Homeಮುಖಪುಟ'ಅನ್ನಪೂರಣಿ' ಸಿನಿಮಾ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಲ್ಲಿ ಪ್ರಕರಣ ದಾಖಲು

‘ಅನ್ನಪೂರಣಿ’ ಸಿನಿಮಾ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ ಆರೋಪದಲ್ಲಿ ಪ್ರಕರಣ ದಾಖಲು

- Advertisement -
- Advertisement -

ನಯನತಾರಾ ಮತ್ತು ಜೈ ಸಂಪತ್‌ ನಟನೆಯ ಚಲನಚಿತ್ರ ‘ಅನ್ನಪೂರಣಿ’ ವಿರುದ್ಧ ಧಾರ್ಮಿಕ ಭಾವನೆಗೆ ಧಕ್ಕೆ,  ‘ಲವ್ ಜಿಹಾದ್’ ಪರ ಪ್ರಚಾರ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಶಿವಸೇನೆಯ ಮಾಜಿ ಕಾರ್ಯಕರ್ತ ರಮೇಶ್ ಸೋಲಂಕಿ ಮುಂಬೈನಲ್ಲಿ ‘ಅನ್ನಪೂರಣಿ’ ತಮಿಳು ಚಲನ ಚಿತ್ರದ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಚಲನಚಿತ್ರವು ಲವ್ ಜಿಹಾದ್‌ನ್ನು ಉತ್ತೇಜಿಸುತ್ತದೆ ಮತ್ತು ಅದರ ಒಂದು ಪಾತ್ರವು ವಾಲ್ಮೀಕಿ ರಾಮಾಯಣವನ್ನು ತಪ್ಪಾಗಿ ಅರ್ಥೈಸುತ್ತದೆ, ಭಗವಾನ್ ರಾಮನನ್ನು ‘ಮಾಂಸ ಭಕ್ಷಕ’ ಎಂದು ಚಿತ್ರಿಸುತ್ತದೆ ಎಂದು ಆರೋಪಿಸಿ ಮುಂಬೈನ ಎಲ್‌ಟಿ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಈ ಎಫ್‌ಐಆರ್ ದಾಖಲಿಸಿದ್ದಾರೆ.

ನಟಿ ನಯನತಾರಾ, ನಿರ್ದೇಶಕರಾದ ನೀಲೇಶ್ ಕೃಷ್ಣ ಮತ್ತು ನಿರ್ಮಾಪಕರಾದ ಜತಿನ್ ಸೇಥಿ, ಆರ್ ರವೀಂದ್ರನ್ ಮತ್ತು ಪುನಿತ್ ಗೋಯೆಂಕಾ, ಜೀ ಸ್ಟುಡಿಯೋಸ್, ಶಾರಿಕ್ ಪಟೇಲ್ ಮತ್ತು ನೆಟ್‌ಫ್ಲಿಕ್ಸ್ ಇಂಡಿಯಾದ ಮುಖ್ಯಸ್ಥೆ ಮೋನಿಕಾ ಶೆರ್ಗಿಲ್ ವಿರುದ್ಧ ದೂರು ದಾಖಲಿಸಲಾಗಿದೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ರಮೇಶ್‌ ಸೋಲಂಕಿ, ನಾನು AntiHinduZee ಮತ್ತು #AntiHinduNetflix ವಿರುದ್ಧ ದೂರು ದಾಖಲಿಸಿದ್ದೇನೆ. ಭಗವಾನ್ ಶ್ರೀರಾಮ ಮಂದಿರದ ಪ್ರಾಣ ಪ್ರತಿಷ್ಠೆಯ ನಿರೀಕ್ಷೆಯಲ್ಲಿ ಇಡೀ ವಿಶ್ವವೇ ಸಂಭ್ರಮಿಸುತ್ತಿರುವ ಈ ಹೊತ್ತಿನಲ್ಲಿ ಝೀ ಸ್ಟುಡಿಯೋಸ್, ನಾಡ್ ಸ್ಟುಡಿಯೋಸ್ ಮತ್ತು ಟ್ರೈಡೆಂಟ್ ಆರ್ಟ್ಸ್ ನಿರ್ಮಾಣದ ಈ ಹಿಂದೂ ವಿರೋಧಿ ಸಿನಿಮಾ ಅನ್ನಪೂರಿ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

ಹಿಂದೂ ಪೂಜಾರಿಯ ಮಗಳು ಬಿರಿಯಾನಿ ಅಡುಗೆ ಮಾಡಲು ನಮಾಜ್ ಮಾಡುತ್ತಾಳೆ, ಈ ಚಿತ್ರದಲ್ಲಿ ಲವ್ ಜಿಹಾದ್‌ ಪರ ಪ್ರಚಾರ ಮಾಡಲಾಗಿದೆ. ಫರ್ಹಾನ್ (ನಟ) ಭಗವಾನ್ ಶ್ರೀ ರಾಮ್ ಕೂಡ ಮಾಂಸಾಹಾರಿ ಎಂದು ನಟಿಯನ್ನು ಮಾಂಸ ತಿನ್ನಲು ಮನವೊಲಿಸುವುದು ಚಿತ್ರದಲ್ಲಿದೆ. @NetflixIndia
ಮತ್ತು @ZeeStudios_ ಹಿಂದೂ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ಈ ಸಿನಿಮಾ ಮಾಡಿ    ಮಂದಿರದ ಪ್ರಾಣ ಪ್ರತಿಷ್ಠೆಯ ವೇಳೆ ಬಿಡುಗಡೆ ಮಾಡಿದೆ ಎಂದು ಆರೋಪಿಸಿದ್ದಾರೆ.

‘ಅನ್ನಪೂರಣಿ’ಯನ್ನು ಜತಿನ್ ಸೇಥಿ ಮತ್ತು ಆರ್ ರವೀಂದ್ರನ್ ಜಂಟಿಯಾಗಿ ನಿರ್ಮಿಸಿದ್ದಾರೆ. ನಯನತಾರಾ, ಜೈ ಸಂಪತ್‌, ಸತ್ಯರಾಜ್, ರೆಡಿನ್ ಕಿಂಗ್ಸ್ಲಿ, ಸುರೇಶ್ ಚಕ್ರವರ್ತಿ, ರೇಣುಕಾ ಮತ್ತು ಕೆಎಸ್ ರವಿಕುಮಾರ್ ಸಹ ನಟಿಸಿದ್ದಾರೆ. ತಮನ್ ಎಸ್ ಸಂಗೀತ ಸಂಯೋಜಿಸಿದ್ದು, ಸತ್ಯನ್ ಸೂರ್ಯನ್ ಛಾಯಾಗ್ರಹಣವಿದೆ.

‘ಅನ್ನಪೂರಣಿ’ ನಯನತಾರಾ ಅಭಿನಯಿಸುತ್ತಿರುವ 75ನೇ ಸಿನಿಮಾ. ಈ ಚಿತ್ರಕ್ಕೆ ನಿಲೇಶ್ ಕೃಷ್ಣ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಯುವತಿಯೊಬ್ಬಳು ಸಮಾಜದ ವಿರೋಧದ ನಡುವೆ ಹೇಗೆ ಶೆಫ್ ಆಗುವ ಕನಸನ್ನು ನನಸಾಗಿಸಿಕೊಳ್ಳಲು ಪ್ರಯತ್ನಿಸುತ್ತಾಳೆ ಎನ್ನುವುದರ ಸುತ್ತ ಕಥೆ ಸಾಗುತ್ತದೆ. ಬ್ರಾಹ್ಮಣರ ಮನೆತನದ ಯುವತಿ ಮಾಂಸಾಹಾರ ತಯಾರಿಸುವ ಸವಾಲನ್ನು ಹೇಗೆ ನಿಭಾಯಿಸುತ್ತಾಳೆ ಎನ್ನುವುದು ಸಿನಿಮಾದ ಕಥೆಯಾಗಿದೆ.

ಇದನ್ನು ಓದಿ: ಬಿಲ್ಕಿಸ್ ಬಾನುಗೆ ನ್ಯಾಯಕ್ಕಾಗಿ ಹೋರಾಡಿದ ಮಹಿಳೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...