Homeಕರ್ನಾಟಕ’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮೈಸೂರಿನ "ಪ್ರಜಾಭಾರತ" ಸುದ್ದಿವಾಹಿನಿಯು "ಮತಭಾರತ" ಎಂಬ ಸರಣಿ ಸಂಚಿಕೆಯೊಂದರಲ್ಲಿ "ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು" ಎಂಬ ಪ್ರಸಾರ ಮಾಡಿತ್ತು.

- Advertisement -
- Advertisement -

ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನೆಲ್ಲಾ ಕೈ ವಶಮಾಡಿಕೊಂಡಿರುವ “ಭಕ್ತರ ಫ್ರಭುತ್ವ” ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಫ್ಯಾಸಿಸಂ ಧೋರಣೆಯನ್ನು ಮುಂದುವರೆಸಿದೆ.

ತನ್ನ ಸುಳ್ಳುಗಳನ್ನು, ಮತೋನ್ಮತ್ತ ಕ್ರೌರ್ಯವನ್ನು ಖಂಡಿಸುವ, ಅದೇ ಕಾಲಕ್ಕೆ ಸತ್ಯವನ್ನು ಜನರ ಮುಂದಿಡುವ ಯಾರೊಬ್ಬರನ್ನೂ ಸಹಿಸಿಕೊಳ್ಳದ ಬಿಜೆಪಿ ರಾಜ್ಯದಲ್ಲೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡುವ ಕೆಲಸಕ್ಕೆ ಕೈ ಹಾಕಿರುವ ಮತ್ತೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಬಯಲಾಗಿದೆ.

ಇದನ್ನೂ ಓದಿ: 2019ರಲ್ಲಿ ದಿಟ್ಟವಾಗಿ ಧ್ವನಿಯೆತ್ತಿದ 10 ಪತ್ರಕರ್ತೆಯರ ಕುರಿತು

ಮೈಸೂರಿನ ಹಿರಿಯ ಪತ್ರಕರ್ತ ‘ಪ್ರಜಾಭಾರತ’ ಸುದ್ದಿವಾಹಿನಿಯ ಸಂಪಾದಕ ಕೆ. ದೀಪಕ್ ವಿರುದ್ಧ ಬಿಜೆಪಿಯ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ಎಂಬುವರು ಸದ್ದಿಲ್ಲದೆ ಪೊಲೀಸ್ ದೂರು ದಾಖಲಿಸಿ ದೀಪಕ್ ಅವರನ್ನು ಜೈಲಿಗೆ ನೂಕುವ ಷಡ್ಯಂತ್ರ ದೀಪಕ್ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದ್ದರಿಂದ ವಿಫಲವಾಗಿದೆ.

ದೀಪಕ್ ಮಾಡಿದ ಅಪರಾಧವಾದರೂ ಏನು ಗೊತ್ತಾ?

ಕಳೆದ 2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈಸೂರಿನ “ಪ್ರಜಾಭಾರತ” ಸುದ್ದಿವಾಹಿನಿಯು  “ಮತಭಾರತ” ಎಂಬ ಸರಣಿ ಸಂಚಿಕೆಯೊಂದರಲ್ಲಿ “ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು” ಪ್ರಸಾರ ಮಾಡಿದ್ದು. ಬಿಜೆಪಿಯ ಸಂವಿಧಾನ ವಿರೋಧಿ ಆಡಳಿತವನ್ನು ಎಳೆ ಎಳೆಯಾಗಿ ವಿಶ್ಲೇಷಿಸಲಾಗಿತ್ತು.

ಇದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮೈಸೂರಿನ ಪ್ರಜಾಭಾರತ ಸುದ್ದಿವಾಹಿನಿ ಸಂಪಾದಕ ಕೆ.ದೀಪಕ್ ವಿರುದ್ಧ ಕೋಮು ಸೌಹಾರ್ದ ಕದಡುವ ಸಂಚು ನಡೆಸಿದ ಆರೋಪ ಹೊರಿಸಿ ಬಿಜೆಪಿ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಸದ್ದಿಲ್ಲದೆ ಎಫ್‌ಐಅರ್ (ಐಪಿಸಿ 504, 505, 153 ಎ) ದಾಖಲಾಗಿದ್ದು, 17 ತಿಂಗಳ ನಂತರ ದೀಪಕ್ ಅವರನ್ನು ಬಂಧಿಸಿ ಜೈಲಿಗೆ ನೂಕುವಂತೆ ಪೊಲೀಸರಿಗೆ ತೀವ್ರ ಒತ್ತಡಗಳನ್ನು ಹೇರಲಾಗಿತ್ತು. ದೀಪಕ್ ನಿರೀಕ್ಷಣಾ ಜಾಮೀನು ಪಡೆದು ಬಿಜೆಪಿಯ ಷಡ್ಯಂತ್ರವನ್ನು ವಿಫಲಗೊಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜಾಭಾರತ ಸುದ್ದಿವಾಹಿನಿ ಮತಭಾರತ ಸರಣಿಯಲ್ಲಿ ಕೇಂದ್ರದ ಮೋದಿ ಸರ್ಕಾರದ ವೈಫಲ್ಯ, ಸಮುದಾಯ ವಿರೋಧಿತನಗಳನ್ನು ಬಯಲಿಗೆಳೆಯುತ್ತಾ ಬಂದಿದ್ದರು. ಮೈಸೂರಿನ ಸಂಸದ ಪ್ರತಾಪ ಸಿಂಹ ಅವರ ಲೈಂಗಿಕ ಹಗರಣವನ್ನು ಸ್ಪೋಟಿಸಿದ್ದರು. ಇದೇ ಸೇಡಿಗೆ ದೀಪಕ್ ವಿರುದ್ಧ ಬೆಂಗಳೂರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ದೂರು ದಾಖಲಾದದ್ದು ದೀಪಕ್ ಅವರಿಗೆ ತಿಳಿಯಲು 17 ತಿಂಗಳೇ ಬೇಕಾಯಿತು!. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುತ್ತಿದ್ದಂತೆ ದೀಪಕ್ ವಿರುದ್ಧ ಕೇಸು ದಾಖಲಾಗಿರುವುದು ಬೆಳಕಿಗೆ ಬಂದಿದ್ದು. ಅವರನ್ನು ಬಂಧಿಸಿಯೇ ತೀರಬೇಕೆಂಬ ಒತ್ತಡಗಳು ಪೊಲೀಸರ ಮೇಲಿತ್ತು.

ಪತ್ರಕರ್ತ ದೀಪಕ್ ಅವರನ್ನು ಜೈಲಿಗೆ ನೂಕಿ ಭಯಪಡಿಸಿ ಬಾಯಿ ಮುಚ್ಚಿಸುವ ಪ್ರತಾಪಸಿಂಹನ ಕೇಡಿ ಕೃತ್ಯ ಸದ್ಯಕ್ಕೆ ಈಡೇರಿಲ್ಲ.

ಕೆ.ದೀಪಕ್ ಕಳೆದ 21 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದಾರೆ. ಅವರೋರ್ವ ಜರ್ನಲಿಸ್ಟ್ ಆ್ಯಕ್ಟ್ವೀಸ್ಟ್. ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಡಿಹೊತ್ತಿಗೆಯಾಗಿದ್ದ ಮೈಸೂರಿನ ‘ಸಾಧ್ವಿ’ ಪತ್ರಿಕೆಯ ಮೂಲಕ ಪರ್ತಕರ್ತ ಬದುಕು ಕಟ್ಟಿಕೊಂಡ ದೀಪಕ್ ‘ವಿಜಯ’, ಸೂರ್ಯೋದಯ, ಪ್ರಜಾನುಡಿ, ಸಂಜೆವಾಣಿ, ವಾರ್ತಾಭಾರತಿ ಪತ್ರಿಕೆಗಳು ಸೇರಿದಂತೆ ದೃಶ್ಯಮಾಧ್ಯಮಗಳಲ್ಲೂ ವೃತ್ತಿಪರ ಪತ್ರಕರ್ತನಾಗಿಯೂ ಅದೇ ಕಾಲಕ್ಕೆ ಬುದ್ದ, ಬಸವ, ಅಂಬೇಡ್ಕರ್ ಪ್ರೇಣಿತ ವೈಚಾರಿಕ ಚಿಂತನೆಗಳೊಂದಿಗೆ ಸಾಮಾಜಿಕ ಚಳವಳಿಗಳ ಜೊತೆ ಹೆಜ್ಜೆ ಹಾಕುತಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ದೀಪಕ್ ಹಾಲಿ ಮೈಸೂರು ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ಪತ್ರಕರ್ತರ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ.

ಬಿಜೆಪಿ ಯಾರೊಬ್ಬರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಹಿಸಿಕೊಳ್ಳದು ಎಂಬುದಕ್ಕೆ ಅನೇಕ ನಿದರ್ಶನಗಳು ಮತ್ತೆ ಮತ್ತೆ ಬಯಲಾಗುತ್ತಲೆ ಇವೆ.

ಇದನ್ನೂ ಓದಿ: ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಪ್ರಶ್ನಿಸುವ ಪತ್ರಕರ್ತರನ್ನು, ಸಾಹಿತಿ- ಬರಹಗಾರರನ್ನ, ವಿಮರ್ಶಕರನ್ನು, ಸೈದ್ಧಾಂತಿಕ ವಿರೋಧಿಗಳಿಗೆ ದೇಶದ್ರೋಹಿ ಎಂಬ  ಹಣೆ ಪಟ್ಟಿ ಕಟ್ಟಿ ದಮನ ಮಾಡುವ ಮತ್ತು ವಿಚಾರ ಸಂಘರ್ಷದ ಮೂಲಕ  ಎದುರುಗೊಳ್ಳಲಾರದ ಮನುವಾದಿ ಪ್ರೇಣಿತ ಬಿಜೆಪಿ ಮತ್ತದರ ಸಂತತಿಗಳು ಕಾನೂನು ದುರ್ಬಳಕೆ ಮಾಡಿಕೊಂಡೊ ಇಲ್ಲವೆ ಇನ್ನಾವುದಾದರೂ ದಾರಿಯಲ್ಲಿ ಹತ್ತಿಕ್ಕುವ ಕುಕೃತ್ಯಗಳು ಮುಂದುವರೆದಿವೆ.

ಪತ್ರಕರ್ತ ದೀಪಕ್ ವಿರುದ್ಧ ಕೇಸು ದಾಖಲಿಸಿದ ಬಿಜೆಪಿ ಕ್ರಮ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕಾರಿಯಾದದ್ದು ಎಂದು ಪತ್ರಕರ್ತರ ಸಮೂಹ ತೀವ್ರ‌ಖಂಡನೆ ವ್ಯಕ್ತಪಡಿಸಿದೆ.

“ನನ್ನ ಮೇಲೆ ಇಂತಹ ಹತ್ತಾರು ಕೇಸು ಹಾಕಿದರೂ ಸತ್ಯ ಹೇಳುವ ನನ್ನ ದನಿಯನ್ನು ಅಡಗಿಸಲಾಗದು. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದ ಹಕ್ಕನ್ನು ಹತ್ತಿಕ್ಕುವ ಯಾವುದೇ ಶಕ್ತಿಗಳ ವಿರುದ್ಧ ಹೋರಾಡುತ್ತೇನೆ.”

ಕೆ.ದೀಪಕ್

ವಿಡಿಯೋ ನೋಡಿ:ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ – ಡಾ.ವಾಸು ಎಚ್‌.ವಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...