Homeಕರ್ನಾಟಕ’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮೈಸೂರಿನ "ಪ್ರಜಾಭಾರತ" ಸುದ್ದಿವಾಹಿನಿಯು "ಮತಭಾರತ" ಎಂಬ ಸರಣಿ ಸಂಚಿಕೆಯೊಂದರಲ್ಲಿ "ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು" ಎಂಬ ಪ್ರಸಾರ ಮಾಡಿತ್ತು.

- Advertisement -
- Advertisement -

ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನೆಲ್ಲಾ ಕೈ ವಶಮಾಡಿಕೊಂಡಿರುವ “ಭಕ್ತರ ಫ್ರಭುತ್ವ” ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಫ್ಯಾಸಿಸಂ ಧೋರಣೆಯನ್ನು ಮುಂದುವರೆಸಿದೆ.

ತನ್ನ ಸುಳ್ಳುಗಳನ್ನು, ಮತೋನ್ಮತ್ತ ಕ್ರೌರ್ಯವನ್ನು ಖಂಡಿಸುವ, ಅದೇ ಕಾಲಕ್ಕೆ ಸತ್ಯವನ್ನು ಜನರ ಮುಂದಿಡುವ ಯಾರೊಬ್ಬರನ್ನೂ ಸಹಿಸಿಕೊಳ್ಳದ ಬಿಜೆಪಿ ರಾಜ್ಯದಲ್ಲೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡುವ ಕೆಲಸಕ್ಕೆ ಕೈ ಹಾಕಿರುವ ಮತ್ತೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಬಯಲಾಗಿದೆ.

ಇದನ್ನೂ ಓದಿ: 2019ರಲ್ಲಿ ದಿಟ್ಟವಾಗಿ ಧ್ವನಿಯೆತ್ತಿದ 10 ಪತ್ರಕರ್ತೆಯರ ಕುರಿತು

ಮೈಸೂರಿನ ಹಿರಿಯ ಪತ್ರಕರ್ತ ‘ಪ್ರಜಾಭಾರತ’ ಸುದ್ದಿವಾಹಿನಿಯ ಸಂಪಾದಕ ಕೆ. ದೀಪಕ್ ವಿರುದ್ಧ ಬಿಜೆಪಿಯ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ಎಂಬುವರು ಸದ್ದಿಲ್ಲದೆ ಪೊಲೀಸ್ ದೂರು ದಾಖಲಿಸಿ ದೀಪಕ್ ಅವರನ್ನು ಜೈಲಿಗೆ ನೂಕುವ ಷಡ್ಯಂತ್ರ ದೀಪಕ್ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದ್ದರಿಂದ ವಿಫಲವಾಗಿದೆ.

ದೀಪಕ್ ಮಾಡಿದ ಅಪರಾಧವಾದರೂ ಏನು ಗೊತ್ತಾ?

ಕಳೆದ 2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈಸೂರಿನ “ಪ್ರಜಾಭಾರತ” ಸುದ್ದಿವಾಹಿನಿಯು  “ಮತಭಾರತ” ಎಂಬ ಸರಣಿ ಸಂಚಿಕೆಯೊಂದರಲ್ಲಿ “ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು” ಪ್ರಸಾರ ಮಾಡಿದ್ದು. ಬಿಜೆಪಿಯ ಸಂವಿಧಾನ ವಿರೋಧಿ ಆಡಳಿತವನ್ನು ಎಳೆ ಎಳೆಯಾಗಿ ವಿಶ್ಲೇಷಿಸಲಾಗಿತ್ತು.

ಇದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮೈಸೂರಿನ ಪ್ರಜಾಭಾರತ ಸುದ್ದಿವಾಹಿನಿ ಸಂಪಾದಕ ಕೆ.ದೀಪಕ್ ವಿರುದ್ಧ ಕೋಮು ಸೌಹಾರ್ದ ಕದಡುವ ಸಂಚು ನಡೆಸಿದ ಆರೋಪ ಹೊರಿಸಿ ಬಿಜೆಪಿ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಸದ್ದಿಲ್ಲದೆ ಎಫ್‌ಐಅರ್ (ಐಪಿಸಿ 504, 505, 153 ಎ) ದಾಖಲಾಗಿದ್ದು, 17 ತಿಂಗಳ ನಂತರ ದೀಪಕ್ ಅವರನ್ನು ಬಂಧಿಸಿ ಜೈಲಿಗೆ ನೂಕುವಂತೆ ಪೊಲೀಸರಿಗೆ ತೀವ್ರ ಒತ್ತಡಗಳನ್ನು ಹೇರಲಾಗಿತ್ತು. ದೀಪಕ್ ನಿರೀಕ್ಷಣಾ ಜಾಮೀನು ಪಡೆದು ಬಿಜೆಪಿಯ ಷಡ್ಯಂತ್ರವನ್ನು ವಿಫಲಗೊಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜಾಭಾರತ ಸುದ್ದಿವಾಹಿನಿ ಮತಭಾರತ ಸರಣಿಯಲ್ಲಿ ಕೇಂದ್ರದ ಮೋದಿ ಸರ್ಕಾರದ ವೈಫಲ್ಯ, ಸಮುದಾಯ ವಿರೋಧಿತನಗಳನ್ನು ಬಯಲಿಗೆಳೆಯುತ್ತಾ ಬಂದಿದ್ದರು. ಮೈಸೂರಿನ ಸಂಸದ ಪ್ರತಾಪ ಸಿಂಹ ಅವರ ಲೈಂಗಿಕ ಹಗರಣವನ್ನು ಸ್ಪೋಟಿಸಿದ್ದರು. ಇದೇ ಸೇಡಿಗೆ ದೀಪಕ್ ವಿರುದ್ಧ ಬೆಂಗಳೂರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ದೂರು ದಾಖಲಾದದ್ದು ದೀಪಕ್ ಅವರಿಗೆ ತಿಳಿಯಲು 17 ತಿಂಗಳೇ ಬೇಕಾಯಿತು!. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುತ್ತಿದ್ದಂತೆ ದೀಪಕ್ ವಿರುದ್ಧ ಕೇಸು ದಾಖಲಾಗಿರುವುದು ಬೆಳಕಿಗೆ ಬಂದಿದ್ದು. ಅವರನ್ನು ಬಂಧಿಸಿಯೇ ತೀರಬೇಕೆಂಬ ಒತ್ತಡಗಳು ಪೊಲೀಸರ ಮೇಲಿತ್ತು.

ಪತ್ರಕರ್ತ ದೀಪಕ್ ಅವರನ್ನು ಜೈಲಿಗೆ ನೂಕಿ ಭಯಪಡಿಸಿ ಬಾಯಿ ಮುಚ್ಚಿಸುವ ಪ್ರತಾಪಸಿಂಹನ ಕೇಡಿ ಕೃತ್ಯ ಸದ್ಯಕ್ಕೆ ಈಡೇರಿಲ್ಲ.

ಕೆ.ದೀಪಕ್ ಕಳೆದ 21 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದಾರೆ. ಅವರೋರ್ವ ಜರ್ನಲಿಸ್ಟ್ ಆ್ಯಕ್ಟ್ವೀಸ್ಟ್. ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಡಿಹೊತ್ತಿಗೆಯಾಗಿದ್ದ ಮೈಸೂರಿನ ‘ಸಾಧ್ವಿ’ ಪತ್ರಿಕೆಯ ಮೂಲಕ ಪರ್ತಕರ್ತ ಬದುಕು ಕಟ್ಟಿಕೊಂಡ ದೀಪಕ್ ‘ವಿಜಯ’, ಸೂರ್ಯೋದಯ, ಪ್ರಜಾನುಡಿ, ಸಂಜೆವಾಣಿ, ವಾರ್ತಾಭಾರತಿ ಪತ್ರಿಕೆಗಳು ಸೇರಿದಂತೆ ದೃಶ್ಯಮಾಧ್ಯಮಗಳಲ್ಲೂ ವೃತ್ತಿಪರ ಪತ್ರಕರ್ತನಾಗಿಯೂ ಅದೇ ಕಾಲಕ್ಕೆ ಬುದ್ದ, ಬಸವ, ಅಂಬೇಡ್ಕರ್ ಪ್ರೇಣಿತ ವೈಚಾರಿಕ ಚಿಂತನೆಗಳೊಂದಿಗೆ ಸಾಮಾಜಿಕ ಚಳವಳಿಗಳ ಜೊತೆ ಹೆಜ್ಜೆ ಹಾಕುತಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ದೀಪಕ್ ಹಾಲಿ ಮೈಸೂರು ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ಪತ್ರಕರ್ತರ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ.

ಬಿಜೆಪಿ ಯಾರೊಬ್ಬರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಹಿಸಿಕೊಳ್ಳದು ಎಂಬುದಕ್ಕೆ ಅನೇಕ ನಿದರ್ಶನಗಳು ಮತ್ತೆ ಮತ್ತೆ ಬಯಲಾಗುತ್ತಲೆ ಇವೆ.

ಇದನ್ನೂ ಓದಿ: ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಪ್ರಶ್ನಿಸುವ ಪತ್ರಕರ್ತರನ್ನು, ಸಾಹಿತಿ- ಬರಹಗಾರರನ್ನ, ವಿಮರ್ಶಕರನ್ನು, ಸೈದ್ಧಾಂತಿಕ ವಿರೋಧಿಗಳಿಗೆ ದೇಶದ್ರೋಹಿ ಎಂಬ  ಹಣೆ ಪಟ್ಟಿ ಕಟ್ಟಿ ದಮನ ಮಾಡುವ ಮತ್ತು ವಿಚಾರ ಸಂಘರ್ಷದ ಮೂಲಕ  ಎದುರುಗೊಳ್ಳಲಾರದ ಮನುವಾದಿ ಪ್ರೇಣಿತ ಬಿಜೆಪಿ ಮತ್ತದರ ಸಂತತಿಗಳು ಕಾನೂನು ದುರ್ಬಳಕೆ ಮಾಡಿಕೊಂಡೊ ಇಲ್ಲವೆ ಇನ್ನಾವುದಾದರೂ ದಾರಿಯಲ್ಲಿ ಹತ್ತಿಕ್ಕುವ ಕುಕೃತ್ಯಗಳು ಮುಂದುವರೆದಿವೆ.

ಪತ್ರಕರ್ತ ದೀಪಕ್ ವಿರುದ್ಧ ಕೇಸು ದಾಖಲಿಸಿದ ಬಿಜೆಪಿ ಕ್ರಮ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕಾರಿಯಾದದ್ದು ಎಂದು ಪತ್ರಕರ್ತರ ಸಮೂಹ ತೀವ್ರ‌ಖಂಡನೆ ವ್ಯಕ್ತಪಡಿಸಿದೆ.

“ನನ್ನ ಮೇಲೆ ಇಂತಹ ಹತ್ತಾರು ಕೇಸು ಹಾಕಿದರೂ ಸತ್ಯ ಹೇಳುವ ನನ್ನ ದನಿಯನ್ನು ಅಡಗಿಸಲಾಗದು. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದ ಹಕ್ಕನ್ನು ಹತ್ತಿಕ್ಕುವ ಯಾವುದೇ ಶಕ್ತಿಗಳ ವಿರುದ್ಧ ಹೋರಾಡುತ್ತೇನೆ.”

ಕೆ.ದೀಪಕ್

ವಿಡಿಯೋ ನೋಡಿ:ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ – ಡಾ.ವಾಸು ಎಚ್‌.ವಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...