Homeಕರ್ನಾಟಕ’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

’ಪ್ರಜಾಭಾರತ’ ದನಿ ಅಡಗಿಸಲು ಸಂಚು; ಹೊರಾಟಗಾರ ಪತ್ರಕರ್ತ ಕೆ. ದೀಪಕ್ ಮೇಲೆ FIR

ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಮೈಸೂರಿನ "ಪ್ರಜಾಭಾರತ" ಸುದ್ದಿವಾಹಿನಿಯು "ಮತಭಾರತ" ಎಂಬ ಸರಣಿ ಸಂಚಿಕೆಯೊಂದರಲ್ಲಿ "ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು" ಎಂಬ ಪ್ರಸಾರ ಮಾಡಿತ್ತು.

- Advertisement -
- Advertisement -

ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನೆಲ್ಲಾ ಕೈ ವಶಮಾಡಿಕೊಂಡಿರುವ “ಭಕ್ತರ ಫ್ರಭುತ್ವ” ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಫ್ಯಾಸಿಸಂ ಧೋರಣೆಯನ್ನು ಮುಂದುವರೆಸಿದೆ.

ತನ್ನ ಸುಳ್ಳುಗಳನ್ನು, ಮತೋನ್ಮತ್ತ ಕ್ರೌರ್ಯವನ್ನು ಖಂಡಿಸುವ, ಅದೇ ಕಾಲಕ್ಕೆ ಸತ್ಯವನ್ನು ಜನರ ಮುಂದಿಡುವ ಯಾರೊಬ್ಬರನ್ನೂ ಸಹಿಸಿಕೊಳ್ಳದ ಬಿಜೆಪಿ ರಾಜ್ಯದಲ್ಲೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನ ಮಾಡುವ ಕೆಲಸಕ್ಕೆ ಕೈ ಹಾಕಿರುವ ಮತ್ತೊಂದು ಪ್ರಜಾಪ್ರಭುತ್ವ ವಿರೋಧಿ ಕೃತ್ಯ ಬಯಲಾಗಿದೆ.

ಇದನ್ನೂ ಓದಿ: 2019ರಲ್ಲಿ ದಿಟ್ಟವಾಗಿ ಧ್ವನಿಯೆತ್ತಿದ 10 ಪತ್ರಕರ್ತೆಯರ ಕುರಿತು

ಮೈಸೂರಿನ ಹಿರಿಯ ಪತ್ರಕರ್ತ ‘ಪ್ರಜಾಭಾರತ’ ಸುದ್ದಿವಾಹಿನಿಯ ಸಂಪಾದಕ ಕೆ. ದೀಪಕ್ ವಿರುದ್ಧ ಬಿಜೆಪಿಯ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ಎಂಬುವರು ಸದ್ದಿಲ್ಲದೆ ಪೊಲೀಸ್ ದೂರು ದಾಖಲಿಸಿ ದೀಪಕ್ ಅವರನ್ನು ಜೈಲಿಗೆ ನೂಕುವ ಷಡ್ಯಂತ್ರ ದೀಪಕ್ ಅವರಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದ್ದರಿಂದ ವಿಫಲವಾಗಿದೆ.

ದೀಪಕ್ ಮಾಡಿದ ಅಪರಾಧವಾದರೂ ಏನು ಗೊತ್ತಾ?

ಕಳೆದ 2019 ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೈಸೂರಿನ “ಪ್ರಜಾಭಾರತ” ಸುದ್ದಿವಾಹಿನಿಯು  “ಮತಭಾರತ” ಎಂಬ ಸರಣಿ ಸಂಚಿಕೆಯೊಂದರಲ್ಲಿ “ಬಿಜೆಪಿ ಮಿಷನ್:360-ಭಾರತಕ್ಕೆ ಆಪತ್ತು” ಪ್ರಸಾರ ಮಾಡಿದ್ದು. ಬಿಜೆಪಿಯ ಸಂವಿಧಾನ ವಿರೋಧಿ ಆಡಳಿತವನ್ನು ಎಳೆ ಎಳೆಯಾಗಿ ವಿಶ್ಲೇಷಿಸಲಾಗಿತ್ತು.

ಇದನ್ನು ಅರಗಿಸಿಕೊಳ್ಳಲಾಗದ ಬಿಜೆಪಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಮೈಸೂರಿನ ಪ್ರಜಾಭಾರತ ಸುದ್ದಿವಾಹಿನಿ ಸಂಪಾದಕ ಕೆ.ದೀಪಕ್ ವಿರುದ್ಧ ಕೋಮು ಸೌಹಾರ್ದ ಕದಡುವ ಸಂಚು ನಡೆಸಿದ ಆರೋಪ ಹೊರಿಸಿ ಬಿಜೆಪಿ ರಾಜ್ಯ ಜಂಟೀ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: ರಿಯಾ ಜೊತೆ ಮಾಧ್ಯಮಗಳ ದುರ್ವತನೆ: ಕೊನೆಗೂ ಎಚ್ಚೆತ್ತ ಮುಂಬೈ ಪೊಲೀಸರು

ಸದ್ದಿಲ್ಲದೆ ಎಫ್‌ಐಅರ್ (ಐಪಿಸಿ 504, 505, 153 ಎ) ದಾಖಲಾಗಿದ್ದು, 17 ತಿಂಗಳ ನಂತರ ದೀಪಕ್ ಅವರನ್ನು ಬಂಧಿಸಿ ಜೈಲಿಗೆ ನೂಕುವಂತೆ ಪೊಲೀಸರಿಗೆ ತೀವ್ರ ಒತ್ತಡಗಳನ್ನು ಹೇರಲಾಗಿತ್ತು. ದೀಪಕ್ ನಿರೀಕ್ಷಣಾ ಜಾಮೀನು ಪಡೆದು ಬಿಜೆಪಿಯ ಷಡ್ಯಂತ್ರವನ್ನು ವಿಫಲಗೊಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಪ್ರಜಾಭಾರತ ಸುದ್ದಿವಾಹಿನಿ ಮತಭಾರತ ಸರಣಿಯಲ್ಲಿ ಕೇಂದ್ರದ ಮೋದಿ ಸರ್ಕಾರದ ವೈಫಲ್ಯ, ಸಮುದಾಯ ವಿರೋಧಿತನಗಳನ್ನು ಬಯಲಿಗೆಳೆಯುತ್ತಾ ಬಂದಿದ್ದರು. ಮೈಸೂರಿನ ಸಂಸದ ಪ್ರತಾಪ ಸಿಂಹ ಅವರ ಲೈಂಗಿಕ ಹಗರಣವನ್ನು ಸ್ಪೋಟಿಸಿದ್ದರು. ಇದೇ ಸೇಡಿಗೆ ದೀಪಕ್ ವಿರುದ್ಧ ಬೆಂಗಳೂರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ದೂರು ದಾಖಲಾದದ್ದು ದೀಪಕ್ ಅವರಿಗೆ ತಿಳಿಯಲು 17 ತಿಂಗಳೇ ಬೇಕಾಯಿತು!. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿಯುತ್ತಿದ್ದಂತೆ ದೀಪಕ್ ವಿರುದ್ಧ ಕೇಸು ದಾಖಲಾಗಿರುವುದು ಬೆಳಕಿಗೆ ಬಂದಿದ್ದು. ಅವರನ್ನು ಬಂಧಿಸಿಯೇ ತೀರಬೇಕೆಂಬ ಒತ್ತಡಗಳು ಪೊಲೀಸರ ಮೇಲಿತ್ತು.

ಪತ್ರಕರ್ತ ದೀಪಕ್ ಅವರನ್ನು ಜೈಲಿಗೆ ನೂಕಿ ಭಯಪಡಿಸಿ ಬಾಯಿ ಮುಚ್ಚಿಸುವ ಪ್ರತಾಪಸಿಂಹನ ಕೇಡಿ ಕೃತ್ಯ ಸದ್ಯಕ್ಕೆ ಈಡೇರಿಲ್ಲ.

ಕೆ.ದೀಪಕ್ ಕಳೆದ 21 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದಾರೆ. ಅವರೋರ್ವ ಜರ್ನಲಿಸ್ಟ್ ಆ್ಯಕ್ಟ್ವೀಸ್ಟ್. ಸ್ವಾತಂತ್ರ್ಯ ಸಂಗ್ರಾಮಕ್ಕೆ ಕಿಡಿಹೊತ್ತಿಗೆಯಾಗಿದ್ದ ಮೈಸೂರಿನ ‘ಸಾಧ್ವಿ’ ಪತ್ರಿಕೆಯ ಮೂಲಕ ಪರ್ತಕರ್ತ ಬದುಕು ಕಟ್ಟಿಕೊಂಡ ದೀಪಕ್ ‘ವಿಜಯ’, ಸೂರ್ಯೋದಯ, ಪ್ರಜಾನುಡಿ, ಸಂಜೆವಾಣಿ, ವಾರ್ತಾಭಾರತಿ ಪತ್ರಿಕೆಗಳು ಸೇರಿದಂತೆ ದೃಶ್ಯಮಾಧ್ಯಮಗಳಲ್ಲೂ ವೃತ್ತಿಪರ ಪತ್ರಕರ್ತನಾಗಿಯೂ ಅದೇ ಕಾಲಕ್ಕೆ ಬುದ್ದ, ಬಸವ, ಅಂಬೇಡ್ಕರ್ ಪ್ರೇಣಿತ ವೈಚಾರಿಕ ಚಿಂತನೆಗಳೊಂದಿಗೆ ಸಾಮಾಜಿಕ ಚಳವಳಿಗಳ ಜೊತೆ ಹೆಜ್ಜೆ ಹಾಕುತಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾಗಿಯೂ ಕೆಲಸ ಮಾಡಿರುವ ದೀಪಕ್ ಹಾಲಿ ಮೈಸೂರು ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷರಾಗಿ ಪತ್ರಕರ್ತರ ಹಿತಕ್ಕಾಗಿ ಶ್ರಮಿಸುತ್ತಿದ್ದಾರೆ.

ಬಿಜೆಪಿ ಯಾರೊಬ್ಬರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸಹಿಸಿಕೊಳ್ಳದು ಎಂಬುದಕ್ಕೆ ಅನೇಕ ನಿದರ್ಶನಗಳು ಮತ್ತೆ ಮತ್ತೆ ಬಯಲಾಗುತ್ತಲೆ ಇವೆ.

ಇದನ್ನೂ ಓದಿ: ಮೀಸಲಾತಿ ಮತ್ತು ಒಳಮೀಸಲಾತಿ ಎರಡೂ ಒಂದೆ..: ಬೆಟ್ಟಯ್ಯ ಕೋಟೆ ಸಂದರ್ಶನ

ಪ್ರಶ್ನಿಸುವ ಪತ್ರಕರ್ತರನ್ನು, ಸಾಹಿತಿ- ಬರಹಗಾರರನ್ನ, ವಿಮರ್ಶಕರನ್ನು, ಸೈದ್ಧಾಂತಿಕ ವಿರೋಧಿಗಳಿಗೆ ದೇಶದ್ರೋಹಿ ಎಂಬ  ಹಣೆ ಪಟ್ಟಿ ಕಟ್ಟಿ ದಮನ ಮಾಡುವ ಮತ್ತು ವಿಚಾರ ಸಂಘರ್ಷದ ಮೂಲಕ  ಎದುರುಗೊಳ್ಳಲಾರದ ಮನುವಾದಿ ಪ್ರೇಣಿತ ಬಿಜೆಪಿ ಮತ್ತದರ ಸಂತತಿಗಳು ಕಾನೂನು ದುರ್ಬಳಕೆ ಮಾಡಿಕೊಂಡೊ ಇಲ್ಲವೆ ಇನ್ನಾವುದಾದರೂ ದಾರಿಯಲ್ಲಿ ಹತ್ತಿಕ್ಕುವ ಕುಕೃತ್ಯಗಳು ಮುಂದುವರೆದಿವೆ.

ಪತ್ರಕರ್ತ ದೀಪಕ್ ವಿರುದ್ಧ ಕೇಸು ದಾಖಲಿಸಿದ ಬಿಜೆಪಿ ಕ್ರಮ ಅಭಿವ್ಯಕ್ತಿ ಸ್ವಾತಂತ್ರ್ಯದ ದಮನಕಾರಿಯಾದದ್ದು ಎಂದು ಪತ್ರಕರ್ತರ ಸಮೂಹ ತೀವ್ರ‌ಖಂಡನೆ ವ್ಯಕ್ತಪಡಿಸಿದೆ.

“ನನ್ನ ಮೇಲೆ ಇಂತಹ ಹತ್ತಾರು ಕೇಸು ಹಾಕಿದರೂ ಸತ್ಯ ಹೇಳುವ ನನ್ನ ದನಿಯನ್ನು ಅಡಗಿಸಲಾಗದು. ಬಾಬಾಸಾಹೇಬ್ ಅಂಬೇಡ್ಕರ್ ಕೊಟ್ಟ ಸಂವಿಧಾನದ ಹಕ್ಕನ್ನು ಹತ್ತಿಕ್ಕುವ ಯಾವುದೇ ಶಕ್ತಿಗಳ ವಿರುದ್ಧ ಹೋರಾಡುತ್ತೇನೆ.”

ಕೆ.ದೀಪಕ್

ವಿಡಿಯೋ ನೋಡಿ:ಮಾಧ್ಯಮಗಳು ಸೃಷ್ಟಿಸಿರುವ ಸಾವಿನ ಬಾವಿ – ಡಾ.ವಾಸು ಎಚ್‌.ವಿ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...