Homeಕರ್ನಾಟಕ’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮೈಸೂರಿನ "ಪ್ರಜಾಭಾರತ" ಸುದ್ದಿವಾಹಿನಿಯು "ಮತಭಾರತ" ಎಂಬ ಸರಣಿ ಸಂಚಿಕೆಯೊಂದರಲ್ಲಿ "ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು" ಎಂಬ ಪ್ರಸಾರ ಮಾಡಿತ್ತು.

- Advertisement -
- Advertisement -

ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನೆಲ್ಲಾ ಕೈ ವಶಮಾಡಿಕೊಂಡಿರುವ “ಭಕ್ತರ ಫ್ರಭುತ್ವ” ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಫ್ಯಾಸಿಸಂ ಧೋರಣೆಯನ್ನು ಮುಂದುವರೆಸಿದೆ.

ತನ್ನ ಸುಳ್ಳುಗಳನ್ನು, ಮತೋನ್ಮತ್ತ ಕ್ರೌರ್ಯವನ್ನು ಖಂಡಿಸುವ, ಅದೇ ಕಾಲಕ್ಕೆ ಸತ್ಯವನ್ನು ಜನರ ಮುಂದಿಡುವ ಯಾರೊಬ್ಬರನ್ನೂ ಸಹಿಸಿಕೊಳ್ಳದ ಬಿಜೆಪಿ ರಾಜ್ಯದಲ್ಲೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡುವ ಕೆಲಸಕ್ಕೆ ಕೈ ಹಾಕಿರುವ ಮತ್ತೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಬಯಲಾಗಿದೆ.

ಇದನ್ನೂ ಓದಿ: 2019ರಲ್ಲಿ ದಿಟ್ಟವಾಗಿ ಧ್ವನಿಯೆತ್ತಿದ 10 ಪತ್ರಕರ್ತೆಯರ ಕುರಿತು

ಮೈಸೂರಿನ ಹಿರಿಯ ಪತ್ರಕರ್ತ ‘ಪ್ರಜಾಭಾರತ’ ಸುದ್ದಿವಾಹಿನಿಯ ಸಂಪಾದಕ ಕೆ. ದೀಪಕ್ ವಿರುದ್ಧ ಬಿಜೆಪಿಯ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ಎಂಬುವರು ಸದ್ದಿಲ್ಲದೆ ಪೊಲೀಸ್ ದೂರು ದಾಖಲಿಸಿ ದೀಪಕ್ ಅವರನ್ನು ಜೈಲಿಗೆ ನೂಕುವ ಷಡ್ಯಂತ್ರ ದೀಪಕ್ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದ್ದರಿಂದ ವಿಫಲವಾಗಿದೆ.

ದೀಪಕ್ ಮಾಡಿದ ಅಪರಾಧವಾದರೂ ಏನು ಗೊತ್ತಾ?

ಕಳೆದ 2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈಸೂರಿನ “ಪ್ರಜಾಭಾರತ” ಸುದ್ದಿವಾಹಿನಿಯು  “ಮತಭಾರತ” ಎಂಬ ಸರಣಿ ಸಂಚಿಕೆಯೊಂದರಲ್ಲಿ “ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು” ಪ್ರಸಾರ ಮಾಡಿದ್ದು. ಬಿಜೆಪಿಯ ಸಂವಿಧಾನ ವಿರೋಧಿ ಆಡಳಿತವನ್ನು ಎಳೆ ಎಳೆಯಾಗಿ ವಿಶ್ಲೇಷಿಸಲಾಗಿತ್ತು.

ಇದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮೈಸೂರಿನ ಪ್ರಜಾಭಾರತ ಸುದ್ದಿವಾಹಿನಿ ಸಂಪಾದಕ ಕೆ.ದೀಪಕ್ ವಿರುದ್ಧ ಕೋಮು ಸೌಹಾರ್ದ ಕದಡುವ ಸಂಚು ನಡೆಸಿದ ಆರೋಪ ಹೊರಿಸಿ ಬಿಜೆಪಿ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಸದ್ದಿಲ್ಲದೆ ಎಫ್‌ಐಅರ್ (ಐಪಿಸಿ 504, 505, 153 ಎ) ದಾಖಲಾಗಿದ್ದು, 17 ತಿಂಗಳ ನಂತರ ದೀಪಕ್ ಅವರನ್ನು ಬಂಧಿಸಿ ಜೈಲಿಗೆ ನೂಕುವಂತೆ ಪೊಲೀಸರಿಗೆ ತೀವ್ರ ಒತ್ತಡಗಳನ್ನು ಹೇರಲಾಗಿತ್ತು. ದೀಪಕ್ ನಿರೀಕ್ಷಣಾ ಜಾಮೀನು ಪಡೆದು ಬಿಜೆಪಿಯ ಷಡ್ಯಂತ್ರವನ್ನು ವಿಫಲಗೊಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜಾಭಾರತ ಸುದ್ದಿವಾಹಿನಿ ಮತಭಾರತ ಸರಣಿಯಲ್ಲಿ ಕೇಂದ್ರದ ಮೋದಿ ಸರ್ಕಾರದ ವೈಫಲ್ಯ, ಸಮುದಾಯ ವಿರೋಧಿತನಗಳನ್ನು ಬಯಲಿಗೆಳೆಯುತ್ತಾ ಬಂದಿದ್ದರು. ಮೈಸೂರಿನ ಸಂಸದ ಪ್ರತಾಪ ಸಿಂಹ ಅವರ ಲೈಂಗಿಕ ಹಗರಣವನ್ನು ಸ್ಪೋಟಿಸಿದ್ದರು. ಇದೇ ಸೇಡಿಗೆ ದೀಪಕ್ ವಿರುದ್ಧ ಬೆಂಗಳೂರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ದೂರು ದಾಖಲಾದದ್ದು ದೀಪಕ್ ಅವರಿಗೆ ತಿಳಿಯಲು 17 ತಿಂಗಳೇ ಬೇಕಾಯಿತು!. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುತ್ತಿದ್ದಂತೆ ದೀಪಕ್ ವಿರುದ್ಧ ಕೇಸು ದಾಖಲಾಗಿರುವುದು ಬೆಳಕಿಗೆ ಬಂದಿದ್ದು. ಅವರನ್ನು ಬಂಧಿಸಿಯೇ ತೀರಬೇಕೆಂಬ ಒತ್ತಡಗಳು ಪೊಲೀಸರ ಮೇಲಿತ್ತು.

ಪತ್ರಕರ್ತ ದೀಪಕ್ ಅವರನ್ನು ಜೈಲಿಗೆ ನೂಕಿ ಭಯಪಡಿಸಿ ಬಾಯಿ ಮುಚ್ಚಿಸುವ ಪ್ರತಾಪಸಿಂಹನ ಕೇಡಿ ಕೃತ್ಯ ಸದ್ಯಕ್ಕೆ ಈಡೇರಿಲ್ಲ.

ಕೆ.ದೀಪಕ್ ಕಳೆದ 21 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದಾರೆ. ಅವರೋರ್ವ ಜರ್ನಲಿಸ್ಟ್ ಆ್ಯಕ್ಟ್ವೀಸ್ಟ್. ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಡಿಹೊತ್ತಿಗೆಯಾಗಿದ್ದ ಮೈಸೂರಿನ ‘ಸಾಧ್ವಿ’ ಪತ್ರಿಕೆಯ ಮೂಲಕ ಪರ್ತಕರ್ತ ಬದುಕು ಕಟ್ಟಿಕೊಂಡ ದೀಪಕ್ ‘ವಿಜಯ’, ಸೂರ್ಯೋದಯ, ಪ್ರಜಾನುಡಿ, ಸಂಜೆವಾಣಿ, ವಾರ್ತಾಭಾರತಿ ಪತ್ರಿಕೆಗಳು ಸೇರಿದಂತೆ ದೃಶ್ಯಮಾಧ್ಯಮಗಳಲ್ಲೂ ವೃತ್ತಿಪರ ಪತ್ರಕರ್ತನಾಗಿಯೂ ಅದೇ ಕಾಲಕ್ಕೆ ಬುದ್ದ, ಬಸವ, ಅಂಬೇಡ್ಕರ್ ಪ್ರೇಣಿತ ವೈಚಾರಿಕ ಚಿಂತನೆಗಳೊಂದಿಗೆ ಸಾಮಾಜಿಕ ಚಳವಳಿಗಳ ಜೊತೆ ಹೆಜ್ಜೆ ಹಾಕುತಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ದೀಪಕ್ ಹಾಲಿ ಮೈಸೂರು ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ಪತ್ರಕರ್ತರ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ.

ಬಿಜೆಪಿ ಯಾರೊಬ್ಬರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಹಿಸಿಕೊಳ್ಳದು ಎಂಬುದಕ್ಕೆ ಅನೇಕ ನಿದರ್ಶನಗಳು ಮತ್ತೆ ಮತ್ತೆ ಬಯಲಾಗುತ್ತಲೆ ಇವೆ.

ಇದನ್ನೂ ಓದಿ: ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಪ್ರಶ್ನಿಸುವ ಪತ್ರಕರ್ತರನ್ನು, ಸಾಹಿತಿ- ಬರಹಗಾರರನ್ನ, ವಿಮರ್ಶಕರನ್ನು, ಸೈದ್ಧಾಂತಿಕ ವಿರೋಧಿಗಳಿಗೆ ದೇಶದ್ರೋಹಿ ಎಂಬ  ಹಣೆ ಪಟ್ಟಿ ಕಟ್ಟಿ ದಮನ ಮಾಡುವ ಮತ್ತು ವಿಚಾರ ಸಂಘರ್ಷದ ಮೂಲಕ  ಎದುರುಗೊಳ್ಳಲಾರದ ಮನುವಾದಿ ಪ್ರೇಣಿತ ಬಿಜೆಪಿ ಮತ್ತದರ ಸಂತತಿಗಳು ಕಾನೂನು ದುರ್ಬಳಕೆ ಮಾಡಿಕೊಂಡೊ ಇಲ್ಲವೆ ಇನ್ನಾವುದಾದರೂ ದಾರಿಯಲ್ಲಿ ಹತ್ತಿಕ್ಕುವ ಕುಕೃತ್ಯಗಳು ಮುಂದುವರೆದಿವೆ.

ಪತ್ರಕರ್ತ ದೀಪಕ್ ವಿರುದ್ಧ ಕೇಸು ದಾಖಲಿಸಿದ ಬಿಜೆಪಿ ಕ್ರಮ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕಾರಿಯಾದದ್ದು ಎಂದು ಪತ್ರಕರ್ತರ ಸಮೂಹ ತೀವ್ರ‌ಖಂಡನೆ ವ್ಯಕ್ತಪಡಿಸಿದೆ.

“ನನ್ನ ಮೇಲೆ ಇಂತಹ ಹತ್ತಾರು ಕೇಸು ಹಾಕಿದರೂ ಸತ್ಯ ಹೇಳುವ ನನ್ನ ದನಿಯನ್ನು ಅಡಗಿಸಲಾಗದು. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದ ಹಕ್ಕನ್ನು ಹತ್ತಿಕ್ಕುವ ಯಾವುದೇ ಶಕ್ತಿಗಳ ವಿರುದ್ಧ ಹೋರಾಡುತ್ತೇನೆ.”

ಕೆ.ದೀಪಕ್

ವಿಡಿಯೋ ನೋಡಿ:ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ – ಡಾ.ವಾಸು ಎಚ್‌.ವಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...