Homeಕರ್ನಾಟಕ’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮೈಸೂರಿನ "ಪ್ರಜಾಭಾರತ" ಸುದ್ದಿವಾಹಿನಿಯು "ಮತಭಾರತ" ಎಂಬ ಸರಣಿ ಸಂಚಿಕೆಯೊಂದರಲ್ಲಿ "ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು" ಎಂಬ ಪ್ರಸಾರ ಮಾಡಿತ್ತು.

- Advertisement -
- Advertisement -

ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನೆಲ್ಲಾ ಕೈ ವಶಮಾಡಿಕೊಂಡಿರುವ “ಭಕ್ತರ ಫ್ರಭುತ್ವ” ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಫ್ಯಾಸಿಸಂ ಧೋರಣೆಯನ್ನು ಮುಂದುವರೆಸಿದೆ.

ತನ್ನ ಸುಳ್ಳುಗಳನ್ನು, ಮತೋನ್ಮತ್ತ ಕ್ರೌರ್ಯವನ್ನು ಖಂಡಿಸುವ, ಅದೇ ಕಾಲಕ್ಕೆ ಸತ್ಯವನ್ನು ಜನರ ಮುಂದಿಡುವ ಯಾರೊಬ್ಬರನ್ನೂ ಸಹಿಸಿಕೊಳ್ಳದ ಬಿಜೆಪಿ ರಾಜ್ಯದಲ್ಲೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡುವ ಕೆಲಸಕ್ಕೆ ಕೈ ಹಾಕಿರುವ ಮತ್ತೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಬಯಲಾಗಿದೆ.

ಇದನ್ನೂ ಓದಿ: 2019ರಲ್ಲಿ ದಿಟ್ಟವಾಗಿ ಧ್ವನಿಯೆತ್ತಿದ 10 ಪತ್ರಕರ್ತೆಯರ ಕುರಿತು

ಮೈಸೂರಿನ ಹಿರಿಯ ಪತ್ರಕರ್ತ ‘ಪ್ರಜಾಭಾರತ’ ಸುದ್ದಿವಾಹಿನಿಯ ಸಂಪಾದಕ ಕೆ. ದೀಪಕ್ ವಿರುದ್ಧ ಬಿಜೆಪಿಯ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ಎಂಬುವರು ಸದ್ದಿಲ್ಲದೆ ಪೊಲೀಸ್ ದೂರು ದಾಖಲಿಸಿ ದೀಪಕ್ ಅವರನ್ನು ಜೈಲಿಗೆ ನೂಕುವ ಷಡ್ಯಂತ್ರ ದೀಪಕ್ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದ್ದರಿಂದ ವಿಫಲವಾಗಿದೆ.

ದೀಪಕ್ ಮಾಡಿದ ಅಪರಾಧವಾದರೂ ಏನು ಗೊತ್ತಾ?

ಕಳೆದ 2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈಸೂರಿನ “ಪ್ರಜಾಭಾರತ” ಸುದ್ದಿವಾಹಿನಿಯು  “ಮತಭಾರತ” ಎಂಬ ಸರಣಿ ಸಂಚಿಕೆಯೊಂದರಲ್ಲಿ “ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು” ಪ್ರಸಾರ ಮಾಡಿದ್ದು. ಬಿಜೆಪಿಯ ಸಂವಿಧಾನ ವಿರೋಧಿ ಆಡಳಿತವನ್ನು ಎಳೆ ಎಳೆಯಾಗಿ ವಿಶ್ಲೇಷಿಸಲಾಗಿತ್ತು.

ಇದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮೈಸೂರಿನ ಪ್ರಜಾಭಾರತ ಸುದ್ದಿವಾಹಿನಿ ಸಂಪಾದಕ ಕೆ.ದೀಪಕ್ ವಿರುದ್ಧ ಕೋಮು ಸೌಹಾರ್ದ ಕದಡುವ ಸಂಚು ನಡೆಸಿದ ಆರೋಪ ಹೊರಿಸಿ ಬಿಜೆಪಿ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಸದ್ದಿಲ್ಲದೆ ಎಫ್‌ಐಅರ್ (ಐಪಿಸಿ 504, 505, 153 ಎ) ದಾಖಲಾಗಿದ್ದು, 17 ತಿಂಗಳ ನಂತರ ದೀಪಕ್ ಅವರನ್ನು ಬಂಧಿಸಿ ಜೈಲಿಗೆ ನೂಕುವಂತೆ ಪೊಲೀಸರಿಗೆ ತೀವ್ರ ಒತ್ತಡಗಳನ್ನು ಹೇರಲಾಗಿತ್ತು. ದೀಪಕ್ ನಿರೀಕ್ಷಣಾ ಜಾಮೀನು ಪಡೆದು ಬಿಜೆಪಿಯ ಷಡ್ಯಂತ್ರವನ್ನು ವಿಫಲಗೊಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜಾಭಾರತ ಸುದ್ದಿವಾಹಿನಿ ಮತಭಾರತ ಸರಣಿಯಲ್ಲಿ ಕೇಂದ್ರದ ಮೋದಿ ಸರ್ಕಾರದ ವೈಫಲ್ಯ, ಸಮುದಾಯ ವಿರೋಧಿತನಗಳನ್ನು ಬಯಲಿಗೆಳೆಯುತ್ತಾ ಬಂದಿದ್ದರು. ಮೈಸೂರಿನ ಸಂಸದ ಪ್ರತಾಪ ಸಿಂಹ ಅವರ ಲೈಂಗಿಕ ಹಗರಣವನ್ನು ಸ್ಪೋಟಿಸಿದ್ದರು. ಇದೇ ಸೇಡಿಗೆ ದೀಪಕ್ ವಿರುದ್ಧ ಬೆಂಗಳೂರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ದೂರು ದಾಖಲಾದದ್ದು ದೀಪಕ್ ಅವರಿಗೆ ತಿಳಿಯಲು 17 ತಿಂಗಳೇ ಬೇಕಾಯಿತು!. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುತ್ತಿದ್ದಂತೆ ದೀಪಕ್ ವಿರುದ್ಧ ಕೇಸು ದಾಖಲಾಗಿರುವುದು ಬೆಳಕಿಗೆ ಬಂದಿದ್ದು. ಅವರನ್ನು ಬಂಧಿಸಿಯೇ ತೀರಬೇಕೆಂಬ ಒತ್ತಡಗಳು ಪೊಲೀಸರ ಮೇಲಿತ್ತು.

ಪತ್ರಕರ್ತ ದೀಪಕ್ ಅವರನ್ನು ಜೈಲಿಗೆ ನೂಕಿ ಭಯಪಡಿಸಿ ಬಾಯಿ ಮುಚ್ಚಿಸುವ ಪ್ರತಾಪಸಿಂಹನ ಕೇಡಿ ಕೃತ್ಯ ಸದ್ಯಕ್ಕೆ ಈಡೇರಿಲ್ಲ.

ಕೆ.ದೀಪಕ್ ಕಳೆದ 21 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದಾರೆ. ಅವರೋರ್ವ ಜರ್ನಲಿಸ್ಟ್ ಆ್ಯಕ್ಟ್ವೀಸ್ಟ್. ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಡಿಹೊತ್ತಿಗೆಯಾಗಿದ್ದ ಮೈಸೂರಿನ ‘ಸಾಧ್ವಿ’ ಪತ್ರಿಕೆಯ ಮೂಲಕ ಪರ್ತಕರ್ತ ಬದುಕು ಕಟ್ಟಿಕೊಂಡ ದೀಪಕ್ ‘ವಿಜಯ’, ಸೂರ್ಯೋದಯ, ಪ್ರಜಾನುಡಿ, ಸಂಜೆವಾಣಿ, ವಾರ್ತಾಭಾರತಿ ಪತ್ರಿಕೆಗಳು ಸೇರಿದಂತೆ ದೃಶ್ಯಮಾಧ್ಯಮಗಳಲ್ಲೂ ವೃತ್ತಿಪರ ಪತ್ರಕರ್ತನಾಗಿಯೂ ಅದೇ ಕಾಲಕ್ಕೆ ಬುದ್ದ, ಬಸವ, ಅಂಬೇಡ್ಕರ್ ಪ್ರೇಣಿತ ವೈಚಾರಿಕ ಚಿಂತನೆಗಳೊಂದಿಗೆ ಸಾಮಾಜಿಕ ಚಳವಳಿಗಳ ಜೊತೆ ಹೆಜ್ಜೆ ಹಾಕುತಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ದೀಪಕ್ ಹಾಲಿ ಮೈಸೂರು ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ಪತ್ರಕರ್ತರ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ.

ಬಿಜೆಪಿ ಯಾರೊಬ್ಬರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಹಿಸಿಕೊಳ್ಳದು ಎಂಬುದಕ್ಕೆ ಅನೇಕ ನಿದರ್ಶನಗಳು ಮತ್ತೆ ಮತ್ತೆ ಬಯಲಾಗುತ್ತಲೆ ಇವೆ.

ಇದನ್ನೂ ಓದಿ: ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಪ್ರಶ್ನಿಸುವ ಪತ್ರಕರ್ತರನ್ನು, ಸಾಹಿತಿ- ಬರಹಗಾರರನ್ನ, ವಿಮರ್ಶಕರನ್ನು, ಸೈದ್ಧಾಂತಿಕ ವಿರೋಧಿಗಳಿಗೆ ದೇಶದ್ರೋಹಿ ಎಂಬ  ಹಣೆ ಪಟ್ಟಿ ಕಟ್ಟಿ ದಮನ ಮಾಡುವ ಮತ್ತು ವಿಚಾರ ಸಂಘರ್ಷದ ಮೂಲಕ  ಎದುರುಗೊಳ್ಳಲಾರದ ಮನುವಾದಿ ಪ್ರೇಣಿತ ಬಿಜೆಪಿ ಮತ್ತದರ ಸಂತತಿಗಳು ಕಾನೂನು ದುರ್ಬಳಕೆ ಮಾಡಿಕೊಂಡೊ ಇಲ್ಲವೆ ಇನ್ನಾವುದಾದರೂ ದಾರಿಯಲ್ಲಿ ಹತ್ತಿಕ್ಕುವ ಕುಕೃತ್ಯಗಳು ಮುಂದುವರೆದಿವೆ.

ಪತ್ರಕರ್ತ ದೀಪಕ್ ವಿರುದ್ಧ ಕೇಸು ದಾಖಲಿಸಿದ ಬಿಜೆಪಿ ಕ್ರಮ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕಾರಿಯಾದದ್ದು ಎಂದು ಪತ್ರಕರ್ತರ ಸಮೂಹ ತೀವ್ರ‌ಖಂಡನೆ ವ್ಯಕ್ತಪಡಿಸಿದೆ.

“ನನ್ನ ಮೇಲೆ ಇಂತಹ ಹತ್ತಾರು ಕೇಸು ಹಾಕಿದರೂ ಸತ್ಯ ಹೇಳುವ ನನ್ನ ದನಿಯನ್ನು ಅಡಗಿಸಲಾಗದು. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದ ಹಕ್ಕನ್ನು ಹತ್ತಿಕ್ಕುವ ಯಾವುದೇ ಶಕ್ತಿಗಳ ವಿರುದ್ಧ ಹೋರಾಡುತ್ತೇನೆ.”

ಕೆ.ದೀಪಕ್

ವಿಡಿಯೋ ನೋಡಿ:ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ – ಡಾ.ವಾಸು ಎಚ್‌.ವಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...