Homeಮುಖಪುಟಮಹಾರಾಷ್ಟ್ರದಲ್ಲಿ ಸರ್ಕಾರವನ್ನು ಟೀಕಿಸುವ ಹಾಡು ಹಾಡಿದ್ದಕ್ಕೆ ರ‍್ಯಾಪರ್​​ಗಳ ವಿರುದ್ದ ಎಫ್‌ಐಆರ್‌ ದಾಖಲು

ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ಟೀಕಿಸುವ ಹಾಡು ಹಾಡಿದ್ದಕ್ಕೆ ರ‍್ಯಾಪರ್​​ಗಳ ವಿರುದ್ದ ಎಫ್‌ಐಆರ್‌ ದಾಖಲು

- Advertisement -
- Advertisement -

ಬಿಜೆಪಿ-ಶಿವಸೇನೆ ನೇತೃತ್ವದ ಸರ್ಕಾರ ಮತ್ತು ಆಡಳಿತ ವ್ಯವಸ್ಥೆಯನ್ನು ಟೀಕಿಸುವ ಹಾಡು ಹಾಡಿದ ಕಾರಣಕ್ಕೆ ಮಹಾರಾಷ್ಟ್ರದಲ್ಲಿ ರ‍್ಯಾಪರ್​​ಗಳ ವಿರುದ್ಧ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ. ಇಬ್ಬರು ರ‍್ಯಾಪರ್​​ಗಳ ಮೇಲೆ ಪ್ರತ್ಯೇಕ ಮೊಕದ್ದಮೆಗಳನ್ನು ಹೂಡಲಾಗಿದ್ದು, ವಿಚಾರಣೆಗೂ ಒಳಪಡಿಸಲಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ಅವಹೇಳನಕಾರಿ ಭಾಷೆ ಬಳಸಿದ ಆರೋಪದಲ್ಲಿ ಬುಧವಾರ ರ‍್ಯಾಪರ್​​ ರಾಜ್ ಮುಂಗ್ಸೆ ವಿರುದ್ಧ ಥಾಣೆ ಜಿಲ್ಲೆಯ ಅಂಬರನಾಥ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರ‍್ಯಾಪರ್​​ ರಾಜ್ ಮುಂಗ್ಸೆ ತಮ್ಮ ಹಾಡಿನಲ್ಲಿ ಯಾರ ಹೆಸರನ್ನೂ ಬಳಸದೆ ಬಳಸದೇ ಸರ್ಕಾರವನ್ನು ಟೀಕಿಸಿದ್ದರು ಎನ್ನಲಾಗಿದೆ.

ಶುಕ್ರವಾರ ಮುಂಬೈನ ವಡಾಲಾ ಪ್ರದೇಶದ ಮತ್ತೋರ್ವ ರ‍್ಯಾಪರ್ ಉಮೇಶ್ ಖಾಡೆ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅಪರಾಧ ಗುಪ್ತಚರ ಘಟಕದ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇಲೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ರ‍್ಯಾಪರ್ ಉಮೇಶ್ ಖಾಡೆ ಅವರು ”ಭೋಂಗ್ಲಿ ಕೇಲಿ ಜನತಾ” (ನೀವು ನಾಗರಿಕರನ್ನು ಬೆತ್ತಲೆಯಾಗಿಸಿದ್ದೀರಿ) ಎಂಬ ಹಾಡನ್ನು ಹಾಡಿದ್ದು, ಇದನ್ನು ತಮ್ಮ ಶಂಭೋ ಎಂಬ ಖಾತೆಯ ಹೆಸರನ್ನು ಹೊಂದಿರುವ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದರು. ಇದು ರಾಜಕಾರಣಿಗಳ ಸ್ವಾರ್ಥ ಮತ್ತು ಜನಸಾಮಾನ್ಯರ ಸಂಕಷ್ಟಗಳ ಬಗ್ಗೆ ಒಳಗೊಂಡಿದೆ. ಈ ಹಾಡು ವೈರಲ್ ಆಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ; ಅಮಾನತುಗೊಂಡ ಬಿಜೆಪಿ ಶಾಸಕನ ವಿರುದ್ಧ ಎಫ್ಐಆರ್

ಉಪ ಪೊಲೀಸ್ ಕಮಿಷನರ್ (ಬಂದರು ವಲಯ) ಸಂಜಯ್ ಲಾಟ್ಕರ್ ಮಿಡ್ ಡೇ ಅವರು ಖಾಡೆ ಅವರನ್ನು ಗುರುವಾರ ವಿಚಾರಣೆಗೆ ಕರೆಯಲಾಯಿತು. ಆನಂತರ ಅವರನ್ನು ಹೋಗಲು ಅನುಮತಿಸಲಾಗಿದೆ ಬಂಧಿಸಿಲ್ಲ ಎಂದು ಶನಿವಾರ ಪಿಟಿಐ ವರದಿ ಮಾಡಿದೆ. ಅಗತ್ಯವಿದ್ದಾಗ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಖಾಡೆ ಅವರಿಗೆ ಸೂಚನೆ ನೀಡಲಾಗಿದೆ ಎಂದು ಲಾಟ್ಕರ್ ಹೇಳಿದರು.

ಕಲಾವಿದನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶಪೂರ್ವಕ ಅವಮಾನ), 505(2) (ದ್ವೇಷ, ಅಥವಾ ಕೆಟ್ಟ ಇಚ್ಛೆಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ- 2000ರ ಸೆಕ್ಷನ್ 67 (ವಿದ್ಯುನ್ಮಾನ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸುವುದು ಅಥವಾ ರವಾನಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಮಧ್ಯೆ ಖಾಡೆ ಅವರ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಶಾಸಕ ಜಿತೇಂದ್ರ ಅವ್ಹಾದ್ ಆರೋಪಿಸಿದರು. ರಾಪರ್ ವಿರುದ್ಧದ ಪ್ರಕರಣವನ್ನು ಟೀಕಿಸಿದ ಅವರು, ಇದರಲ್ಲಿ ಯಾವುದೇ ಆಕ್ಷೇಪಾರ್ಹವಾದ ಸಾಹಿತ್ಯ ಇಲ್ಲ ಎಂದು ಹೇಳಿದರು.

”ಅವರು [ಖಾಡೆ] ಯಾರನ್ನೂ ಹೆಸರಿಸಿಲ್ಲ” ಎಂದು ಅವದ್ ಹೇಳಿದರು. ”ಅವರು ಈ ಹಾಡಿನಲ್ಲಿ ತಮ್ಮ ಬಡತನದ ಬಗ್ಗೆ ಹೇಳಿದ್ದಾರೆ. ಈಗ, ನಿಮ್ಮ ಕುಂದುಕೊರತೆಗಳನ್ನು ವ್ಯಕ್ತಪಡಿಸುವುದು ಅಪರಾಧವಾಗಿದ್ದರೆ, ತಮ್ಮ ತಲ್ಲಣವನ್ನು ಹೊರಹಾಕುವ ಪ್ರತಿಯೊಬ್ಬರನ್ನು ಬಂಧಿಸಿ” ಎಂದು ಜಿತೇಂದ್ರ ಅವ್ಹಾದ್ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...