Homeಮುಖಪುಟಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

- Advertisement -
- Advertisement -

ಹೋರಾಟ ನಿರತ ಹಲವಾರು ರೈತರ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ರೈತರಿಗೆ ತ್ವರಿತ ಕಾನೂನು ನೆರವು ನೀಡಲು ಪಂಜಾಬ್ ಸರ್ಕಾರ ದೆಹಲಿಯಲ್ಲಿ 70 ವಕೀಲರನ್ನು ನೇಮಿಸಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಟ್ರಾಕ್ಟರ್ ಮೆರವಣಿಗೆಯ ನಂತರ “ಕಾಣೆಯಾದ ವ್ಯಕ್ತಿಗಳ” ಬಗ್ಗೆ ದೂರು ನೀಡಲು ಸಹಾಯವಾಣಿ ಸಂಖ್ಯೆಯಾಗಿ 112 ಅನ್ನು ತಮ್ಮ ಸರ್ಕಾರ ಘೋಷಿಸಿದೆ ಎಂದು ಅವರು ಹೇಳಿದ್ದಾರೆ.

ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌, “ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ ರೈತರಿಗೆ ತ್ವರಿತ ಕಾನೂನು ನೆರವು ನೀಡುವಂತೆ ಪಂಜಾಬ್ ಸರ್ಕಾರ ಈಗಾಗಲೇ 70 ವಕೀಲರ ತಂಡವನ್ನು ದೆಹಲಿಯಲ್ಲಿ ಏರ್ಪಡಿಸಿದೆ. ಅಲ್ಲದೆ ಕಾಣೆಯಾದ ರೈತರ ಸಮಸ್ಯೆ ಬಗ್ಗೆ ನಾನು ವೈಯಕ್ತಿಕವಾಗಿ ಕೇಂದ್ರ ಗೃಹ ಸಚಿವಾಲಯದೊಂದಿಗೆ ಮಾತನಾಡುತ್ತೇನೆ. ಆ ವ್ಯಕ್ತಿಗಳು ಸುರಕ್ಷಿತವಾಗಿ ಮನೆಗೆ ತಲುಪುವಂತೆ ನೋಡಿಕೊಳ್ಳುತ್ತೇನೆ. ಸಹಾಯಕ್ಕಾಗಿ 112 ಗೆ ಕರೆ ಮಾಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ರಾಜ್ಯದಲ್ಲಿ ಸರ್ಕಾರಿ ಕಛೇರಿಗಳನ್ನು ಸ್ವಚ್ಚಗೊಳಿಸಲು ಇನ್ನುಮುಂದೆ ಗೋಮೂತ್ರ ಬಳಕೆ: ಆದೇಶ

 

ಈ ವಿಷಯದ ಬಗ್ಗೆ ಪಂಜಾಬ್ ಕ್ಯಾಬಿನೆಟ್ ಸಹೋದ್ಯೋಗಿಗಳು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವರನ್ನು ಸೋಮವಾರ ಭೇಟಿಯಾದರು ಎಂದು ಮುಖ್ಯಮಂತ್ರಿಯ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜೊತೆಗೆ ವರದಿಯಲ್ಲಿ ಕಾಂಗ್ರೆಸ್‌ನ ಎರಡು ತಂಡಗಳು ಈ ವಿಷಯವಾಗಿ ಗೃಹ ಸಚಿವರನ್ನು ಭೇಟಿಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

ಇವರ ಮನವಿಗೆ ಸ್ಪಂದಿಸಿರುವ ಅಮಿತ್‌ ಷಾ, ಕೇಳಿದ ಕೂಡಲೇ ಪೊಲೀಸರು ವಶಕ್ಕೆ ಪಡೆದ ಎಲ್ಲರ ಪಟ್ಟಿಯನ್ನು ಸಿದ್ಧಪಡಿಸಿ ಅದನ್ನು ಪೊಲೀಸ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ಪಂಜಾಬ್ ಸಚಿವ ಸುಖೀಂದರ್‌ ಸಿಂಗ್ ರಾಂಧವ ತಿಳಿಸಿದ್ದಾರೆ. “ನಾವು ಹಿಂದಿರುಗುವ ಹೊತ್ತಿಗೆ, 119 ರ ಪಟ್ಟಿಯನ್ನು ಗೃಹ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪಂಜಾಬ್ ಸರ್ಕಾರದಿಂದ ನೇಮಕಗೊಂಡ ವಕೀಲರು ಬಂಧಿತ ವ್ಯಕ್ತಿಗಳು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡುತ್ತಾರೆ ಮತ್ತು ಈ ವ್ಯಕ್ತಿಗಳಿಗೆ ಉಚಿತವಾಗಿ ನ್ಯಾಯ ಒದಗಿಸಿ ಕಾನೂನು ಹೋರಾಟ ನಡೆಸುತ್ತಾರೆ. ಬಂಧಿತ ವ್ಯಕ್ತಿಗಳ ಬಗ್ಗೆ ಮೃದುವಾಗಿ ನಡೆದುಕೊಳ್ಳಬೇಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾಗಿ ಎಂದು ರಾಂಧವ ಹೇಳಿದ್ದಾರೆ.

119 ಪಟ್ಟಿ

119 ಜನರ ಪಟ್ಟಿಯಲ್ಲಿ ಇರುವ ಎಫ್‌ಐಆರ್ ಸಂಖ್ಯೆ 31/21 ಅಡಿಯಲ್ಲಿ 9 ಮಂದಿಯನ್ನು ದೆಹಲಿ ಪೊಲೀಸರು ಮುಖರ್ಜಿ ನಗರದಲ್ಲಿ ಬಂಧಿಸಿದ್ದಾರೆ. ಬಂಧಿತರಾದವರು ಹರಿಯಾಣದ ಪಟಿಯಾಲ, ಫಿರೋಜ್‌ಪುರ, ಮಾನ್ಸಾ, ಹೋಶಿಯಾರ್‌ಪುರ್, ಖಮ್ನೋ, ಬರ್ನಾಲಾ ಮತ್ತು ಯಮುನಾ ನಗರ ಮೂಲದವರು. ಏಳು ಮಂದಿ ನಂಗ್ಲೋಯಿ ಪೊಲೀಸ್ ಠಾಣೆ ಬಂಧನದಲ್ಲಿದ್ದು, ಈ ಬಂಧಿತರೆಲ್ಲರೂ ಹರಿಯಾಣ ಮೂಲದವರು. ಹರಿಯಾಣ ಮತ್ತು ಪಂಜಾಬ್‌ನ 31 ವ್ಯಕ್ತಿಗಳ ಮತ್ತೊಂದು ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದ್ದು, ಅವರನ್ನು ನಂಗ್ಲೋಯಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

ವಿಧಾನ ಸಭಾ ಅಧಿವೇಶನದ ಫೇಸ್‌ಬುಕ್ ಲೈವ್ ನೋಡಿ►► 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...