Homeಮುಖಪುಟಬಂಧಿತ ಐಎಎಸ್‌ ಅಧಿಕಾರಿ ಜೊತೆ ಅಮಿತ್ ಶಾ ಇರುವ ಹಳೆಯ ಪೋಟೋ ಪೋಸ್ಟ್‌ ಮಾಡಿದ್ದಕ್ಕೆ ನಿರ್ದೇಶಕನ...

ಬಂಧಿತ ಐಎಎಸ್‌ ಅಧಿಕಾರಿ ಜೊತೆ ಅಮಿತ್ ಶಾ ಇರುವ ಹಳೆಯ ಪೋಟೋ ಪೋಸ್ಟ್‌ ಮಾಡಿದ್ದಕ್ಕೆ ನಿರ್ದೇಶಕನ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಇತ್ತೀಚೆಗೆ ಬಂಧಿಸಿರುವ ಜಾರ್ಖಂಡ್ ಕೇಡರ್ ಐಎಎಸ್ ಅಧಿಕಾರಿ ಪೂಜಾ ಸಿಂಘಾಲ್ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿರುವ ಫೋಟೋವನ್ನು ಹಂಚಿಕೊಂಡ ಆರೋಪದ ಮೇಲೆ ಅಹಮದಾಬಾದ್ ಅಪರಾಧ ವಿಭಾಗದ (ಡಿಸಿಬಿ) ಘಟಕವು ಚಲನಚಿತ್ರ ನಿರ್ದೇಶಕ ಅವಿನಾಶ್ ದಾಸ್ ವಿರುದ್ಧ ಪ್ರಕರಣ ದಾಖಲಿಸಿದೆ.

2017ರಲ್ಲಿ ರಾಂಚಿಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಅಮಿತ್ ಶಾ ಮತ್ತು ಸಿಂಘಾಲ್ ಪರಸ್ಪರ ಮಾತನಾಡುತ್ತಿರುವ ಫೋಟೋವನ್ನು ಅವಿನಾಶ್ ದಾಸ್‌ ಹಂಚಿಕೊಂಡಿದ್ದು ಜನರನ್ನು ದಾರಿತಪ್ಪಿಸಲು ಮತ್ತು ‌ಅಮಿತ್ ಶಾ ಅವರ ಪ್ರತಿಷ್ಠೆಗೆ ಕುಂದುತರಲು ಯತ್ನಿಸಿದ್ದಾರೆಂದು ಪೊಲೀಸರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ತ್ರಿವರ್ಣ ಧ್ವಜವನ್ನು ಧರಿಸಿರುವ ಮಹಿಳೆಯ ಚಿತ್ರವನ್ನು ಶೇರ್ ಮಾಡುವ ಮೂಲಕ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಆರೋಪದ ಮೇಲೆಯೂ ‘ಅನಾರ್ಕಲಿ ಆಫ್ ಆರಾಹ್’ ಚಿತ್ರದ ನಿರ್ದೇಶಕ ದಾಸ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

2009-10ರ ಅವಧಿಯಲ್ಲಿ ರಾಜ್ಯದ ಖುಂಟಿ ಜಿಲ್ಲೆಯಲ್ಲಿ ಡೆಪ್ಯುಟಿ ಕಮಿಷನರ್ ಆಗಿದ್ದ ಅವಧಿಯಲ್ಲಿ ನರೇಗ ನಿಧಿಯನ್ನು ಬೇರೆಡೆಗೆ ತಿರುಗಿಸಿದ ಆರೋಪದ ಮೇಲೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಗಣಿ ಕಾರ್ಯದರ್ಶಿ ಸಿಂಘಾಲ್ ಅವರನ್ನು ಇ.ಡಿ. ಬುಧವಾರ ಬಂಧಿಸಿತ್ತು. ಜಾರ್ಖಂಡ್‌ನಲ್ಲಿ ಸಿಂಘಾಲ್‌ಗೆ ಸಂಬಂಧವಿದೆ ಎನ್ನಲಾದ ಚಾರ್ಟರ್ಡ್ ಅಕೌಂಟೆಂಟ್‌ನ ಮನೆಯಿಂದ 18 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ವಶಕ್ಕೆ ಪಡೆಯಲಾಗಿತ್ತು.

ಇದನ್ನೂ ಓದಿರಿ: ಪೊನ್ನಂಪೇಟೆಯಲ್ಲಿ ಕೊಟ್ಟಿದ್ದು ಏರ್‌ಗನ್‌ ತರಬೇತಿ- ಸಿ.ಟಿ.ರವಿ; ನಡೆದದ್ದು ಯೋಗ ತರಬೇತಿ ಎಂದ ಹಿಂಜಾವೇ ಮುಖಂಡ

“ಮಹಿಳೆಯ ಮೇಲೆ ತ್ರಿವರ್ಣ ಧ್ವಜವನ್ನು ತೋರಿಸುವ ಅಶ್ಲೀಲ ಚಿತ್ರವನ್ನು ಮಾರ್ಚ್ 17 ರಂದು ಅವಿನಾಶ್ ದಾಸ್ ಎಂಬ ವ್ಯಕ್ತಿ ಹಂಚಿಕೊಂಡಿದ್ದಾರೆ ಎಂದು ಡಿಸಿಬಿಯ ತಾಂತ್ರಿಕ ಪಿಎಸ್ಐ ಕೆ ಪಿ ಪಟೇಲ್ ಅವರ ಗಮನಕ್ಕೆ ತರಲಾಯಿತು. ಹೆಚ್ಚುವರಿಯಾಗಿ, ಮೇ 8 ರಂದು ದಾಸ್ ಅವರ ಟ್ವಿಟ್ಟರ್ ಖಾತೆಯಲ್ಲಿ ಜನರನ್ನು ದಾರಿತಪ್ಪಿಸುವ ಉದ್ದೇಶದಿಂದ, ಶಾ ಅವರ ಪ್ರತಿಷ್ಠೆಗೆ ಹಾನಿ ಮಾಡುವ ಸಲುವಾಗಿ ಮತ್ತೊಂದು ಪೋಸ್ಟ್‌ ಮಾಡಲಾಯಿತು. ಐಎಎಸ್ ಪೂಜಾ ಸಿಂಘಾಲ್ ಅವರೊಂದಿಗೆ ಅಮಿತ್ ಶಾ ಅವರಿರುವ ಸುಮಾರು ಐದು ವರ್ಷಗಳ ಹಳೆಯ ಚಿತ್ರವನ್ನು ಹಂಚಿಕೊಳ್ಳಲಾಯಿತು. ಆ ನಿಟ್ಟಿನಲ್ಲಿ ದಾಸ್ ವಿರುದ್ಧ ಐಪಿಸಿ ಸೆಕ್ಷನ್‌ 469, ಐಟಿ ಕಾಯ್ದೆಯ ಸೆಕ್ಷನ್ 67, ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದು ಅಹಮದಾಬಾದ್ ಡಿಸಿಬಿ ಘಟಕ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...