Homeಮುಖಪುಟಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

- Advertisement -
- Advertisement -

ಅಸ್ಸಾಂ-ಮಿಜೋರಾಂ ಅಂತಾರಾಜ್ಯ ಗಡಿಯಲ್ಲಿ ಜುಲೈ 26 ರಂದು ನಡೆದ ಹಿಂಸಾಚಾರ ಸಂಬಂಧಿಸಿ ಮಿಜೋರಾಂ ಪೊಲೀಸರು ಬಿಜೆಪಿ ಆಡಳಿತವಿರುವ ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಆರು ಹಿರಿಯ ಅಧಿಕಾರಿಗಳು ಮತ್ತು 200 ಅಪರಿಚಿತ ಪೊಲೀಸರನ್ನು ಘಟನೆಗೆ ಜವಾಬ್ದಾರರನ್ನಾಗಿಸಿ ಅವರ ವಿರುದ್ದ ಎಫ್‌ಐಆರ್‌‌ ದಾಖಲಿಸಿದ್ದಾರೆ. ಮಿಜೋರಾಂನಲ್ಲಿ ಕೂಡಾ ಬಿಜೆಪಿ ಆಡಳಿತವಿದೆ.

ಅಧಿಕಾರಿಗಳಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಅನುರಾಗ್ ಅಗರ್ವಾಲ್, ಉಪ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ದೇವಜ್ಯೋತಿ ಮುಖರ್ಜಿ, ಕ್ಯಾಚಾರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೀರ್ತಿ ಜಲ್ಲಿ, ಕ್ಯಾಚಾರ್ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಚಂದ್ರಕಾಂತ್ ನಿಂಬಾಳ್ಕರ್, ಡಿವಿಷನಲ್ ಫಾರೆಸ್ಟ್ ಆಫೀಸರ್ ಸನ್ನಿಡಿಯೋ ಚೌಧರಿ ಮತ್ತು ಧೋಲೈ ಪೊಲೀಸ್ ಠಾಣೆಯ ಪ್ರಭಾರಿ ಸಾಹಬ್ ಉದ್ದೀನ್ ಸೇರಿದ್ದಾರೆ.

ಇದನ್ನೂ ಓದಿ: ಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯ ಕಾರ್ಯದರ್ಶಿಗೆ ನೀಡಲಾದ ಪ್ರಮುಖ ಮಾರ್ಗಸೂಚಿ ಸಂದೇಶದಲ್ಲಿ, ಆಗಸ್ಟ್ 1 ರಂದು ಮಿಜೋರಾಂನ ಕೊಲಾಸಿಬ್ ಜಿಲ್ಲೆಯ‌ ವೈರೆಂಗ್ಟೆ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಮುಂದೆ ಅಧಿಕಾರಿಗಳನ್ನು ಒಪ್ಪಿಸುವಂತೆ ಕೇಳಲಾಗಿದೆ.

ವಿವಾದಿತ ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಸೋಮವಾರ ಉಲ್ಭಣಿಸಿದ ಹಿಂಸಾಚಾರದಲ್ಲಿ ಆರು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು ಮತ್ತು ಹಲವಾರು ಜನರು ಗಾಯಗೊಂಡಿದ್ದರು. ಇನ್ನೊಂದೆಡೆ ಕೊಲಸಿಬ್ ಗಡಿಯನ್ನು ದಾಟಿದ ಅಸ್ಸಾಂ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನಗಳನ್ನು ಧ್ವಂಸಗೊಳಿಸಿ ಗುಂಡು ಹಾರಿಸಿದರು ಎಂದು ಮಿಜೋರಾಂ ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಅಸ್ಸಾಂನ ಕ್ಯಾಚಾರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳ ಮಿಜೋರಾಂ ಗಡಿಯ ಬಳಿ ಇತ್ತೀಚಿನ ಕೆಲವು ಘರ್ಷಣೆಗಳನ್ನು ಸೂಚಿಸಿರುವ ಅಸ್ಸಾಂ ಸರ್ಕಾರ, ಗುರುವಾರದಂದು ರಾಜ್ಯದ ಜನತೆ ‘ಪ್ರವಾಸ ಸಲಹೆ’ ನೀಡಿದೆ. ಈ ಸಲಹೆಯಲ್ಲಿ ರಾಜ್ಯದ ಜನರು ಮಿಜೋರಾಂಗೆ ಪ್ರಯಾಣಿಸದಂತೆ ಅದು ಕೇಳಿಕೊಂಡಿದೆ.

“ಘಟನೆಯ ನಂತರವೂ, ಕೆಲವು ಮಿಜೋ ನಾಗರಿಕ ಸಮಾಜ ಹಾಗೂ ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ನಿರಂತರವಾಗಿ ಅಸ್ಸಾಂ ಮತ್ತು ಅದರ ಜನರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿವೆ …ಅನೇಕ ನಾಗರಿಕರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆಂದು ಅಸ್ಸಾಂ ಪೊಲೀಸರ ಬಳಿಯಿರುವ ವೀಡಿಯೊ ತುಣುಕಿನಿಂದ ತಿಳಿದುಬಂದಿದೆ. ಅದರಂತೆ, ಅಸ್ಸಾಂ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಈ ಮೂಲಕ ಪ್ರಯಾಣ ಸಲಹೆಯನ್ನು ನೀಡಲಾಗುತ್ತದೆ” ಎಂದು ಸಲಹೆಯು ತಿಳಿಸಿತ್ತು.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...