Homeಮುಖಪುಟ'ಅನ್ನಪೂರಣಿ' ಸಿನಿಮಾ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಲ್ಲಿ ಪ್ರಕರಣ ದಾಖಲು

‘ಅನ್ನಪೂರಣಿ’ ಸಿನಿಮಾ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಲ್ಲಿ ಪ್ರಕರಣ ದಾಖಲು

- Advertisement -
- Advertisement -

ನಯನತಾರಾ ಮತ್ತು ಜೈ ಸಂಪತ್‌ ನಟನೆಯ ಚಲನಚಿತ್ರ ‘ಅನ್ನಪೂರಣಿ’ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ,  ‘ಲವ್ ಜಿಹಾದ್’ ಪರ ಪ್ರಚಾರ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆಯ ಮಾಜಿ ಕಾರ್ಯಕರ್ತ ರಮೇಶ್ ಸೋಲಂಕಿ ಮುಂಬೈನಲ್ಲಿ ‘ಅನ್ನಪೂರಣಿ’ ತಮಿಳು ಚಲನ ಚಿತ್ರದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಚಲನಚಿತ್ರವು ಲವ್ ಜಿಹಾದ್‌ನ್ನು ಉತ್ತೇಜಿಸುತ್ತದೆ ಮತ್ತು ಅದರ ಒಂದು ಪಾತ್ರವು ವಾಲ್ಮೀಕಿ ರಾಮಾಯಣವನ್ನು ತಪ್ಪಾಗಿ ಅರ್ಥೈಸುತ್ತದೆ, ಭಗವಾನ್ ರಾಮನನ್ನು ‘ಮಾಂಸ ಭಕ್ಷಕ’ ಎಂದು ಚಿತ್ರಿಸುತ್ತದೆ ಎಂದು ಆರೋಪಿಸಿ ಮುಂಬೈನ ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಿದ್ದಾರೆ.

ನಟಿ ನಯನತಾರಾ, ನಿರ್ದೇಶಕರಾದ ನೀಲೇಶ್ ಕೃಷ್ಣ ಮತ್ತು ನಿರ್ಮಾಪಕರಾದ ಜತಿನ್ ಸೇಥಿ, ಆರ್ ರವೀಂದ್ರನ್ ಮತ್ತು ಪುನಿತ್ ಗೋಯೆಂಕಾ, ಜೀ ಸ್ಟುಡಿಯೋಸ್, ಶಾರಿಕ್ ಪಟೇಲ್ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾದ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಮೇಶ್‌ ಸೋಲಂಕಿ, ನಾನು AntiHinduZee ಮತ್ತು #AntiHinduNetflix ವಿರುದ್ಧ ದೂರು ದಾಖಲಿಸಿದ್ದೇನೆ. ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಸಿನಿಮಾ ಅನ್ನಪೂರಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡಲು ನಮಾಜ್ ಮಾಡುತ್ತಾಳೆ, ಈ ಚಿತ್ರದಲ್ಲಿ ಲವ್ ಜಿಹಾದ್‌ ಪರ ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸಾಹಾರಿ ಎಂದು ನಟಿಯನ್ನು ಮಾಂಸ ತಿನ್ನಲು ಮನವೊಲಿಸುವುದು ಚಿತ್ರದಲ್ಲಿದೆ. @NetflixIndia
ಮತ್ತು @ZeeStudios_ ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಈ ಸಿನಿಮಾ ಮಾಡಿ    ಮಂದಿರದ ಪ್ರಾಣ ಪ್ರತಿಷ್ಠೆಯ ವೇಳೆ ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದಾರೆ.

‘ಅನ್ನಪೂರಣಿ’ಯನ್ನು ಜತಿನ್ ಸೇಥಿ ಮತ್ತು ಆರ್ ರವೀಂದ್ರನ್ ಜಂಟಿಯಾಗಿ ನಿರ್ಮಿಸಿದ್ದಾರೆ. ನಯನತಾರಾ, ಜೈ ಸಂಪತ್‌, ಸತ್ಯರಾಜ್, ರೆಡಿನ್ ಕಿಂಗ್ಸ್ಲಿ, ಸುರೇಶ್ ಚಕ್ರವರ್ತಿ, ರೇಣುಕಾ ಮತ್ತು ಕೆಎಸ್ ರವಿಕುಮಾರ್ ಸಹ ನಟಿಸಿದ್ದಾರೆ. ತಮನ್ ಎಸ್ ಸಂಗೀತ ಸಂಯೋಜಿಸಿದ್ದು, ಸತ್ಯನ್ ಸೂರ್ಯನ್ ಛಾಯಾಗ್ರಹಣವಿದೆ.

‘ಅನ್ನಪೂರಣಿ’ ನಯನತಾರಾ ಅಭಿನಯಿಸುತ್ತಿರುವ 75ನೇ ಸಿನಿಮಾ. ಈ ಚಿತ್ರಕ್ಕೆ ನಿಲೇಶ್ ಕೃಷ್ಣ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಯುವತಿಯೊಬ್ಬಳು ಸಮಾಜದ ವಿರೋಧದ ನಡುವೆ ಹೇಗೆ ಶೆಫ್ ಆಗುವ ಕನಸನ್ನು ನನಸಾಗಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಎನ್ನುವುದರ ಸುತ್ತ ಕಥೆ ಸಾಗುತ್ತದೆ. ಬ್ರಾಹ್ಮಣರ ಮನೆತನದ ಯುವತಿ ಮಾಂಸಾಹಾರ ತಯಾರಿಸುವ ಸವಾಲನ್ನು ಹೇಗೆ ನಿಭಾಯಿಸುತ್ತಾಳೆ ಎನ್ನುವುದು ಸಿನಿಮಾದ ಕಥೆಯಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...