆ ಮತ್ತು ಅದರ ಒಂದು ಪಾತ್ರವು ವಾಲ್ಮೀಕಿ ರಾಮಾಯಣವನ್ನು ತಪ್ಪಾಗಿ ಅರ್ಥೈಸುತ್ತದೆ, ಭಗವಾನ್ ರಾಮನನ್ನು ‘ಮಾಂಸ ಭಕ್ಷಕ’ ಎಂದು ಚಿತ್ರಿಸುತ್ತದೆ ಎಂದು ಆರೋಪಿಸಿ ಮುಂಬೈನ ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಿದ್ದಾರೆ.

ನಟಿ ನಯನತಾರಾ, ನಿರ್ದೇಶಕರಾದ ನೀಲೇಶ್ ಕೃಷ್ಣ ಮತ್ತು ನಿರ್ಮಾಪಕರಾದ ಜತಿನ್ ಸೇಥಿ, ಆರ್ ರವೀಂದ್ರನ್ ಮತ್ತು ಪುನಿತ್ ಗೋಯೆಂಕಾ, ಜೀ ಸ್ಟುಡಿಯೋಸ್, ಶಾರಿಕ್ ಪಟೇಲ್ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾದ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಮೇಶ್‌ ಸೋಲಂಕಿ, ನಾನು AntiHinduZee ಮತ್ತು #AntiHinduNetflix ವಿರುದ್ಧ ದೂರು ದಾಖಲಿಸಿದ್ದೇನೆ. ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಸಿನಿಮಾ ಅನ್ನಪೂರಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡಲು ನಮಾಜ್ ಮಾಡುತ್ತಾಳೆ, ಈ ಚಿತ್ರದಲ್ಲಿ ಲವ್ ಜಿಹಾದ್‌ ಪರ ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸಾಹಾರಿ ಎಂದು ನಟಿಯನ್ನು ಮಾಂಸ ತಿನ್ನಲು ಮನವೊಲಿಸುವುದು ಚಿತ್ರದಲ್ಲಿದೆ. @NetflixIndia
ಮತ್ತು @ZeeStudios_ ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಈ ಸಿನಿಮಾ ಮಾಡಿ    ಮಂದಿರದ ಪ್ರಾಣ ಪ್ರತಿಷ್ಠೆಯ ವೇಳೆ ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದಾರೆ.

‘ಅನ್ನಪೂರಣಿ’ಯನ್ನು ಜತಿನ್ ಸೇಥಿ ಮತ್ತು ಆರ್ ರವೀಂದ್ರನ್ ಜಂಟಿಯಾಗಿ ನಿರ್ಮಿಸಿದ್ದಾರೆ. ನಯನತಾರಾ, ಜೈ ಸಂಪತ್‌, ಸತ್ಯರಾಜ್, ರೆಡಿನ್ ಕಿಂಗ್ಸ್ಲಿ, ಸುರೇಶ್ ಚಕ್ರವರ್ತಿ, ರೇಣುಕಾ ಮತ್ತು ಕೆಎಸ್ ರವಿಕುಮಾರ್ ಸಹ ನಟಿಸಿದ್ದಾರೆ. ತಮನ್ ಎಸ್ ಸಂಗೀತ ಸಂಯೋಜಿಸಿದ್ದು, ಸತ್ಯನ್ ಸೂರ್ಯನ್ ಛಾಯಾಗ್ರಹಣವಿದೆ.

‘ಅನ್ನಪೂರಣಿ’ ನಯನತಾರಾ ಅಭಿನಯಿಸುತ್ತಿರುವ 75ನೇ ಸಿನಿಮಾ. ಈ ಚಿತ್ರಕ್ಕೆ ನಿಲೇಶ್ ಕೃಷ್ಣ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಯುವತಿಯೊಬ್ಬಳು ಸಮಾಜದ ವಿರೋಧದ ನಡುವೆ ಹೇಗೆ ಶೆಫ್ ಆಗುವ ಕನಸನ್ನು ನನಸಾಗಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಎನ್ನುವುದರ ಸುತ್ತ ಕಥೆ ಸಾಗುತ್ತದೆ. ಬ್ರಾಹ್ಮಣರ ಮನೆತನದ ಯುವತಿ ಮಾಂಸಾಹಾರ ತಯಾರಿಸುವ ಸವಾಲನ್ನು ಹೇಗೆ ನಿಭಾಯಿಸುತ್ತಾಳೆ ಎನ್ನುವುದು ಸಿನಿಮಾದ ಕಥೆಯಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...