Homeಮುಖಪುಟಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

ಬಿಜೆಪಿ ಆಡಳಿತದ ಅಸ್ಸಾಂನ ಮುಖ್ಯಮಂತ್ರಿ ವಿರುದ್ದ ಎಫ್‌ಐಆರ್‌ ದಾಖಲು!

- Advertisement -
- Advertisement -

ಅಸ್ಸಾಂ-ಮಿಜೋರಾಂ ಅಂತಾರಾಜ್ಯ ಗಡಿಯಲ್ಲಿ ಜುಲೈ 26 ರಂದು ನಡೆದ ಹಿಂಸಾಚಾರ ಸಂಬಂಧಿಸಿ ಮಿಜೋರಾಂ ಪೊಲೀಸರು ಬಿಜೆಪಿ ಆಡಳಿತವಿರುವ ಅಸ್ಸಾಂನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸೇರಿದಂತೆ ಆರು ಹಿರಿಯ ಅಧಿಕಾರಿಗಳು ಮತ್ತು 200 ಅಪರಿಚಿತ ಪೊಲೀಸರನ್ನು ಘಟನೆಗೆ ಜವಾಬ್ದಾರರನ್ನಾಗಿಸಿ ಅವರ ವಿರುದ್ದ ಎಫ್‌ಐಆರ್‌‌ ದಾಖಲಿಸಿದ್ದಾರೆ. ಮಿಜೋರಾಂನಲ್ಲಿ ಕೂಡಾ ಬಿಜೆಪಿ ಆಡಳಿತವಿದೆ.

ಅಧಿಕಾರಿಗಳಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಅನುರಾಗ್ ಅಗರ್ವಾಲ್, ಉಪ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ದೇವಜ್ಯೋತಿ ಮುಖರ್ಜಿ, ಕ್ಯಾಚಾರ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೀರ್ತಿ ಜಲ್ಲಿ, ಕ್ಯಾಚಾರ್ ಪೊಲೀಸ್ ವರಿಷ್ಠಾಧಿಕಾರಿ ವೈಭವ್ ಚಂದ್ರಕಾಂತ್ ನಿಂಬಾಳ್ಕರ್, ಡಿವಿಷನಲ್ ಫಾರೆಸ್ಟ್ ಆಫೀಸರ್ ಸನ್ನಿಡಿಯೋ ಚೌಧರಿ ಮತ್ತು ಧೋಲೈ ಪೊಲೀಸ್ ಠಾಣೆಯ ಪ್ರಭಾರಿ ಸಾಹಬ್ ಉದ್ದೀನ್ ಸೇರಿದ್ದಾರೆ.

ಇದನ್ನೂ ಓದಿ: ಗಡಿ ಸಂಘರ್ಷ: ಮಿಜೋರಾಂಗೆ ಪ್ರಯಾಣಿಸದಂತೆ ರಾಜ್ಯಕ್ಕೆ ಸಲಹೆ ನೀಡಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯ ಕಾರ್ಯದರ್ಶಿಗೆ ನೀಡಲಾದ ಪ್ರಮುಖ ಮಾರ್ಗಸೂಚಿ ಸಂದೇಶದಲ್ಲಿ, ಆಗಸ್ಟ್ 1 ರಂದು ಮಿಜೋರಾಂನ ಕೊಲಾಸಿಬ್ ಜಿಲ್ಲೆಯ‌ ವೈರೆಂಗ್ಟೆ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (ಎಸ್‌ಡಿಪಿಒ) ಮುಂದೆ ಅಧಿಕಾರಿಗಳನ್ನು ಒಪ್ಪಿಸುವಂತೆ ಕೇಳಲಾಗಿದೆ.

ವಿವಾದಿತ ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಸೋಮವಾರ ಉಲ್ಭಣಿಸಿದ ಹಿಂಸಾಚಾರದಲ್ಲಿ ಆರು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು ಮತ್ತು ಹಲವಾರು ಜನರು ಗಾಯಗೊಂಡಿದ್ದರು. ಇನ್ನೊಂದೆಡೆ ಕೊಲಸಿಬ್ ಗಡಿಯನ್ನು ದಾಟಿದ ಅಸ್ಸಾಂ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನಗಳನ್ನು ಧ್ವಂಸಗೊಳಿಸಿ ಗುಂಡು ಹಾರಿಸಿದರು ಎಂದು ಮಿಜೋರಾಂ ಪೊಲೀಸರು ಆರೋಪಿಸಿದ್ದಾರೆ.

ಇದನ್ನೂ ಓದಿ: ಗಡಿ ಸಂಘರ್ಷಯಲ್ಲಿ ಮಿಜೋರಾಂ ಸಂಸದನ ಕೈವಾಡ: ಅಸ್ಸಾಂ ಪೊಲೀಸರ ಆರೋಪ

ಅಸ್ಸಾಂನ ಕ್ಯಾಚಾರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳ ಮಿಜೋರಾಂ ಗಡಿಯ ಬಳಿ ಇತ್ತೀಚಿನ ಕೆಲವು ಘರ್ಷಣೆಗಳನ್ನು ಸೂಚಿಸಿರುವ ಅಸ್ಸಾಂ ಸರ್ಕಾರ, ಗುರುವಾರದಂದು ರಾಜ್ಯದ ಜನತೆ ‘ಪ್ರವಾಸ ಸಲಹೆ’ ನೀಡಿದೆ. ಈ ಸಲಹೆಯಲ್ಲಿ ರಾಜ್ಯದ ಜನರು ಮಿಜೋರಾಂಗೆ ಪ್ರಯಾಣಿಸದಂತೆ ಅದು ಕೇಳಿಕೊಂಡಿದೆ.

“ಘಟನೆಯ ನಂತರವೂ, ಕೆಲವು ಮಿಜೋ ನಾಗರಿಕ ಸಮಾಜ ಹಾಗೂ ವಿದ್ಯಾರ್ಥಿ ಮತ್ತು ಯುವ ಸಂಘಟನೆಗಳು ನಿರಂತರವಾಗಿ ಅಸ್ಸಾಂ ಮತ್ತು ಅದರ ಜನರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುತ್ತಿವೆ …ಅನೇಕ ನಾಗರಿಕರು ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆಂದು ಅಸ್ಸಾಂ ಪೊಲೀಸರ ಬಳಿಯಿರುವ ವೀಡಿಯೊ ತುಣುಕಿನಿಂದ ತಿಳಿದುಬಂದಿದೆ. ಅದರಂತೆ, ಅಸ್ಸಾಂ ಜನರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ಈ ಮೂಲಕ ಪ್ರಯಾಣ ಸಲಹೆಯನ್ನು ನೀಡಲಾಗುತ್ತದೆ” ಎಂದು ಸಲಹೆಯು ತಿಳಿಸಿತ್ತು.

ಇದನ್ನೂ ಓದಿ: ಅಸ್ಸಾಂ-ಮಿಜೋರಾಂ ವಿವಾದಿತ ಗಡಿಯಲ್ಲಿ ಹಿಂಸಾಚಾರ: ಅಸ್ಸಾಂನ 6 ಪೊಲೀಸರ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...