Homeಮುಖಪುಟಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ ಯುಪಿ ಶಿಕ್ಷಕಿ ವಿರುದ್ಧ FIR ದಾಖಲು

ಮುಸ್ಲಿಂ ವಿದ್ಯಾರ್ಥಿಗೆ ಹಿಂದೂ ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ ಯುಪಿ ಶಿಕ್ಷಕಿ ವಿರುದ್ಧ FIR ದಾಖಲು

- Advertisement -
- Advertisement -

ಏಳು ವರ್ಷದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿಯೊಬ್ಬರು ಇನ್ನುಳಿದ ವಿದ್ಯಾರ್ಥಿಗಳಿಗೆ ಆದೇಶಿಸಿದ ಭಯಾನಕ ವಿಡಿಯೋವೊಂದು ಶುಕ್ರವಾರ ವೈರಲ್ ಆಗಿದೆ. ಇದೀಗ ಆ ಖಾಸಗಿ ಶಾಲೆಯ ಶಿಕ್ಷಕಿಯ ವಿರುದ್ಧ ಗುರುತಿಸಲಾಗದ ಆರೋಪದಡಿ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ ಇಂತಹ ಪ್ರಕರಣದಲ್ಲಿ ಪೊಲೀಸರು ವಾರಂಟ್ ಇಲ್ಲದೆ ಆರೋಪಿಯನ್ನು ಬಂಧಿಸುವಂತಿಲ್ಲ. ತನಿಖೆ ಆರಂಭಿಸಲು ಪೊಲೀಸರಿಗೆ ನ್ಯಾಯಾಲಯದ ಅನುಮತಿ ಬೇಕಾಗುತ್ತದೆ.

ಆ ಮಗುವಿನ ಪೋಷಕರು ಪ್ರಕರಣವನ್ನು ಮುಂದುವರಿಸಲು ನಿರಾಕರಿಸಿದ ಒಂದು ದಿನದ ನಂತರ ಅಂದರೆ ಶನಿವಾರ ದೂರು ನೀಡಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ. ಶಿಕ್ಷಕಿ ತ್ರಿಪ್ತಾ ತ್ಯಾಗಿ ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ ಶಿಕ್ಷೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಘಟನೆ ಗುರುವಾರ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಈ ಘಟನೆ ನಡೆದಿದೆ. ನಡೆದಿದೆ ಆದರೆ ಘಟನೆಯ ವಿಡಿಯೋ ಶುಕ್ರವಾರ ವೈರಲ್ ಆಗಿದೆ. ವಿಡಿಯೋದಲ್ಲಿ, ತರಗತಿಯ ಮುಂದೆ ನಿಂತಿದ್ದ ಮುಸ್ಲಿಂ ಹುಡುಗನನ್ನು ಒಬ್ಬ ವಿದ್ಯಾರ್ಥಿ ಹೊಡೆದ ನಂತರ, ಶಿಕ್ಷಕರು ಇತರ ವಿದ್ಯಾರ್ಥಿಗಳಿಗೂ ಬಲವಾಗಿ ಹೊಡೆಯುವಂತೆ ಒತ್ತಾಯಿಸುವುದನ್ನು ಕಾಣಬಹುದು.

ಒಬ್ಬ ವಿದ್ಯಾರ್ಥಿ ಆತನ ಕಪಾಳಕ್ಕೆ ಹೊಡೆದ ನಂತರ, ಶಿಕ್ಷಕಿಯು ಇನ್ನೊಬ್ಬ ವಿದ್ಯಾರ್ಥಿಯನ್ನು ಕರೆದು, ”ನಾನು ಹೇಳುತ್ತಿದ್ದೇನೆ, ಈ ಮುಸ್ಲಿಂ ವಿದ್ಯಾರ್ಥಿಯ ಬೆನ್ನಿನ ಮೇಲೆ ಹೊಡೆಯಬೇಕು… ಮತ್ತೆ ಬೇರೆ ವಿಧ್ಯಾರ್ಥಿಗಳನ್ನು ಕರೆದು, ಅವನ ಸೊಂಟದ ಮೇಲೆ ಹೊಡೆಯಲು ಪ್ರಾರಂಭಿಸಿ… ಅವನ ಮುಖವು ಕೆಂಪಾಗುತ್ತಿದೆ, ಅವನ ಸೊಂಟದ ಮೇಲೆ ಎಲ್ಲರೂ ಹೊಡೆಯಿರಿ” ಎಂದು ಆದೇಶಿಸಿದ್ದಾರೆ.

ಮಗು ಖುಬಾಪುರ ಗ್ರಾಮದ ನೇಹಾ ಪಬ್ಲಿಕ್ ಸ್ಕೂಲ್‌ನಲ್ಲಿ ಶಿಶುವಿಹಾರದಲ್ಲಿ ಓದುತ್ತಿದೆ ಎಂದು ಆತನ ಪೋಷಕರು ತಿಳಿಸಿದ್ದಾರೆ. ಮಗುವಿನ ತಂದೆ ಹೆಸರು ಇರ್ಷಾದ್ ತ್ಯಾಗಿ, ಅವರು ವೃತ್ತಿಯಲ್ಲಿ ರೈತರಾಗಿದ್ದಾರೆ. ಇನ್ನು ಶಿಕ್ಷಕಿಯನ್ನು ತ್ರಿಪ್ತಾ ತ್ಯಾಗಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಾಯಿಸಿದ ಯುಪಿ ಶಿಕ್ಷಕಿ: ವಿಡಿಯೋ ವೈರಲ್ 

ಪ್ರತಿಪಕ್ಷಗಳಿಂದ ಖಂಡನೆ:

”ದ್ವೇಷದ ಸಂಸ್ಕೃತಿ: ನೇಹಾ ಪಬ್ಲಿಕ್ ಸ್ಕೂಲ್‌ನ ತ್ರಿಪ್ತ ತ್ಯಾಗಿ ಎನ್ನುವ ಶಿಕ್ಷಕಿ ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಹಿಂದೂ ವಿದ್ಯಾರ್ಥಿಗಳಿಂದ ಥಳಿಸಲು ಒತ್ತಾಯಿಸಸಿದ್ದಾರೆ. ಇದು ನಿಜವಾಗಿದ್ದರೆ, ಯೋಗಿ ಜೀ ಮಾತನಾಡುತ್ತಾರೆಯೇ? ಮೋದಿಜಿ ಇದನ್ನು ಸಾರ್ವಜನಿಕವಾಗಿ ಖಂಡಿಸುವರೇ?
ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವುದೇ? ಅಥವಾ “ದ್ವೇಷ”ದ ಸಂಸ್ಕೃತಿಯು ಪ್ರವರ್ಧಮಾನಕ್ಕೆ ಬರಲು ಬಿಡುವುದೇ? ಎಂದು ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಪ್ರಶ್ನಿಸಿದ್ದಾರೆ.

ಶಾಲಾ ಆಡಳಿತಮಂಡಳಿಯು ಕುಟುಂಬದೊಂದಿಗೆ ಮಾತುಕತೆ ನಡೆಸಿ ಪ್ರಕರಣವನ್ನು ಇತ್ಯರ್ಥಗೊಳಿಸಿದ್ದರಿಂದ  ದೂರು ನೀಡುವುದಿಲ್ಲ ಎಂದು ಮಗುವಿನ ತಂದೆ ಶುಕ್ರವಾರ ಹೇಳಿದ್ದರು.

ಆ ಬಳಿಕ ಮಗುವಿನ ತಂದೆ, ”ನಾನು ನನ್ನ ಮಗುವನ್ನು ಮತ್ತೆ ಆ ಶಾಲೆಗೆ ಕಳುಹಿಸುವುದಿಲ್ಲ ಮತ್ತು ಅವರು ನಾನು ನೀಡಿದ ಶುಲ್ಕವನ್ನು ಹಿಂದಿರುಗಿಸುತ್ತಾರೆ. ಶಿಕ್ಷಕರು ಮಕ್ಕಳ ನಡುವೆ ದ್ವೇಷವನ್ನು ಸೃಷ್ಟಿಸಿದ್ದಾರೆ” ಎಂದು ಹೇಳಿದ್ದಾರೆ.

ಶನಿವಾರ ಮುಜರಾಯಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಅರವಿಂದ ಮಲ್ಲಪ್ಪ ಬಂಗಾರಿ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ”ಪೋಷಕರು ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಮಕ್ಕಳ ಕಲ್ಯಾಣ ಸಮಿತಿಯು ಮಗು ಮತ್ತು ಆತನ ಪೋಷಕರಿಗೆ ಕೌನ್ಸೆಲಿಂಗ್ ಮಾಡುತ್ತಿದೆ” ಎಂದು ಹೇಳಿದರು.

ತ್ಯಾಗಿ ತನ್ನ ತರಗತಿಯ ವಿದ್ಯಾರ್ಥಿಗಳನ್ನು ತಮ್ಮ ಮುಸ್ಲಿಂ ಸಹಪಾಠಿಯ ವಿರುದ್ಧ ಹೊಡೆಯುವಂತೆ ಪ್ರೇರೇಪಿಸಿರುವುದು ವಿಡಿಯೋದ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಶುಕ್ರವಾರ ಹೇಳಿದ್ದಾರೆ.

‘ಸಣ್ಣ ಸಮಸ್ಯೆ’ ಉತ್ಪ್ರೇಕ್ಷೆಯಾಗಿದೆ ಎಂದ ಶಿಕ್ಷಕರು

ಶಿಕ್ಷಕಿ, ತ್ರಿಪ್ತಾ ತ್ಯಾಗಿ ಅವರು ವೀಡಿಯೊ ವೈರಲ್ ಆದ ಬಳಿಕ ಇದು “ಸಣ್ಣ ಸಮಸ್ಯೆ” ಅದೇ ಉತ್ಪ್ರೇಕ್ಷಿತವಾಗಿದೆ ಎಂದು ಹೇಳಿದ್ದಾರೆ.

ತಮ್ಮ ಕ್ರಮವು ಕೋಮುವಾದಿ ಎನ್ನುವುದನ್ನು ಶಿಕ್ಷಕಿ ನಿರಾಕರಿಸಿದ್ದಾರೆ ಮತ್ತು ವೀಡಿಯೊವನ್ನು ತಪ್ಪುದಾರಿಗೆಳೆಯುವ ರೀತಿಯಲ್ಲಿ ಎಡಿಟ್ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

”ಮಗುವಿನ ಪೋಷಕರು, ಅವನನ್ನು ಕಟ್ಟುನಿಟ್ಟಾಗಿ ನೋಡಿಕೊಳ್ಳುವಂತೆ ಒತ್ತಡ ಇತ್ತು.ಹಾಗಾಗಿ ಅವನು ತನ್ನ ಮನೆಕೆಲಸವನ್ನು ಮಾಡಲು ಪ್ರಾರಂಭಿಸಲು ನಾನು ಕೆಲವು ವಿದ್ಯಾರ್ಥಿಗಳಿಂದ ಕಪಾಳಮೋಕ್ಷ ಮಾಡಿಸಿದ್ದೇನೆ” ಎಂದು ಅವರು ಹೇಳಿದ್ದಾರೆ.

”ಇದು ಸಣ್ಣ ಸಮಸ್ಯೆ ಎಂದು ನಾನು ರಾಜಕಾರಣಿಗಳಿಗೆ ಹೇಳಲು ಬಯಸುತ್ತೇನೆ. ರಾಹುಲ್ ಗಾಂಧಿ ಸೇರಿದಂತೆ ನಾಯಕರು ಟ್ವೀಟ್ ಮಾಡಿದ್ದಾರೆ, ಆದರೆ ಟ್ವೀಟ್ ಮಾಡುವುದು ಅಷ್ಟು ದೊಡ್ಡ ವಿಷಯವಲ್ಲ. ಇಂತಹ ದೈನಂದಿನ ವಿಷಯಗಳನ್ನು ವೈರಲ್ ಮಾಡಿದರೆ ಶಿಕ್ಷಕರು ಹೇಗೆ ಕಲಿಸುತ್ತಾರೆ?” ಎಂದು ಪ್ರಶ್ನೆ ಮಾಡಿದ್ದಾರೆ.

ಘಟನೆ ಬಗ್ಗೆ ಮಾತನಾಡಿದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು, ”ನಾವು ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಮತ್ತು ಪ್ರಕರಣದಲ್ಲಿ ಎಫ್‌ಐಆರ್ ಕೂಡ ದಾಖಲಿಸಲಾಗಿದೆ. ನಾವು ವಿದ್ಯಾರ್ಥಿಗಳ ಜೊತೆಗಿದ್ದೇವೆ ಮತ್ತು ಅವರಿಗೆ ಯಾವುದೇ ಅಡೆತಡೆ ಇಲ್ಲದೇ ಶಿಕ್ಷಣ ಸೌಲಭ್ಯಗಳನ್ನು ಒದಗಿಸಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಶಿಕ್ಷಕಿ ಒತ್ತಾಯಿಸಿರುವುದು ‘ದ್ವೇಷದ ಸಂಸ್ಕೃತಿ’: ಪ್ರತಿಪಕ್ಷಗಳಿಂದ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...