Homeಮುಖಪುಟಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

- Advertisement -
- Advertisement -

ಹೋರಾಟ ನಿರತ ಹಲವಾರು ರೈತರ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ರೈತರಿಗೆ ತ್ವರಿತ ಕಾನೂನು ನೆರವು ನೀಡಲು ಪಂಜಾಬ್ ಸರ್ಕಾರ ದೆಹಲಿಯಲ್ಲಿ 70 ವಕೀಲರನ್ನು ನೇಮಿಸಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಟ್ರಾಕ್ಟರ್ ಮೆರವಣಿಗೆಯ ನಂತರ “ಕಾಣೆಯಾದ ವ್ಯಕ್ತಿಗಳ” ಬಗ್ಗೆ ದೂರು ನೀಡಲು ಸಹಾಯವಾಣಿ ಸಂಖ್ಯೆಯಾಗಿ 112 ಅನ್ನು ತಮ್ಮ ಸರ್ಕಾರ ಘೋಷಿಸಿದೆ ಎಂದು ಅವರು ಹೇಳಿದ್ದಾರೆ.

ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌, “ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ ರೈತರಿಗೆ ತ್ವರಿತ ಕಾನೂನು ನೆರವು ನೀಡುವಂತೆ ಪಂಜಾಬ್ ಸರ್ಕಾರ ಈಗಾಗಲೇ 70 ವಕೀಲರ ತಂಡವನ್ನು ದೆಹಲಿಯಲ್ಲಿ ಏರ್ಪಡಿಸಿದೆ. ಅಲ್ಲದೆ ಕಾಣೆಯಾದ ರೈತರ ಸಮಸ್ಯೆ ಬಗ್ಗೆ ನಾನು ವೈಯಕ್ತಿಕವಾಗಿ ಕೇಂದ್ರ ಗೃಹ ಸಚಿವಾಲಯದೊಂದಿಗೆ ಮಾತನಾಡುತ್ತೇನೆ. ಆ ವ್ಯಕ್ತಿಗಳು ಸುರಕ್ಷಿತವಾಗಿ ಮನೆಗೆ ತಲುಪುವಂತೆ ನೋಡಿಕೊಳ್ಳುತ್ತೇನೆ. ಸಹಾಯಕ್ಕಾಗಿ 112 ಗೆ ಕರೆ ಮಾಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ರಾಜ್ಯದಲ್ಲಿ ಸರ್ಕಾರಿ ಕಛೇರಿಗಳನ್ನು ಸ್ವಚ್ಚಗೊಳಿಸಲು ಇನ್ನುಮುಂದೆ ಗೋಮೂತ್ರ ಬಳಕೆ: ಆದೇಶ

 

ಈ ವಿಷಯದ ಬಗ್ಗೆ ಪಂಜಾಬ್ ಕ್ಯಾಬಿನೆಟ್ ಸಹೋದ್ಯೋಗಿಗಳು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವರನ್ನು ಸೋಮವಾರ ಭೇಟಿಯಾದರು ಎಂದು ಮುಖ್ಯಮಂತ್ರಿಯ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜೊತೆಗೆ ವರದಿಯಲ್ಲಿ ಕಾಂಗ್ರೆಸ್‌ನ ಎರಡು ತಂಡಗಳು ಈ ವಿಷಯವಾಗಿ ಗೃಹ ಸಚಿವರನ್ನು ಭೇಟಿಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

ಇವರ ಮನವಿಗೆ ಸ್ಪಂದಿಸಿರುವ ಅಮಿತ್‌ ಷಾ, ಕೇಳಿದ ಕೂಡಲೇ ಪೊಲೀಸರು ವಶಕ್ಕೆ ಪಡೆದ ಎಲ್ಲರ ಪಟ್ಟಿಯನ್ನು ಸಿದ್ಧಪಡಿಸಿ ಅದನ್ನು ಪೊಲೀಸ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ಪಂಜಾಬ್ ಸಚಿವ ಸುಖೀಂದರ್‌ ಸಿಂಗ್ ರಾಂಧವ ತಿಳಿಸಿದ್ದಾರೆ. “ನಾವು ಹಿಂದಿರುಗುವ ಹೊತ್ತಿಗೆ, 119 ರ ಪಟ್ಟಿಯನ್ನು ಗೃಹ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪಂಜಾಬ್ ಸರ್ಕಾರದಿಂದ ನೇಮಕಗೊಂಡ ವಕೀಲರು ಬಂಧಿತ ವ್ಯಕ್ತಿಗಳು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡುತ್ತಾರೆ ಮತ್ತು ಈ ವ್ಯಕ್ತಿಗಳಿಗೆ ಉಚಿತವಾಗಿ ನ್ಯಾಯ ಒದಗಿಸಿ ಕಾನೂನು ಹೋರಾಟ ನಡೆಸುತ್ತಾರೆ. ಬಂಧಿತ ವ್ಯಕ್ತಿಗಳ ಬಗ್ಗೆ ಮೃದುವಾಗಿ ನಡೆದುಕೊಳ್ಳಬೇಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾಗಿ ಎಂದು ರಾಂಧವ ಹೇಳಿದ್ದಾರೆ.

119 ಪಟ್ಟಿ

119 ಜನರ ಪಟ್ಟಿಯಲ್ಲಿ ಇರುವ ಎಫ್‌ಐಆರ್ ಸಂಖ್ಯೆ 31/21 ಅಡಿಯಲ್ಲಿ 9 ಮಂದಿಯನ್ನು ದೆಹಲಿ ಪೊಲೀಸರು ಮುಖರ್ಜಿ ನಗರದಲ್ಲಿ ಬಂಧಿಸಿದ್ದಾರೆ. ಬಂಧಿತರಾದವರು ಹರಿಯಾಣದ ಪಟಿಯಾಲ, ಫಿರೋಜ್‌ಪುರ, ಮಾನ್ಸಾ, ಹೋಶಿಯಾರ್‌ಪುರ್, ಖಮ್ನೋ, ಬರ್ನಾಲಾ ಮತ್ತು ಯಮುನಾ ನಗರ ಮೂಲದವರು. ಏಳು ಮಂದಿ ನಂಗ್ಲೋಯಿ ಪೊಲೀಸ್ ಠಾಣೆ ಬಂಧನದಲ್ಲಿದ್ದು, ಈ ಬಂಧಿತರೆಲ್ಲರೂ ಹರಿಯಾಣ ಮೂಲದವರು. ಹರಿಯಾಣ ಮತ್ತು ಪಂಜಾಬ್‌ನ 31 ವ್ಯಕ್ತಿಗಳ ಮತ್ತೊಂದು ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದ್ದು, ಅವರನ್ನು ನಂಗ್ಲೋಯಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

ವಿಧಾನ ಸಭಾ ಅಧಿವೇಶನದ ಫೇಸ್‌ಬುಕ್ ಲೈವ್ ನೋಡಿ►► 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...