Homeಮುಖಪುಟಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ಹತ್ರಾಸ್: ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ 200 ಕಾರ್ಯಕರ್ತರ ವಿರುದ್ಧ FIR

ರಾಹುಲ್ ಪ್ರಿಯಾಂಕಾ ಇಬ್ಬರನ್ನು ಬಂಧಿಸಿ ಸ್ವಲ್ಪ ಸಮಯದವರೆಗೆ ಅತಿಥಿ ಗೃಹದಲ್ಲಿ ಇರಿಸಲಾಗಿತ್ತು. ನಂತರ, ಅವರನ್ನು ಯುಪಿ ಪೊಲೀಸರು ಬಿಡುಗಡೆ ಮಾಡಿ ಮತ್ತೆ ದೆಹಲಿಗೆ ಕರೆದೊಯ್ದಿದ್ದರು.

- Advertisement -
- Advertisement -

ಹತ್ರಾಸ್ ಅತ್ಯಾಚಾರ ಪ್ರಕರಣದ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಲು ಪಾದಯಾತ್ರೆ ಹೊರಟಿದ್ದ ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿ ಸುಮಾರು 200 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಂತರ ಕಾಯ್ದುಕೊಳ್ಳದ ಮತ್ತು ಮಾಸ್ಕ್ ಧರಿಸದ ಕಾರಣಕ್ಕಾಗಿ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಎಫ್‌ಐಆರ್ ಹಾಕಲಾಗಿದೆ ಎಂದು ಉತ್ತರ ಪ್ರದೇಶದ ಗೌತಮ್ ಬುದ್ಧ ನಗರದ ಪೋಲೀಸರು ಹೇಳಿದ್ದಾರೆ.

ಹತ್ರಾಸ್‌ನಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೃತಪಟ್ಟಿದ್ದ ದಲಿತ ಯುವತಿ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಕಾಂಗ್ರೆಸ್ ಮುಖಂಡರು ಹೊರಟಿದ್ದರು. ಹತ್ರಾಸ್‌ಗೆ ಭೇಟಿ ನೀಡಲು ಹೊರಟ ಸುದ್ದಿ ಬರುತ್ತಿದ್ದಂತೆ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು.

ನಿಷೇದಾಜ್ಞೆ ನಡುವೆಯೂ ಹೊರಟ ಕಾಂಗ್ರೆಸ್ ನಾಯಕರ ಕಾರುಗಳನ್ನು ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ತಡೆಯಲಾಗಿತ್ತು. ಆದರೆ ತಾವು ಹತ್ರಾಸ್‌ಗೆ ಭೇಟಿ ನೀಡಿಯೇ ನೀಡುತ್ತೇವೆ ಎಂದು ಪಾದಯಾತ್ರೆ ಹೊರಟ್ಟಿದ್ದ ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶ ಪೊಲೀಸರು ವಶಕ್ಕೆ ಪಡೆದಿದ್ದರು. ಆ ವೇಳೆ ನೂಕುನುಗ್ಗಲು, ತಳ್ಳಾಟ ಉಂಟಾಗಿ ರಾಹುಲ್ ಗಾಂಧಿ ನೆಲಕ್ಕೆ ಬಿದ್ದಿದ್ದರು. ದೆಹಲಿಯ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಬಟ್ಟೆ ಹರಿದುಹೋಗಿತ್ತು. ಈ ಘಟನೆಗೆ ರಾಷ್ಟ್ರಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ: ಹತ್ರಾಸ್‌‌: ರಾಹುಲ್ ಗಾಂಧಿ ಮೇಲಿನ ಪೊಲೀಸ್‌ ದೌರ್ಜನ್ಯ ಖಂಡಿಸಿದ ಕುಮಾರಸ್ವಾಮಿ

ರಾಹುಲ್ ಪ್ರಿಯಾಂಕಾ ಇಬ್ಬರನ್ನು ಬಂಧಿಸಿ ಸ್ವಲ್ಪ ಸಮಯದವರೆಗೆ ಅತಿಥಿ ಗೃಹದಲ್ಲಿ ಇರಿಸಲಾಗಿತ್ತು. ನಂತರ, ಅವರನ್ನು ಯುಪಿ ಪೊಲೀಸರು ಬಿಡುಗಡೆ ಮಾಡಿ ಮತ್ತೆ ದೆಹಲಿಗೆ ಕರೆದೊಯ್ದಿದ್ದರು.

ಸದ್ಯ ಗೌತಮ್ ಬುದ್ದ ನಗರ ಪೊಲೀಸರು ಎಫ್‌ಐಆರ್ ಅನ್ನು ಭಾರತೀಯ ದಂಡ ಸಂಹಿತೆ ಸೆಕ್ಷನ್ 188 (ಸಾರ್ವಜನಿಕ ಸೇವಕರಾಗಿದ್ದುಕೊಂಡು ಆದೇಶ ಪಾಲನೆ ಮಾಡದಿರುವುದು), ಸೆಕ್ಷನ್ 269 (ಕಾನೂನುಬಾಹಿರ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಅಪಾಯಕಾರಿಯಾದ ಯಾವುದೇ ರೋಗದ ಸೋಂಕನ್ನು ಹರಡುವುದು), ಸೆಕ್ಷನ್ 270 (ಜೀವಕ್ಕೆ ಅಪಾಯಕಾರಿ ರೋಗದ ಸೋಂಕನ್ನು ಹರಡುವ ಸಾಧ್ಯತೆ) ಮತ್ತು ಸಾಂಕ್ರಾಮಿಕ ರೋಗಗಳ ಕಾಯ್ದೆಯ ಸೆಕ್ಷನ್ 3ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಗೌತಮ್ ಬುದ್ಧ ನಗರದ ಪೊಲೀಸರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ. ‘ಪಕ್ಷದ ಕೆಲವು ಕಾರ್ಯಕರ್ತರು ಹಲ್ಲೆ ನಡೆಸಿದ ಕಾರಣ ಮಹಿಳಾ ಕಾನ್‌ಸ್ಟೆಬಲ್‌ಗಳು ಗಾಯಗೊಂಡಿದ್ದಾರೆ. ಅಲ್ಲದೆ ಮಹಿಳಾ ಸಬ್ ಇನ್ಸ್‌ಪೆಕ್ಟರ್‌ನ ಸಮವಸ್ತ್ರ ಹರಿದುಹೋಗಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬಂಧನವನ್ನು ಖಂಡಿಸಿ ದೇಶದಾದ್ಯಂತ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಸೇರಿ ವಿವಿಧ ಪಕ್ಷಗಳ ಮುಖಂಡರು ಟ್ವೀಟ್ ಮಾಡಿ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಟೀಕಿಸಿದ್ದರು.


ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ, ರಾಹುಲ್ ಗಾಂಧಿ ಮೇಲೆ ಹಲ್ಲೆ ಖಂಡಿಸಿ ಬೀದಿಗಿಳಿದ ಕಾಂಗ್ರೆಸ್: ಪಂಜಿನ ಮೆರವಣಿಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...