Homeಮುಖಪುಟಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

ಕೇಂದ್ರದಿಂದ ರೈತರ ಮೇಲೆ FIR: ಕಾನೂನು ನೆರವಿಗೆ 70 ವಕೀಲರನ್ನು ನೇಮಿಸಿ ಪಂಜಾಬ್ ಸಿಎಂ ಹೇಳಿದ್ದೇನು?

- Advertisement -
- Advertisement -

ಹೋರಾಟ ನಿರತ ಹಲವಾರು ರೈತರ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ರೈತರಿಗೆ ತ್ವರಿತ ಕಾನೂನು ನೆರವು ನೀಡಲು ಪಂಜಾಬ್ ಸರ್ಕಾರ ದೆಹಲಿಯಲ್ಲಿ 70 ವಕೀಲರನ್ನು ನೇಮಿಸಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಟ್ರಾಕ್ಟರ್ ಮೆರವಣಿಗೆಯ ನಂತರ “ಕಾಣೆಯಾದ ವ್ಯಕ್ತಿಗಳ” ಬಗ್ಗೆ ದೂರು ನೀಡಲು ಸಹಾಯವಾಣಿ ಸಂಖ್ಯೆಯಾಗಿ 112 ಅನ್ನು ತಮ್ಮ ಸರ್ಕಾರ ಘೋಷಿಸಿದೆ ಎಂದು ಅವರು ಹೇಳಿದ್ದಾರೆ.

ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌, “ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ ರೈತರಿಗೆ ತ್ವರಿತ ಕಾನೂನು ನೆರವು ನೀಡುವಂತೆ ಪಂಜಾಬ್ ಸರ್ಕಾರ ಈಗಾಗಲೇ 70 ವಕೀಲರ ತಂಡವನ್ನು ದೆಹಲಿಯಲ್ಲಿ ಏರ್ಪಡಿಸಿದೆ. ಅಲ್ಲದೆ ಕಾಣೆಯಾದ ರೈತರ ಸಮಸ್ಯೆ ಬಗ್ಗೆ ನಾನು ವೈಯಕ್ತಿಕವಾಗಿ ಕೇಂದ್ರ ಗೃಹ ಸಚಿವಾಲಯದೊಂದಿಗೆ ಮಾತನಾಡುತ್ತೇನೆ. ಆ ವ್ಯಕ್ತಿಗಳು ಸುರಕ್ಷಿತವಾಗಿ ಮನೆಗೆ ತಲುಪುವಂತೆ ನೋಡಿಕೊಳ್ಳುತ್ತೇನೆ. ಸಹಾಯಕ್ಕಾಗಿ 112 ಗೆ ಕರೆ ಮಾಡಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಈ ರಾಜ್ಯದಲ್ಲಿ ಸರ್ಕಾರಿ ಕಛೇರಿಗಳನ್ನು ಸ್ವಚ್ಚಗೊಳಿಸಲು ಇನ್ನುಮುಂದೆ ಗೋಮೂತ್ರ ಬಳಕೆ: ಆದೇಶ

 

ಈ ವಿಷಯದ ಬಗ್ಗೆ ಪಂಜಾಬ್ ಕ್ಯಾಬಿನೆಟ್ ಸಹೋದ್ಯೋಗಿಗಳು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವರನ್ನು ಸೋಮವಾರ ಭೇಟಿಯಾದರು ಎಂದು ಮುಖ್ಯಮಂತ್ರಿಯ ಹೇಳಿಕೆಯನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಜೊತೆಗೆ ವರದಿಯಲ್ಲಿ ಕಾಂಗ್ರೆಸ್‌ನ ಎರಡು ತಂಡಗಳು ಈ ವಿಷಯವಾಗಿ ಗೃಹ ಸಚಿವರನ್ನು ಭೇಟಿಯಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

ಇವರ ಮನವಿಗೆ ಸ್ಪಂದಿಸಿರುವ ಅಮಿತ್‌ ಷಾ, ಕೇಳಿದ ಕೂಡಲೇ ಪೊಲೀಸರು ವಶಕ್ಕೆ ಪಡೆದ ಎಲ್ಲರ ಪಟ್ಟಿಯನ್ನು ಸಿದ್ಧಪಡಿಸಿ ಅದನ್ನು ಪೊಲೀಸ್ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ ಎಂದು ಪಂಜಾಬ್ ಸಚಿವ ಸುಖೀಂದರ್‌ ಸಿಂಗ್ ರಾಂಧವ ತಿಳಿಸಿದ್ದಾರೆ. “ನಾವು ಹಿಂದಿರುಗುವ ಹೊತ್ತಿಗೆ, 119 ರ ಪಟ್ಟಿಯನ್ನು ಗೃಹ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.

ಪಂಜಾಬ್ ಸರ್ಕಾರದಿಂದ ನೇಮಕಗೊಂಡ ವಕೀಲರು ಬಂಧಿತ ವ್ಯಕ್ತಿಗಳು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡುತ್ತಾರೆ ಮತ್ತು ಈ ವ್ಯಕ್ತಿಗಳಿಗೆ ಉಚಿತವಾಗಿ ನ್ಯಾಯ ಒದಗಿಸಿ ಕಾನೂನು ಹೋರಾಟ ನಡೆಸುತ್ತಾರೆ. ಬಂಧಿತ ವ್ಯಕ್ತಿಗಳ ಬಗ್ಗೆ ಮೃದುವಾಗಿ ನಡೆದುಕೊಳ್ಳಬೇಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾಗಿ ಎಂದು ರಾಂಧವ ಹೇಳಿದ್ದಾರೆ.

119 ಪಟ್ಟಿ

119 ಜನರ ಪಟ್ಟಿಯಲ್ಲಿ ಇರುವ ಎಫ್‌ಐಆರ್ ಸಂಖ್ಯೆ 31/21 ಅಡಿಯಲ್ಲಿ 9 ಮಂದಿಯನ್ನು ದೆಹಲಿ ಪೊಲೀಸರು ಮುಖರ್ಜಿ ನಗರದಲ್ಲಿ ಬಂಧಿಸಿದ್ದಾರೆ. ಬಂಧಿತರಾದವರು ಹರಿಯಾಣದ ಪಟಿಯಾಲ, ಫಿರೋಜ್‌ಪುರ, ಮಾನ್ಸಾ, ಹೋಶಿಯಾರ್‌ಪುರ್, ಖಮ್ನೋ, ಬರ್ನಾಲಾ ಮತ್ತು ಯಮುನಾ ನಗರ ಮೂಲದವರು. ಏಳು ಮಂದಿ ನಂಗ್ಲೋಯಿ ಪೊಲೀಸ್ ಠಾಣೆ ಬಂಧನದಲ್ಲಿದ್ದು, ಈ ಬಂಧಿತರೆಲ್ಲರೂ ಹರಿಯಾಣ ಮೂಲದವರು. ಹರಿಯಾಣ ಮತ್ತು ಪಂಜಾಬ್‌ನ 31 ವ್ಯಕ್ತಿಗಳ ಮತ್ತೊಂದು ಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದ್ದು, ಅವರನ್ನು ನಂಗ್ಲೋಯಿ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಹೊಸ ಕೃಷಿ ಕಾನೂನುಗಳ ಹಿನ್ನೆಲೆ ಏನು? ಯಾಕಾಗಿ ಇವು ಈಗ ತಲೆ ಎತ್ತಿವೆ?

ವಿಧಾನ ಸಭಾ ಅಧಿವೇಶನದ ಫೇಸ್‌ಬುಕ್ ಲೈವ್ ನೋಡಿ►► 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...